ಪಂಜ ಆಸ್ಪತ್ರೆ: 24 ತಾಸು ವೈದ್ಯಕೀಯ ಸೇವೆ ದೊರೆತರೆ ಅನುಕೂಲ


Team Udayavani, Dec 26, 2018, 10:44 AM IST

26-december-2.gif

ಸುಬ್ರಹ್ಮಣ್ಯ : ಸುಳ್ಯ ತಾ|ನ ಅಭಿವೃದ್ಧಿ ಹೊಂದುತ್ತಿರುವ ಪ್ರಮುಖ ನಗರಗಳಲ್ಲಿ ಪಂಜ ಗ್ರಾಮವೂ ಒಂದು. ಕೃಷಿ ಅವಲಂಬಿತ ಮಂದಿ ಈ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿದ್ದಾರೆ. ಕಡಬ ತಾ| ಘೋಷಣೆಯಾಗಿದ್ದರೂ, ಸದ್ಯಕ್ಕೆ ಪಂಜ ಹೋಬಳಿ ಕೇಂದ್ರವಾಗಿಯೇ ಈಗ ಇದೆ. ಇಲ್ಲಿ 24 ತಾಸುಗಳ ವೈದ್ಯಕೀಯ ಸೇವೆ ದೊರತರೆ ಉತ್ತಮ ಎನ್ನುವುದು ಗ್ರಾಮಸ್ಥರ ಅಭಿಪ್ರಾಯ.

ಪಂಜದಲ್ಲಿ ಸುಸಜ್ಜಿತ ಆಸ್ಪತ್ರೆ ಇದ್ದರೂ, ಎಲ್ಲ ಅವಧಿಗಳ ಸೇವೆ ದೊರಕುತ್ತಿಲ್ಲ. ಇದರ ವ್ಯಾಪ್ತಿಗೆ ಬರುವ ಗ್ರಾಮಗಳ ಜನತೆಗೆ ಆರೋಗ್ಯ ಸುವ್ಯವಸ್ಥೆ ಕಾಪಾಡುವಲ್ಲಿ ತೀರಾ ತೊಂದರೆ ಅನುಭವಿಸುತ್ತಿದ್ದಾರೆ. ಔಷಧಕ್ಕಾಗಿ ನಿತ್ಯ ಇಲ್ಲಿ ಪರದಾಟ ನಡೆಸುತ್ತಿದ್ದಾರೆ. ರಾತ್ರಿ ಹೊತ್ತು ಚಿಕಿತ್ಸೆಗಾಗಿ ಅಲೆದಾಡುವ ಸ್ಥಿತಿ ಇದೆ. ಹೋಬಳಿ ಕೇಂದ್ರದಲ್ಲಿ ಕಾರ್ಯಾಚರಿಸುತ್ತಿರುವ ಈ ಆಸ್ಪತ್ರೆ ಪಂಜದ ಜನತೆಗೆ ಪೂರ್ಣ ಪ್ರಮಾಣದಲ್ಲಿ ಫಲಕಾರಿಯಾಗಿ ಉಳಿದಿಲ್ಲ. ಇಲ್ಲಿನ ಆಸ್ಪತ್ರೆ ಸೇವೆ ಎಲ್ಲ ಗ್ರಾಮಗಳ ಜನತೆಗೆ ಸಿಗುವಂತೆ ಆಗಬೇಕಿದ್ದರೆ ಈ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿ ಮೂಲ ಸೌಕರ್ಯ ಒದಗಿಸಬೇಕು. 24 ತಾಸುಗಳ ಸೇವೆ ದೊರಕುವಂತಾಗಬೇಕು.

ಹೋಬಳಿ ಕೇಂದ್ರವಾದ ಪಂಜಕ್ಕೆ 19 ಗ್ರಾಮಗಳ ವ್ಯಾಪ್ತಿ ತನಕ ವಿಸ್ತರಿಸಿಕೊಂಡಿದೆ. ಕಡಬ ತಾ| ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಕ್ಕೆ ಬಂದ ಅನಂತರದಲ್ಲಿ ಹೋಬಳಿ ವ್ಯಾಪ್ತಿಯ ಗ್ರಾಮಗಳ ವ್ಯಾಪ್ತಿ ಕಿರಿದಾಗಲಿದೆ.

