ಕರಾವಳಿಯ ಕೆಲವೆಡೆ ಮಳೆ: ಮೂರು ದಿನ ಆರೆಂಜ್ ಅಲರ್ಟ್
Team Udayavani, Sep 8, 2022, 9:07 AM IST
ಮಂಗಳೂರು/ಉಡುಪಿ : ಕರಾವಳಿ ಭಾಗದಲ್ಲಿ ಮುಂಗಾರು ಬಿರುಸು ಪಡೆಯುವ ನಿರೀಕ್ಷೆ ಇದ್ದು, ಸೆ.7 ರಿಂದ 9ರ ವರೆಗೆ “ಆರೆಂಜ್ ಅಲರ್ಟ್’ ಘೋಷಿಸಿದೆ. ಸೆ.10 ಮತ್ತು 11ರಂದು ಎಲ್ಲೋ ಅಲರ್ಟ್ ಅನ್ನು ಭಾರತೀಯ ಹವಾಮಾನ ಇಲಾಖೆ ಘೋಷಿಸಿದೆ. ಈ ವೇಳೆ ಬಿರುಸಿನ ಮಳೆ, ಗಾಳಿ ಮತ್ತು ಸಮುದ್ರದ ಅಬ್ಬರ ಹೆಚ್ಚಿರುವ ನಿರೀಕ್ಷೆ ಇದೆ.
ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಮಳೆ ಬಿರುಸು ಪಡೆದಿತ್ತು. ಮಂಗಳೂರು ನಗರದಲ್ಲಿ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ರಾತ್ರಿ ವೇಳೆ ಮಳೆ ತುಸು ಬಿರುಸು ಪಡೆದಿತ್ತು. ಸೆಕೆಯ ಪ್ರಮಾಣ ಹೆಚ್ಚಿತ್ತು.
ಉಡುಪಿ: ಉತ್ತಮ ಮಳೆ
ಉಡುಪಿ,: ಜಿಲ್ಲೆಯಲ್ಲಿ ಮಂಗಳವಾರ ತಡರಾತ್ರಿ, ಬುಧವಾರ ವ್ಯಾಪಕ ಮಳೆ ಸುರಿದಿದೆ. ಮಂಗಳವಾರ ತಡರಾತ್ರಿ ಕಾಪು, ಬ್ರಹ್ಮಾವರ, ಉಡುಪಿ ಭಾಗದಲ್ಲಿ ಉತ್ತಮ ಮಳೆ ಸುರಿದಿದೆ. ಗಾಳಿ-ಮಳೆಯಿಂದ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ಕುಂದಾಪುರ, ಬೈಂದೂರು, ಹೆಬ್ರಿ, ಕಾರ್ಕಳದಲ್ಲಿಯೂ ಹೆಚ್ಚಿನ ಮಳೆಯಾಗಿದೆ. ಬುಧವಾರ ಬಿಸಿಲು-ಮೋಡ ಕವಿದ ವಾತಾವರಣ ನಡುವೆ ಬಿಟ್ಟುಬಿಟ್ಟು ಮಳೆಯಾಗಿದೆ. ಸಂಜೆ ಅನಂತರ ಉಡುಪಿ, ಮಣಿಪಾಲ, ಪರ್ಕಳ, ಮಲ್ಪೆ ಸುತ್ತಮುತ್ತ ಉತ್ತಮ ಮಳೆ ಸುರಿದಿದೆ. ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ರ ಹಿಂದಿನ 24 ಗಂಟೆಗಳ ಕಾಲ 34.0 ಮಿ. ಮಿ. ಸರಾಸರಿ ಮಳೆಯಾಗಿದೆ.
ಕಾಸರಗೋಡು: ರೆಡ್ ಅಲರ್ಟ್
ಕಾಸರಗೋಡು: ಭಾರೀ ಮಳೆಯಾಗುವ ಸಾಧ್ಯñ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಸೆ. 8ರಂದು ಕೇಂದ್ರ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕಣ್ಣೂರು ಮತ್ತು ತಿರುವನಂತಪುರ ಜಿಲ್ಲೆಗಳಲ್ಲೂ ರೆಡ್ ಅಲರ್ಟ್ ಘೋಷಿಸಿದೆ.
ಮಲೆನಾಡು ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಭೂ ಕುಸಿತ ಸಂಭವಿಸುವ ಸಾಧ್ಯತೆಯಿದ್ದು, ಕಟ್ಟೆಚ್ಚರ ಘೋಷಿಸಲಾಗಿದೆ. ಮಳೆಯ ಜತೆ ಸುಂಟರ ಗಾಳಿ ಬೀಸುವ ಸಾಧ್ಯತೆಯಿದೆ.
ಇದನ್ನೂ ಓದಿ : ಯುವತಿಯ ಕಿವಿಯೊಳಗೆ ಹಾವು ? ನಂಬಲು ಅಸಾಧ್ಯ.. ಆದರೂ ಸತ್ಯ !