ನಮ್ಮ ನಡೆ ಪಿಲಿಚಾಮುಂಡಿಕಲ್ಲು ಕಡೆ:  ಬೃಹತ್‌ ಪಾದಯಾತ್ರೆ


Team Udayavani, Jan 10, 2018, 1:28 PM IST

10–Jan-14.jpg

ಬೆಳ್ತಂಗಡಿ: ಗುರುವಾಯನಕೆರೆ ಸಮೀಪದ ಪಿಲಿಚಾಮುಂಡಿಕಲ್ಲು ಧಾರ್ಮಿಕ ಪ್ರದೇಶವನ್ನು ಅಪವಿತ್ರಗೊಳಿಸಿ ಬೇಲಿ ತೆಗೆಸಿದವರ ವಿರುದ್ಧ ಕ್ರಮ ಜರಗಿಸಬೇಕು. ಹಿಂದೂ ಧಾರ್ಮಿಕ ಕೇಂದ್ರಗಳಿಗೆ ರಕ್ಷಣೆ ಒದಗಿಸಬೇಕು. ಸರಕಾರ ಹಿಂದೂ ವಿರೋಧಿ ನೀತಿಯನ್ನು ಕೈ ಬಿಡಬೇಕು ಎಂದು ಆಗ್ರಹಿಸಿ ಪಿಲಿಚಾಮುಂಡಿಕಲ್ಲು ಸಂರಕ್ಷಣ ಸಮಿತಿ, ವಿಹಿಂಪ, ಬಜರಂಗ ದಳ ವತಿಯಿಂದ ಮಂಗಳವಾರ ಬೆಳ್ತಂಗಡಿಯಿಂದ ಗುರುವಾಯನಕೆರೆ ಪಿಲಿಚಾಮುಂಡಿಕಲ್ಲುವರೆಗೆ ಪಾದಯಾತ್ರೆ ನಡೆಯಿತು.

ಭಗವಾಧ್ವಜ ಹಸ್ತಾಂತರಿಸಿ ಪಾದಯಾತ್ರೆಗೆ ಚಾಲನೆ
ಹಿರಿಯ ನ್ಯಾಯವಾದಿ ಪ್ರತಾಪಸಿಂಹ ನಾಯಕ್‌ ಅವರು ಡಿಸಿಸಿ ಬ್ಯಾಂಕ್‌ ಬಳಿ ಮಮತಾ ಎಂ. ಶೆಟ್ಟಿ ಅವರಿಗೆ ಭಗವಾಧ್ವಜ ಹಸ್ತಾಂತರಿಸಿ ಪಾದಯಾತ್ರೆಗೆ ಚಾಲನೆ ನೀಡಿದರು.

