ಬಜ-ಬಲಯೂರು ರಸ್ತೆಗೆ ವನ್ ಟೈಮ್ ಡೆವಲಪ್ಮೆಂಟ್ ಯೋಗ
Team Udayavani, Jun 10, 2019, 6:10 AM IST
ಬಂಟ್ವಾಳ : ಕಳೆದ ಲೋಕಸಭಾ ಚುನಾವಣೆ ಸಂದರ್ಭ ಗ್ರಾಮಸ್ಥರಿಂದ ಚುನಾವಣ ಬಹಿಷ್ಕಾರ ಹೋರಾಟಕ್ಕೆ ವೇದಿಕೆಯಾಗಿದ್ದ ಸರ ಪಾಡಿ ಗ್ರಾ.ಪಂ. ವ್ಯಾಪ್ತಿಯ ಬಜ- ಬಲಯೂರು ರಸ್ತೆ ಅಭಿವೃದ್ಧಿಗೆ ಕಾಲ ಕೂಡಿ ಬಂದಂತೆ ಕಂಡು ಬರುತ್ತಿದ್ದು, ಲೋಕೋಪಯೋಗಿ ಇಲಾಖೆಯ ಒಂದು ಬಾರಿ ಅಭಿವೃದ್ಧಿ (ವನ್ ಟೈಮ್ ಡೆವಲಪ್ಮೆಂಟ್) ಯೋಜನೆ ಮೂಲಕ ರಸ್ತೆ ಅಭಿವೃದ್ಧಿ ಗೊಳ್ಳಲಿದೆ.
ಸುಮಾರು 2 ಕಿ.ಮೀ. ಉದ್ದದ ಈ ರಸ್ತೆಯು ತೀರಾ ಹದಗೆಟ್ಟಿದ್ದು, ವಾಹನ ಸಂಚಾರವೇ ಅಸಾಧ್ಯ ಎಂಬಷ್ಟರ ಮಟ್ಟಿಗೆ ದುಸ್ತರವಾಗಿದೆ. ಕಳೆದ ಹಲವು ವರ್ಷಗಳಿಂದ ಈ ರಸ್ತೆಯನ್ನು ಅಭಿವೃದ್ಧಿಪಡಿಸುವಂತೆ ಒತ್ತಾಯ ಕೇಳಿ ಬರುತ್ತಿದ್ದರೂ ರಸ್ತೆ ಅಭಿವೃದ್ಧಿಗೊಂಡಿರಲಿಲ್ಲ.
ಕೆಲವು ಸಮಯಗಳ ಹಿಂದೆ ರಸ್ತೆಯ ಡಾಮರು ಕಿತ್ತು ಹೋಗಿ ಸಂಚಾರ ಅಸಾಧ್ಯವಾದ ಹಿನ್ನೆಲೆಯಲ್ಲಿ ಇದ್ದ ಅಲ್ಪಸಲ್ಪ ಡಾಮರನ್ನು ಕಿತ್ತು ಹಾಕಿ ಸಮತಟ್ಟುಗೊಳಿಸಲಾಗಿತ್ತು. ಈ ಹಿಂದೆ ಪೈಪ್ಲೈನ್ ಕಾಮಗಾರಿ ವೇಳೆ ರಸ್ತೆಗೆ ಪೂರ್ತಿ ಮಣ್ಣು ಬಿದ್ದು, ಧೂಳಿನಿಂದ ಸಂಚಾರಕ್ಕೆ ತೊಂದರೆಯಾಗಿದ್ದು, ಇದೀಗ ಮಳೆ ಬಿದ್ದು ರಸ್ತೆ ಸಂಪೂರ್ಣ ಕೆಸರುಮಯ ಸ್ಥಿತಿಗೆ ತಲುಪಿದೆ.
ವನ್ ಟೈಮ್ ಡೆವಲಪ್ಮೆಂಟ್
ಗ್ರಾಮೀಣ ರಸ್ತೆಗಳು ತೀರಾ ಹದಗೆಟ್ಟಾಗ ಅದನ್ನು ಜಿ.ಪಂ. ಅನುದಾನದಿಂದ ದುರಸ್ತಿ ಪಡಿಸುವುದು ಅಸಾಧ್ಯದ ಮಾತು. ಹೀಗಾಗಿ ಸರಕಾರವು ಲೋಕೋಪಯೋಗಿ ಇಲಾಖೆ ಮೂಲಕ ಒಂದು ಬಾರಿ ಅಭಿವೃದ್ಧಿ ಯೋಜನೆ ಮೂಲಕ ಅಭಿವೃದ್ಧಿಪಡಿಸಿ ಮತ್ತೆ ಜಿ.ಪಂ.ಗೆ ಹಸ್ತಾಂತರಿಸುವ ಕೆಲಸ ಮಾಡುತ್ತಿದೆ.
ಪ್ರಸ್ತುತ ರಸ್ತೆಗೆ ಮಂಜೂರಾದ ಅನು ದಾನದ ಟೆಂಡರ್ ಪ್ರಕ್ರಿಯೆ ಆರಂಭ ಗೊಂಡಿದ್ದು, ಲೋಕೋಪಯೋಗಿ ಇಲಾಖೆಯ ಮಂಗಳೂರು ಕಚೇರಿಯ ಮೂಲಕ ಟೆಂಡರ್ ಕಾರ್ಯ ನಡೆಯುತ್ತದೆ. ಅದಕ್ಕೆ ಬೆಂಗಳೂರಿನಲ್ಲಿ ಅನುಮೋದನೆ ಲಭಿಸಿದ ಬಳಿಕ ಕಾಮಗಾರಿಯ ಆದೇಶ ಪತ್ರ (ವರ್ಕ್ ಆರ್ಡರ್) ನೀಡಲಾಗುತ್ತದೆ. ಸುಮಾರು 1 ತಿಂಗಳಲ್ಲಿ ಈ ಕಾರ್ಯ ಪೂರ್ಣ ಗೊಳ್ಳಲಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.
ಪ್ರಸ್ತುತ ಅದರ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡರೂ ಮಳೆಗಾಲ ಹತ್ತಿರ ಬರುತ್ತಿರುವುದರಿಂದ ಮಳೆಗೆ ಕಾಮಗಾರಿ ನಡೆಸುವುದು ಅಸಾಧ್ಯವಾಗಬಹುದು. ಆದರೆ ಮಳೆ ಬಾರದೇ ಇದ್ದರೆ ಕಾಮಗಾರಿ ವೇಗವನ್ನು ಪಡೆದುಕೊಳ್ಳಬಹುದು, ಇಲ್ಲದೇ ಇದ್ದರೆ ಮಳೆಗಾಲ ಮುಗಿದ ಬಳಿಕವೇ ಕಾಮಗಾರಿ ಆರಂಭವಾಗುವ ಸಾಧ್ಯತೆ ಇದೆ.
ಗ್ರಾಮಸ್ಥರ ಮನವೊಲಿಕೆ 50 ಲಕ್ಷ ರೂ.ಗಳಲ್ಲಿ ಅಭಿವೃದ್ಧಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