ಅಂಗಾಂಗ ದಾನದಿಂದ ಹಲವು ಜೀವ ಉಳಿಸಲು ಸಾಧ್ಯ- ಡಾ| ಸದಾನಂದ ಪೂಜಾರಿ

ದಾನದ ಕುರಿತು ಜಾಗೃತಿ ಕಾರ್ಯಕ್ರಮ

Team Udayavani, Oct 27, 2023, 12:37 AM IST

anangaga

ಮಂಗಳೂರು: ಅಂಗಾಂಗ ದಾನದ ಮೂಲಕ ಮತ್ತೂಬ್ಬರಿಗೆ ಮರು ಜೀವ ನೀಡಲು ಸಾಧ್ಯವಿದೆ. ಇತರ ಕಾಯಿಲೆಗಳಿಲ್ಲದೆ ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯಿಂದ 8 ಅಂಗಾಂಗಗಳನ್ನು ದಾನ ಮಾಡಬಹುದು. ಈ ಬಗ್ಗೆ ಇನ್ನಷ್ಟು ಜಾಗೃತಿ ಮೂಡಿಸಬೇಕಾಗಿದೆ ಎಂದು ವೆನ್ಲಾಕ್‌ ಆಸ್ಪತ್ರೆಯ ಯೂರೋಲಜಿ ವಿಭಾಗದ ಮುಖ್ಯಸ್ಥ ಹಾಗೂ ಕನ್ಸಲ್ಟೆಂಟ್‌ ಯೂರೋ ಸರ್ಜನ್‌ ಡಾ| ಸದಾನಂದ ಪೂಜಾರಿ ತಿಳಿಸಿದರು.

ಪಂಪ್‌ವೆಲ್‌ನಲ್ಲಿರುವ ಇಂಡಿಯಾನ ಆಸ್ಪತ್ರೆಯಲ್ಲಿ ಗುರುವಾರ ನಡೆದ ಅಂಗಾಂಗ ದಾನದ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಂಗಾಂಗ ದಾನಕ್ಕೆ ಸಂಬಂಧಿಸಿ ದೇಶದಲ್ಲಿ ಸಮರ್ಪಕ ಕಾನೂನು ಜಾರಿಯಲ್ಲಿದೆ. ಇದರ ಪ್ರಕಾರವೇ ಅಂಗಾಂಗ ದಾನ ಪ್ರಕ್ರಿಯೆ ನಡೆಸಬೇಕು. ಇದಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯ ಮೂಲಕ ನೋಂದಣಿಗೊಳಿಸಿ ಕುಟುಂಬಸ್ಥರೊಂದಿಗೆ ಮಾಹಿತಿ ಹಂಚಿಕೊಳ್ಳಬೇಕಾಗುತ್ತದೆ. ಕುಟುಂಬಸ್ಥರ ಅನುಮತಿ ಇಲ್ಲದೆ ಅಂಗಾಂಗ ದಾನ ಮಾಡುವುದು ಅಸಾಧ್ಯ ಎಂದು ತಿಳಿಸಿದರು.
ಇಂಡಿಯಾನ ಆಸ್ಪತ್ರೆಯ ಆಡಳಿತ ನಿರ್ದೇಶಕ ಹಾಗೂ ಹೃದ್ರೋಗ ತಜ್ಞ ಡಾ| ಯೂಸುಫ್‌ ಕುಂಬ್ಳೆ ಮಾತನಾಡಿ, ಅಂಗಾಂಗಗಳಿಗೆ ವಿಪರೀತ ಬೇಡಿಕೆ ಇದ್ದರೂ, ಅಂಗಾಂಗಗಳು ಸಿಗದ ಕಾರಣ ರೋಗಿಗಳು ಸಂಕಷ್ಟಪಡುವಂತಾಗಿದೆ.

ಸರಕಾರದ ಹಂತದಿಂದಲೇ ಜನರಲ್ಲಿ ಅಂಗಾಂಗ ದಾನದ ಮಹತ್ವದ ಬಗ್ಗೆ ಅರಿವು ಮೂಡಿಸಬೇಕಾಗಿದೆ. ಜಾತಿ, ಧರ್ಮ, ನಂಬಿಕೆಯ ವಿಚಾರಗಳು ಅಂಗಾಂಗ ದಾನಕ್ಕೆ ತಡೆಯಾಗುತ್ತಿದ್ದು, ಈ ಬಗ್ಗೆ ಸಾರ್ವಜನಿಕರನ್ನು ಜಾಗೃತರನ್ನಾಗಿಸಬೇಕು. ದೇಶದೆಲ್ಲೆಡೆ ಅಂಗಾಂಗ ದಾನಕ್ಕೆ ಸಂಬಂಧಿಸಿ ಏಕರೂಪದ ಕಾನೂನನ್ನು ಜಾರಿಗೆ ತರಬೇಕು ಎಂದು ತಿಳಿಸಿದರು.
ಕಿಡ್ನಿ ಕಸಿ ತಜ್ಞ ಡಾ| ಪ್ರದೀಪ್‌ ಮಾತನಾಡಿ, ನೂರು ಜನರ ಪೈಕಿ ಹತ್ತು ಜನರಲ್ಲಿ ಕಿಡ್ನಿ ಸಮಸ್ಯೆ ಕಂಡುಬರುತ್ತಿದ್ದು, ಇದಕ್ಕೆ ಆರಂಭಿಕ ಹಂತದಲ್ಲೇ ಎಚ್ಚರ ವಹಿಸಿಕೊಳ್ಳಬೇಕು. ಕಿಡ್ನಿ ಸಮಸ್ಯೆ ಬಂದಲ್ಲಿ ಕಿಡ್ನಿ ಕಸಿ ಮಾಡುವುದು ಸೂಕ್ತ ಆಯ್ಕೆಯಾಗಿದ್ದು ರೋಗಿ ಆರೋಗ್ಯವನ್ನು ಮತ್ತೆ ಪಡೆದುಕೊಳ್ಳಬಹುದು ಎಂದರು.

ಇಂಡಿಯಾನ ಅಸ್ಪತ್ರೆಯ ಅಧ್ಯಕ್ಷ ಡಾ|ಅಲಿ ಕುಂಬ್ಳೆ, ಪ್ರಮುಖರಾದ ಮುಜೀಬ್‌ ರೆಹೆಮಾನ್‌, ಡಾ| ಶ್ರವಣ್‌, ಡಾ| ಅನ್ವಿತಾ, ಡಾ| ಪ್ರದೀಪ್‌ ಉಪಸ್ಥಿತರಿದ್ದರು.

 

ಟಾಪ್ ನ್ಯೂಸ್

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.