ಮಂಗಳೂರು ಸಹಿತ ಇತರ ಬೀಚ್‌ ಅಭಿವೃದ್ಧಿಗಾಗಿ ಪಣ


Team Udayavani, Dec 17, 2017, 12:05 PM IST

18Dec-7.jpg

ಮಹಾನಗರ: ಪ್ರಸ್ತುತ ಪ್ರವಾಸೋದ್ಯಮದಲ್ಲಿ ಬೀಚ್‌ಗಳು ಹಾಗೂ ಹಿನ್ನೀರು ಪ್ರದೇಶಗಳು ಬಹುಮುಖ್ಯವಾಗಿ ಗುರುತಿಸಿಕೊಂಡಿರುವ ತಾಣಗಳು. ಮಂಗಳೂರಿನಲ್ಲಿ ಕೆಲವು ಬೀಚ್‌ಗಳನ್ನು, ಒಂದೆರಡು ಕುದ್ರುಗಳು ಪ್ರವಾಸಿ ತಾಣಗಳಾಗಿ ಗುರುತಿಸಿಕೊಂಡಿವೆ. ಇದರ ಜತೆಗೆ ಇನ್ನೂ ಕೆಲವು ಬೀಚ್‌ಗಳನ್ನು, ಕುದ್ರುಗಳನ್ನು, ಹಿನ್ನೀರು ತಾಣಗಳನ್ನು ಪ್ರವಾಸಿ ಆಕರ್ಷಣೆಯ ತಾಣಗಳಾಗಿ ಅಭಿವೃದ್ಧಿಪಡಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಜಲ ಪ್ರವಾಸೋದ್ಯಮ ಅಭಿವೃದ್ಧಿ ನೀಲ ನಕಾಶೆಯೊಂದು ಸಿದ್ದಗೊಳ್ಳುವ ಆವಶ್ಯಕತೆ ಇದೆ.

ಮಂಗಳೂರು ನಗರದಲ್ಲಿ ಪಣಂಬೂರು, ತಣ್ಣೀರುಬಾವಿ, ಸೋಮೇಶ್ವರ , ತಲಪಾಡಿ, ಸಸಿಹಿತ್ಲು , ಸುರತ್ಕಲ್‌ ಮುಖ್ಯವಾಗಿ ಗುರುತಿಸಿಕೊಂಡಿರುವ ಬೀಚ್‌ಗಳು. ಇದರಲ್ಲಿ ಪಣಂಬೂರು, ತಣ್ಣೀರುಬಾವಿ, ಸೋಮೇಶ್ವರ ಬೀಚ್‌ ಅಭಿವೃದ್ಧಿಗೊಂಡು ಪ್ರವಾಸಿಗರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸುತ್ತಿವೆ. ಈಗ ಕೇಂದ್ರದ ಪ್ರವಾಸೋದ್ಯಮ ಸಚಿವಾಲಯ ಸ್ವದೇಶಿ ದರ್ಶನ್‌ ಯೋಜನೆಯಲ್ಲಿ ಮಂಗಳೂರಿನ ಕೆಲವು ಬೀಚ್‌ಗಳಲ್ಲಿ ತೇಲುವ ರೆಸ್ಟೋರೆಂಟ್‌ ಸೇರಿದಂತೆ ಕೆಲವು ಪ್ರವಾಸಿ ಆಕರ್ಷಣೆಗಳನ್ನು ಸ್ಥಾಪಿಸಲು ಯೋಜನೆ ರೂಪಿಸುತ್ತಿದೆ.

ಸಸಿಹಿತ್ಲು ಬೀಚ್‌ ರಾಷ್ಟ್ರಮಟ್ಟದಲ್ಲಿ ಒಂದು ಪ್ರಮುಖ ಸರ್ಫಿಂಗ್ ಕೇಂದ್ರವಾಗಿ ಗುರುತಿಸಿಕೊಂಡಿದೆ. ಇಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಸರ್ಫಿಂಗ್  ಸ್ಪರ್ಧೆ ಮಂಗಳೂರಿನಲ್ಲಿ ಸಾಗರ ಪ್ರವಾಸೋದ್ಯಮಲ್ಲಿರುವ ಹೊಸ ಸಾಧ್ಯತೆಗಳನ್ನು ಅನಾವರಣಗೊಳಿಸಿತ್ತು. ಮಾತ್ರವಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿತು. ವಿಶ್ವ ಸರ್ಫ್‌ ಲೀಗ್‌ನ ಸ್ಟೀಫ‌ನ್‌ ರಾಬರ್ಟ್‌ಸ್‌ ಅವರು ಸಸಿಹಿತ್ಲು ಬೀಚ್‌ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದರು.

