Online ವಂಚನೆ ಮೂರು ಪಟ್ಟು ಹೆಚ್ಚಳ; ಷೇರು ಹೂಡಿಕೆ; ಟ್ರೇಡಿಂಗ್‌ ಹೆಸರಲ್ಲಿ ಖೆಡ್ಡಾ!


Team Udayavani, Mar 1, 2024, 9:41 AM IST

Online fraud triples; Khedda in the name of stock investment, trading!

ಮಂಗಳೂರು: ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಲ್ಲಿಯೂ ಆನ್‌ಲೈನ್‌ನಲ್ಲಿ ಹಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಭಾರೀ ಏರಿಕೆಯಾಗುತ್ತಿದ್ದು ಕಳೆದೆರಡು ವರ್ಷಗಳಲ್ಲಿ ಪ್ರಕರಣಗಳು ಮೂರುಪಟ್ಟು ಏರಿಕೆಯಾಗಿವೆ.

ಹೊಸಹೊಸ ಮಾರ್ಗಗಳನ್ನು ಸೈಬರ್‌ ವಂಚಕರು ಬಳಸುತ್ತಿದ್ದು ವಿದ್ಯಾವಂತರೇ ಇದರಲ್ಲಿ ಸಿಲುಕಿ ಲಕ್ಷಾಂತರ ರೂ. ಕಳೆದುಕೊಳ್ಳುತ್ತಿದ್ದಾರೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ, ಪಾರ್ಟ್‌ಟೈಮ್‌ ಜಾಬ್‌, ಕ್ರಿಪ್ಟೋ ಟ್ರೇಡಿಂಗ್‌ ಪ್ರಸ್ತುತ ವಂಚಕರ ಪ್ರಮುಖ ದಾಳಗಳಾಗಿವೆ. ಈ ಮೂಲಕ ಕೋಟ್ಯಂತರ ರೂಪಾಯಿ ವಂಚಕರ ಪಾಲಾಗುತ್ತಿದೆ.

ಲಿಂಕ್‌, ಆ್ಯಪ್‌ ಗಳ ಮೂಲಕ ಗಾಳ ಹಾಕುವ ವಂಚಕರು ಆರಂಭದಲ್ಲಿ ಸಣ್ಣ ಮೊತ್ತವನ್ನು ರಿಟರ್ನ್ಸ್ ಆಗಿ ಪಾವತಿಸುತ್ತಾರೆ. ಹಣ ಹೂಡಿಕೆ ಮಾಡುವವರು ಅದರಿಂದ ಪ್ರೇರಿತರಾಗಿ ದೊಡ್ಡ ಪ್ರಮಾಣದ ಹೂಡಿಕೆ ಮಾಡುತ್ತಾರೆ. ಅವರು ಬಳಸುವ ಆ್ಯಪ್‌ “ಹೆಚ್ಚಿನ ಆದಾಯ’ವನ್ನು ತೋರಿಸಿದರೂ ವಾಸ್ತವವಾಗಿ ಅವರ ಖಾತೆಗೆ ಆ ಹಣ ಜಮೆಯಾಗಿರುವುದಿಲ್ಲ. ಎಇಪಿಎಸ್‌ (ಆಧಾರ್‌ ಸಕ್ರಿಯ ಗೊಳಿಸಿದ ಪಾವತಿ ವ್ಯವಸ್ಥೆ) ಮೂಲಕವೂ ವಂಚನೆಗಳು ನಡೆಯುತ್ತಿವೆ. ಹೆಚ್ಚಿನ ಮೊತ್ತದ ರಿಟರ್ನ್ಸ್ ಆಸೆಯಲ್ಲಿ ನಿವೃತ್ತರು ಕೂಡ ತಮ್ಮ ಉಳಿತಾಯದ ಹಣವನ್ನು ಹೂಡಿಕೆ ಮಾಡಿ ಕಳೆದುಕೊಂಡಿದ್ದಾರೆ.

“ಜನರ ಅತಿ ಆಸೆ ಇಂತಹ ವಂಚನೆಗಳಿಗೆ ಮುಖ್ಯ ಕಾರಣ. ಆ್ಯಂಡ್ರಾಯ್ಡ ಪ್ಲೇ ಸ್ಟೋರ್‌ನಲ್ಲಿಯೇ ಇಂತಹ ವಂಚನೆಗಳು ಹೆಚ್ಚು ನಡೆಯುತ್ತಿವೆ. ಆ್ಯಪ್‌ ಗಳ ಹಿನ್ನೆಲೆ ಪರಿಶೀಲಿಸದೆ ಬಳಕೆ ಮಾಡುವುದರಿಂದ ತೊಂದರೆಯಾಗುತ್ತಿದೆ. ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಎನ್‌ಬಿಎಫ್ಸಿ ಅನುಮೋದಿತ ಅಥವ ಅಧಿಕೃತವಾದ ಆ್ಯಪ್‌ಗ್ಳನ್ನು ಮಾತ್ರ ಬಳಕೆ ಮಾಡಬೇಕು ಎನ್ನುತ್ತಾರೆ ಸೈಬರ್‌ ಭದ್ರತಾ ತಜ್ಞ ಡಾ| ಅನಂತ ಪ್ರಭು ಗುರುಪುರ.