ಇಲ್ಲಿನ ತಾ| ಕಚೇರಿ ಬಳಿ ಧಾರ್ಮಿಕ ಜಾಗೃತಿಗಾಗಿ ಜ. 1ರಿಂದ 8ರ ವರೆಗೆ ಪ್ರತಿದಿನ ಧರಣಿ ಸತ್ಯಾಗ್ರಹ ನಡೆದು ಮಂಗಳವಾರ ಪಾದಯಾತ್ರೆ ನಡೆಸಲಾಯಿತು. ಸಮಿತಿಯ ಕೋಶಾಧಿಕಾರಿ, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರೀಶ್‌ ಪೂಂಜಾ, ಬಜರಂಗ ದಳ ಜಿಲ್ಲಾ ಸಂಚಾಲಕ, ರಕ್ಷಣ ಸಮಿತಿ ಸಂಚಾಲಕ ಭಾಸ್ಕರ ಧರ್ಮಸ್ಥಳ, ಪಾಡ್ಯಾರು ಬೀಡುವಿನ ಪ್ರವೀಣ್‌ ಕುಮಾರ್‌, ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ, ಬಿಜೆಪಿ ಅಧ್ಯಕ್ಷ ರಂಜನ್‌ ಜಿ. ಗೌಡ, ಪ್ರಧಾನ ಕಾರ್ಯದರ್ಶಿ ಸೀತಾರಾಮ ನಾಯ್ಕ, ಪ್ರಭಾಕರ ಶೆಟ್ಟಿ ಉಪ್ಪಡ್ಕ, ತಾಲೂಕು ಯುವಮೋರ್ಚಾ ಅಧ್ಯಕ್ಷ ಸಂಪತ್‌ ಬಿ.
ಸುವರ್ಣ, ಸಮಿತಿಯ ಅಧ್ಯಕ್ಷ, ವಿಹಿಂಪ ಜಿಲ್ಲಾ ಉಪಾಧ್ಯಕ್ಷ ತಿಮ್ಮಪ್ಪ ಗೌಡ ಬೆಳಾಲು, ವಿಹಿಂಪ ನಗರ ಅಧ್ಯಕ್ಷ ಮೋಹನ್‌, ಜಿ.ಪಂ. ಸದಸ್ಯ ಕೊರಗಪ್ಪ ನಾಯ್ಕ, ಸದಸ್ಯೆ ಮಮತಾ ಎಂ. ಶೆಟ್ಟಿ, ತಾ.ಪಂ. ಸದಸ್ಯರಾದ ಸುಧೀರ್‌ ಆರ್‌. ಸುವರ್ಣ, ಅಮಿತಾ, ಧನಲಕ್ಷ್ಮೀ, ಕೊರಗಪ್ಪ ಗೌಡ, ಕೃಷ್ಣಯ್ಯ ಆಚಾರ್ಯ, ಲೀಲಾವತಿ, ಶಶಿಧರ ಕಲ್ಮಂಜ, ಸುಧಾಕರ್‌ ಬಿ.ಎಲ್‌., ಸುಶೀಲಾ, ವಸಂತಿ ಲಕ್ಷ್ಮಣ್‌, ವೇದಾವತಿ, ವಿಜಯ ಗೌಡ, ಬಜರಂಗ ದಳದ ರಾಮ್‌ಪ್ರಸಾದ್‌ ಮರೋಡಿ, ಬಿಜೆಪಿ ಮುಖಂಡರಾದ ವಸಂತ ಮಜಲು, ಹರೀಶ್‌ ಸಾಲಿಯಾನ್‌, ಜಯಂತ್‌ ಕೋಟ್ಯಾನ್‌, ಸದಾನಂದ ಪೂಜಾರಿ ಉಂಗಿಲಬೈಲು, ಉದಯ ಹೆಗ್ಡೆ ನಾರಾವಿ, ಕುವೆಟ್ಟು ಪಂ. ಅಧ್ಯಕ್ಷ ಅಶೋಕ್‌ ಕೋಟ್ಯಾನ್‌, ರಾಜ್‌ಪ್ರಕಾಶ್‌, ಅಗರ್ತ ಸುಬ್ರಹ್ಮಣ್ಯ ಕುಮಾರ್‌, ನಾರಾಯಣ ಗೌಡ, ಸುಕೇಶ್‌ ಜೈನ್‌, ಧರ್ಮ ಜಾಗರಣ ಪ್ರಮುಖ್‌ ದಿನಕರ ಆದೇಲು, ದೊಂಪದ ಬಲಿ ಉತ್ಸವ ಸಮಿತಿ ಅಧ್ಯಕ್ಷ ಪುರುಷೋತ್ತಮ, ಪಾಡ್ಯಾರುಗುತ್ತಿನ ಪ್ರವೀಣ್‌ ಕುಮಾರ್‌, ಶ್ಯಾಮ್‌ ಸುಂದರ್‌ ನಡ, ಬಾಲಕೃಷ್ಣ ಶೆಟ್ಟಿ ಸವಣಾಲು, ವಾಸುದೇವ ರಾವ್‌ ಕಕ್ಕಿನೇಜಿ ಮತ್ತಿತರರು ಉಪಸ್ಥಿತರಿದ್ದರು.

ಕಲ್ಲಿಗೆ ಪ್ರಾರ್ಥನೆ
ಪಿಲಿಚಾಮುಂಡಿ ಕಲ್ಲಿನಲ್ಲಿ ಕಲ್ಲಿಗೆ ಕರಿಂಜೆ ಶ್ರೀ ಮುಕ್ತಾನಂದ ಸ್ವಾಮೀಜಿ ಪ್ರಾರ್ಥನೆ ಸಲ್ಲಿಸಿದರು. ಚೆಂಡೆ, ನಾಸಿಕ್‌ ಬ್ಯಾಂಡ್‌ ಸಹಿತ ಮೆರವಣಿಗೆ ನಡೆಯಿತು. ದಾರಿಯುದ್ದಕ್ಕೂ ಪಾನೀಯ ವ್ಯವಸ್ಥೆ ಮಾಡಲಾಗಿತ್ತು. ಬಿಗಿ ಪೊಲೀಸ್‌ ಬಂದೋಬಸ್ತ್ ನೆರವೇರಿತ್ತು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.