ವಿದ್ಯುತ್‌ ಪ್ರವಹಿಸಿ ಓರ್ವ ಸಾವು; 8 ಮಂದಿಗೆ ಗಾಯ


Team Udayavani, Jul 19, 2018, 3:11 PM IST

2-ganesh.png

ಮಂಗಳೂರು: ಮೆಸ್ಕಾಂನ ವಿದ್ಯುತ್‌ ಕಂಬ ಹಾಕುವ ಕಾಮಗಾರಿ ವೇಳೆ ವಿದ್ಯುತ್‌ ತಗುಲಿ ಕೂಲಿ ಕಾರ್ಮಿಕ ಮೃತಪಟ್ಟು, 8 ಮಂದಿ ಗಾಯಗೊಂಡ ಘಟನೆ ಬಜಪೆ ಸಮೀಪದ ಕರಂಬಾರಿನಲ್ಲಿ ಬುಧವಾರ ಸಂಭವಿಸಿದೆ.
ತೆಂಕ ಎಡಪದವು ಕಣ್ಣೋರಿಯ ನಿವಾಸಿ ಗಣೇಶ್‌ (58) ಮೃತರು. ಮಿಜಾರಿನ ಧನಂಜಯ, ವಿಶ್ವನಾಥ, ಗೋಪಾಲ, ಆನಂದ, ದಿನೇಶ್‌, ಮೋಹನ್‌, ಎಡಪದವಿನ ಕೃಷ್ಣ, ಪದ್ಮನಾಭ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ದಾಖ ಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದಿನೇಶ್‌ ಮತ್ತು ವಿಶ್ವನಾಥ ಅವರ ಸ್ಥಿತಿ ಗಂಭೀರವಾಗಿದೆ.

ಮರವೂರಿನಿಂದ ಬಜಪೆವರೆಗಿನ ವಿದ್ಯುತ್‌ ಲೈನ್‌ನಲ್ಲಿ ಕಂಬಗಳ ಅಂತರ ಜಾಸ್ತಿ ಇದ್ದು, ಮಧ್ಯೆ ಹೆಚ್ಚುವರಿ ಕಂಬಗಳನ್ನು ಹಾಕಿ ವಿದ್ಯುತ್‌ ಲೈನ್‌ ಬಲಪಡಿಸಲು ತನ್ವಿ ಎಲೆಕ್ಟ್ರಿಕಲ್ಸ್‌ ಗುತ್ತಿಗೆ ವಹಿಸಿಕೊಂಡಿದೆ. ಬುಧವಾರ ಬೆಳಗ್ಗೆ ಮರವೂರು ಜಂಕ್ಷನ್‌ನ ಬಸ್‌ ನಿಲ್ದಾಣದ ಬಳಿ ಹೊಂಡಕ್ಕೆ ಕಂಬವನ್ನು ಇಳಿಸುವಾಗ ಕಂಬದ ಇನ್ನೊಂದು ತುದಿ ಹೈಟೆನ್ಶನ್‌ ವಿದ್ಯುತ್‌ ತಂತಿಗೆ ಸ್ಪರ್ಶಿಸಿ ಬುಡದಲ್ಲಿ ಕೆಲಸ ಮಾಡುತ್ತಿದ್ದ ಗಣೇಶ್‌ ಅವರಿಗೆ ತಗುಲಿದೆ. ಆಘಾತದಿಂದ ಸ್ಥಳದಲ್ಲೇ ಮೃತಪಟ್ಟರು. ಹಗ್ಗ ಹಿಡಿದವರಿಗೂ ವಿದ್ಯುತ್‌ ಸ್ಪರ್ಶವಾಗಿ ಅವರು ಹಗ್ಗವನ್ನು ಕೈಬಿಟ್ಟರು. ಕಂಬ ತಂಡಾಗಿ ನೆಲಕ್ಕೆ ಅಪ್ಪಳಿಸಿತು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಸ್ಥಳೀಯರು  ಸಹಕರಿಸಿದರು.

ವಿದ್ಯುತ್‌ ಪ್ರವಹಿಸಿದ್ದು ಹೇಗೆ?
ವಿದ್ಯುತ್‌ ಲೈನ್‌ ಕಾಮಗಾರಿ ನಿರ್ವಹಿಸುವಾಗ ವಿದ್ಯುತ್‌ ಪ್ರವಾಹವನ್ನು ಕಡಿತ ಮಾಡಬೇಕೆಂಬುದು ನಿಯಮ. ಮರವೂರಿನಲ್ಲಿ ಬುಧವಾರ ಕಂಬ ಹಾಕುವ ಕೆಲಸ ಮಾಡುವಾಗಲೂ  ವಿದ್ಯುತ್‌ ಸಂಪರ್ಕ ಕಡಿತ ಮಾಡಿದ ಬಳಿಕ ಕೆಲಸ ಆರಂಭಿಸಲಾಗಿತ್ತು ಎಂದು ಹೇಳಲಾಗುತ್ತಿದೆ. ಆದರೆ ವಿದ್ಯುತ್‌ ಪ್ರವಹಿಸಿದ್ದು ಹೇಗೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ. 