ಪಂಜ ಹೋಬಳಿ ಕೇಂದ್ರ ಬೇರೆಡೆಗೆ ವರ್ಗಾವಣೆಯಾಗುವ ಸಾಧ್ಯತೆಗಳಿದ್ದರೂ, ಆಸು ಪಾಸಿನ ಗ್ರಾಮಗಳ ಜನತೆ ವೈದ್ಯಕೀಯ ಸೇವೆಗೆ ತತ್‌ಕ್ಷಣಕ್ಕೆ ಹತ್ತಿರದ ಆಸ್ಪತ್ರೆಗೆ ಬರುವುದು ಅನಿವಾರ್ಯ ಎನ್ನುತ್ತಾರೆ ಗ್ರಾಮಸ್ಥರು. ಜನತೆ ಪ್ರತಿನಿತ್ಯ ಕಂದಾಯ ಕೆಲಸ ಸೇರಿದಂತೆ ಇನ್ನಿತರ ಸೌಲಭ್ಯಕ್ಕೆಂದು ಪಂಜಕ್ಕೆ ಬರುತ್ತಾರೆ. ಈ ಪೈಕಿ ವಯಸ್ಕರು, ಅಂಗವಿಕಲರು ಸೇರಿರುತ್ತಾರೆ. ಪ್ರಾಥಮಿಕ ಸಮುಚ್ಚಯ ಕೇಂದ್ರ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಇದೇ ಆಸ್ಪತ್ರೆಗೆ ಬರುತ್ತಾರೆ. ಗಂಭೀರ ಕಾಯಿಲೆಗಳಿಂದ ತುತ್ತಾದವರು ಕೂಡ ಇಲ್ಲಿಗೆ ಬರುತ್ತಿರುತ್ತಾರೆ. ಆಕಸ್ಮಿಕವಾಗಿ ಇಲ್ಲಿ ಅನಾರೋಗ್ಯಕ್ಕೆ ತುತ್ತಾದಲ್ಲಿ ತತ್‌ಕ್ಷಣಕ್ಕೆ ತುರ್ತು ಸೇವೆಯಿಲ್ಲದೆ ಪರದಾಡುತ್ತಾರೆ.

ಹೆರಿಗೆ ಪ್ರಮಾಣ ಅಧಿಕ 
ಕೊಲ್ಲಮೊಗ್ರು, ಗುತ್ತಿಗಾರು, ಸುಬ್ರಹ್ಮಣ್ಯ ಬೆಳ್ಳಾರೆಗಳಲ್ಲಿ ಪ್ರಾಥಮಿಕ ಆಸ್ಪತ್ರೆಗಳು ಮಾತ್ರ ಕಾರ್ಯಚರಿಸುತ್ತಿವೆ. ಅವುಗಳಲ್ಲಿ ಬಹುತೇಕ ಆಸ್ಪತ್ರೆಗಳಲ್ಲಿ ವೈದ್ಯರು ಸೇರಿದಂತೆ ಪ್ರಮುಖ ಸಿಬಂದಿ ಹಾಗೂ ಮೂಲ ಸೌಕರ್ಯ ಕೊರತೆ ಇದೆ. ಪಂಜದ ಈ ಆಸ್ಪತ್ರೆಗೆ ಹೆರಿಗೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ವ್ಯವಸ್ಥೆ ಇಲ್ಲದ ಕಾರಣ ಕಾಣಿಯೂರು ಅಥವಾ ಪುತ್ತೂರಿಗೆ ತೆರಳುವ ಅನಿವಾರ್ಯತೆ ಇದೆ. 

ಮಹಿಳಾ ವೈದ್ಯರಿಲ್ಲ, ಹುದ್ದೆ ಖಾಲಿ 
ಪಂಜ ಆಸ್ಪತ್ರೆಯಲ್ಲಿ ಖಾಯಂ ವೈದ್ಯರು ಇದ್ದಾರೆ. ಇಲ್ಲಿಗೆ ಮುಖ್ಯವಾಗಿ ಮಹಿಳಾ ವೈದ್ಯರ ಅಗತ್ಯತೆಯಿದೆ. ಅಗತ್ಯವಾಗಿ ಸ್ಟಾಫ್ ನರ್ಸ್‌ ಹುದ್ದೆಯನ್ನು ಸೃಷ್ಟಿಸಿ ಇಲ್ಲಿಗೆ ಮೂರು ಹುದ್ದೆ ಭರ್ತಿಗೊಳಿಸಬೇಕಿದೆ. ಔಷಧ ವಿತರಕ ