ಲಸಿಕೆ ಅಭಿಯಾನಕ್ಕೆ ಒಂದು ವರ್ಷ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಶೇ. 98 ಸಾಧನೆ


Team Udayavani, Jan 17, 2022, 7:50 AM IST

ಲಸಿಕೆ ಅಭಿಯಾನಕ್ಕೆ ಒಂದು ವರ್ಷ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಶೇ. 98 ಸಾಧನೆ

ಸಾಂದರ್ಭಿಕ ಚಿತ್ರ.

ಮಂಗಳೂರು: ದೇಶದಲ್ಲಿ ಕೊರೊನಾ ನಿರೋಧಕ ಲಸಿಕೆ ನೀಡುವ ಕಾರ್ಯಕ್ರಮ ಆರಂಭವಾಗಿ ಒಂದು ವರ್ಷ ಪೂರ್ತಿಗೊಂಡಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇದುವರೆಗೆ ಸರಾಸರಿ ಶೇ. 98ರಷ್ಟು ಲಸಿಕಾಕರಣ ಪೂರ್ಣಗೊಂಡಿದೆ.

ದೇಶಾದ್ಯಂತ ಲಸಿಕಾ ಅಭಿಯಾನವು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ 2021 ಜನವರಿ 16ರಂದು ಹಾಗೂ 2ನೇ ಹಂತದಲ್ಲಿ ಮುಂಚೂಣಿಯ ಕಾರ್ಯಕರ್ತರಿಗೆ ಒಂದು ತಿಂಗಳ ಬಳಿಕ ಆರಂಭಗೊಂಡಿತ್ತು.

ದ.ಕ. ಜಿಲ್ಲೆಯಲ್ಲಿ ವರ್ಷದ ಹಿಂದೆ ಮೊದಲ ದಿನದಂದು 100 ಮಂದಿ ಆರೋಗ್ಯ ಕಾರ್ಯ ಕರ್ತರಿಗೆ ಲಸಿಕೆ ಹಾಕ ಲಾಗಿತ್ತು. ಇದೀಗ ಅಭಿಯಾನಕ್ಕೆ ಒಂದು ವರ್ಷ ಆದಾಗ (2022 ಜ. 16) ಒಟ್ಟು ಇರುವ 52,523 ಆರೋಗ್ಯ ಕಾರ್ಯಕರ್ತರ ಪೈಕಿ 50,983 ಮಂದಿಗೆ ಮೊದಲ ಡೋಸ್‌ (ಶೇ. 97.07) ಹಾಗೂ 35,345 ಮಂದಿಗೆ ದ್ವಿತೀಯ ಡೋಸ್‌ ಲಸಿಕೆ ನೀಡಲಾಗಿದೆ. ಅಲ್ಲದೆ 9,076 ಮಂದಿ ಮುನ್ನೆಚ್ಚರಿಕೆ (ಬೂಸ್ಟರ್‌) ಡೋಸ್‌ ಪಡೆದಿದ್ದಾರೆ.

ಮುಂಚೂಣಿಯ ಕಾರ್ಯಕರ್ತರ ಪೈಕಿ 15,925 ಜನರಿಗೆ ಮೊದಲ ಡೋಸ್‌ ನೀಡಿ ಶೇ. 100 ಸಾಧನೆ ಆಗಿದೆ. 9,208 ಮಂದಿ ದ್ವಿತೀಯ ಡೋಸ್‌ (ಶೇ. 57.82) ಹಾಗೂ 2,764 ಮಂದಿ ಮುನ್ನೆಚ್ಚರಿಕೆ ಲಸಿಕೆ ಪಡೆದಿದ್ದಾರೆ.