ನಿರ್ಲಕ್ಷ ಆರೋಪ
ಕೆಲಸ ಮಾಡಿಸುವಾಗ ವಿದ್ಯುತ್‌ ಸಂಪರ್ಕವನ್ನು ಕಡಿತ ಮಾಡದೆ ನಿರ್ಲಕ್ಷ ವಹಿಸಿದ ಆರೋಪದ ಮೇಲೆ ಮೆಸ್ಕಾಂ ಅಧಿಕಾರಿ ವಿರುದ್ಧ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಸ್ಪತ್ರೆ ಆವರಣದಲ್ಲಿ ಹಾಜರಿದ್ದ ಮೃತರ ಮತ್ತು ಗಾಯಾಳು ಸಂಬಂಧಿಕರು ಅಧಿಕಾರಿಗಳ ನಿರ್ಲಕ್ಷದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು.

ಸ್ಥಳಕ್ಕೆ  ಭೇಟಿ
ಡಿಸಿಪಿ ಹನುಮಂತರಾಯ, ಮೆಸ್ಕಾಂ ಹೆಚ್ಚುವರಿ ಮುಖ್ಯ ಇಲೆಕ್ಟ್ರಿಕಲ್‌ ಇನ್‌ಸ್ಪೆಕ್ಟರ್‌ ಜಾವೇದ್‌ ರಬ್ಟಾನಿ, ಮೆಸ್ಕಾಂ ಸೂಪರಿಂಟೆಂಡಿಂಗ್‌ ಎಂಜಿನಿಯರ್‌ ಮಂಜಪ್ಪ, ಲೈಸೆನ್ಸ್‌ಡ್‌ ವಿದ್ಯುತ್‌ ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಪಿ. ಶಿವಕುಮಾರ್‌ ಪೈಲೂರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಜತೆ ಘಟನೆಯ ಬಗ್ಗೆ ಮಾಹಿತಿ ಪಡೆದರು.

ಗೃಹಪ್ರವೇಶವಾಗಿ ತಿಂಗಳು! 
ಗಣೇಶ್‌ ತೆಂಕ ಎಡಪದವಿನ ಕಣ್ಣೋರಿಯ ವಟ್ಟು ಗೌಡ ಮತ್ತು ವೆಂಕಮ್ಮ ಅವರ ಪುತ್ರರಾಗಿದ್ದು, ಕಳೆದ ಕೆಲವು ವರ್ಷಗಳಿಂದ ತನ್ವಿ ಎಲೆಕ್ಟ್ರಿಕಲ್ಸ್‌ನಲ್ಲಿ ಕೂಲಿ ಕೆಲಸ ನಿರ್ವಹಿಸುತ್ತಿದ್ದರು. ಪತ್ನಿ ಜಯಂತಿ ಕೂಡ ಕೂಲಿಗೆ ಹೋಗುತ್ತಿದ್ದಾರೆ. ಅವರಿಗೆ ಇಬ್ಬರು ಮಕ್ಕಳು- ಓರ್ವ ಪುತ್ರಿ ಮತ್ತು ಓರ್ವ ಪುತ್ರ. ಪುತ್ರಿ ಅಂಗಡಿಯೊಂದರಲ್ಲಿ ಕೆಲಸ ಮಾಡು ತ್ತಿದ್ದರೆ ಪುತ್ರ ಅಸೌಖ್ಯದಿಂದ ಬಳಲುತ್ತಿದ್ದು, ದಿನನಿತ್ಯ ಔಷಧ ಸೇವಿಸಬೇಕಾಗಿದೆ. ಗಣೇಶ್‌ ಅವರು ಹೊಸ ಮನೆಯನ್ನು ಕಟ್ಟಿಸಿದ್ದು, ಕಳೆದ ಜೂನ್‌ 18 ರಂದು ಗೃಹ ಪ್ರವೇಶ ನಡೆದಿತ್ತು. ಈ ಸಮಾರಂಭ ನಡೆದು ಒಂದು ತಿಂಗಳಾಗುವಷ್ಟರಲ್ಲಿ ಈ ದುರಂತ ಸಂಭವಿಸಿದೆ.

ಕೂಲಂಕಷ‌ ಪರಿಶೀಲನೆ
ಅವಘಡ ನಡೆದ ಸ್ಥಳಕ್ಕೆ ಎಂಜಿನಿಯರ್‌ಗಳನ್ನು ಕಳುಹಿಸಿದ್ದೇವೆ. ಘಟನೆ ಯಾವ ರೀತಿಯಾಗಿದೆ ಎಂಬ ಬಗ್ಗೆ ಕೂಲಂಕಷ‌ ಪರಿಶೀಲನೆ ನಡೆಸಲಾಗುವುದು. ಆ ವರದಿಯ ಪ್ರಕಾರ ಪರಿಹಾರ ನೀಡಲಾಗುವುದು. ಅಷ್ಟೇ ಅಲ್ಲದೆ, ಮಾನವೀಯ ನೆಲೆಯಲ್ಲಿಯೂ ಪರಿಹಾರ ನೀಡಲು ಅವಕಾಶವಿದೆ.
ಮಂಜಪ್ಪ
ಮೆಸ್ಕಾಂ ಸೂಪರಿಂಟೆಂಡೆಂಟ್‌ ಎಂಜಿನಿಯರ್‌ 

ಟಾಪ್ ನ್ಯೂಸ್

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.