“ಕಾಂಗ್ರೆಸ್ನಿಂದ ಮಾತ್ರ ಬಡವರಿಗೆ ನಿವೇಶನ’
Team Udayavani, Aug 8, 2017, 6:25 AM IST
ಪುಂಜಾಲಕಟ್ಟೆ : ಕಾಂಗ್ರೆಸ್ ಪಕ್ಷದ ಆಡಳಿತ ಮಾತ್ರ ಮಾತ್ರ ಬಡವರಿಗೆ ನಿವೇಶನ, ಸೂರು ಕೊಡುವ ಕೆಲಸ ಮಾಡಿದೆ ಎಂದು ಅರಣ್ಯ ಸಚಿವ ಬಿ. ರಮಾನಾಥ ರೈ ಹೇಳಿದರು. ಅವರು ಬಂಟ್ವಾಳ ತಾ| ಇರ್ವತ್ತೂರು ಗ್ರಾ.ಪಂ. ಸಭಾಂಗಣದಲ್ಲಿ ಇರ್ವತ್ತೂರು ಮತ್ತು ಮೂಡುಪಡುಕೋಡಿ ಗ್ರಾಮಗಳ ವ್ಯಾಪ್ತಿಯಲ್ಲಿನ ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕುಪತ್ರ ವಿತರಿಸಿ ಮಾತನಾಡಿದರು.
ಇಂದಿರಾ ಗಾಂಧಿಯವರ ದೂರದರ್ಶಿತ್ವದಿಂದ ಭೂಮಸೂದೆ ಕಾಯ್ದೆಯಿಂದ ಬಡಜನತೆ ಪಟ್ಟಾದಾರಿಕೆ ಹೊಂದಿದ್ದಾರೆ .
ಮುಖ್ಯ ಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಜನಪರ ಯೋಜನೆಗಳಿಂದ ಮೆಚ್ಚುಗೆ ಗಳಿಸಿದೆ ಎಂದರು.
ಜಿ.ಪಂ. ಸದಸ್ಯ ಬಿ. ಪದ್ಮಶೇಖರ ಜೈನ್, ತಾಲೂಕು ಅಕ್ರಮ -ಸಕ್ರಮ ಸಮಿತಿ ಅಧ್ಯಕ್ಷ ಕೆ. ಮಾಯಿಲಪ್ಪ ಸಾಲ್ಯಾನ್, ತಾ.ಪಂ. ಸದಸ್ಯ ರಮೇಶ್ ಕುಡೆ¾àರ್, ಗ್ರಾ.ಪಂ. ಉಪಾಧ್ಯಕ್ಷ ಶಂಕರ ಶೆಟ್ಟಿ ಬೆದ್ರಮಾರ್, ಸದಸ್ಯ ಪ್ರಶಾಂತ್ ಕೋಟ್ಯಾನ್, ಎಪಿಎಂಸಿ ಸದಸ್ಯೆ ಭಾರತಿ, ಪಂ.ಅ. ಅಧಿಕಾರಿ ಗಣೇಶ್ ಶೆಟ್ಟಿಗಾರ್, ಗ್ರಾಮಕರಣಿಕ ಕುಮಾರ್ಟಿ.ಸಿ., ಗ್ರಾಮಸಹಾಯಕ ಸಂತೋಷ್, ಸುಧೀರ್ ಶೆಟ್ಟಿ , ಗುರುಪ್ರಸಾದ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಚಿವರನ್ನು ಸಮ್ಮಾನಿಸಲಾಯಿತು.
84 ಫಲಾನುಭವಿಗಳಿಗೆ ಹಕ್ಕುಪತ್ರ, 5ಮಂದಿಗೆ ಸಹಾಯಧನ, 4 ಮಂದಿಗೆ ವಸತಿ ನಿರ್ಮಾಣ ಮಂಜೂರು ಪತ್ರ ವಿತರಿಸಲಾಯಿತು. Ó ಕಂದಾಯ ನಿರೀಕ್ಷಕ ನವೀನ್ ಸ್ವಾಗತಿಸಿ, ಎಸ್. ಅಬ್ದುಲ್ ರಹಿಮಾನ್ ಎಡೂ¤ರು ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
MUST WATCH
ಹೊಸ ಸೇರ್ಪಡೆ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
IPL;ಮುಂಬೈ ಇಂಡಿಯನ್ಸ್ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