ದ.ಕ. ಜಿಲ್ಲೆಯಲ್ಲೂ ಆಕ್ಸಿಜನ್‌ಗೆ ಹೆಚ್ಚಿದ ಬೇಡಿಕೆ


Team Udayavani, May 4, 2021, 7:20 AM IST

ದ.ಕ. ಜಿಲ್ಲೆಯಲ್ಲೂ ಆಕ್ಸಿಜನ್‌ಗೆ ಹೆಚ್ಚಿದ ಬೇಡಿಕೆ

ಮಂಗಳೂರು: ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಆಕ್ಸಿಜನ್‌ ಬೇಡಿಕೆ ಕೂಡ  ದುಪ್ಪಟ್ಟಾಗುತ್ತಿದೆ. ಇದರ ಬೆನ್ನಲ್ಲೇ ಆಕ್ಸಿಜನ್‌ ಉತ್ಪಾದನೆಗೆ ಬೇಕಾಗುವ”ಕಚ್ಚಾ ವಸ್ತು’ಗಳ ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿರುವುದು ಜಿಲ್ಲಾಡಳಿತಕ್ಕೆ ಸವಾಲಾಗಿ ಪರಿಣಮಿಸಿದೆ. ಕೋವಿಡ್ ಗೂ ಮುನ್ನ ದ.ಕ. ಜಿಲ್ಲೆಯಲ್ಲಿ ಪ್ರತೀ ದಿನಕ್ಕೆ ಸುಮಾರು 6 ಟನ್‌ ಆಕ್ಸಿಜನ್‌ ಅಗತ್ಯವಿತ್ತು. ಸದ್ಯ ಪ್ರತೀ ದಿನಕ್ಕೆ 12 ಟನ್‌ ಬೇಡಿಕೆಯಿದೆ.

ವೆನ್ಲಾಕ್‌ ಹಾಗೂ ಜಿಲ್ಲೆಯ  6 ಮೆಡಿಕಲ್‌ ಕಾಲೇಜಿನ ಆಸ್ಪತ್ರೆಗಳಲ್ಲಿ “ಆಕ್ಸಿಜನ್‌ ಸ್ಟೋರೇಜ್‌ ಟ್ಯಾಂಕ್‌’ ಇದ್ದು,  ಇದಕ್ಕೆ ಬಳ್ಳಾರಿ ಆಕ್ಸಿಜನ್‌ ಘಟಕದಿಂದ ತಂದು “ಫಿಲ್‌’ ಮಾಡಲಾಗುತ್ತಿದೆ.

 ಗಂಭೀರ ಕ್ರಮ ಅಗತ್ಯ :

ಕೇರಳದ ಪಾಲಕ್ಕಾಡ್‌ನಿಂದ 20 ಕೆ.ಎಲ್‌., ಬಳ್ಳಾರಿಯಿಂದ 16 ಕೆ.ಎಲ್‌. ಕಚ್ಚಾವಸ್ತು ವಾರದಲ್ಲಿ ಮಂಗಳೂರಿಗೆ ಬರುತ್ತಿತ್ತು. ಈಗ ವ್ಯತ್ಯಯವಾಗುತ್ತಿದೆ. ಬಳ್ಳಾರಿ ಯಿಂದ ಕಚ್ಚಾವಸ್ತು ನಿಯಮಿತವಾಗಿ ದ.ಕ. ಜಿಲ್ಲೆಗೆ ದೊರೆಯುವಂತೆ ಮಾಡುವ ಮಹತ್ತರ ಜವಾಬ್ದಾರಿ ಸರಕಾರದ ಮೇಲಿದೆ. ಚಾಮರಾಜನಗರದಲ್ಲಿ ಸಂಭವಿಸಿದ ದುರಂತ ಕಣ್ಣೆದುರು ಇರುವ ಹಿನ್ನೆಲೆಯಲ್ಲಿ  ಜಿಲ್ಲೆಯ ಭವಿಷ್ಯದ ದೃಷ್ಟಿಯಿಂದ ಆಡಳಿತ ವ್ಯವಸ್ಥೆ/ ಜನಪ್ರತಿನಿಧಿಗಳು ಈ ಬಗ್ಗೆ ಗಂಭೀರವಾಗಿ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ. ಸದ್ಯ ಕೈಗಾರಿಕಾ ಬಳಕೆಗೆ ಬೇಕಾಗಿದ್ದ ಆಕ್ಸಿಜನ್‌ ಸ್ಥಗಿತಗೊಳಿಸಲಾಗಿದ್ದು, ಕೇವಲ ಅಗತ್ಯ ಆಹಾರ ವಸ್ತುಗಳ ಉತ್ಪಾದನೆಗೆ ಮಾತ್ರ ಅವಕಾಶ ನೀಡಲಾಗಿದೆ.

