ಕೆಎಸ್ಸಾರ್ಟಿಸಿಬಸ್‌ ನಿಲ್ದಾಣಗಳಲ್ಲಿ ಒಂದುರೂ.ಗೆ ಶುದ್ಧ ಕುಡಿಯುವ ನೀರು


Team Udayavani, Dec 12, 2018, 10:16 AM IST

12-december-1.gif

ಮಹಾನಗರ: ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣಗಳಲ್ಲಿ ಶೀಘ್ರದಲ್ಲೇ ಸಾರ್ವಜನಿಕರಿಗೆ ಒಂದು ರೂ.ಗೆ ಅರ್ಧ ಲೀಟರ್‌ ಶುದ್ಧ ಕುಡಿಯುವ ನೀರು ಸಿಗಲಿದೆ. ದೇಶದ ನಂಬರ್‌ ಒನ್‌ ಸಾರಿಗೆ ವ್ಯವಸ್ಥೆ ಎಂದೆನಿಸಿಕೊಂಡಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಈ ಯೋಜನೆಯನ್ನು ಜಾರಿಗೆ ತಂದಿದ್ದು, 1 ರೂ.ಗೆ ಅರ್ಧ ಲೀಟರ್‌, 2 ರೂ.ಗೆ ಒಂದು ಲೀಟರ್‌ ಮತ್ತು 5 ರೂ.ಗೆ ಐದು ಲೀಟರ್‌ ನೀರು ಬಸ್‌ ನಿಲ್ದಾಣದ ಒಳಗೆ ಲಭ್ಯವಾಗುವಂತಹ ಯೋಜನೆಯನ್ನು ಕಲ್ಪಿಸಿದೆ. ಇದರೊಂದಿಗೆ ಸರಕಾರಿ ಬಸ್‌ ಸಾರಿಗೆ ವ್ಯವಸ್ಥೆಯಲ್ಲಿ ಈ ಸೇವೆ ಒದಗಿಸುತ್ತಿರುವ ಮೊದಲ ರಾಜ್ಯವಾಗಿ ಕರ್ನಾಟಕ ಪ್ರಾಪ್ತವಾಗಲಿದೆ. ಪ್ರಯಾಣಿಕರು ಅಂಗಡಿಗಳಲ್ಲಿ ಅರ್ಧ ಲೀಟರ್‌ ಮಿನರಲ್‌ ವಾಟರ್‌ಗೆ ಸುಮಾರು 10 ರೂ., ಒಂದು ಲೀಟರ್‌ಗೆ 20 ರೂ. ದುಡ್ಡು ಕೊಟ್ಟು ಖರೀದಿ ಮಾಡುವುದು ಇದರಿಂದ ತಪ್ಪಲಿದೆ.

ಕೆಎಸ್ಸಾರ್ಟಿಸಿಯು ಮೊದಲನೇ ಹಂತದಲ್ಲಿ ದ.ಕ. ಜಿಲ್ಲೆಯ ಮಂಗಳೂರು, ಧರ್ಮಸ್ಥಳ ಮತ್ತು ಸುಬ್ರಹ್ಮಣ್ಯ ಸರಕಾರಿ ಬಸ್‌ ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಿದೆ. ಧರ್ಮಸ್ಥಳ ಮತ್ತು ಸುಬ್ರಹ್ಮಣ್ಯ ಬಸ್‌ ನಿಲ್ದಾಣಗಳಲ್ಲಿ ನೀರಿನ ಘಟಕದ ಕೆಲಸ ಕೊನೆಯ ಹಂತದಲ್ಲಿದ್ದು, ಮುಂದಿನ ಒಂದು ತಿಂಗಳೊಳಗಾಗಿ ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗಲಿದೆ. ಮಂಗಳೂರು ಬಸ್‌ ನಿಲ್ದಾಣದಲ್ಲಿ ನೀರಿನ ಘಟಕ ಸ್ಥಾಪನೆಯ ಪ್ರಕ್ರಿಯೆಗಳು ಪ್ರಾರಂಭವಾಗಿದ್ದು, ಸುಮಾರು ಎರಡು ತಿಂಗಳೊಳಗೆ ತಲೆಯೆತ್ತಲಿದೆ.

