31 ಸಾವಿರ ಮಂದಿಯಿಂದ ವೀಕ್ಷಣೆ; 5.84 ಲ.ರೂ. ಆದಾಯ ಸಂಗ್ರಹ

ಕದ್ರಿ ಪಾರ್ಕ್‌ನಲ್ಲಿ ಫಲ ಪುಷ್ಪ ಪ್ರದರ್ಶನಕ್ಕೆ ತೆರೆ

Team Udayavani, Jan 28, 2020, 1:39 AM IST

2701MLR4

ವಿಶೇಷ ವರದಿ-ಮಹಾನಗರ: ಕದ್ರಿ ಪಾರ್ಕ್‌ನಲ್ಲಿ ಮೂರು ದಿನಗಳಿಂದ ನಡೆಯುತ್ತಿದ್ದ ಫಲ ಪುಷ್ಪ ಪ್ರದರ್ಶನಕ್ಕೆ ರವಿವಾರ ತೆರೆಬಿದ್ದಿದ್ದು, ಮೂರು ದಿನಗಳಲ್ಲಿ ಒಟ್ಟು 31,389 ಮಂದಿ ಆಗಮಿಸಿ, ಸುಮಾರು 5.84 ಲಕ್ಷ ರೂ. ಆದಾಯ ಸಂಗ್ರವಾಗಿದೆ. ಅಲ್ಲದೆ, ಪ್ರದರ್ಶನಕ್ಕಿರಿಸಿದ್ದ ಸ್ಟಾಲ್‌ಗ‌ಳಿಂದ 4.35 ಲಕ್ಷ ರೂ. ಹಣ ಸಂಗ್ರಹವಾಗಿದೆ.

ಕದ್ರಿ ಪಾರ್ಕ್‌ನಲ್ಲಿ ಈ ಬಾರಿ ಜ. 24ರಿಂದ 26ರ ವರೆಗೆ ಫಲ ಪುಷ್ಪ ಪ್ರದರ್ಶನ ಆಯೋಜಿಸಲಾಗಿತ್ತು. ಪಾರ್ಕ್‌ ಪ್ರವೇಶಕ್ಕೆ ಮಕ್ಕಳಿಗೆ 10 ರೂ. ಮತ್ತು ವಯಸ್ಕರಿಗೆ 20 ರೂ. ಪ್ರವೇಶ ಶುಲ್ಕ ನಿಗದಿಪಡಿಸಲಾಗಿತ್ತು. ಜ. 24ರಂದು ಒಟ್ಟು 3114 ಮಂದಿ ಆಗಮಿಸಿ 60,140 ರೂ., ಜ. 25ರಂದು 9,582 ಮಂದಿ ಆಗಮಿಸಿ 1,80,580 ರೂ. ಮತ್ತು ಜ. 26ರಂದು 18,693 ಮಂದಿ ಆಗಮಿಸಿ 3,43,640 ರೂ. ಹಣ ಸಂಗ್ರವಾಗಿತ್ತು. ಒಟ್ಟು 31,389 ಮಂದಿ ಆಗಮಿಸಿ, 5,84,360 ರೂ. ಹಣ ಸಂಗ್ರವಾಗಿದೆ.

ಈ ವರ್ಷ ಒಟ್ಟು ಮೂರು ದಿನಗಳಲ್ಲಿ ಒಟ್ಟು 31,389 ಮಂದಿ ಆಗಮಿಸಿ, 5,84,360 ರೂ. ಹಣ ಸಂಗ್ರವಾಗಿದೆ. ಕಳೆದ ವರ್ಷ (2019) ಜ. 26ರಿಂದ 28ರ ವರೆಗೆ ಫಲ ಪುಷ್ಪ ಪ್ರದರ್ಶನ ಆಯೋಜಿಸಲಾಗಿತ್ತು. ಈ ವೇಳೆ 30,162 ಮಂದಿ ವಯಸ್ಕರು, 4,397 ಮಂದಿ ಮಕ್ಕಳು ಆಗಮಿಸಿ ಒಟ್ಟು 6,47,290 ರೂ. ಆದಾಯ ಸಂಗ್ರಹವಾಗಿತ್ತು.

