“ಮದಿಪು’ವಿಗೆ ಮತ್ತೂಂದು ಗೌರವ, ಪಡೀಲ್‌ ಅತ್ಯುತ್ತಮ ಪೋಷಕ ನಟ


Team Udayavani, Apr 12, 2017, 12:21 PM IST

madipu.jpg

ಮಂಗಳೂರು: ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಮಂಗಳವಾರ ಪ್ರಕಟವಾಗಿದ್ದು, ಕರಾವಳಿ ಭಾಗಕ್ಕೆ ಮೂರು ಗೌರವಗಳು ಲಭಿಸಿವೆ. ಕರಾವಳಿಯ ಕಲಾರಾಧನೆ ಆಧಾರಿತ ತುಳುವಿನ 78ನೇ ಸಿನೆಮಾ “ಮದಿಪು’ ಅತ್ಯುತ್ತಮ ಪ್ರಾದೇಶಿಕ ಚಿತ್ರ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಕುಸಲ್ದರಸೆ ನವೀನ್‌ ಡಿ. ಪಡೀಲ್‌ “ಕುಡ್ಲ ಕೆಫೆ’ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ಪೋಷಕ ನಟ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕರಾವಳಿ ಮೂಲದ ರಕ್ಷಿತ್‌ ಶೆಟ್ಟಿ ನೇತೃತ್ವದ “ಕಿರಿಕ್‌ ಪಾರ್ಟಿ’ ಚಿತ್ರ ಅತ್ಯುತ್ತಮ ಮನೋರಂಜನ ಚಿತ್ರವಾಗಿ ಮೂಡಿಬಂದಿದೆ. 

ಮದಿಪು ಚಿತ್ರ 64ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ “ಅತ್ಯುತ್ತಮ ಪ್ರಾದೇಶಿಕ ಚಿತ್ರ’ ಎಂಬ ಗೌರವಕ್ಕೆ ಎ. 8ರಂದು ಭಾಜನವಾಗಿತ್ತು. ಇದೀಗ ಮತ್ತೆ ಇದೇ ಚಿತ್ರಕ್ಕೆ ರಾಜ್ಯ ಪ್ರಶಸ್ತಿ ಲಭಿಸುವ ಮೂಲಕ ತುಳು ಚಿತ್ರರಂಗಕ್ಕೆ ಇನ್ನಷ್ಟು ಬಲ ಬಂದಂತಾಗಿದೆ. ಆಸ್ಥಾ ಪ್ರೊಡಕ್ಷನ್‌ ಲಾಂಛನದಲ್ಲಿ ತಯಾರಾದ “ಮದಿಪು’ ಚಿತ್ರದ ಕಥೆ, ಚಿತ್ರಕಥೆ, ಕಲಾ ನಿರ್ದೇಶನವನ್ನು ಚೇತನ್‌ ಮುಂಡಾಡಿ ಮಾಡಿದ್ದು, ಸಂದೀಪ್‌ ಕುಮಾರ್‌ ನಂದಳಿಕೆ ನಿರ್ಮಾಪಕರು. ಈ ಚಿತ್ರ ಮಾ. 10ರಂದು ನಗರದ ಸುಚಿತ್ರಾ ಟಾಕೀಸ್‌ ಸೇರಿದಂತೆ ಕರಾವಳಿಯ 9 ಥಿಯೇಟರ್‌ನಲ್ಲಿ  ಬಿಡುಗಡೆಗೊಂಡಿತ್ತು. 

