Mangaluru ಶವಾಗಾರದಲ್ಲಿದ್ದ ಮೃತದೇಹ ಕೊಳೆತ ಹಿನ್ನೆಲೆ ಕುಟುಂಬಕ್ಕೆ ಪರಿಹಾರ ನೀಡಲು ಆದೇಶ
Team Udayavani, Nov 23, 2023, 12:01 AM IST
ಮಂಗಳೂರು: ಖಾಸಗಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಿದ್ದ ಮೃತ ದೇಹ ಕೊಳೆತ ಹಿನ್ನೆಲೆ ಮೃತರ ಕುಟುಂಬಕ್ಕೆ 5ಲಕ್ಷ ರೂ. ಪರಿಹಾರ ನೀಡಲು ಆಸ್ಪತ್ರೆಗೆ ಗ್ರಾಹಕರ ನ್ಯಾಯಾಲಯ ಆದೇಶ ನೀಡಿದೆ.
ವಿಲ್ಸನ್ ಅಲನ್ ಫೆರ್ನಾಂಡಿಸ್ ಅವರ ಮೃತದೇಹ ಕೊಳೆತ ಹಿನ್ನೆಲೆ ಆಸ್ಪತ್ರೆಯ ಸೇವಾ ಲೋಪವೆಂದು ಪರಿಗಣಿಸಿ ಮೃತರ ಉತ್ತರಾಧಿಕಾರಿಗಳಿಗೆ 5 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಖಾಸಗಿ ಆಸ್ಪತ್ರೆಯ ಅಧಿಕಾರಿಗಳಿಗೆ ದ.ಕ. ಜಿಲ್ಲಾ ಗ್ರಾಹಕರ ವ್ಯಾಜ್ಯ ಪರಿಹಾರ ಕಮಿಶನ್ ಆದೇಶ ಹೊರಡಿಸಿದೆ.
2019ರ ಅ. 25ರಂದು ಪೆರ್ಮನ್ನೂರಿನ ವಿಲ್ಸನ್ ಮೃತಪಟ್ಟ ಹಿನ್ನೆಲೆ ಸಂಬಂಧಿಕರ ಬರುವಿಕೆಗೆ ಕಾಯುವ ಉದ್ದೇಶದಿಂದ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿತ್ತು. ಇದರ ವೆಚ್ಚವಾಗಿ 2,250 ರೂ. ಪಡೆದಿದ್ದರು. ಅ. 27ರಂದು ಮೃತದೇಹ ಕೊಳೆತು ಹೋಗಿದೆ ಎಂದು ನೆಲ್ಸನ್ ಫೆರ್ನಾಂಡಿಸ್ ಅವರಿಗೆ ಆಸ್ಪತ್ರೆಯಿಂದ ತಿಳಿಸಲಾಗಿತ್ತು. ಮನೆಯವರು ನೋಡಿದಾಗ ಮೃತದೇಹ ಕೊಳೆತು ದುರ್ವಾಸನೆ ಬರುತ್ತಿತ್ತು.
ಈ ಬಗ್ಗೆ ವಿಚಾರಿಸಿದಾಗ ವಿದ್ಯುತ್ ಸಂಚಾರ ನಿಲುಗಡೆಯಾದ ಕಾರಣ ಶವ ಕೊಳೆತು ಹೋಗಿದೆ ಎಂದು ತಿಳಿಸಿದ್ದರು. ಈ ಸಂದರ್ಭ ಪೊಲೀಸರಿಗೆ ದೂರು ನೀಡಿ ಆಸ್ಪತ್ರೆಯ ವಿರುದ್ದ ಕ್ರಿಮಿನಲ್ ಪ್ರಕರಣವೂ ದಾಖಲಾಗಿತ್ತು. ಆಸ್ಪತ್ರೆಯ ನಿರ್ಲಕ್ಷ್ಯ ಹಾಗೂ ಸೇವಾ ಲೋಪದ ವಿರುದ್ಧ ನೆಲ್ಸನ್ ಫೆರ್ನಾಂಡಿಸ್ ಗ್ರಾಹಕ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು. ದೂರುದಾರರ ಪರವಾಗಿ ನ್ಯಾಯವಾದಿ ಎ. ದಿನೇಶ ಭಂಡಾರಿ ಹಾಗೂ ಕೆ. ಎಸ್.ಎನ್. ಅಡಿಗ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ
MUST WATCH
ಹೊಸ ಸೇರ್ಪಡೆ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್