ಗಂಟೆಗೆ 250 ಲೀಟರ್‌ ನೀರು ಶುದ್ಧೀಕರಣ
ಕೆಎಸ್ಸಾರ್ಟಿಸಿಯು ಸುಮಾರು 5 ಲಕ್ಷ ರೂ. ವೆಚ್ಚದಲ್ಲಿ ನೀರಿನ ಘಟಕ ಸ್ಥಾಪನೆ ಮಾಡುತ್ತಿದ್ದು, ಭಾರತ್‌ ಪೆಟ್ರೋಲಿಯಂ ಕಾರ್ಪೊರೇಷನ್‌ ಲಿಮಿಟೆಡ್‌ (ಬಿಪಿಸಿಎಲ್‌) ಸಹಯೋಗದಲ್ಲಿ ಘಟಕಗಳು ತಲೆಯೆತ್ತಲಿವೆ. ಘಟಕವು ಗಂಟೆಗೆ 250 ಲೀಟರ್‌ ಶುದ್ಧೀಕರಣ ನೀರು ಪಡೆಯುವ ಸಾಮರ್ಥ್ಯವನ್ನು ಹೊಂದಿರಲಿವೆ. ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗದಿಂದ ದಿನಂಪ್ರತಿ ಸುಮಾರು 350ಕ್ಕೂ ಹೆಚ್ಚು ಬಸ್‌ಗಳು, ಧರ್ಮಸ್ಥಳ ಮತ್ತು ಸುಬ್ರಹ್ಮಣ್ಯ ನಿಲ್ದಾಣದಿಂದ ನೂರಕ್ಕೂ ಹೆಚ್ಚು ಬಸ್‌ಗಳು ಸಂಚರಿಸುತ್ತವೆ.

ನಾನಾ ಪ್ರದೇಶಗಳಿಗೆ ದಿನಂಪ್ರತಿ ಸಂಚರಿ ಸುತ್ತಿದ್ದು, ನೂತನ ಯೋಜನೆಯಿಂದ ಸಾವಿರಾರು ಪ್ರಯಾಣಿಕರಿಗೆ ಅನುಕೂಲ ವಾಗಲಿದೆ. ಕೆಎಸ್ಸಾರ್ಟಿಸಿ ಐಷಾರಾಮಿ ಬಸ್‌ಗಳಲ್ಲಿ ಪ್ರಯಾಣಿಕರಿಗೆ ಈಗಾಗಲೇ ಅರ್ಧ ಲೀಟರ್‌ ಕುಡಿಯುವ ನೀರಿನ ಬಾಟಲಿಗಳನ್ನು ನೀಡಲಾಗುತ್ತಿದೆ. ನಿಗಮ ಇದಕ್ಕಾಗಿ ವರ್ಷಕ್ಕೆ ಸುಮಾರು 6 ಕೋಟಿ ರೂ. ವ್ಯಯಿಸುತ್ತಿದೆ. ಇವಿಷ್ಟೇ ಅಲ್ಲದೆ, ಎಲ್ಲ ಐಷಾರಾಮಿ ಬಸ್‌ಗಳಲ್ಲಿ ಪ್ರಯಾಣಿಕರಿಗೆ ಬೆಳಗ್ಗಿನ ವೇಳೆ ದಿನಪತ್ರಿಕೆಯನ್ನು ನೀಡಲಾಗುತ್ತಿದೆ.

ದಿನದ 24 ಗಂಟೆ ಸೇವೆ
ಕೆಎಸ್ಸಾರ್ಟಿಸಿಯ ಯೋಜನೆಯಾದ ಶುದ್ಧ ಕುಡಿಯುವ ನೀರಿನ ಘಟಕ ದಿನದ 24 ಗಂಟೆಯೂ ಕಾರ್ಯಾಚರಿಸಲಿದೆ. 1 ರೂ., 2 ರೂ. ಮತ್ತು 5 ರೂ. ನಾಣ್ಯವನ್ನು ಯಂತ್ರಕ್ಕೆ ಹಾಕುವ ಮೂಲಕ ಮಿನರಲ್‌ ನೀರು ಪಡೆಯಬಹುದಾಗಿದೆ. ಕೆಲವೊಂದು ಬಸ್‌ ನಿಲ್ದಾಣಗಳಲ್ಲಿನ ಅಂಗಡಿಗಳಲ್ಲಿ ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಕುಡಿಯುವ ನೀರು ಮಾರಾಟ ಮಾಡಲಾಗುತ್ತಿದ್ದು, ನೂತನ ಘಟಕದಿಂದ ಇದಕ್ಕೆ ಕಡಿವಾಣ ಬೀಳಬಹುದು. 

2 ತಿಂಗಳಲ್ಲಿ ಆರಂಭ
ಶುದ್ಧ ಕುಡಿಯುವ ನೀರಿನ ಘಟಕ ತಲೆಯೆತ್ತುವುದರಿಂದ ಕೆಎಸ್ಸಾರ್ಟಿಸಿ ಬಸ್‌ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಮಂಗಳೂರು ವಿಭಾಗದಲ್ಲಿ ಪ್ರಕ್ರಿಯೆಗಳು ಪ್ರಾರಂಭವಾಗಿದ್ದು, ಮುಂದಿನ ಎರಡು ತಿಂಗಳಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಘಟಕ ಪ್ರಾರಂಭವಾಗಲಿದೆ.
ದೀಪಕ್‌ ಕುಮಾರ್‌,
ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗಾಧಿಕಾರಿ

ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.