ವಾಹನ ಕಳವಿಗೆ ಆನ್‌ಲೈನ್‌ ಎಫ್ಐಆರ್‌!

ಪೊಲೀಸ್‌ ಇಲಾಖೆಯ 11ಕ್ಕೂ ಅಧಿಕ ಸೇವೆಗಳು ಆನ್‌ಲೈನ್‌ನಲ್ಲಿಯೇ ಲಭ್ಯ

Team Udayavani, Nov 14, 2022, 7:05 AM IST

ವಾಹನ ಕಳವಿಗೆ ಆನ್‌ಲೈನ್‌ ಎಫ್ಐಆರ್‌!

ಮಂಗಳೂರು: ಆನ್‌ಲೈನ್‌ ಸೇವೆಗಳಿಗೆ ಆದ್ಯತೆ ನೀಡುತ್ತಿರುವ ರಾಜ್ಯ ಪೊಲೀಸ್‌ ಇಲಾಖೆ ಈಗ ವಾಹನ ಕಳವು ಸಂದರ್ಭ ಆನ್‌ಲೈನ್‌ನಲ್ಲಿಯೇ ದೂರು ದಾಖಲಿಸಿ ಆನ್‌ಲೈನ್‌ನಲ್ಲಿಯೇ ಎಫ್ಐಆರ್‌ ಸ್ವೀಕರಿಸುವ ಸೌಲಭ್ಯ ಕಲ್ಪಿಸಿದೆ.

ರಾಜ್ಯ ಪೊಲೀಸ್‌ನ ಅಧಿಕೃತ ವೆಬ್‌ಸೈಟ್‌ http://www.ksp.karnataka.gov.in ನ ಸಿಟಿಜನ್‌ ಸೆಂಟ್ರಿಕ್‌ ಪೋರ್ಟಲ್‌ ಮೂಲಕ ಇ-ಎಫ್ಐಆರ್‌ ಪಡೆಯಬಹುದು. ಪೋರ್ಟಲ್‌ನಲ್ಲಿ ಹೆಸರು, ವಿಳಾಸ, ಆಧಾರ್‌ ಸಂಖ್ಯೆ, ಕಳವಾದ ವಾಹನದ ಮಾಹಿತಿ ನಮೂದಿಸಿ ಪೂರಕ ದಾಖಲೆ ಅಪ್‌ ಲೋಡ್‌ ಮಾಡಬೇಕು. ಕಳವಾದ ಸ್ಥಳದ ಮಾಹಿತಿ ನೀಡಬೇಕು. ಮ್ಯಾಪ್‌ ಮೂಲಕವೂ ಲೊಕೇಶನ್‌ ಆಯ್ಕೆ ಮಾಡಬಹುದು. ಪೋರ್ಟಲ್‌ ನಲ್ಲಿ ದೂರು ದಾಖಲಾದ ಬಳಿಕ ಸಂಬಂಧಿಸಿದ ಠಾಣಾಧಿಕಾರಿ, ದೂರುದಾರರಿಗೆ ಎಸ್‌ಎಂಎಸ್‌ ಬರುತ್ತದೆ. ಬಳಿಕ ಆನ್‌ಲೈನ್‌ ದಾಖಲೆ ಪರಿಶೀಲನೆ ಮುಗಿದು ಠಾಣಾಧಿಕಾರಿಯ ಇ ಸಹಿಯೊಂದಿಗೆ ಇ-ಎಫ್ಐಆರ್‌ ಸಿದ್ಧವಾಗು ತ್ತದೆ. ಇದನ್ನು ದೂರುದಾರರು ಡೌನ್‌ಲೋಡ್‌ ಮಾಡಬಹುದು.

