ಪಚ್ಚನಾಡಿ ರಸ್ತೆಯಲ್ಲಿ ಭರದಿಂದ ಸಾಗುತ್ತಿದೆ ಅಭಿವೃದ್ಧಿ ಕಾಮಗಾರಿ


Team Udayavani, May 15, 2018, 10:17 AM IST

15-May-2.jpg

ಮಹಾನಗರ: ನಗರದ ಬೊಂದೇಲ್‌-ವಾಮಂಜೂರು ರಸ್ತೆಯ ಪಚ್ಚನಾಡಿಯಲ್ಲಿ ಏಕಕಾಲದಲ್ಲೇ ಎರಡೆರಡು ಸೇತುವೆಗಳ ಕಾಮಗಾರಿ ಭರದಿಂದ ಸಾಗುತ್ತಿದ್ದು, ಒಂದು ಸೇತುವೆಯ ಕಾಮಗಾರಿ ಮಳೆಗಾಲಕ್ಕೆ ಮುಂಚಿತವಾಗಿ ಮುಗಿಸಬೇಕಾದ ಅನಿವಾರ್ಯ ಎದುರಾಗಿದೆ.

ಪಚ್ಚನಾಡಿಯಲ್ಲಿ ಒಂದು ಸೇತುವೆಯನ್ನು ಪಾಲಿಕೆ, ಮತ್ತೂಂದು ರೈಲ್ವೇ ಇಲಾಖೆಯ ವತಿಯಿಂದ ನಿರ್ಮಾಣಗೊಳ್ಳುತ್ತಿದೆ. ಮತ್ತೊಂದೆಡೆ  ಈ ರಸ್ತೆಯ ಕಾಂಕ್ರೀಟ್‌ ಕಾಮಗಾರಿ, ಜತೆಗೆ ಬೊಂದೇಲ್‌ ಸಮೀಪ ತಡೆಗೋಡೆ ನಿರ್ಮಾಣವೂ ನಡೆಯುತ್ತಿದೆ! ಪಚ್ಚನಾಡಿ ತೋಡಿನ ಹಳೆ ಸೇತುವೆ ಶಿಥಿಲಗೊಂಡಿದ್ದ ಹಿನ್ನೆಲೆಯಲ್ಲಿ ಈಗ 1.5 ಕೋ.ರೂ. ವೆಚ್ಚದ ಸೇತುವೆ ನಿರ್ಮಿಸಲಾಗುತ್ತಿದೆ.

ಶೀಘ್ರ ಕಾಮಗಾರಿ ಮುಗಿಸಲು ಸೂಚನೆ
ಈಗ ಒಂದು ಭಾಗದ ಕಾಮಗಾರಿ ಪೂರ್ಣಗೊಂಡು, ಮತ್ತೂಂದು ಭಾಗದಲ್ಲಿ ಪಿಲ್ಲರ್‌ ರಚಿಸಲಾಗುತ್ತಿದೆ. ಈ ಕಾಮಗಾರಿ ಶೀಘ್ರ ಮುಗಿಯದೇ ಇದ್ದರೆ ಮಳೆ ಆರಂಭದ ಬಳಿಕ ಮುಂದುವರಿಸುವುದು ಕಷ್ಟ. ಸ್ಥಳೀಯ ಮನೆಗಳಿಗೆ ನೀರು ನುಗ್ಗುವ ಆತಂಕವೂ ಇದೆ. ಹೀಗಾಗಿ ಶೀಘ್ರದಲ್ಲಿ ಕಾಮಗಾರಿ ಮುಗಿಸಲು ಸೂಚನೆ ನೀಡಲಾಗಿದೆ ಎಂದು ಸಂಬಂಧಪಟ್ಟವರು ತಿಳಿಸಿದ್ದಾರೆ.

ಬಂಡೆ ಒಡೆಯುವ ಹಿನ್ನೆಲೆ ಕಾಮಗಾರಿ ವಿಳಂಬ
ಈ ಸೇತುವೆಯ ನಿರ್ಮಾಣಕ್ಕೆ ಬಂಡೆ ಕಲ್ಲೊಂದು ಅಡ್ಡಿಯಾದ ಹಿನ್ನೆಲೆಯಲ್ಲಿ ಅದನ್ನು ತೆರವುಗೊಳಿಸುವುದು ಅನಿವಾರ್ಯವಾಗಿತ್ತು.

ಆದರೆ ಬಂಡೆ ಒಡೆಯುವ ಸಂದರ್ಭ ಸ್ಥಳೀಯ ಮನೆ ಗಳಿಗೆ ತೊಂದರೆಯಾಗಿದೆ ಎಂದು ಅವರು ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಹೀಗಾಗಿ ನಿಧಾನವಾಗಿ ಬಂಡೆ ಒಡೆಯುವ ಕಾಮಗಾರಿ ನಡೆದ ಹಿನ್ನೆಲೆಯಲ್ಲಿ ಸೇತುವೆ ನಿರ್ಮಾಣ ಕೊಂಚ ವಿಳಂಬವಾಗಿದೆ. 

