“ಪೇಜಾವರ ಶ್ರೀಗಳ ನಡೆ ಸಾಮರಸ್ಯ ಸಮಾಜಕ್ಕೆ ಪೂರಕ’


Team Udayavani, Jul 2, 2017, 3:45 AM IST

0107kpk9.jpg

ನಗರ : ಚುನಾವಣಾ ರಾಜಕೀಯ ವ್ಯವಸ್ಥೆಯಲ್ಲಿ ಕೋಮುಭಾವನೆ ಕೆರಳಿಸಿ, ಅದರ ಲಾಭ ಪಡೆಯುವ ಮನಃಸ್ಥಿತಿ ಬದಲಾಗಬೇಕು. ಜಾತಿ, ಮತ, ಧರ್ಮದ ಮಧ್ಯೆ ವಿರಸ ಮೂಡಿಸುವುದು ಸರಿಯಲ್ಲ . ಆ ನಿಟ್ಟಿನಲ್ಲಿ ಪೇಜಾವರ ಶ್ರೀಗಳು ಇಫ್ತಾರ್‌ ಕೂಟದ ಮೂಲಕ ಅಲ್ಪಸಂಖ್ಯಾಕರು- ಬಹುಸಂಖ್ಯಾಕರು ಬೇರೆಯಲ್ಲ ಎಂಬ ಸಂದೇಶ ರವಾನಿಸಿದ್ದು, ಇದು ಉತ್ತಮ ಸಂದೇಶ ಎಂದು ಶಾಸಕಿ ಶಕುಂತಳಾ ಟಿ. ಶೆಟ್ಟಿ ಹೇಳಿದರು.

ಪುತ್ತೂರು ಕಾಂಗ್ರೆಸ್‌ ಕಚೇರಿಯಲ್ಲಿ ಶುಕ್ರವಾರ ಸಂಜೆ ನಡೆದ ಅಲ್ಪಸಂಖ್ಯಾಕ ಘಟಕ ಪದಾಧಿಕಾರಿಗಳ ಚಿಂತನ- ಮಂಥನ ಸಭೆಯಲ್ಲಿ ಅವರು ಮಾತನಾಡಿದರು.

ಪಶುಭಾಗ್ಯ ನೀಡಿದವರು ಪಶುವನ್ನು ಹತ್ಯೆ ಮಾಡಿ ಎಂದು ಎಲ್ಲೂ ಹೇಳಿಲ್ಲ. ಹೇಳುವುದೂ ಇಲ್ಲ. ಇಂತಹ ಗೊಂದಲಗಳಿಗೆ ಅವಕಾಶವೇ ಬೇಡ. ಆಗ ಕೋಮುವಾದ ಬಿತ್ತಲು ಅವಕಾಶ ಇರುವುದಿಲ್ಲ. ಪ್ರತಿ ಬಾರಿ ಚುನಾವಣೆ ಬಂದಾಗಲೂ ಇಂತಹ ವಿಚಾರ ಇಟ್ಟುಕೊಂಡು ಕೋಮುವಾದ ಬಿತ್ತಲಾಗುತ್ತದೆ. ಇದರ ಮೂಲ ಉದ್ದೇಶ ಚುನಾವಣೆ ಎನ್ನುವುದನ್ನು ಅರಿತುಕೊಳ್ಳಿ. ಮಠ, ಮಂದಿರ, ಮಸೀದಿಯಲ್ಲಿ ಪರಿವ ರ್ತನೆ ಆಗಬೇಕು. ಆಗ ಎಲ್ಲ  ಸಮುದಾ ಯವೂ ಒಂದಾಗಲು ಸಾಧ್ಯ ಎಂದರು.

ನಾನು ಒಂದು ಇಫ್ತಾರ್‌ ಕೂಟ ಏರ್ಪ ಡಿಸಿದ್ದಕ್ಕೆ ಏನೇನೋ ಸಂದೇಶ ನೀಡಲು ಆರಂಭಿಸಿದರು. ಅದೇ ಕಾರ್ಯವನ್ನು ಪೇಜಾವರ ಶ್ರೀಗಳು ಮಾಡಿದಾಗ ಸಮರ್ಥಿ ಸುವವರಿದ್ದಾರೆ. ವಿಹಿಂಪದ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಪೇಜಾವರ ಶ್ರೀಗಳು ಮಾಡಿದ ಈ ಕಾರ್ಯ ಶ್ಲಾಘನೀಯ ಎಂದು ಅವರು ಹೇಳಿದರು.

