ಬಜತ್ತೂರು ಗ್ರಾಮವನ್ನು ಕಡಬಕ್ಕೆ ಸೇರಿಸದಂತೆ ವಿರೋಧ


Team Udayavani, Mar 18, 2017, 3:19 PM IST

17uppgg1.jpg

ಉಪ್ಪಿನಂಗಡಿ : ಬಜತ್ತೂರು ಗ್ರಾಮವನ್ನು ನೂತನ ಕಡಬ ತಾಲೂಕಿಗೆ ಸೇರಿಸುವುದಕ್ಕೆ ಬಜತ್ತೂರು ಗ್ರಾಮಸ್ಥರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಶುಕ್ರವಾರ ಬಜತ್ತೂರು ಗ್ರಾ.ಪಂ. ಸಭಾಭವನದಲ್ಲಿ ಸಮಾಲೋಚನ ಸಭೆ ನಡೆಸಿದ ಗ್ರಾಮಸ್ಥರು, ಹೋರಾಟ ಸಮಿತಿ ರಚಿಸಿ ಮುಂದಿನ ಹೋರಾಟಕ್ಕೆ ಮುಂದಾಗಿದ್ದಾರೆ.

ಸಭೆಯನ್ನುದ್ದೇಶಿಸಿ  ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯ ಕೇಶವ ಗೌಡ ಬಜತ್ತೂರು ಮಾತನಾಡಿ, ಈವರೆಗೆ ಪುತ್ತೂರು ತಾಲೂಕಿನಲ್ಲಿದ್ದ ಬಜತ್ತೂರು ಗ್ರಾಮವನ್ನು ಕಡಬ ತಾಲೂಕಿಗೆ ಸೇರಿಸಿದರೆ ಇಲ್ಲಿನ ಜನತೆಗೆ ಸಂಕಷ್ಟ ಎದುರಾಗಲಿದೆ. ಆದ್ದರಿಂದ ಜಾತಿ ಭೇದ, ಪಕ್ಷ ಬೇಧ ಮರೆತು ಗ್ರಾಮಸ್ಥರೆಲ್ಲಾ ಇದರ ವಿರುದ್ಧ ಧ್ವನಿಯೆತ್ತಬೇಕು ಎಂದು ತಿಳಿಸಿದರು.

ಈಗ ಇದು ಪ್ರಸ್ತಾವನೆ ಹಂತದಲ್ಲಿದ್ದು, ಮುಂದಕ್ಕೆ ಗಜೆಟ್‌ ನೋಟಿಫಿಕೇಶನ್‌ ಆದರೆ ಈ ಹೋರಾಟದಲ್ಲಿ ಜಯ ನಮ್ಮದಾಗಲು ಕಷ್ಟಸಾಧ್ಯ. ಆದ್ದರಿಂದ ಇಂದಿನಿಂದಲೇ ಗ್ರಾಮಸ್ಥರೆಲ್ಲಾ ಒಂದಾಗಿ ಹೋರಾಟಕ್ಕೆ ಅಣಿಯಾಗಬೇಕು. ಬಜತ್ತೂರು ಗ್ರಾಮವನ್ನು ಪುತ್ತೂರು ತಾಲೂಕಿನಲ್ಲಿಯೇ ಉಳಿಸಿಕೊಳ್ಳುವವರೆಗೆ ನಿರಂತರ ಹೋರಾಟ ನಡೆಸಬೇಕು ಎಂದು ತಿಳಿಸಿದರು.

ಎಪಿಎಂಸಿ ನಾಮನಿರ್ದೇಶಿತ ಸದಸ್ಯ ಮಾಣಿಕ್ಯರಾಜ್‌ ಪಡಿವಾಳ್‌ ಮಾತನಾಡಿ, ರಾಜಕೀಯರಹಿತವಾದ ಹೋರಾಟ ನಮ್ಮದಾಗಿದ್ದು, ಎಲ್ಲಾ ಪಕ್ಷ, ಜಾತಿ ಧರ್ಮಗಳನ್ನೊಗೊಂಡು ಗ್ರಾಮಸ್ಥರ ಹೋರಾಟ ಸಮಿತಿಯನ್ನು ರೂಪಿಸಿ ಅದರಡಿಯಲ್ಲಿ ಹೋರಾಟ ನಡೆಸಬೇಕು. ಶಾಸಕಿಯವರನ್ನೂ ಇಲ್ಲಿಗೆ ಕರೆಸಿ, ನಮ್ಮ ಬೇಡಿಕೆಯನ್ನು ಅವರ ಮುಂದಿಡಬೇಕು ಎಂದರು.