ಪ್ರಸ್ತುತ ಮಂಗಳೂರು ಭಾಗದ ಸಾಗರ ತೀರದಲ್ಲಿ ಇರುವ ಬೀಚ್‌ಗಳ ಜತೆಗೆ ಇತರ ಯಾವುದೆಲ್ಲಾ ತಾಣಗಳನ್ನು ಬೀಚ್‌ ಆಗಿ ಅಭಿವೃದ್ಧಿ ಪಡಿಸಲು ಸಾಧ್ಯವಿದೆ, ಯಾವ ತಾಣಗಳು ಅಪಾಯಕಾರಿಯಾಗಿವೆ ಎಂಬ ಬಗ್ಗೆ ನಿಖರ ಮಾಹಿತಿ, ವಿವರ ಪಡೆದು ಸಮಗ್ರ ಸರ್ವೇ ಕಾರ್ಯ ನಡೆಯಬೇಕಾಗಿದೆ.

ಆಕರ್ಷಣೀಯ ಕುದ್ರುಗಳು
ಕಿರು ದ್ವೀಪಗಳನ್ನು ತುಳುವಿನಲ್ಲಿ ಕುದ್ರು ಎಂದು ಕರೆಯಲಾಗುತ್ತಿದೆ. ನದಿ ಮತ್ತು ಕರಾವಳಿ ತೀರಕ್ಕೆ ಸನಿಹ ಸಮುದ್ರ ಮಧ್ಯದಲ್ಲಿ ಇಂತಹ ಕಿರು ದ್ವೀಪಗಳಿವೆ. ಜಪ್ಪಿನಮೊಗರಿನ ನೇತ್ರಾವತಿ ನದಿಯಲ್ಲಿ ಹಾಗೂ ಮಂಗಳೂರಿನ ಹಳೇ ಬಂದರು ಪ್ರದೇಶದಲ್ಲಿ ಮೂರು ದ್ವೀಪಗಳಿವೆ. ಜಪ್ಪಿನಮೊಗರು ಕಡೆಕಾರಿನ ಬಳಿ ನೇತ್ರಾವತಿ ನದಿ ಮಧ್ಯದಲ್ಲಿರುವ ಸುಂದರ ಕುದ್ರು ಗಮನ ಸೆಳೆಯುತ್ತಿವೆ. ಇದನ್ನು ಪ್ರವಾಸಿ ತಾಣವಾಗಿ ರೂಪಿಸುವ ನಿಟ್ಟಿನಲ್ಲಿ 2011ರಲ್ಲಿ ರಾಜ್ಯ ಸರಕಾರದ ಪ್ರವಾಸೋದ್ಯಮ ಇಲಾಖೆ ಆಸಕ್ತಿ ವಹಿಸಿ ಪರಿಶೀಲನೆ ಕೂಡ ಆಗಿತ್ತು. ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಲು ಸಿದ್ಧತೆಗಳಾಗಿತ್ತು. ದ್ವೀಪಕ್ಕೆ ಬೋಟು ಸೌಲಭ್ಯಕ್ಕೂ ಚಾಲನೆ ನೀಡಲಾಗಿತ್ತು. ಆದರೆ ಮುಂದಕ್ಕೆ ಯಾವುದೇ ಪ್ರಗತಿಯಾಗಲಿಲ್ಲ. ಮಂಗಳೂರಿನ ಹಳೇ ಬಂದರು ಪ್ರದೇಶದಲ್ಲಿ ನೇತ್ರಾವತಿ ಮತ್ತು ಫಲ್ಗುಣಿ ನದಿಯಲ್ಲಿನ ಮೂರು ದ್ವೀಪಗಳನ್ನು ಪ್ರವಾಸಿ ಆಕರ್ಷಣಿಯ ತಾಣಗಳಾಗಿ ಅಭಿವೃದ್ಧಿ ಪಡಿಸುವ ಬಗ್ಗೆಯೂ ಚಿಂತನೆ ನಡೆದಿತ್ತು.