ಕಳೆದ ವರ್ಷಕ್ಕಿಂತ
ಕಡಿಮೆ ಆದಾಯ ಸಂಗ್ರಹ
ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ 62,930 ರೂ. ಆದಾಯ ಕಡಿಮೆ ಸಂಗ್ರಹವಾಗಿದೆ. ಈ ಬಾರಿ ನಗರದ ವಿವಿಧ ಶಾಲೆಗಳಿಂದ ಅನೇಕ ಮಂದಿ ವಿದ್ಯಾರ್ಥಿಗಳು ಫಲ ಪುಷ್ಪ ಪ್ರದರ್ಶನ ವೀಕ್ಷಣೆಗ ಆಗಮಿಸಿದ್ದರು. ಶಾಲೆಗಳಿಂದ ಸಮವಸ್ತ್ರ ಧರಿಸಿ ಬಂದ ಶಾಲಾ ಮಕ್ಕಳಿಗೆ, ಅಂಗವಿಕಲರಿಗೆ, ಭಿನ್ನ ಸಾರ್ಮಥ್ಯದ ಮಕ್ಕಳಿಗೆ ಪಾರ್ಕ್‌ನ ಒಳಗೆ ಉಚಿತ ಪ್ರವೇಶ ಕಲ್ಪಿಸಲಾಗಿತ್ತು.

ಪ್ರದರ್ಶನದಲ್ಲಿ 105 ಸ್ಟಾಲ್‌ಗ‌ಳು
ಈ ಬಾರಿಯ ಫಲ ಪುಷ್ಪ ಪ್ರದರ್ಶನದಲ್ಲಿ ಒಟ್ಟು 105 ಸ್ಟಾಲ್‌ಗ‌ಳಿದ್ದವು. ಅವುಗಳಲ್ಲಿ ಸರಕಾರಿ ಮತ್ತು ಸಂಘ ಸಂಸ್ಥೆಗಳ ಸ್ಟಾಲ್‌ಗ‌ಳಿಗೆ ಉಚಿತ ದರವಾಗಿತ್ತು. ಸ್ವಸಹಾಯ ಸಂಘಗಳ ಸ್ಟಾಲ್‌ಗ‌ಳಿಗೆ 1,000 ರೂ. ನಿಗದಿ ಮತ್ತು ವಾಣಿಜ್ಯ ಸ್ಟಾಲ್‌ಗ‌ಳಿಗೆ 5,000 ರೂ. ಬಾಡಿಗೆ ನಿಗದಿಯಾಗಿತ್ತು. ಒಟ್ಟು 105 ಸ್ಟಾಲ್‌ಗ‌ಳಲ್ಲಿ 15 ಉಚಿತ ಸ್ಟಾಲ್‌ಗ‌ಳಾಗಿದ್ದು, ಒಟ್ಟು 3.25 ಲಕ್ಷ ರೂ. ಸಂಗ್ರಹವಾಗಿದೆ. ಇನ್ನು, ಒಟ್ಟು 8 ನರ್ಸರಿಗಳಲ್ಲಿ 1.10 ಲಕ್ಷ ರೂ. ಸಂಗ್ರಹವಾಗಿದೆ.

ಆದಾಯದಲ್ಲಿ ಸ್ವಲ್ಪ ಇಳಿಮುಖ
ಈ ವರ್ಷ ಕದ್ರಿ ಪಾರ್ಕ್‌ನಲ್ಲಿ ಆಯೋಜಿಸಿದ ಫಲಪುಷ್ಪ ಪ್ರದರ್ಶನದಲ್ಲಿ ಒಟ್ಟು 31,389 ಮಂದಿ ಆಗಮಿಸಿದ್ದು, ಸುಮಾರು 5.84 ಲಕ್ಷ ರೂ. ಆದಾಯ ಸಂಗ್ರವಾಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷ ಆದಾಯದಲ್ಲಿ ಸ್ವಲ್ಪ ಇಳಿಮುಖವಾಗಿದೆ.
 - ಜಾನಕಿ, ತೋಟಗಾರಿಕಾ ಇಲಾಖೆ ಹಿರಿಯ ಸಹಾಯಕಿ

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.