300ಕ್ಕೂ ಅಧಿಕ ದೂರು ದಾಖಲು
ವಾಹನ ಕಳವಾದ ಸಂದರ್ಭ ವಾಹನ ಮಾಲಕರು ಹಲವು ಬಾರಿ ಪೊಲೀಸ್‌ ಠಾಣೆಗೆ ತೆರಳುವ ಪ್ರಮೇಯ ಬರುತ್ತದೆ. ಕೆಲವೊಮ್ಮೆ ದೂರು ನೀಡಿದರೂ ಎಫ್ಐಆರ್‌ ದಾಖಲಾಗಲು ಹಲವು ದಿನಗಳು ತಗಲುತ್ತವೆ. ಇದನ್ನು ಇ-ಎಫ್ಐಆರ್‌ ತಪ್ಪಿಸುತ್ತದೆ. ಸಾಮಾನ್ಯವಾಗಿ ವಾಹನ ಕಳವು ಪ್ರಕರಣಗಳಲ್ಲಿ ಸುಳ್ಳು ಮಾಹಿತಿ ನೀಡುವುದು ಅಸಾಧ್ಯ. ಹಾಗಾಗಿ ವಾಹನ ಕಳವು ಪ್ರಕರಣಗಳಲ್ಲಿ ಮಾತ್ರ ಇ-ಎಫ್ಐಆರ್‌ಗೆ ಅವಕಾಶ ನೀಡಲಾಗಿದೆ. ಇ-ಎಫ್ಐಆರ್‌ ಅನುಷ್ಠಾನಗೊಳಿಸಿದ 10 ದಿನಗಳಲ್ಲಿ 300ಕ್ಕೂ ಅಧಿಕ ಮಂದಿ ಆನ್‌ಲೈನ್‌ನಲ್ಲಿಯೇ ದೂರು ಸಲ್ಲಿಸಿದ್ದಾರೆ.

“ಸಿ’ ರಿಪೋರ್ಟ್‌ ಆನ್‌ಲೈನ್‌
ಒಂದು ವೇಳೆ ಕಳವಾದ ವಾಹನ ಪತ್ತೆಯಾಗದಿದ್ದರೆ ಪೊಲೀಸರು “ಸಿ’ ರಿಪೋರ್ಟ್‌ (ಅನ್‌ ಡಿಟೆಕ್ಟ್) ನೀಡಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ಎಫ್ಐಆರ್‌ ದಾಖಲಾದ ಅನಂತರ ವಾಹನ ಪತ್ತೆಯಾಗದಿದ್ದರೆ “ಸಿ’ ರಿಪೋರ್ಟನ್ನು ಕೂಡ ಆನ್‌ಲೈನ್‌ನಲ್ಲಿಯೇ ನೀಡಲು ಇಲಾಖೆ ಚಿಂತನೆ ನಡೆಸಿದೆ ಎಂದು ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

11ಕ್ಕೂ ಅಧಿಕ ಸೇವೆಗಳು ಆನ್‌ಲೈನ್‌
ಉದ್ಯೋಗ ಪರಿಶೀಲನೆ ಪ್ರಮಾಣಪತ್ರ, ಪೊಲೀಸ್‌ ನಿರಾಕ್ಷೇಪಣ ಪ್ರಮಾಣಪತ್ರ, ಪರವಾನಿಗೆ ಮೊದಲಾದ 11ಕ್ಕೂ ಅಧಿಕ ಸೇವೆಗಳನ್ನು ಆನ್‌ಲೈನ್‌ನಲ್ಲಿಯೇ (ಸೇವಾ ಸಿಂಧು) ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಶುಲ್ಕವನ್ನು ಪೇಟಿಎಂ, ಗೂಗಲ್‌ ಪೇ, ಪೋನ್‌ ಪೇ ಮೊದಲಾದ ಯುಪಿಐ ಬ್ಯಾಂಕಿಂಗ್‌ ಸಿಸ್ಟಮ್‌ಗಳ ಮೂಲಕ ಪಾವತಿ ಮಾಡಬಹುದು. ಆನ್‌ಲೈನ್‌ನಲ್ಲಿಯೇ ಅರ್ಜಿಯ ಸ್ಟೇಟಸ್‌ ಪರಿಶೀಲನೆ ಮಾಡಬಹುದು. ವರ್ಷಕ್ಕೆ ಸುಮಾರು 6ರಿಂದ 8 ಲಕ್ಷ ಮಂದಿ ಪೊಲೀಸ್‌ ವೆರಿಫಿಕೇಶನ್‌ (ಪರಿಶೀಲನ ಪ್ರಮಾಣಪತ್ರ) ಪಡೆಯುತ್ತಿದ್ದು, ಅಂಥವರಿಗೆ ಆನ್‌ಲೈನ್‌ಸೇವೆಯಿಂದ ತುಂಬಾ ಅನುಕೂಲವಾಗಿದೆ ಎನ್ನುತ್ತಾರೆ ಪೊಲೀಸ್‌ ಅಧಿಕಾರಿಗಳು.
2.50 ಲಕ್ಷ ಮಂದಿ “ಇ-ಲಾಸ್ಟ್‌’ ಬಳಕೆ ಈ ಹಿಂದೆ ಬೆಂಗಳೂರಿಗೆ ಸೀಮಿತವಾಗಿದ್ದ “ಇ-ಲಾಸ್ಟ್‌’ ಆ್ಯಪ್‌ (ಛಿ ಔಟsಠಿ) ಸೇವೆಯನ್ನು ಕಳೆದ ವರ್ಷ ರಾಜ್ಯದಾದ್ಯಂತ ವಿಸ್ತರಿಸಲಾಗಿದ್ದು, ಒಂದು ವರ್ಷದಲ್ಲಿ 2.50 ಲಕ್ಷಕ್ಕೂ ಅಧಿಕ ಮಂದಿ ಬಳಸಿದ್ದಾರೆ. ಯಾವುದೇ ದಾಖಲೆ ಕಳೆದುಹೋದರೆ ಇ-ಲಾಸ್ಟ್‌ ಆ್ಯಪ್‌ನಲ್ಲಿಯೇ ಸುಲಭವಾಗಿ ದೂರು ದಾಖಲಿಸುವ ವ್ಯವಸ್ಥೆ ಇದಾಗಿದೆ.