ಹಿನ್ನೀರು ತಾಣಗಳು
ನೇತ್ರಾವತಿ ಮತ್ತು ಫಲ್ಗುಣಿ ನದಿಗಳ ಸುತ್ತಮುತ್ತ ಸುಂದರ ಕುದ್ರುಗಳು ನಿರ್ಮಿಸಿದ್ದು, ದಟ್ಟ ಹಸಿರಿನಿಂದ ಕಂಗೊಳಿಸುತ್ತಿವೆ. ಇನ್ನೊಂದೆಡೆ ಎರಡೂ ನದಿಗಳ ಇಕ್ಕೆಲಗಳಲ್ಲಿ ಹಿನ್ನೀರಿನ ರಮಣೀಯ ತಾಣಗಳಿವೆ. ಆಸಕ್ತಿ ವಹಿಸಿದರೆ ಇವುಗಳನ್ನು ಸುಂದರ ಪ್ರವಾಸೋದ್ಯಮ ತಾಣಗಳಾಗಿ ಆಕರ್ಷಿಸಬಹುದಾಗಿದೆ. ಕೇರಳ ಇದೇ ಮಾದರಿಯನ್ನು ಅನುಸರಿಸುತ್ತಿದೆ. ಅಲ್ಲಿ ಹಿನ್ನೀರುಗಳಲ್ಲಿ ಇರುವ ಬೋಟ್‌ ಹೌಸ್‌ಗಳು ಇದಕ್ಕೆ ಉತ್ತಮ ಉದಾಹರಣೆಯಾಗಿದೆ. ಇದಲ್ಲದೆ ಈಗ ಹಿನ್ನೀರುಗಳಲ್ಲಿ ಶಾಶ್ವತ ಬೋಟ್‌ ಹೌಸ್‌ ಎಂಬ ಹೊಸ ಪರಿಕಲ್ಪನೆ ಪ್ರವರ್ಧಮಾನಕ್ಕೆ ಬರುತ್ತಿದೆ.

ಇನ್ನೂ ಪಂಚತಾರಾ ಹೊಟೇಲ್‌ ಬಂದಿಲ್ಲ
ಕರಾವಳಿಯಲ್ಲಿ ಪ್ರವಾಸೋದ್ಯಮ ಇಲಾಖೆಯಲ್ಲಿ ಹೂಡಿಕೆ ಮಾಡಲು ಈಗಾಗಲೇ ಬಹಳಷ್ಟು ಮಂದಿ ಉತ್ಸುಕತೆ ತೋರಿದ್ದಾರೆ. ಆದರೆ ಮೂಲಸೌಕರ್ಯಗಳ ಕೊರತೆ ಹಾಗೂ ಪೂರಕ ವಾತಾವರಣದ ಕೊರತೆಯಿಂದ ಹಿಂಜರಿಯುತ್ತಿದ್ದಾರೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿದೆ. ಸರ್ವಋತು ಬಂದರು ಇದೆ. ಧಾರ್ಮಿಕ ಕೇಂದ್ರಗಳಿವೆ. ದೇಶದಲ್ಲೇ ಪ್ರಮುಖ ಶೈಕ್ಷಣಿಕ ಹಬ್‌ ಆಗಿ ಗುರುತಿಸಿಕೊಂಡಿದೆ. ಆದರೆ ಇಲ್ಲಿ ಇನ್ನೂ ಕೂಡ ಪಂಚತಾರಾ ಹೊಟೇಲ್‌ಗ‌ಳು ಬಂದಿಲ್ಲ. ಮಂಗಳೂರಿಗೆ ಬಂದ ಪ್ರವಾಸಿಗರು ಪಂಚತಾರಾ ಹೊಟೇಲ್‌ ಹುಡುಕಿಕೊಂಡು ಪಕ್ಕದ ಕೇರಳರಾಜ್ಯದ ಬೇಕಲಕ್ಕೆ ಹೋಗುತ್ತಿದ್ದಾರೆ.