3 ತಯಾರಿಕಾ ಘಟಕ :

ಜಿಲ್ಲೆಯಲ್ಲಿ 3 ಆಕ್ಸಿಜನ್‌ ತಯಾರಿ ಘಟಕಗಳಿವೆ. ಈ ಪೈಕಿ “ಲಿಕ್ವಿಡ್‌ ಮೆಡಿಕಲ್‌  ಆಕ್ಸಿಜನ್‌’ ಅನ್ನು ಪಾಲಕ್ಕಾಡ್‌ನಿಂದ  ತಂದು ರೀಫಿಲ್ಲಿಂಗ್‌ ಮಾಡುವ ಒಂದು ಘಟಕ ಹಾಗೂ “ನ್ಯಾಚುರಲ್‌ ಏರ್‌’ ಅನ್ನು ಕಂಪ್ರಸ್‌ ಮಾಡಿ ಪ್ರತ್ಯೇಕಿಸಿ ಆಕ್ಸಿಜನ್‌ ತಯಾ ರಿಸುವ ಮತ್ತು ರೀಫಿಲ್ಲಿಂಗ್‌ ಮಾಡುವ ಎರಡು ಉತ್ಪಾದನಾ ಘಟಕಗಳು ಕಾರ್ಯಾಚರಿಸುತ್ತಿವೆ. ಸದ್ಯ ಆಕ್ಸಿಜನ್‌ ಘಟಕದಿಂದ ಕೇವಲ 4 ಟನ್‌ ನಷ್ಟು ವೈದ್ಯಕೀಯ ಆಕ್ಸಿಜನ್‌ ಅನ್ನು ಮಂಗಳೂರಿನಲ್ಲಿಯೇ ಉತ್ಪಾದಿಸಿದರೆ, 8 ಟನ್‌ಗಳಿಗೆ ಬೇಕಾಗುವ ಆಕ್ಸಿಜನ್‌ ಅನ್ನು “ಕಚ್ಚಾವಸ್ತು’ವನ್ನು ಕೇರಳದಿಂದ ತರಿಸಿ ಉತ್ಪಾದಿಸಲಾಗುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದ್ಯಕ್ಕೆ ಆಕ್ಸಿಜನ್‌ ಕೊರತೆಯಿಲ್ಲ. ಮೂರು ಉತ್ಪಾದಕ ಸಂಸ್ಥೆಗಳು  ಸರಬರಾಜು ಮಾಡುತ್ತಿವೆ. ಆದರೆ, ಆಕ್ಸಿಜನ್‌ ರೀಫಿಲ್ಲಿಂಗ್‌ ಮಾಡುವ ಸಂಸ್ಥೆಗೆ ಕಚ್ಚಾ ವಸ್ತುಗಳು ಕೇರಳದಿಂದ ಬರುವಾಗ ಕೊಂಚ ಏರುಪೇರು ಆಗುತ್ತಿದೆ. ಇದನ್ನು ಸರಕಾರದ ಗಮನಕ್ಕೆ ತರಲಾಗಿದ್ದು, ಬಳ್ಳಾರಿಯಿಂದಲೇ ಕಚ್ಚಾವಸ್ತು ನೀಡುವಂತೆ ಸರಕಾರದ ಗಮನಸೆಳೆಯಲಾಗಿದೆ. ಡಾ| ರಾಜೇಂದ್ರ ಕೆ.ವಿ., ದಕ್ಷಿಣ ಕನ್ನಡ ಜಿಲ್ಲಾಧಿಕಾರಿ

 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.