ಪಾಣಾಜೆ: ಅಟ್ಟ ಏರಿದ್ದ‌ ಬಡಗಿ “ಆಘಾತ ‘ದಿಂದ ಸಾವು


Team Udayavani, Dec 15, 2017, 10:58 AM IST

15-9.jpg

ಪುತ್ತೂರು: ಪರಿಚಿತರೊಬ್ಬರ ಮನೆಯ ಅಟ್ಟಕ್ಕೆ ಹತ್ತಿದ್ದ ಬಡಗಿಯೊಬ್ಬರು ಆಘಾತಕ್ಕೆ ಒಳಗಾಗಿ ಹೃದಯಘಾತದಿಂದ ಸ್ಥಳದಲ್ಲೇ ಮೃತಪಟ್ಟ ಘಟನೆ ಪಾಣಾಜೆ ಗ್ರಾಮದ ಆರ್ಲಪದವು ಕೀಲಂಪಾಡಿಯಲ್ಲಿ ಬುಧವಾರ ಸಂಭವಿಸಿದೆ.

ಕಾಟುಕುಕ್ಕೆ ಒಡ್ಯ ನಿವಾಸಿ ಪ್ರಭಾಕರ ಆಚಾರ್ಯ (48) ಮೃತ ವ್ಯಕ್ತಿ. ಅವರು ಎಂಟು ವರ್ಷಗಳಿಂದ ಪರಿಚಿತರಾಗಿರುವ ಅವ್ವಮ್ಮ ಅವರ ಮನೆಯ ಅಟ್ಟದಲ್ಲಿದ್ದ ರಟ್ಟಿನ ಪೆಟ್ಟಿಗೆ ತೆಗೆಯಲೆಂದು ಹತ್ತಿದ್ದವರು ಅಲ್ಲೇ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ ಆಗಿದ್ದರು. ಬುಧವಾರ ತಡ ರಾತ್ರಿಯೇ ಮೃತದೇಹದ ಮರಣೋತ್ತರ ಪರೀಕ್ಷೆ ನಡೆದಿದ್ದು, ಆಘಾತದಿಂದ ಸಾವು ಸಂಭವಿಸಿರುವುದಾಗಿ ವರದಿ ಯಲ್ಲಿ ಉಲ್ಲೇಖೀಸಲಾಗಿದೆ.

ಘಟನೆ ವಿವರ
ಬಡಗಿ ಪ್ರಭಾಕರ ಆಚಾರ್ಯ ಅವರು ಬೊಳ್ಳಿಂಬಲದ ಮನೆಯೊಂದರ ಕೊಟ್ಟಿಗೆ ಛಾವಣಿಗೆ ಸಂಬಂಧಿಸಿ ಮಂಗಳವಾರದಿಂದ ಕೆಲಸಕ್ಕೆ ಬಂದಿದ್ದರು. ಬುಧವಾರ ಸಂಜೆ 5 ಗಂಟೆಗೆ ಕೆಲಸ ಮುಗಿಸಿ ತೆರಳಿದ್ದ ಇವರು, ಅಲ್ಲಿಂದ ನಾಲ್ಕು ಕಿ.ಮೀ. ದೂರದಲ್ಲಿರುವ ತನ್ನ ಪರಿಚಿತ ಮನೆಯಾದ ಅವ್ವಮ್ಮ ಅವರ ಮನೆಗೆ ತೆರಳಿದ್ದರು. ಘಟನೆ ನಡೆದ ಮನೆ ನಿವಾಸಿಗಳು ಹೇಳುವ ಪ್ರಕಾರ, ಪ್ರಭಾಕರ ಆಚಾರ್ಯ ಅವರು ಈಟಿನ ಕೋಲು ಬೇಕೆಂದು ಕೇಳಿದ್ದು, ಅದಕ್ಕಾಗಿ ಮನೆಗೆ ಬಂದಿದ್ದರು. ಆ ವೇಳೆ ಅಟ್ಟದಲ್ಲಿದ್ದ ರಟ್ಟಿನ ಪೆಟ್ಟಿಗೆ ತೆಗೆದುಕೊಡುವಂತೆ ಅವ್ವಮ್ಮ ಅವರ ಪುತ್ರಿ ಹೇಳಿದ ಮೇರೆಗೆ ಪ್ರಭಾಕರ ಆಚಾರ್ಯ ಅಟ್ಟ ಹತ್ತಿದ್ದಾರೆ. ಅಲ್ಲಿಂದ ರಟ್ಟಿನ ಪೆಟ್ಟಿಗೆ ತೆಗೆದು ಸುಮಾರು ಹೊತ್ತು ಕಳೆದರೂ ಕೆಳಗೆ ಬಾರದೇ ಇರುವುದನ್ನು ಕಂಡು ಅವ್ವಮ್ಮ ಮತ್ತು ಮಗಳು ಅಟ್ಟ ಹತ್ತಿ ನೋಡಿದ್ದಾರೆ. ಆಗ ಮೃತಪಟ್ಟ ಸ್ಥಿತಿಯಲ್ಲಿ ಇರುವುದನ್ನು ಕಂಡು ಸ್ಥಳೀಯರಿಗೆ ವಿಷಯ ತಿಳಿಸಿದ್ದಾರೆ ಎಂದು ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಕೊಲೆ ವದಂತಿ: ಉದ್ವಿಗ್ನ ಸ್ಥಿತಿ
ಘಟನೆ ಬಗ್ಗೆ ಸುದ್ದಿ ಹಬ್ಬುತ್ತಿದ್ದಂತೆ ಮುಸ್ಲಿಂ ಮಹಿಳೆಯ ಮನೆಯಲ್ಲಿ ಹಿಂದೂ ಬಡಗಿಯ ಕೊಲೆ ಎಂಬಂರ್ಥದಲ್ಲಿ ವದಂತಿಗಳು ಹಬ್ಬಿ ಕೆಲ ಕಾಲ ಉದ್ವಿಗ್ನ ಸ್ಥಿತಿ ಉಂಟಾಗಿತ್ತು. ಅವ್ವಮ್ಮ ಅವರ ಮನೆ ಬಳಿ ನೂರಾರು ಜನರು ಜಮಾಯಿಸಿದ್ದು, ಅನಂತರ ಹೃದಯಾ ಘಾತದಿಂದ ಸಾವು ಎಂಬ ವಿಚಾರ ಹಬ್ಬಿದ ಹಿನ್ನೆಲೆಯಲ್ಲಿ ಪರಿಸ್ಥಿತಿ ತಿಳಿಯಾಗಿತ್ತು. 