ಹಳಿ ದ್ವಿಪಥದ ಹಿನ್ನೆಲೆಯಲ್ಲಿ ಹೊಸ ಸೇತುವೆ
ಮಂಗಳೂರು ಜಂಕ್ಷನ್‌ನಿಂದ ತೋಕೂರು ವರೆಗಿನ ಹಳಿ ದ್ವಿಪಥ ಹಾಗೂ ವಿದ್ಯುದೀಕರಣ ಕಾಮಗಾರಿ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಪಚ್ಚನಾಡಿಯಲ್ಲಿನ ಹಳೆ ಸೇತುವೆಯನ್ನು ತೆರವುಗೊಳಿಸುವುದು ರೈಲ್ವೇ ಇಲಾಖೆಗೆ ಅನಿವಾರ್ಯವಾಗಿತ್ತು. ಹಳೆ ಸೇತುವೆಯ ಪಿಲ್ಲರ್‌ ಇದ್ದ ಸ್ಥಳದಲ್ಲೇ ಹೊಸ ಹಳಿ ಸಾಗುತ್ತಿದ್ದು, ಹೀಗಾಗಿ ಸೇತುವೆಯನ್ನು ವಿಸ್ತರಿಸುವ ಜತೆಗೆ ಕೊಂಚ ಎತ್ತರಕ್ಕೆ ಏರಿಸಿ ನಿರ್ಮಿಸಲಾಗುತ್ತದೆ.

ಈ ಸೇತುವೆಯ ತೆರವಿನಿಂದ ತೊಂದರೆಯಾಗಬಾರದು ಎಂಬ ನಿಟ್ಟಿನಲ್ಲಿ ರೈಲ್ವೇ ಇಲಾಖೆಯು ಇನ್ನೊಂದು ಭಾಗದಲ್ಲಿ ಕಾಂಕ್ರೀಟ್‌ ರಸ್ತೆ ನಿರ್ಮಿಸಿ, ತಾತ್ಕಾಲಿಕ ಲೆವೆಲ್‌ ಕ್ರಾಸಿಂಗ್‌ ವ್ಯವಸ್ಥೆ ಮಾಡಿ ಗೇಟ್‌ ಅಳವಡಿಸಲಾಗಿದೆ. ಸುಮಾರು 2 ಕೋ.ರೂ. ವೆಚ್ಚದಲ್ಲಿ ಸೇತುವೆಯ ಕಾಮಗಾರಿ ನಡೆಯ ಲಿದ್ದು, 12 ಮೀ. ವಿಸ್ತೀರ್ಣ ಹಾಗೂ 25 ಮೀ. ಉದ್ದಕ್ಕೆ ನಿರ್ಮಿಸಲಾಗುತ್ತಿದೆ. ಡಿಸೆಂಬರ್‌ ವೇಳೆಗೆ ಈ ಕಾಮಗಾರಿಯನ್ನು ಮುಗಿಸಲಾಗುವುದು ಎಂದು ರೈಲ್ವೇ ಇಲಾಖೆ ತಿಳಿಸಿದೆ. 

ಕಾಂಕ್ರೀಟ್‌ ಕಾಮಗಾರಿ
ಬೋಂದೆಲ್‌-ವಾಮಂಜೂರು ರಸ್ತೆಯಲ್ಲಿ ಡಾಮಾರು ಕಿತ್ತು ಹೋದ ಪರಿಣಾಮ ಸಂಚಾರವೇ ದುಸ್ತರವಾಗಿತ್ತು. ಈ ಹಿನ್ನೆಲೆಯಲ್ಲಿ ರಸ್ತೆಯ ಕಾಂಕ್ರೀಟ್‌ ಕಾಮಗಾರಿಯೂ ನಡೆಯುತ್ತಿದೆ. ಈಗ ರಸ್ತೆಯ ಬಹುತೇಕ ಭಾಗ ಕಾಂಕ್ರೀಟ್‌ ಕಾಮಗಾರಿ ನಡೆದಿದೆ. ರಸ್ತೆಯಲ್ಲಿ ಈ ಹಿಂದೆ 1.50 ಕೋ. ರೂ. ಹಾಗೂ 80 ಲಕ್ಷ ರೂ. ಗಳ ರಸ್ತೆ ಕಾಂಕ್ರೀಟ್‌ ಕಾಮಗಾರಿ ನಡೆದಿದ್ದು, ಈಗ 1.25 ಕೋ. ರೂ. ಹಾಗೂ 80 ಲಕ್ಷ ರೂ.ಗಳ ಕಾಮಗಾರಿ ನಡೆಯುತ್ತಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ವಿವರಿಸಿದ್ದಾರೆ. ಬೊಂದೇಲ್‌ ಸಮೀಪ ರಸ್ತೆ ಬದಿ ರೂ. 30 ಲಕ್ಷ ವೆಚ್ಚದ ತಡೆಗೋಡೆ ನಿರ್ಮಾಣ ನಡೆಯುತ್ತಿದೆ.

ಕಿರಣ್‌ ಸರಪಾಡಿ

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.