ಮತ ಎಣಿಕೆ ಕೇಂದ್ರದ ಬಗ್ಗೆಯೇ ಆಕ್ಷೇಪ; ಕಾರ್ಯಕರ್ತರ ಪರದಾಟ!


Team Udayavani, May 24, 2019, 6:00 AM IST

2305MLR101

Opposition to vote counting center; Workers Fight!

ಮಹಾನಗರ: ಇದೇ ಮೊದಲ ಬಾರಿಗೆ ದ.ಕ. ಲೋಕಸಭಾ ಕ್ಷೇತ್ರದ ಮತ ಎಣಿಕೆ ನಗರದಿಂದ ಸಂಪೂರ್ಣ ಹೊರಗೆ ಸುರ ತ್ಕಲ್‌ನಲ್ಲಿ ನಡೆದ ಹಿನ್ನೆಲೆಯಲ್ಲಿ ಸುಳ್ಯ, ಪುತ್ತೂರು, ಬೆಳ್ತಂಗಡಿ ಭಾಗದ ಪಕ್ಷದ ಕಾರ್ಯ ಕರ್ತರಿಗೆ ಮತ ಎಣಿಕೆ ಕೇಂದ್ರಕ್ಕೆ ಬರಲು ಸಮಸ್ಯೆ ಎದುರಾಯಿತು.

ಜತೆಗೆ, ಹೆದ್ದಾರಿ ಸಂಚಾರ ನಿರ್ಬಂಧದ ಹಿನ್ನೆಲೆ ಯಲ್ಲಿ ಬಹುತೇಕ ಕಾರ್ಯಕರ್ತರು ಮತ ಎಣಿಕೆ ಕೇಂದ್ರದತ್ತ ಬರಲು ಪರದಾ ಡುವಂತಾ ಯಿತು. ಹೀಗಾಗಿ ಇದೇ ಮೊದಲ ಬಾರಿಗೆ ಮತ ಎಣಿಕೆ ಕೇಂದ್ರದ ಸುತ್ತ ಕಾರ್ಯ ಕರ್ತರೇ ಇರಲಿಲ್ಲ. ಬದಲಾಗಿ ಪೊಲೀಸ್‌ ಬಂದೋಬಸ್ತ್ ಮಾತ್ರ ಕಾಣಿಸುತ್ತಿತ್ತು.

ಮತ ಎಣಿಕೆಗೆ ಬರೋಬ್ಬರಿ 1 ತಿಂಗಳು ಕಾಯಬೇಕಾದ ಹಿನ್ನೆಲೆಯಲ್ಲಿ ಭದ್ರತೆಯ ದೃಷ್ಟಿಯಿಂದ ಹಾಗೂ ವಿವಿ ಪ್ಯಾಟ್‌ಗಳನ್ನು ಇಡಲು ಸೂಕ್ತ ಸ್ಥಳಾವಕಾಶದ ಅಗತ್ಯದ ಕಾರಣದಿಂದ ಮತ ಎಣಿಕೆ ಕೇಂದ್ರವನ್ನು ಈ ಬಾರಿ ಸುರತ್ಕಲ್‌ಗೆ ಶಿಫ್ಟ್ ಮಾಡಲಾಗಿತ್ತು. ಕೊಣಾಜೆಯ ಮಂಗಳೂರು ವಿ.ವಿ.ಯಲ್ಲಿ ಮತ ಎಣಿಕೆ ಮಾಡುವ ಬಗ್ಗೆಯೂ ಒಂದೊಮ್ಮೆ ಜಿಲ್ಲಾಡಳಿತ ಚರ್ಚಿಸಿ, ಕೊನೆಗೆ ಸುರತ್ಕಲ್‌ ಕೇಂದ್ರವನ್ನು ಆಯ್ಕೆ ಮಾಡಿತ್ತು.

2009ರ ದ.ಕ. ಲೋಕಸಭಾ ಚುನಾವಣೆ ಮತ ಎಣಿಕೆ ಮಂಗಳೂರಿನ ಕೆನರಾ ಕಾಲೇಜು ಆವರಣದಲ್ಲಿ ನಡೆದಿತ್ತು. ಇದರಿಂದಾಗಿ ನಗರ ಮಧ್ಯಭಾಗದಲ್ಲಿ ಸಂಚಾರ ದಟ್ಟಣೆ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಿಂದ ಅನಂತರದ (2014) ಮತ ಎಣಿಕೆ ನಗರದಿಂದ ಸ್ವಲ್ಪ ಹೊರವಲಯದ ಬೋಂದೆಲ್‌ ಮಹಾತ್ಮಾ ಗಾಂಧಿ ಸಂಯುಕ್ತ ಪದವಿಪೂರ್ವ ಕಾಲೇಜಿಗೆ ಸ್ಥಳಾಂತರ ವಾಗಿತ್ತು. ಕಳೆದ ಬಾರಿಯ ವಿಧಾ ನಸಭಾ ಚುನಾವಣೆ ಮತ ಎಣಿಕೆಯೂ ಬೋಂದೇಲ್‌ನಲ್ಲಿಯೇ ನಡೆದಿತ್ತು. ಜತೆಗೆ, ಮಂಗÙ ‌ೂರಿನ ಕೆಪಿಟಿ, ಪಾದುವ ಹೈಸ್ಕೂಲ್‌, ಸ್ಟೇಟ್‌ಬ್ಯಾಂಕ್‌ ಬಳಿಯ ರೊಸಾರಿಯೋ ಕಾಲೇಜಿನ ಆವರಣದಲ್ಲಿ ವಿವಿಧ ಚುನಾ ವಣೆಯ ಮತ ಎಣಿಕೆ ನಡೆದಿತ್ತು.