ದ.ಕ: ಶೇ.125 ಹೆಚ್ಚಳ!

ಮಂಗಳೂರು ಕಮಿಷನರೆಟ್‌ ವ್ಯಾಪ್ತಿಯಲ್ಲಿ 2022ರಲ್ಲಿ 68 ಸೈಬರ್‌ ಪ್ರಕರಣಗಳು ದಾಖಲಾಗಿದ್ದರೆ 2023ರಲ್ಲಿ 240 (ಶೇ. 252 ಹೆಚ್ಚಳ) ಪ್ರಕರಣಗಳು ದಾಖಲಾಗಿವೆ. 2021ರಲ್ಲಿ 107 ಪ್ರಕರಣಗಳು ದಾಖಲಾಗಿದ್ದವು. ಉದ್ಯೋಗ ವಂಚನೆ, ಟೆಲಿಗ್ರಾಂ ಆ್ಯಪ್‌ ಮೂಲಕ ಹಣಕಾಸು ವಂಚನೆ, ಪಾರ್ಟ್‌ ಟೈಂ ಉದ್ಯೋಗ, ಲೋನ್‌ ಆ್ಯಪ್‌ಗ್ಳಲ್ಲಿ ವಂಚನೆ ಮೊದಲಾದವುಗಳು ಇದರಲ್ಲಿ ಸೇರಿವೆ. ದ.ಕ, ಜಿಲ್ಲಾ ಪೊಲೀಸ್‌ ವ್ಯಾಪ್ತಿಯಲ್ಲಿ 2021ರಲ್ಲಿ 26 ಪ್ರಕರಣಗಳು ದಾಖಲಾಗಿದ್ದವು. 2022ರಲ್ಲಿ 16 ಇದ್ದ ಪ್ರಕರಣ, 2023ರಲ್ಲಿ 36 ಕ್ಕೆ (ಶೇ. 125ರಷ್ಟು ಹೆಚ್ಚಳ) ಏರಿಕೆಯಾಗಿದೆ.

2 ತಿಂಗಳಲ್ಲಿ 4.42 ಕೋ.ರೂ. ವಂಚನೆ

ಉಡುಪಿ ಜಿಲ್ಲೆಯಲ್ಲಿ 2023ರಲ್ಲಿ 129 ಪ್ರಕರಣಗಳಲ್ಲಿ ಜನರು 4.44 ಕೋ.ರೂ. ಕಳೆದು ಕೊಂಡಿದ್ದಾರೆ. ಈ ವರ್ಷ ಈಗಾಗಲೇ 4.42 ಕೋ. ರೂ. ಕಳೆದು ಕೊಂಡಿದ್ದಾರೆ. ಸೈಬರ್‌ ವಂಚನೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಹೆಚ್ಚಾಗಬೇಕಿದೆ ಎನ್ನುತ್ತಾರೆ ಉಡುಪಿ ಎಸ್‌ಪಿ ಡಾ| ಅರುಣ್‌ ಕುಮಾರ್‌.

ವಂಚಕರ ಆಮಿಷಗಳಿಗೆ ಒಳಗಾಗಿ ಅನೇಕ ಮಂದಿ ಹಣ ಕಳೆದುಕೊಳ್ಳುತ್ತಿದ್ದಾರೆ. 5 ಸಾವಿರ ರೂ. ವರೆಗೆ ಹಣ ಕಳೆದುಕೊಂಡವರು ದೂರು ನೀಡುತ್ತಿಲ್ಲ. ಕೆಲವು ಪ್ರಕರಣಗಳನ್ನು ಭೇದಿಸಲಾಗಿದೆ. ಹಣ ಕಳೆದುಕೊಂಡಿರುವುದು ಗೊತ್ತಾದ ಕೂಡಲೇ National Cyber Crime Reporting Portal ನಲ್ಲಿ ದೂರು ದಾಖಲಿಸಬಹುದು. ಹತ್ತಿರದ ಪೊಲೀಸ್‌ ಠಾಣೆಗೆ ದೂರು ನೀಡಬಹುದು ಅಥವಾ 1930 ಸಹಾಯವಾಣಿಗೆ ಕರೆ ಮಾಡಬಹುದು. ಆನ್‌ಲೈನ್‌ ವಂಚನೆಯ ಬಗ್ಗೆ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಇಂತಹ ವಂಚನೆ ತುಂಬಾ ಹೆಚ್ಚಾಗಬಹುದು. -ಸಿ.ಬಿ. ರಿಷ್ಯಂತ್‌, ದ.ಕ. ಎಸ್‌ಪಿ

 

ಸಂತೋಷ್‌ ಬೊಳ್ಳೆಟ್ಟು

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.