15 ವರ್ಷದಿಂದ 17 ವರ್ಷದೊಳಗಿನ ಮಕ್ಕಳಿಗೆ ಇದೇ ಜ. 3ರಿಂದ ಲಸಿಕೆ ನೀಡುವ ಅಭಿಯಾನ ಆರಂಭವಾಗಿದ್ದು, ಜ. 16ರ ತನಕ 1,00,084 ಮಂದಿಗೆ (ಶೇ. 98.56) ಲಸಿಕೆ ಹಾಕಲಾಗಿದೆ. 18ರಿಂದ 44 ವರ್ಷ ವಯೋಮಿತಿಯ 8,46,058 (ಶೇ. 87.62) ಮೊದಲ ಡೋಸ್‌ ಹಾಗೂ 7,20,159 (ಶೇ. 85.12) ಮಂದಿ ದ್ವಿತೀಯ ಡೋಸ್‌ ಲಸಿಕೆ ಪಡೆದಿದ್ದಾರೆ. 45ರಿಂದ 60 ವರ್ಷದೊಳಗಿನವರ ವಿಭಾಗದಲ್ಲಿ 4,23,612 ಮಂದಿ ಮೊದಲ ಡೋಸ್‌ ಲಸಿಕೆ ತೆಗೆದುಕೊಳ್ಳುವ ಮೂಲಕ ಗುರಿ ಮೀರಿ (ಶೇ. 101.80) ಸಾಧನೆ ಮಾಡಲಾಗಿದೆ. 3,81,767 ಮಂದಿ ದ್ವಿತೀಯ ಡೋಸ್‌ ಲಸಿಕೆ ಸ್ವೀಕರಿಸಿದ್ದಾರೆ.

60 ವರ್ಷ ಮೇಲ್ಪಟ್ಟವರ ವಿಭಾಗದಲ್ಲಿ 2,57,154 (ಶೇ. 95.60) ಮಂದಿ ಮೊದಲ ಡೋಸ್‌, 2,33,986 (ಶೇ. 90.99) ಮಂದಿ 2ನೇ ಡೋಸ್‌ ಹಾಗೂ 2644 ಮಂದಿ ಮುನ್ನೆಚ್ಚರಿಕೆ ಡೋಸ್‌ ಪಡೆದಿದ್ದಾರೆ.

ಒಟ್ಟಾರೆಯಾಗಿ ದ.ಕ.ದಲ್ಲಿ ಇದುವರೆಗೆ 15 ವರ್ಷ ಮೇಲ್ಪಟ್ಟ ವಯೋಮಿತಿಯ 18,16,000 ಮಂದಿ ಫಲಾನುಭವಿಗಳ ಪೈಕಿ 17,17,469 ಮಂದಿ (ಶೇ. 94.57) ಲಸಿಕೆ ಪಡೆದಿದ್ದಾರೆ. 18 ವರ್ಷ ಮೇಲ್ಪಟ್ಟ ಶೇ. 96 ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟ ಶೇ. 98.16 ಮಂದಿ ಮೊದಲ ಡೋಸ್‌ ಹಾಗೂ ಶೇ. 86.12 ಮಂದಿ ದ್ವಿತೀಯ ಡೋಸ್‌ ಲಸಿಕೆ ಸ್ವೀಕರಿಸಿದ್ದಾರೆ.

ಪ್ರತಿಶತ ಸಾಧನೆ ಆಗದಿರಲು ಕಾರಣ
ಲಸಿಕೆ ಪಡೆಯಲು ನಿರಾಕರಿಸುವವರು ಶೇ. 1ರಷ್ಟು ಮಂದಿ ಇದ್ದರೆ ತೀವ್ರ ಅಸ್ವಸ್ಥರಾಗಿ ಹಾಸಿಗೆ ಹಿಡಿದವರು, ಅಲರ್ಜಿ ಮತ್ತಿತರ ಸಮಸ್ಯೆ ಇರುವವರು ಶೇ. 1ರಷ್ಟಿದ್ದಾರೆ. ವಿದೇಶಗಳಲ್ಲಿ ಅಥವಾ ಹೊರ ರಾಜ್ಯಗಳಲ್ಲಿ ಇರುವ ಜಿಲ್ಲೆಯ ಜನರು ಲಸಿಕೆ ಪಡೆದಿರುವ ಬಗ್ಗೆ ನಿಖರ ಮಾಹಿತಿ ಇಲ್ಲ. ಹಾಗಾಗಿ ಶೇ. 2ರಷ್ಟು ಮಂದಿ ಲಸಿಕೆ ಪಡೆಯಲು ಇನ್ನೂ ಬಾಕಿ ಇದ್ದಾರೆ. ಇದರಿಂದಾಗಿ ವ್ಯಾಕ್ಸಿನೇಶನ್‌ನಲ್ಲಿ ಶೇ. 100 ಸಾಧನೆ ಸಾಧ್ಯವಾಗಿಲ್ಲ. ಆದರೆ ಶೇ. 98 ಸಾಧನೆ ಆಗಿರುವ ಬಗ್ಗೆ ತೃಪ್ತಿ ಇದೆ ಎಂದು ದ.ಕ. ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ಕಿಶೋರ್‌ ರಾವ್‌ ಉದಯವಾಣಿಗೆ ತಿಳಿಸಿದ್ದಾರೆ.

