ವಿಪಕ್ಷದವರಿಗೂ ಮೋದಿ ಬೇಕು: ಶ್ರೀನಿವಾಸ ಪೂಜಾರಿ
Team Udayavani, Apr 11, 2019, 6:30 AM IST
ಎಡಪದವು: ದಿನಕ್ಕೊಮ್ಮೆ ಯಾದರೂ ಮೋದಿ ಹೆಸರು ಹೇಳದಿದ್ದರೆ ಪ್ರತಿಪಕ್ಷದವರಿಗೆ ನಿದ್ದೆಯೇ ಬರುವುದಿಲ್ಲ. ಅವರಿಗೂ ಮೋದಿಜಿಯೇ ಬೇಕು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ಬುಧವಾರ ಎಡಪದವು ನಾರಾಯಣ ಗುರು ಮಂದಿರದಲ್ಲಿ ನಡೆದ ಗುರುಪುರ ಮತ್ತು ಎಡಪದವು ಬಿಜೆಪಿ ಮಹಾಶಕ್ತಿ ಕೇಂದ್ರಗಳ ವ್ಯಾಪ್ತಿಯ ಚುನಾಯಿತ ಪ್ರತಿನಿಧಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪರಿಣಾಮಕಾರಿ ಪ್ರಚಾರ
ಪಕ್ಷದ ಕಾರ್ಯಕರ್ತರು ಮತ್ತು ನಾಯಕರ ನಡುವಿನ ಕೊಂಡಿಯಾಗಿ ಪಂಚಾಯತ್ ಸದಸ್ಯರು ಕೆಲಸ ಮಾಡಬೇಕು. ಜನರ ನಾಡಿಮಿಡಿತವನ್ನು ಚೆನ್ನಾಗಿ ತಿಳಿಯಲು ಪಂಚಾಯತ್ ಸದಸ್ಯರಿಗೆ ಸಾಧ್ಯ. ಆದ್ದರಿಂದ ಪಕ್ಷದ ಪರವಾಗಿ ಪರಿಣಾಮಕಾರಿಯಾಗಿ ಪ್ರಚಾರ ಮಾಡಬೇಕು ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದರು.
ಜಿಲ್ಲಾ ಪಂಚಾಯತ್ ಸದಸ್ಯರಾದ ಜನಾರ್ದನ ಗೌಡ ಮುಚ್ಚಾರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ರಘುವೀರ್ ಮತ್ತು ರಾಜೇಶ್, ತಾ.ಪಂ. ಸದಸ್ಯರಾದ ನಾಗೇಶ್ ಶೆಟ್ಟಿ ಮುತ್ತೂರು, ನಾರಾಯಣ ಗುರು ಮಂದಿರದ ಅಧ್ಯಕ್ಷ ಸಂಜೀವ ಕೋಟ್ಯಾನ್, ಗುರುಪುರ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೋಹನ್ ಅಥಿಕಾರಿ, ಎಡಪದವು ಶಕ್ತಿಕೇಂದ್ರದ ಅಧ್ಯಕ್ಷ ಆನಂದ ದೇವಾಡಿಗ, ಎಡಪದವು ಶಕ್ತಿ ಕೇಂದ್ರದ ಪ್ರಚಾರಿ ಪ್ರಸಾದ್ ಕುಮಾರ್ ಎಂ., ಶಕ್ತಿಕೇಂದ್ರದ ಕಾರ್ಯದರ್ಶಿಗಳು, ಪಂಚಾಯತ್ ಅಧ್ಯಕ್ಷರು, ಸದಸ್ಯರು ಸಂವಾದದಲ್ಲಿ ಮೊದ ಲಾ ದ ವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