ಸಾರ್ವಜನಿಕರು ಸಣ್ಣಪುಟ್ಟ ಕೆಲಸಗಳಿಗೂ ಪೊಲೀಸ್‌ ಠಾಣೆ, ಎಸ್‌ಪಿ ಕಚೇರಿಗೆ ಅಲೆದಾಡುವುದನ್ನು ತಪ್ಪಿಸುವುದು, ಪಾರದರ್ಶಕ ಸೇವೆಯನ್ನು ಸಾಧ್ಯವಾದಷ್ಟು ತ್ವರಿತವಾಗಿ ಒದಗಿಸುವುದು ಆನ್‌ಲೈನ್‌ ಸೇವೆಯ ಉದ್ದೇಶ. ನಮ್ಮ ರಾಜ್ಯದಲ್ಲಿ ಬಹುತೇಕ ಎಲ್ಲ ಹಳ್ಳಿಗಳಲ್ಲಿಯೂ ಇಂಟರ್‌ನೆಟ್‌ ಸಂಪರ್ಕ, ಮಾಹಿತಿ ಇದೆ. ಹಾಗಾಗಿ ಆನ್‌ಲೈನ್‌ ಸೇವೆಗೆ ಉತ್ತಮ ಸ್ಪಂದನೆ ದೊರೆಯುತ್ತಿದೆ. ಆನ್‌ಲೈನ್‌ ಸೇವೆಯಿಂದಾಗಿ ವರ್ಷಕ್ಕೆ ಪೊಲೀಸ್‌ ಠಾಣೆಗಳಿಗೆ ಸಾರ್ವಜನಿಕರ ಅಲೆದಾಟದ 50 ಲಕ್ಷ ಹೆಜ್ಜೆ (ಫ‌ೂಟ್‌ಫಾಲ್‌) ಕಡಿಮೆಯಾಗಬಹುದೆಂಬ ಅಂದಾಜು ಇದೆ.
-ಪ್ರವೀಣ್‌ ಸೂದ್‌, ಮಹಾನಿರ್ದೇಶಕರು
ಹಾಗೂ ಆರಕ್ಷಕ ಮಹಾನಿರೀಕ್ಷಕರು

-ಸಂತೋಷ್‌ ಬೊಳ್ಳೆಟ್ಟು

ಟಾಪ್ ನ್ಯೂಸ್

ಚುನಾವಣೆಯಲ್ಲಿ ಎದುರಾಳಿ ಯಾರೇ ಇರಲಿ ಅದರ ಬಗ್ಗೆ ನನಗೆ ಚಿಂತೆ ಇಲ್ಲ: ಸಿದ್ದರಾಮಯ್ಯ

ಚುನಾವಣೆಯಲ್ಲಿ ಎದುರಾಳಿ ಯಾರೇ ಇರಲಿ ಅದರ ಬಗ್ಗೆ ನನಗೆ ಚಿಂತೆ ಇಲ್ಲ: ಸಿದ್ದರಾಮಯ್ಯ

naval

ಡೈರೆಕ್ಟರ್ ಜನರಲ್ ನೇವಲ್ ಆಪರೇಷನ್ಸ್ ಆಗಿ ಅತುಲ್ ಆನಂದ ಅಧಿಕಾರ ಸ್ವೀಕಾರ

mattimood

ಕಲಬುರಗಿ ಗ್ರಾಮೀಣ ಬಿಜೆಪಿಯಲ್ಲಿ ಭುಗಿಲೆದ್ದ ಬಂಡಾಯ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

