“ಪ್ರತಿ ವಾರ ಪೊಲೀಸ್ಲೇನ್ ಸ್ವಚ್ಛಗೊಳಿಸಿ’
ಪಾಂಡೇಶ್ವರ: ಪುಟಾಣಿ ಪಾರ್ಕ್ ಉದ್ಘಾಟನೆ
Team Udayavani, May 6, 2019, 6:00 AM IST
ಪಾಂಡೇಶ್ವರ: ಪೊಲೀಸ್ಲೇನ್ ಸ್ವಚ್ಛತೆ ಕಾಪಾಡುವುದು ಅವಶ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರತಿ ವಾರ ಇಲ್ಲಿನ ನಿವಾಸಿಗಳು ಸ್ವಚ್ಛತಾ ಕಾರ್ಯ ನಡೆಸುವಂತೆ ಅಧಿಕೃತ ಸೂಚನೆ ನೀಡಲಾಗುವುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮೀಪ್ರಸಾದ್ ಹೇಳಿದರು.
ರಾಮಕೃಷ್ಣ ಮಿಷನ್ ನೇತೃತ್ವದ ಸ್ವಚ್ಛ ಮಂಗಳೂರು ಅಭಿಯಾನದ ಅಡಿಯಲ್ಲಿ ಪಾಂಡೇಶ್ವರ ಪೊಲೀಸ್ ಲೇನ್ನಲ್ಲಿ ನವೀಕೃತ ಚಿಣ್ಣರ ಪಾರ್ಕ್ನ್ನು ಅವರು ರವಿವಾರ ಉದ್ಘಾಟಿಸಿದರು.
ಸ್ವಚ್ಛ ಭಾರತಕ್ಕೆ ಕೊಡುಗೆಯಾಗಿ ರಾಮಕೃಷ್ಣ ಮಿಷನ್ ಉತ್ತಮ ಕೆಲಸಗಳನ್ನು ಮಾಡುತ್ತಿದೆ. ಸ್ವಚ್ಛತೆಯ ವಿಷಯದಲ್ಲಿ ಇಲ್ಲಿ ನಡೆಯುವಂತಹ ಕೆಲಸ ಇನ್ನೆಲ್ಲೂ ಕಾಣ ಸಿಗುವುದಿಲ್ಲ. ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿದ್ದರೆ ಸ್ವಚ್ಛ ಸಮಾಜ, ಸ್ವಚ್ಛ ದೇಶ ನಿರ್ಮಾಣ ಸಾಧ್ಯ ಎಂದವರು ಅಭಿಪ್ರಾಯಪಟ್ಟರು.
ನೈರ್ಮಲ್ಯ ಕಾಪಾಡಿ
ರಾಮಕೃಷ್ಣ ಮಠದ ಅಧ್ಯಕ್ಷ ಶ್ರೀ ಜಿತ ಕಾಮಾನಂದ ಸ್ವಾಮೀಜಿ ಅವರು ಮಾತನಾಡಿ, ಮಕ್ಕಳಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಬೇಕೆಂಬ ಉದ್ದೇಶದಿಂದ ಪಾರ್ಕ್ನ್ನು ನವೀಕರಣ ಮಾಡಿ, ಜಾಗೃತಿ ಚಿತ್ರ ಸಂದೇಶಗಳನ್ನು ರಚಿಸಲಾಗಿದೆ. ನಗರದ ನೈರ್ಮಲ್ಯ ಕಾಪಾಡಲು ಸಾರ್ವಜನಿಕರು ಒಂದಾಗಬೇಕು ಎಂದು ಆಶಿಸಿದರು.
ಮಾಜಿ ಕಾರ್ಪೊರೇಟರ್ ದಿವಾಕರ್, ಸಮಾಜ ಸೇವಕ ರಾಜಶೇಖರ್ ಮಳಲಿ, ವಿ.ಪ. ಮಾಜಿ ಸದಸ್ಯ ಕ್ಯಾ| ಗಣೇಶ್ ಕಾರ್ಣಿಕ್, ಸಂಯೋ ಜಕರಾದ ದಿಲ್ರಾಜ್ ಆಳ್ವ, ಉಮಾ ನಾಥ್ ಕೋಟೆಕಾರ್ ಉಪಸ್ಥಿತರಿದ್ದರು. ಸಂತೋಷ್ ನಿರೂಪಿಸಿದರು.
ಹಂತ ಹಂತವಾಗಿ ಸ್ವಚ್ಛತೆ
ಸ್ವಚ್ಛ ಮಂಗಳೂರು ಅಭಿಯಾನ ಸಂಯೋಜಕ ಶ್ರೀ ಏಕಗಮ್ಯಾನಂದ ಸ್ವಾಮೀಜಿಯವರು ಮಾತನಾಡಿ,ನಗರದಲ್ಲಿ ಪಾಳುಬಿದ್ದ ಪುಟಾಣಿ ಪಾರ್ಕ್ಗಳು ಇನ್ನೂ ಇವೆ. ಕೆಲವನ್ನು ಈಗಾಗಲೇ ಗುರುತಿಸಲಾಗಿದ್ದು, ಹಂತ ಹಂತವಾಗಿ ಸ್ವಚ್ಛ ಮಾಡಿ ಸಾರ್ವಜನಿಕರ ಉಪಯೋಗಕ್ಕೆ ನೀಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