ಪೊಲೀಸರಿಗೆ ಶ್ಲಾಘನೆ
ಜಿಲ್ಲೆಯಲ್ಲಿ ಕೋಮುವಾದ ನಿಯಂತ್ರ ಣಕ್ಕೆ ಪೊಲೀಸರು ಸಮರ್ಥರಾಗಿದ್ದಾರೆ. ಈ ಕಾರ್ಯಕ್ಕೆ ಅವರನ್ನು ಶ್ಲಾಘಿಸಬೇಕು. ಕಾಂಗ್ರೆಸ್‌ ಸರಕಾರದ ಆಡಳಿತದಲ್ಲಿ ಕೋಮುವಾದಕ್ಕೆ ಅವಕಾಶವಿಲ್ಲ ಎಂದ ಅವರು ಕೋಮು ಗಲಭೆಗೆ ಪ್ರಯತ್ನಿಸಿ ದವರನ್ನು ಮಟ್ಟ ಹಾಕಿ, ಜಿಲ್ಲೆಯ ಸಾಮರಸ್ಯ ಉಳಿಸಲು ಸರಕಾರ ಆದ್ಯತೆ ನೀಡಿದೆ. ಇದಕ್ಕೆ ಅವಿರತವಾಗಿ ಶ್ರಮಿಸುತ್ತಿರುವ ಪೊಲೀಸರನ್ನು ಅವರು ಪ್ರಶಂಸಿಸಿದರು.

ಅಭಿವೃದ್ಧಿ ಕಾರ್ಯದ ಕಾರಣಕ್ಕೆ ಕಾಂಗ್ರೆಸ್‌ ನನ್ನನ್ನು ಕರೆಯಿತು. ಗೆಲ್ಲಲು ರಾಜಕೀಯ ಮಾಡಿದ್ದು ನಿಜ. ಆದರೆ ಬಳಿಕ ಅಭಿವೃದ್ಧಿ ಕಾರ್ಯದೆಡೆಗೆ ಗಮನ ನೀಡಬೇಕು. ಆ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಇದರಿಂದ ಪಕ್ಷ ಹಾಗೂ ವ್ಯಕ್ತಿಗತವಾಗಿ ಬೆಳೆಯಲು ಸಾಧ್ಯ ಎಂದರು.