1-ascdsadasd

ಬೈಂದೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಮುನಿಯಾಲು ಉದಯಕುಮಾರ್ ಶೆಟ್ಟಿ ಹೆಸರು ಪ್ರಸ್ತಾಪ

Ra

ಜೈಲು ಶಿಕ್ಷೆ ವಿರುದ್ಧ ರಾಹುಲ್ ಗಾಂಧಿ ನಾಳೆ ಸೂರತ್ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪ್ರಯಾಣಿಕರ ಬಸ್: 2 ಮೃತ್ಯು, ಹಲವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಬಸ್: 2 ಮೃತ್ಯು, ಹಲವರಿಗೆ ಗಂಭೀರ ಗಾಯ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಾಗೃಹದಲ್ಲಿ ಬೀಡಿ, ಸಿಗರೇಟ್, ತಂಬಾಕು ಮಾತ್ರ ಸಿಕ್ಕಿದೆ: ಮಂಗಳೂರು ಕಮಿಷನರ್

ಕಾರಾಗೃಹದಲ್ಲಿ ಬೀಡಿ, ಸಿಗರೇಟ್, ತಂಬಾಕು ಮಾತ್ರ ಸಿಕ್ಕಿದೆ: ಮಂಗಳೂರು ಕಮಿಷನರ್

ಮಂಗಳೂರು ಜಿಲ್ಲಾ ಕಾರಾಗೃಹ: ಭಾರೀ ಸಂಖ್ಯೆಯ ಪೊಲೀಸರಿಂದ ತಪಾಸಣೆ

ಮಂಗಳೂರು ಜಿಲ್ಲಾ ಕಾರಾಗೃಹ: ಭಾರೀ ಸಂಖ್ಯೆಯ ಪೊಲೀಸರಿಂದ ತಪಾಸಣೆ

ಮೀನುಗಾರ ಅಭ್ಯರ್ಥಿಗೆ ಬಿಜೆಪಿ ಟಿಕೆಟ್‌: ಆಗ್ರಹ

ಮೀನುಗಾರ ಅಭ್ಯರ್ಥಿಗೆ ಬಿಜೆಪಿ ಟಿಕೆಟ್‌: ಆಗ್ರಹ

police siren

ನ್ಯಾಯವಾದಿ,ಅವರ ಗರ್ಭಿಣಿ ಪತ್ನಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ

missing

ಔಷಧ ಅಂಗಡಿಗೆಂದು ಹೋದ ವಿವಾಹಿತೆ ನಾಪತ್ತೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಚುನಾವಣೆಯಲ್ಲಿ ಎದುರಾಳಿ ಯಾರೇ ಇರಲಿ ಅದರ ಬಗ್ಗೆ ನನಗೆ ಚಿಂತೆ ಇಲ್ಲ: ಸಿದ್ದರಾಮಯ್ಯ

ಚುನಾವಣೆಯಲ್ಲಿ ಎದುರಾಳಿ ಯಾರೇ ಇರಲಿ ಅದರ ಬಗ್ಗೆ ನನಗೆ ಚಿಂತೆ ಇಲ್ಲ: ಸಿದ್ದರಾಮಯ್ಯ

naval

ಡೈರೆಕ್ಟರ್ ಜನರಲ್ ನೇವಲ್ ಆಪರೇಷನ್ಸ್ ಆಗಿ ಅತುಲ್ ಆನಂದ ಅಧಿಕಾರ ಸ್ವೀಕಾರ

mattimood

ಕಲಬುರಗಿ ಗ್ರಾಮೀಣ ಬಿಜೆಪಿಯಲ್ಲಿ ಭುಗಿಲೆದ್ದ ಬಂಡಾಯ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

1-ascdsadasd

ಬೈಂದೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಮುನಿಯಾಲು ಉದಯಕುಮಾರ್ ಶೆಟ್ಟಿ ಹೆಸರು ಪ್ರಸ್ತಾಪ