ಪಾಣೆಮಂಗಳೂರು: ನದಿಗೆ ಹಾರಿದ ಮೂವರು; ಮಹಿಳೆ ಸಾವು
Team Udayavani, Sep 29, 2019, 12:26 AM IST
ಬಂಟ್ವಾಳ: ಮಂಗಳೂರು – ಬೆಂಗಳೂರು ಹೆದ್ದಾರಿಯ ಪಾಣೆಮಂಗಳೂರು ಸೇತುವೆಯಲ್ಲಿ ಶನಿವಾರ ರಾತ್ರಿ ಮೂವರು ನೇತ್ರಾವತಿ ನದಿಗೆ ಹಾರಿದ್ದಾರೆ ಎನ್ನಲಾಗಿದ್ದು, ಈ ಪೈಕಿ ಮಹಿಳೆ ಸಾವನ್ನಪ್ಪಿದ್ದಾರೆ.
ಮೈಸೂರು ಪಶ್ಚಿಮದ ನೋಂದಣಿ ಸಂಖ್ಯೆ ಹೊಂದಿರುವ ಇಕೋ ಕಾರಿನಲ್ಲಿ ಆಗಮಿಸಿದ್ದ ಇವರು ಮೊದಲು ತಮ್ಮ ನಾಯಿಯನ್ನು ನದಿಗೆ ದೂಡಿ, ಬಳಿಕ ನೀರಿಗೆ ಹಾರಿದ್ದಾರೆ ಎಂದು ಹೇಳಲಾಗುತ್ತಿದೆ.
ಹೆದ್ದಾರಿಯ ಹೊಸ ಸೇತುವೆಯಲ್ಲಿ ಇವರು ನದಿಗೆ ಹಾರಿದ್ದು, ಮಹಿಳೆಯನ್ನು ಹಳೆಸೇತುವೆ ಬಳಿ ಗೂಡಿನ ಬಳಿಯ ಯುವಕರು ಮೇಲೆತ್ತಿದ್ದಾರೆ. ಅವರ ನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಇವರ ಗುರುತು ಪತ್ತೆಯಾಗಿಲ್ಲ.
ಮತ್ತಿಬ್ಬರಲ್ಲಿ ಒಬ್ಬ ಗಂಡಸು ಹಾಗೂ ಮಗು ಎಂದು ಕೆಲವರು ಹೇಳುತ್ತಿದ್ದು, ಮತ್ತೆ ಕೆಲವರು ಮಹಿಳೆ ಮತ್ತು ಗಂಡಸು ಮಾತ್ರ ಇದ್ದರು ಎನ್ನುತ್ತಿದ್ದಾರೆ.
ಅವರು ಬಂದಿದ್ದ ಕಾರು ಸೇತುವೆಯ ಬಳಿ ಪತ್ತೆಯಾಗಿದೆ. ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