ಕಾರ್ಯಕರ್ತರು ಜಾಗೃತರಾಗಿ
ಆರ್‌ಎಸ್‌ಎಸ್‌ಗೆ ನಾಗ್ಪುರ ಇದ್ದ ಹಾಗೇ, ರಾಜಕೀಯಕ್ಕೆ ಪುತ್ತೂರು. ಯಾವ ಹೊತ್ತಿನಲ್ಲಿ ಅಂಡರ್‌ಪಾಸ್‌ ಕರೆಂಟ್‌ ಬರುತ್ತದೋ ತಿಳಿಯದು. ಕಾಂಗ್ರೆಸ್‌ ಕಾರ್ಯಕರ್ತರು ಜಾಗೃತರಾಗಿದ್ದಾಗ ಮಾತ್ರ ಇಲ್ಲಿ ಗೆಲುವು ಪಡೆಯಲು ಸಾಧ್ಯ. ಮುಂದೆ ಅಲ್ಪಸಂಖ್ಯಾಕ ಸಮಾವೇಶ ಮಾಡಬೇಕೆಂಬ ಉದ್ದೇಶವೂ ಇದೆ. ಈ ನಿಟ್ಟಿನಲ್ಲಿ ಎಲ್ಲರೂ ಒಗ್ಗೂಡಬೇಕು. ನ್ಯಾಶನಲ್‌ ಹೆರಾಲ್ಡ್‌ ಪತ್ರಿಕೆಗೆ ಪ್ರತಿ ಬ್ಲಾಕ್‌ನಿಂದ ಕನಿಷ್ಠ 50 ಜನರಾದರೂ ಚೆಕ್‌ ನೀಡಬೇಕು. ಚೆಕ್‌ ಕನಿಷ್ಠ 1 ಸಾವಿರ ರೂ.ನಿಂದ ಪ್ರಾರಂಭವಾಗಬೇಕು ಎಂದು ಸಿದ್ದರಾಮಯ್ಯ ಹಾಗೂ ರಾಹುಲ್‌ ಗಾಂಧಿ ತಿಳಿಸಿದ್ದಾರೆ ಎಂದರು.
ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಫಝಲ್‌ ರಹೀಂ ಅಧ್ಯಕ್ಷತೆ ವಹಿಸಿದ್ದರು. ವಿಟ್ಲ- ಉಪ್ಪಿನಂಗಡಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪ್ರವೀಣ್‌ಚಂದ್ರ ಆಳ್ವ, ಪುರಸಭೆ ಮಾಜಿ ಅಧ್ಯಕ್ಷ ಸೂತ್ರಬೆಟ್ಟು ಜಗನ್ನಾಥ ಶೆಟ್ಟಿ, ಕೆಪಿಸಿಸಿ ಅಲ್ಪಸಂಖ್ಯಾಕ ಘಟಕದ ರಾಜ್ಯ ಸಂಯೋಜಕ ನೂರುದ್ದೀನ್‌, ಸೇವಾದಳ ಅಧ್ಯಕ್ಷ ಜೋಕಿಂ ಡಿ’ಸೋಜಾ, ಬ್ಲಾಕ್‌ ಕಾಂಗ್ರೆಸ್‌ ಕಾರ್ಯದರ್ಶಿ ಕೃಷ್ಣಪ್ರಸಾದ್‌ ಆಳ್ವ, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ವಿಶಾಲಾಕ್ಷಿ, ತಾ.ಪಂ. ಸದಸ್ಯೆ ಫೌಝಿಯಾ ಇಬ್ರಾಹಿಂ, ಜಿಲ್ಲಾ ಕಾಂಗ್ರೆಸ್‌ ಸದಸ್ಯೆ ಸಾಯಿರಾ ಜುಬೈರಾ, ನ್ಯಾಯವಾದಿ ಎಂ.ಪಿ. ಅಬೂಬಕ್ಕರ್‌ ಉಪಸ್ಥಿತರಿದ್ದರು.

ಅಲ್ಪಸಂಖ್ಯಾಕ ಘಟಕದ ಅಧ್ಯಕ್ಷ ನಿರ್ಮಲ್‌ ಕುಮಾರ್‌ ಜೈನ್‌ ಪ್ರಸ್ತಾವನೆ ಗೈದರು. ಇಸಾಕ್‌ ಸಾಲ್ಮರ ನಿರೂಪಿಸಿದರು.

ಜನರಿಗೆ ಮಾಹಿತಿ ನೀಡಿ
ಅಭಿವೃದ್ಧಿ ಕಾರ್ಯಗಳನ್ನು ಜನರ ಮುಂದಿಡಬೇಕಾದುದು ನಮ್ಮ ಕರ್ತವ್ಯ. ಪ್ರತಿ ವಾರ್ಡ್‌ನಿಂದ ಒಬ್ಬೊಬ್ಬರ ಹೆಸರು ನೀಡಬೇಕು. ಅಲ್ಲಿನ ಮಾಹಿತಿ ನೀಡುವುದು ಹಾಗೂ ಕೆಲಸ ಕಾರ್ಯಗಳ ಬಗ್ಗೆ ಜನರಿಗೆ ಮಾಹಿತಿ ನೀಡುವುದು ಅವರ ಕೆಲಸ. ಮಾಡಿದ ಕೆಲಸದ ಬಗ್ಗೆ ಕಾಂಗ್ರೆಸ್‌ ಪ್ರಚಾರ ಪಡೆದುಕೊಳ್ಳುತ್ತಿಲ್ಲ. ಇದರ ಲಾಭವನ್ನು ಬಿಜೆಪಿಗರು ಪಡೆದುಕೊಳ್ಳುತ್ತಿದ್ದಾರೆ ಎಂದು ಶಾಸಕಿ ಶಕುಂತಳಾ ಟಿ. ಶೆಟ್ಟಿ  ಹೇಳಿದರು.

ಟಾಪ್ ನ್ಯೂಸ್

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.