ದ.ಕ. ಜಿಲ್ಲೆಯಲ್ಲಿ ಇನ್ನೂ 90,000 ಮಂದಿ ಇನ್ನೂ ಲಸಿಕೆ ಪಡೆದಿಲ್ಲ. ಲಸಿಕೆ ಪಡೆದರೆ ಸೋಂಕಿನ ಪರಿಣಾಮ ತೀರಾ ಕಡಿಮೆ ಆಗಿರುತ್ತದೆ. ಆದ್ದರಿಂದ ಬಾಕಿ ಇರುವ ಎಲ್ಲರೂ ಲಸಿಕೆ ತೆಗೆದುಕೊಳ್ಳುವಂತೆ ಜಿಲ್ಲಾಡಳಿತ ಮನವಿ ಮಾಡುತ್ತದೆ.
– ಡಾ| ರಾಜೇಂದ್ರ ಕೆ.ವಿ., ದ.ಕ. ಜಿಲ್ಲಾಧಿಕಾರಿ

ಉಡುಪಿ ಜಿಲ್ಲೆಯಲ್ಲಿ ಅಭಿಯಾನವನ್ನು ಕೈಗೊಂಡು ಲಸಿಕಾ ಮಿತ್ರರು ಪ್ರತೀ ಮನೆ ಮನೆಗೆ ಹೋಗಿ ಲಸಿಕೆ ಪಡೆಯುವಂತೆ ಮನವಿ ಮಾಡಿದ್ದಾರೆ. 103 ವರ್ಷ ಪ್ರಾಯದವರಿಗೂ ಲಸಿಕೆ ಕೊಡಿಸಲಾಗಿದೆ. ವ್ಯಾಕ್ಸಿನೇಶನ್‌ಗೆ ಸಂಬಂಧಿಸಿ ಜಿಲ್ಲೆಯಲ್ಲಿ ಶೇ. 98 ಸಾಧನೆ ಆಗಿದೆ.
– ಕೂರ್ಮಾ ರಾವ್‌, ಉಡುಪಿ ಜಿಲ್ಲಾಧಿಕಾರಿ

 

ಟಾಪ್ ನ್ಯೂಸ್

1-wewqe

WFI chief ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯ ವರದಿಗಳು ಸುಳ್ಳು

rahul gandhi

US ನಲ್ಲಿ ರಾಹುಲ್ ಗಾಂಧಿ ವಿರುದ್ಧ ಖಾಲಿಸ್ತಾನ್ ಬೆಂಬಲಿಗರ ಆಕ್ರೋಶ; ಭಾಷಣಕ್ಕೆ ಅಡ್ಡಿ

ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..

Actor Rahul Bose:ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..