ತಾ.ಪಂ. ಸದಸ್ಯ ಮುಕುಂದ ಗೌಡ ಬಜತ್ತೂರು ಮಾತನಾಡಿ, ನಮಗೆ ಹತ್ತಿರವಾಗಿರುವ  ಪುತ್ತೂರು ತಾಲೂಕಿನಲ್ಲಿ ಬಜತ್ತೂರು ಗ್ರಾಮವಿದ್ದಾಗ  ಸರಕಾರಿ ಕೆಲಸ ಕಾರ್ಯಗಳು ಸೇರಿದಂತೆ ಎಲ್ಲ ಕಾರ್ಯಗಳಿಗೂ ನಮಗೆ ಅನುಕೂಲವಾಗುತ್ತಿತ್ತು. ಆದರೆ ಕಡಬ ಇಲ್ಲಿಂದ ಬಹುದೂರವಿದ್ದು, ಸರಕಾರಿ ಕೆಲಸ ಕಾರ್ಯಗಳಿಗೆಂದೇ ನಾವು ಅಲ್ಲಿಗೆ ತೆರಳಬೇಕಾದ ಸ್ಥಿತಿ ಬಂದೊದಗುತ್ತದೆ. ಎಂದರು.

ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ರಾಧಾಕೃಷ್ಣ ಕುವೆಚ್ಚಾರು, ಪ್ರಮುಖರಾದ ಗೋಪಾಲಕೃಷ್ಣ ಪೊರೋಳಿ, ದೇವದಾಸ್‌ ಕನಿಯ, ಜಯಂತ ಬೆದ್ರೋಡಿ ಮಾತನಾಡಿದರು.

ಮುಂದಿನ ಹೋರಾಟದ ಬಗ್ಗೆ ಸಭೆಯಲ್ಲಿ ಸಮಗ್ರ ಚರ್ಚೆ ನಡೆದು, ಬಜತ್ತೂರು ಗ್ರಾಮವನ್ನು ಕಡಬ ತಾಲೂಕಿಗೆ ಸೇರ್ಪಡೆಗೊಳಿಸುವುದನ್ನು ಕೈಬಿಡಲಾಗಿದೆ ಎಂದು ಬಜತ್ತೂರು ಗ್ರಾ.ಪಂ.ಗೆ ಕಂದಾಯ ಇಲಾಖಾಧಿಕಾರಿಗಳಿಂದ ಲಿಖೀತ ಪತ್ರ ಬರುವವರೆಗೆ  ಹೋರಾಟ ನಡೆಸಲು ತೀರ್ಮಾನಿಸಲಾಯಿತು.

ಮೊದಲ ಹಂತವಾಗಿ ಗ್ರಾಮಸ್ಥರ ಸಹಿ ಸಂಗ್ರಹ,  ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ ವಸ್ತುಸ್ಥಿತಿ ಪರಿಶೀಲನೆ, ಬಳಿಕ ಶಾಸಕರು, ಉಸ್ತುವಾರಿ ಸಚಿವರು, ಕಂದಾಯ ಸಚಿವರ ಬಳಿಗೆ ನಿಯೋಗ ತೆರಳಿ ಮನವಿ ಸಲ್ಲಿಸುವುದು. ಬಳಿಕವೂ ಬೇಡಿಕೆ ಈಡೇರದಿದ್ದರೆ ರಸ್ತೆ ತಡೆ ಮುಂತಾದ ಉಗ್ರ ಪ್ರತಿಭಟನೆ ಹಾಗೂ ಕಾನೂನಾತ್ಮಕ ಹೋರಾಟ ನಡೆಸಲು ನಿರ್ಣಯ ಕೈಗೊಳ್ಳಲಾಯಿತು.

ಬಜತ್ತೂರು ಗ್ರಾ.ಪಂ. ಅಧ್ಯಕ್ಷ ಸಂತೋಷ್‌ ಕುಮಾರ್‌ ಪಂರ್ದಾಜೆ ಸಭೆಯ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್‌ ಉಪಾಧ್ಯಕ್ಷೆ ಸುಜಾತಾ ಎನ್‌., ಎಪಿಎಂಸಿ ಸದಸ್ಯ ಗುರುನಾಥ ಪಿ.ಎನ್‌., ಉಪ್ಪಿನಂಗಡಿ ಸಿಎ ಬ್ಯಾಂಕ್‌ ಅಧ್ಯಕ್ಷ ಯಶವಂತ ಜಿ., ನಿರ್ದೇಶಕ ಜಗದೀಶ್‌ ರಾವ್‌ ಮಣಿಕ್ಕಳ ಉಪಸ್ಥಿತರಿದ್ದರು.
 