ಜಲ ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತ್ಯೇಕ ವ್ಯವಸ್ಥೆ ಪೂರಕ
ಕರ್ನಾಟಕದ ಕರಾವಳಿಯಲ್ಲಿ ಸೋಮೇಶ್ವರದಿಂದ ಕಾರವಾರದವರೆಗೆ ಸುಮಾರು 300 ಕಿ.ಮಿ. ಸಾಗರತೀರವಿದೆ. ದ.ಕನ್ನಡ ಜಿಲ್ಲೆಯಲ್ಲಿ 42 ಕಿ.ಮಿ ಹಾಗೂ ಉಡುಪಿ ಜಿಲ್ಲೆಯಲ್ಲಿ 98 ಕಿ.ಮಿ. ಸಮುದ್ರ ತೀರವನ್ನು ಹೊಂದಿದೆ. ಉತ್ತರ ಕನ್ನಡ ಜಿಲ್ಲೆ 160 ಕಿ.ಮೀ. ಸಾಗರ ತೀರವಿದೆ. ಕರಾವಳಿಯಲ್ಲಿ ಪ್ರವಾಸೋಧ್ಯಮದ ಅಭಿವೃದ್ಧಿಗಾಗಿ ಪ್ರಾಧಿಕಾರದ ಮಾದರಿಯಲ್ಲಿ ಪ್ರತ್ಯೇಕ ವ್ಯವಸ್ಥೆಯೊಂದರ ರಚನೆ ಪೂರಕವಾಗಬಹುದು. ಅಭಿವೃದ್ಧಿ, ಉತ್ತೇಜನಕ್ಕಾಗಿ ವಿಶೇಷ ಯೋಜನೆ ಸಿದ್ಧಪಡಿಸುವುದು, ಸಾಗರತೀರ ಪ್ರವಾಸೋದ್ಯಮ ಅಭಿವೃದ್ಧಿ ನೀಲ ನಕಾಶೆ ಸಿದ್ಧಪಡಿಸುವುದು, ಸ್ಥಳೀಯರಿಗೆ ಪ್ರೋತ್ಸಾಹ ನೀಡುವುದರ ಜತೆಗೆ ಪ್ರವಾಸೋದ್ಯಮದಲ್ಲಿ ತೊಡಗಿಸಿಕೊಂಡಿರುವ ದೇಶ, ವಿದೇಶಗಳ ಪ್ರಮುಖರನ್ನು ಇಲ್ಲಿಗೆ ಆಕರ್ಷಿಸುವ ಮೂಲಕ ಕರಾವಳಿಯಲ್ಲಿ ಪ್ರವಾಸೋದ್ಯಮ ಕ್ಷೇತ್ರ ಪ್ರಕಾಶಿಸಬಹುದು ಎಂಬುದು
ಈ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ತೊಡಗಿಸಿಕೊಂಡಿರುವವರ ಅಭಿಪ್ರಾಯ.

ಪ್ರಮುಖ ಆದಾಯ ಕ್ಷೇತ್ರ 
ಪ್ರವಾಸೋದ್ಯಮ ಉತ್ತಮ ಆದಾಯ ತರುವ ಸೇವಾ ವಲಯವಾಗಿ ಪ್ರಸ್ತುತ ಗುರುತಿಸಿಕೊಂಡಿದೆ. ಉದ್ಯೋಗ ಅವಕಾಶಗಳ ಸೃಷ್ಠಿ , ವಾಣಿಜ್ಯ ಅಭಿವೃದ್ದಿಗೆ ಮಹತ್ತರ ಕೊಡುಗೆಗಳನ್ನು ನೀಡುತ್ತಿದೆ. ಕೇರಳ, ಗೋವಾ, ತಮಿಳುನಾಡು, ಮಹಾರಾಷ್ಟ್ರ ಮುಂತಾದ ರಾಜ್ಯಗಳನ್ನು ಇದಕ್ಕೆ ಉದಾಹರಣೆಯಾಗಿ ತೆಗೆದುಕೊಳ್ಳಬಹುದು. ಈ ಎಲ್ಲ ರಾಜ್ಯಗಳು ಸಾಗರ ತೀರ ಪ್ರವಾಸೋದ್ಯಮಕ್ಕೆ ವಿಶೇಷ ಆದ್ಯತೆ ನೀಡಿದ ಪರಿಣಾಮ ವರ್ಷಕ್ಕೆ ಲಕ್ಷಾಂತರ ಮಂದಿಯನ್ನು ಆಕರ್ಷಿಸಲು ಸಾಧ್ಯವಾಗಿದೆ.

ಪ್ರತ್ಯೇಕ ಅಭಿವೃದ್ಧಿ ಮಂಡಳಿಗೆ ಮನವಿ
ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಪೂರಕ ಪ್ರಯತ್ನಗಳನ್ನು ನಡೆಸುತ್ತಿದೆ. ಸಾಗರ ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ಲಭಿಸುವ ನಿಟ್ಟಿನಲ್ಲಿ ಸಿಆರ್‌ಝಡ್‌ ನಿಯಮದಲ್ಲಿ ಕೆಲವು ಬದಲಾವಣೆಗಳನ್ನು ಕೂಡಾ ಸಲಹೆ ಮಾಡಿದು. ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ದಿಗೆ ಪ್ರತ್ಯೇಕ ಅಭಿವೃದ್ದಿ ಮಂಡಳಿಯೊಂದನ್ನು ರಚಿಸಬೇಕು ಎಂಬ ಮನವಿಯನ್ನು ನಾವು ಈಗಾಗಲೇ ಜಿಲ್ಲಾಧಿಕಾರಿಯವರಿಗೆ ಮಾಡಿದ್ದೇವೆ.
ವತಿಕಾ ಪೈ,
  ಅಧ್ಯಕ್ಷರು, ಕೆಸಿಸಿಐ

  ಕೇಶವ ಕುಂದರ್‌

ಟಾಪ್ ನ್ಯೂಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.