TDY-10

83ರ ದಿಗ್ಗಜ ನಟನ 29ರ ಪ್ರೇಯಸಿ ಗರ್ಭಿಣಿ: 4ನೇ ಬಾರಿ ತಂದೆಯಾಗಲಿದ್ದಾರೆ Al Pacino

1-sdsad

Guarantee; ಮಂತ್ರಿ ಪರಿಷತ್ ಸಭೆ: ಸಿದ್ದರಾಮಯ್ಯ ಅವರಿಗೆ ಪರಮಾಧಿಕಾರ

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ: ಚಿತ್ರಗಳ ಯಶಸ್ಸಿಗೆ ಪ್ರಾರ್ಥನೆ

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ: ಚಿತ್ರಗಳ ಯಶಸ್ಸಿಗೆ ಪ್ರಾರ್ಥನೆ

1-sasad

Malaysia: ಪಾಕಿಸ್ತಾನ ಏರ್‌ಲೈನ್ಸ್ ಜೆಟ್ ಜಪ್ತಿ; ಪ್ರಯಾಣಿಕರು ಸಂಕಷ್ಟಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwewq

Retired ACP ಸುಭಾಷ್ ಚಂದ್ರ ವಿಧಿವಶ ; ಗಣ್ಯರ ಸಂತಾಪ

ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ: ದಕ್ಷಿಣ ಕನ್ನಡದ 16 ಕಡೆಗಳಲ್ಲಿ NIA ದಾಳಿ

ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ: ದಕ್ಷಿಣ ಕನ್ನಡದ 16 ಕಡೆಗಳಲ್ಲಿ NIA ದಾಳಿ

Mangaluru: ರನ್‌ವೇ ರೀಕಾರ್ಪೆಂಟಿಂಗ್ ಕಾಮಗಾರಿ ಪೂರ್ಣ: ನಾಳೆಯಿಂದ ವಿಮಾನಯಾನ ಯಥಾಸ್ಥಿತಿಗೆ

Mangaluru: ರನ್‌ವೇ ರೀಕಾರ್ಪೆಂಟಿಂಗ್ ಕಾಮಗಾರಿ ಪೂರ್ಣ: ನಾಳೆಯಿಂದ ವಿಮಾನಯಾನ ಯಥಾಸ್ಥಿತಿಗೆ

ತುಳುವಿಗೆ ರಾಜ್ಯ ಭಾಷೆ ಸ್ಥಾನ; ಮತ್ತೆ ಮೂಡಿದ ನಿರೀಕ್ಷೆ

ತುಳುವಿಗೆ ರಾಜ್ಯ ಭಾಷೆ ಸ್ಥಾನ; ಮತ್ತೆ ಮೂಡಿದ ನಿರೀಕ್ಷೆ

ಶಾಲಾರಂಭ: ಚಿಣ್ಣರ ಸ್ವಾಗತಕ್ಕೆ ಶಾಲೆಗಳು ಸಿದ್ಧ

ಶಾಲಾರಂಭ: ಚಿಣ್ಣರ ಸ್ವಾಗತಕ್ಕೆ ಶಾಲೆಗಳು ಸಿದ್ಧ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

1-wewqe

WFI chief ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯ ವರದಿಗಳು ಸುಳ್ಳು

ಅಧಿಕಾರಿಗಳಿಂದ ಮತ ಎಣಿಕೆಯಲ್ಲಿ ಪಕ್ಷಪಾತ ಆರೋಪ

ಅಧಿಕಾರಿಗಳಿಂದ ಮತ ಎಣಿಕೆಯಲ್ಲಿ ಪಕ್ಷಪಾತ ಆರೋಪ

rahul gandhi

US ನಲ್ಲಿ ರಾಹುಲ್ ಗಾಂಧಿ ವಿರುದ್ಧ ಖಾಲಿಸ್ತಾನ್ ಬೆಂಬಲಿಗರ ಆಕ್ರೋಶ; ಭಾಷಣಕ್ಕೆ ಅಡ್ಡಿ

ಮೂರು ತಿಂಗಳಿಂದ ಅಂಗನವಾಡಿ ಮಕ್ಕಳಿಗಿಲ್ಲ ಹಾಲು

ಮೂರು ತಿಂಗಳಿಂದ ಅಂಗನವಾಡಿ ಮಕ್ಕಳಿಗಿಲ್ಲ ಹಾಲು

ಮಳೆಗಾಲ: ವಾಹನ ಸವಾರರಿಗೆ ಮುನ್ನೆಚ್ಚರಿಕೆ

ಮಳೆಗಾಲ: ವಾಹನ ಸವಾರರಿಗೆ ಮುನ್ನೆಚ್ಚರಿಕೆ