ಅನಂತಾಡಿ ಕಂಬಳ ಗದ್ದೆಯಲ್ಲಿ ಭತ್ತದ ಕೊಯ್ಲು ಸಂಭ್ರಮ

ಯುವವಾಹಿನಿ ಮಾಣಿ ಘಟಕದ ವಿನೂತನ ಕಾರ್ಯ

Team Udayavani, May 4, 2019, 6:00 AM IST

12

ಅನಂತಾಡಿ ಗ್ರಾಮದ ಬಾಕಿಲಗುತ್ತು ಮನೆತನದ ಕಂಬಳ ಗದ್ದೆಯಲ್ಲಿ ಯುವವಾಹಿನಿ ಮಾಣಿ ಘಟಕದವರು ಸುಗ್ಗಿಯ ಸಾಗುವಳಿಯ ಚಟುವಟಿಕೆ ಹಮ್ಮಿಕೊಂಡಿದ್ದರು.

ಮಾಣಿ: ಅನಂತಾಡಿ ಗ್ರಾಮದ ಬಾಕಿಲಗುತ್ತು ಮನೆತನದ ಕಂಬಳ ಗದ್ದೆಯಲ್ಲಿ ರವಿವಾರ ಯುವಕರ ಕಲರವ. ಗದ್ದೆಯಲ್ಲಿ ಸುಗ್ಗಿಯ ಸಾಗುವಳಿ ಬಹಳ ಉತ್ಸಾಹದಿಂದ ನಡೆಯಿತು.
ಯುವವಾಹಿನಿ ಮಾಣಿ ಘಟಕ ಈ ವಿನೂತನ ಚಟುವಟಿಕೆ ಹಮ್ಮಿಕೊಂಡಿತ್ತು.

ಕಳೆದ ವರ್ಷ ಡಿ. 23ರಂದು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಸಹಕಾರದಲ್ಲಿ ಯುವವಾಹಿನಿ ಘಟಕ ಈ ಗದ್ದೆಯಲ್ಲಿ ಕೋಟಿ-ಚೆನ್ನಯ ಕೆಸರುಗದ್ದೆ ಕ್ರೀಡಾಕೂಟ ಹಮ್ಮಿಕೊಂಡಿತ್ತು. ಘಟಕದ ಅಧ್ಯಕ್ಷ ಹರೀಶ ಪೂಜಾರಿ ಹಾಗೂ ಇತರ ಪದಾಧಿಕಾರಿಗಳು ಇದೇ ಕಂಬಳ ಗದ್ದೆಯಲ್ಲಿ ಭತ್ತದ ಕೃಷಿ ಕೈಗೊಳ್ಳುವ ಕುರಿತು ತೀರ್ಮಾನಿಸಿದರು. ಬಾಕಿಲ ಕುಟುಂಬದ ಹಿರಿಯರ ಅನುಮತಿ ಪಡೆದು ಕಂಬಳ ಗದ್ದೆಯಲ್ಲಿ ಸುಗ್ಗಿಯ ಸಾಗುವಳಿ ಉತ್ಸಾಹದಿಂದ ನಡೆಯಿತು. ಬಿತ್ತಿದ ಭತ್ತದ ಬೀಜಗಳು ಸಸಿಗಳಾಗಿ, ಹಚ್ಚ ಹಸುರಿನಿಂದ ನಳನಳಿಸಿದವು. ಯುವವಾಹಿನಿ ಸದಸ್ಯರ ಕನಸುಗಳಂತೆ ಭತ್ತ ತೆನೆ ಕಟ್ಟಿ, ತೆನೆಗಳು ತೂಗಿ, ನೋಡುಗರ ಕಣ್ಣಿಗೆ ಹಬ್ಬವನ್ನುಂಟುಮಾಡಿದವು. ಎ 28ರಂದು ಇದರ ಕೊಯ್ಲು ಸಂಭ್ರಮ ನಡೆಯಿತು.

ರವಿವಾರ ಬೆಳಗ್ಗೆ 7ರಿಂದಲೇ ಕೊಯ್ಲು ಕಾರ್ಯ ಆರಂಭವಾಯಿತು. ಸುಮಾರು 45 ಸದಸ್ಯರು ಇದರಲ್ಲಿ ಪಾಲ್ಗೊಂಡರು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಜಯಂತ್‌ ನಡುಬೈಲು ಕತ್ತಿ ಮುಟ್ಟಾಳೆ ಧರಿಸಿ ಕಟಾವು ಮಾಡುವ ಮೂಲಕ ಕೊಯ್ಲು ಕಾರ್ಯಕ್ಕೆ ಚಾಲನೆ ನೀಡಿದರು. ಶಶಿಧರ ಕಿನ್ನಿಮಜಲು, ಬಂಟ್ವಾಳ ಘಟಕದ ಉಪಾಧ್ಯಕ್ಷ ಸತೀಶ್‌ ಬಾಯಿಲ ಹಾಗೂ ಬಾಕಿಲ ಕುಟುಂಬದ ಜನಾರ್ದನ ಪೂಜಾರಿ, ವಸಂತ ಪೂಜಾರಿ ಜಲ್ಲಿಗುಡ್ಡೆ, ಹರೀಶ್‌ ಎನ್‌ಎಂಪಿಟಿ ಉಪಸ್ಥಿತರಿದ್ದರು.

ಮಾಣಿ ಘಟಕದ ನಿಕಟಪೂರ್ವ ಅಧ್ಯಕ್ಷ ರಾಜೇಶ್‌ ಬಾಬನಕಟ್ಟೆ, ಕಾರ್ಯದರ್ಶಿ ಸುಜಿತ್‌ ಅಂಚನ್‌, ಉಪಾಧ್ಯಕ್ಷರಾದ ರಮೇಶ್‌ ಮುಜಲ, ಪ್ರಶಾಂತ್‌ ಪುಂಜಾವು, ಕೋಶಾಧಿಕಾರಿ ಶಿವರಾಜ್‌ ಇದ್ದರು. ಸಂಚಾಲಕರಾಗಿ ರಾಜೇಶ್‌ ಪರಾಜೆ ಮತ್ತು ಮಹಾಬಲ ಪೂಜಾರಿ ಬಾಕಿಲ ಅವರನ್ನು ಆಯ್ಕೆ ಮಾಡಲಾಗಿತ್ತು.

ಭತ್ತ ಅನ್ನದಾನಕ್ಕೆ
ಕೊಯ್ಲಿನ ಅನಂತರ ದೊರೆತ ಭತ್ತವನ್ನು ಬಡವರಿಗೆ ದಾನ ಮಾಡಲು, ಉಳಿದ ಭತ್ತವನ್ನು ಬಾಕಿಲ ಕೋಟಿ ಚೆನ್ನಯ ಗರಡಿ, ಶ್ರೀ ಉಳ್ಳಾಲ್ತಿ ವೈದ್ಯನಾಥ ಮತ್ತು ಸ್ಥಳ ದೈವ-ದೇವರುಗಳ ಬ್ರಹ್ಮಕಲಶೋತ್ಸವದ ಅನ್ನದಾನಕ್ಕೆ ಬಳಸಿಕೊಳ್ಳುವ ನಿರ್ಧಾರವನ್ನು ಯುವವಾಹಿನಿ ಮಾಣಿ ಘಟಕ ಕೈಗೊಂಡಿದೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.