ಬಿಗಿ ಭದ್ರತೆಯ ವ್ಯವಸ್ಥೆಗೆ ಈ ಬಾರಿ ಮತದಾನ ಕೇಂದ್ರವನ್ನು ಮಂಗಳೂರಿನ ಹೊರ ವಲಯದ ಸುರತ್ಕಲ್‌ಗೆ ಸ್ಥಳಾಂತರಿ ಸಲಾಗಿತ್ತು ಎಂದು ಜಿಲ್ಲಾಧಿಕಾರಿ ತಿಳಿಸಿದ್ದರು. ಮತ ಎಣಿಕೆಯನ್ನು ವಿವಿಧ ರೀತಿಯಲ್ಲಿ ಸುಗಮ ಮತ್ತು ಸುವ್ಯವಸ್ಥಿತವಾಗಿಸಲು ಎನ್‌ಐಟಿಕೆ ಆವರಣ ಆಯ್ಕೆ ಮಾಡಲಾಗಿತ್ತು.

ಬೋಂದೆಲ್‌ ಎಂಜಿಸಿಯಲ್ಲಿ ಮತ ಎಣಿಕೆ ಮಾಡುವ ಸಂದರ್ಭ ಮಂಗಳೂರು ವಿಮಾನ ನಿಲ್ದಾಣ ರಸ್ತೆಯನ್ನು ಬೋಂದೆಲ್‌ ಚರ್ಚ್‌ ಬಳಿಯಿಂದ ಬೋಂದೆಲ್‌ ವೃತ್ತದ ತನಕ ಬೆಳಗ್ಗೆಯಿಂದ ಮಧ್ಯಾಹ್ನದ ತನಕ ಬಂದ್‌ ಮಾಡಬೇಕಾಗುತ್ತದೆ. ಇದರಿಂದ ವಿಮಾನ ನಿಲ್ದಾಣಕ್ಕೆ ಹೋಗುವವರಿಗೆ ತೊಂದರೆ ಯಾಗುತ್ತದೆ. ಕಳೆದ ಎರಡು ಬಾರಿಯೂ ಈ ಸಮಸ್ಯೆ ಎದುರಾಗಿತ್ತು. ಜತೆಗೆ, ನಗರದ ಕಾಲೇಜು ಆವರಣದಲ್ಲಿ ಮತ ಎಣಿಕೆ ನಡೆಸಿದರೆ ಪಕ್ಷಗಳ ಬೆಂಬಲಿಗರು ಜಮಾಯಿಸುವುದರಿಂದ ಪಾರ್ಕಿಂಗ್‌ ಸಮಸ್ಯೆ ಎದುರಾಗುತ್ತದೆ. ಈ ಎಲ್ಲ ಉದ್ದೇಶಗಳಿಂದ ಮತ ಎಣಿಕೆ ಕೇಂದ್ರವನ್ನು ನಗರದಿಂದ ಹೊರ ವಲಯಕ್ಕೆ ಬದಲಾಯಿಸಲಾಗಿತ್ತು. ಆದರೆ, ಎನ್‌ಐಟಿಕೆಯ ಮುಂಬಾಗ ಹೆದ್ದಾರಿ ಇರುವ ಕಾರಣದಿಂದ ಉಡುಪಿ-ಕಾಸರಗೋಡು ಭಾಗಕ್ಕೆ ತೆರಳುವ ವಾಹನಗಳು ಮಾತ್ರ ದಿನಪೂರ್ತಿ ಸಮಸ್ಯೆ ಅನುಭವಿಸುವಂತಾಯಿತು. ಹೆದ್ದಾರಿ ಬದಿಯಲ್ಲಿ ಮತ ಎಣಿಕೆ ಮಾಡಿ ಎಲ್ಲರಿಗೂ ಸಮಸ್ಯೆಯಾಯಿತು ಎಂದು ಸಾರ್ವಜನಿಕರು ಆಕ್ಷೇಪಿಸಿದ ಘಟನೆಯೂ ನಡೆಯಿತು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.