ಕಾಮಿಡಿ ಪಾತ್ರದ ಮೂಲಕ ಕರಾವಳಿಯಾದ್ಯಂತ ಮನೆಮತಾದ ನವೀನ್‌ ಡಿ. ಪಡೀಲ್‌ “ಕುಡ್ಲ ಕೆಫೆ’ ತುಳುಚಿತ್ರದಲ್ಲಿ ವಿಭಿನ್ನ ಪೋಷಕ ಪಾತ್ರದ ಮೂಲಕ ಗಮನ ಸೆಳೆದಿದ್ದರು. ರಂಜನ್‌ ಶೆಟ್ಟಿ ಹಾಗೂ ಸೂರ್ಯ ಮೆನನ್‌ ಸೇರಿ ನಿರ್ಮಿಸಿದ “ಕುಡ್ಲ ಕೆಫೆ’ ಚಿತ್ರವನ್ನು ಸೂರ್ಯ ಮೆನನ್‌ ನಿರ್ದೇಶಿಸಿದ್ದಾರೆ. ಗೆಳೆಯರು ಒಟ್ಟು ಸೇರಿ ಹೊಟೇಲ್‌ ಒಂದನ್ನು ಉಳಿಸಲು ಕಬಡ್ಡಿ ಆಯೋಜಿಸಿದ ಕಥೆಯ ಈ ಚಿತ್ರದಲ್ಲಿ ಪಡೀಲ್‌ ಅವರ ಅಭಿನಯಕ್ಕಾಗಿ ಪೋಷಕ ಪ್ರಶಸ್ತಿ ಗೌರವ ದೊರಕಿದೆ. 
ಈ ಹಿಂದೆ “ಕೋಟಿ ಚೆನ್ನಯ’ ಚಿತ್ರದ ನೀತು ಅವರಿಗೆ ಅತ್ಯುತ್ತಮ ಪೋಷಕ ನಟಿ ರಾಜ್ಯ ಪ್ರಶಸ್ತಿ ಹಾಗೂ “ಗಗ್ಗರ’ ಚಿತ್ರದಲ್ಲಿ ಎಂ.ಕೆ. ಮಠ ಅವರಿಗೆ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ದೊರಕಿತ್ತು. 

ಈ ಮಧ್ಯೆ ಕರಾವಳಿ ಮೂಲದವರಾದ ರಕ್ಷಿತ್‌ ಶೆಟ್ಟಿ ನಿರ್ಮಾಣ ಹಾಗೂ ಅಭಿನಯದ ರಿಷಭ್‌ ಶೆಟ್ಟಿ ನಿರ್ದೇಶನದ “ಕಿರಿಕ್‌ ಪಾರ್ಟಿ’ ಕನ್ನಡ ಚಿತ್ರ ಅತ್ಯುತ್ತಮ ಮನೋರಂಜನಾ ಚಿತ್ರ ಎಂಬ ಗೌರವಕ್ಕೆ ಪಾತ್ರವಾಗಿದೆ. ಈ ಚಿತ್ರ ಇತ್ತೀಚೆಗೆ ತೆರೆಕಂಡು ರಾಜ್ಯವ್ಯಾಪಿ ಉತ್ತಮ ಗಳಿಕೆಯೊಂದಿಗೆ ಸದ್ದು ಮಾಡಿತ್ತು. 

ತುಳುನಾಡಿಗೆ ಸಂದ ಗೌರವ
ತುಳು ಭಾಷೆ ಮೇಲಿನ ಪ್ರೀತಿಯಿಂದ ನನ್ನನ್ನು ಆಶೀರ್ವದಿಸಿದ ತುಳುನಾಡಿನ ಸರ್ವ ಧರ್ಮದ ಸಮಸ್ತ ಜನರಿಗೆ ಸಂದ ಗೌರವ ಇದಾಗಿದೆ. ರಂಗಭೂಮಿಯ ಮೂಲಕ, ತುಳು, ಕನ್ನಡ ಚಿತ್ರರಂಗದಲ್ಲಿ ಸಾಧನೆ ಮಾಡಲು ಕಾರಣವಾದ ನನ್ನ ತಾಯ್ನೆಲ ಹಾಗೂ ಬೆಂಬಲಿಸಿದ ಸರ್ವರಿಗೂ ಆಭಾರಿ. ಈ ಪ್ರಶಸ್ತಿ ಮೂಲಕ ತುಳುಚಿತ್ರರಂಗಕ್ಕೆ  ಇನ್ನಷ್ಟು  ಸ್ಫೂರ್ತಿ ಸಿಗುವಂತಾಗಲಿ.
– ನವೀನ್‌ ಡಿ. ಪಡೀಲ್‌, ಖ್ಯಾತ ನಟ

ಟಾಪ್ ನ್ಯೂಸ್

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Screenshot (6) copy

Mangaluru: ಬಗೆಹರಿಯದ ಬಜಾಲ್‌ ಅಂಡರ್‌ಪಾಸ್‌ ಅವ್ಯವಸ್ಥೆ

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

belagavBelagavi; ಮುಂದುವರಿದ ವರುಣಾರ್ಭಟ; ಮುಳುಗಡೆಯಾಯ್ತು 40 ಸೇತುವೆಗಳು

Belagavi; ಮುಂದುವರಿದ ವರುಣಾರ್ಭಟ; ಮುಳುಗಡೆಯಾಯ್ತು 40 ಸೇತುವೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.