ಸಭೆಯಲ್ಲಿ ಗ್ರಾ.ಪಂ. ಸದಸ್ಯರಾದ ಪ್ರಸಿಲ್ಲಾ ಡಿಸೋಜ, ಸೇಸಪ್ಪ ಗೌಡ, ಚಂಪಾ, ಮಾಧವ ಒರುಂಬೋಡಿ, ಆನಂದ ಕೆ.ಎಸ್‌., ರಾಜೇಶ್‌ ಪಿಜಕ್ಕಳ, ಲೀಲಾವತಿ, ತೇಜಕುಮಾರಿ, ಲೊಕೇಶ್‌ ಗೌಡ ಬಜತ್ತೂರು, ನವೀನ, ಜಯಂತ ಬೆದ್ರೋಡಿ, ಗಂಗಾಧರ ಪಿ.ಎನ್‌., ಧನಂಜಯ ಬೆದ್ರೋಡಿ, ಶಿವರಾಮ ಕಾರಂತ, ಸಿದ್ದಪ್ಪ ಗೌಡ , ಜಯವಿಠಲ, ಜಗದೀಶ್‌ ಕಿಂಡೋವು, ಕ್ಸೇವಿಯರ್‌ ಅಹಮ್ಮದ್‌ ಪಂರ್ದಾಜೆ, ಜನಾರ್ದನ ಪಂರ್ದಾಜೆ, ಸಚಿನ್‌ ಪಂರ್ದಾಜೆ, ಕುಶಾಲಪ್ಪ ಗೌಡ ಸುಳ್ಯ, ಕೃಷ್ಣಪ್ರಸಾದ್‌ ಕುವೆಚ್ಚಾರ್‌, ನಾರಾಯಣ ಪುಯಿಲ, ಉಮ್ಮರ್‌ ಕೆಮ್ಮಾರ,  ವಿಶ್ವನಾಥ ಗೌಡ ಪಿಜಕ್ಕಳ, ಓಡಿಯಪ್ಪ ಗೌಡ ಡೆಂಬಳೆಪುತ್ತು ಎಂಜಿರಡ್ಕ, ದೇರಣ್ಣ ಗೌಡ ಓಮಂದೂರು ಮತ್ತಿತರರು ಉಪಸ್ಥಿತರಿದ್ದರು.ಗಣೇಶ್‌ ಕುಲಾಲ್‌ ಸ್ವಾಗತಿಸಿದರು. ಗ್ರಾ.ಪಂ. ಸದಸ್ಯ ಗಣೇಶ್‌ ಕಿಂಡೋವು ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

ಹೋರಾಟ ಸಮಿತಿ ರಚನೆ
ಬಜತ್ತೂರು ಗ್ರಾಮವನ್ನು ಕಡಬಕ್ಕೆ ಸೇರಿಸದಂತೆ ಹೋರಾಟ ಸಮಿತಿಯನ್ನು ರಚಿಸಲಾಗಿದ್ದು, ಸಮಿತಿಯ ಅಧ್ಯಕ್ಷರಾಗಿ ಕೇಶವ ಗೌಡ ಬಜತ್ತೂರು, ಉಪಾಧ್ಯಕ್ಷರಾಗಿ ಮಾಣಿಕ್ಯರಾಜ್‌ ಪಡಿವಾಳ್‌, ಕಾರ್ಯದರ್ಶಿಯಾಗಿ ವಿಶ್ವನಾಥ ಗೌಡ ಪಿಜಕ್ಕಳ, ಕೋಶಾಧಿಕಾರಿಯಾಗಿ ಜಗದೀಶ್‌ ರಾವ್‌ ಮಣಿಕ್ಕಳ ಅವರನ್ನು ಆಯ್ಕೆ ಮಾಡಲಾಯಿತು. ಸದಸ್ಯರಾಗಿ ಯಶವಂತ ಗೌಡ ಗುಂಡ್ಯ, ಪೌಲ್‌ ಡಿ’ಸೋಜ, ಗಣೇಶ್‌ ಕುಲಾಲ್‌, ಅಹ್ಮದ್‌ ಬಾವ, ಗಂಗಾಧರ ಪಿ.ಎನ್‌. ಓಡಿಯಪ್ಪ ಗೌಡ ಡೆಂಬಲೆ, ಗೋಪಾಲಕೃಷ್ಣ ಪೊರೋಳಿ, ಲೋಕೇಶ್‌ ಗೌಡ ಬಜತ್ತೂರು, ಪಿ.ಬಿ. ಉಮ್ಮರಬ್ಬ, ಜಯಂತ ಬೆದ್ರೋಡಿ, ಶಿವರಾಮ ಕಾರಂತ, ಶ್ರೀಧರ ರಾವ್‌ ಮಣಿಕ್ಕಳ, ದೇರಣ್ಣ ಓಮಂದೂರು, ಧನಂಜಯ ಬೆದ್ರೋಡಿ, ರಾಧಾಕೃಷ್ಣ ಕೆ.ಎಸ್‌., ಶ್ರೀಧರ ಗೌಡ ಮುದ್ಯ, ಮಹೇಂದ್ರ ವರ್ಮ ಮೇಲೂರು, ವಸಂತ ಗೌಡ ಪಿಜಕ್ಕಳ, ಉಮ್ಮರ್‌ ಕೆಮ್ಮಾರ, ಅನಿತಾ ಪಿಜಕ್ಕಳರನ್ನು ಹಾಗೂ ಇಲ್ಲಿನ ಗ್ರಾಮ ಪಂಚಾಯತ್‌, ತಾಲೂಕು ಪಂಚಾಯತ್‌, ಜಿಲ್ಲಾ ಪಂಚಾಯತ್‌ ಸೇರಿದಂತೆ ಎಲ್ಲಾ ಜನಪ್ರತಿನಿಧಿಗಳನ್ನು ಖಾಯಂ ಸದಸ್ಯರನ್ನಾಗಿ ನೇಮಕ ಮಾಡಲಾಯಿತು.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.