ಎಸ್ಪಿ ಆಗಮನ
ಘಟನಾ ಸ್ಥಳಕ್ಕೆ ಪೊಲೀಸ್‌ ವರಿಷ್ಠಾಧಿಕಾರಿ  ಸುಧೀರ್‌  ಕುಮಾರ್‌ ರೆಡ್ಡಿ ಆಗಮಿಸಿದ್ದರು. ಮರಣದ ಬಗ್ಗೆ ಸಂಶಯ ಹೊಂದಿದ್ದರೆ ಮರಣೋತ್ತರ ಪರೀಕ್ಷೆಯ ಸಂದರ್ಭದಲ್ಲಿ ಹಾಜರಿರುವಂತೆ ಸೂಚನೆ ನೀಡಿದ್ದರು. ಮೃತರು ಮರದ ಕೆಲಸ ಮಾಡುತ್ತಿದ್ದ ಮನೆಗೂ ಭೇಟಿ ನೀಡಿ, ಕೆಲಸ ನಿರ್ವಹಿಸಿದ ಕುರಿತು ಮಾಹಿತಿ ಸಂಗ್ರಹಿಸಲಾಗಿದೆ. ಸಹಾಯಕ ಆಯುಕ್ತ ರಘುನಂದನ್‌ ಮೂರ್ತಿ, ಡಿವೈಎಸ್‌ಪಿ ಶ್ರೀನಿವಾಸ್‌, ವೃತ್ತ ನಿರೀಕ್ಷಕ ಗೋಪಾಲ ನಾಯ್ಕ, ಗ್ರಾಮಾಂತರ ಪೊಲೀಸ್‌ ಠಾಣಾ ಎಸ್‌.ಐ. ಅಬ್ದುಲ್‌ ಖಾದರ್‌, ನಗರ ಠಾಣಾ ಎಸ್‌ಐ ಮಹೇಶ್‌ ಪ್ರಸಾದ್‌, ಎಸ್‌.ಐ. ಒಮನಾ ಮೊದಲಾದವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಣೆಯಲ್ಲಿ ತರಚು  ಗಾಯ!
ಪ್ರಭಾಕರ ಆಚಾರ್ಯ ಅವರ ಮೃತದೇಹ ವನ್ನು ಮರಣೋತ್ತರ ಪರೀಕ್ಷೆಗಾಗಿ  ಮಂಗಳೂರು ದೇರಳಕಟ್ಟೆಯ ಕೆ.ಎಸ್‌. ಹೆಗ್ಡೆ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಮರಣೋತ್ತರ ಪರೀಕ್ಷೆಯ ವರ ದಿಯಲ್ಲಿ ಆಘಾತದಿಂದ ಹೃದ ಯಾಘಾತಕ್ಕೊಳ ಗಾಗಿ  ಸಾವು ಸಂಭವಿಸಿದೆ ಎಂದು ತಿಳಿಸಲಾಗಿದೆ. ಮೃತರ ಹಣೆಯಲ್ಲಿ ತರಚು ಗಾಯಗಳು ಕಂಡುಬಂದಿದ್ದು,  ಅದು ಕೆಲಸದ ಸಂದರ್ಭದಲ್ಲಿ ಆಗಿರಬಹುದು ಎಂದು ಊಹಿಸಲಾಗಿದೆ. ದೇಹದ ಇತರ ಭಾಗದಲ್ಲಿ ಯಾವುದೇ ಗಾಯಗಳು ಕಂಡು ಬಂದಿಲ್ಲ ಎಂದು ಗ್ರಾಮಾಂತರ ಪೊಲೀಸರು ಮಾಹಿತಿ ನೀಡಿ ದ್ದಾರೆ. ತಹಶೀಲ್ದಾರ್‌ ಉಪಸ್ಥಿತಿಯಲ್ಲಿ ಮೃತ ದೇಹವನ್ನು ಸಂಬಂಧಿಕರಿಗೆ ನೀಡಲಾಗಿದೆ.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.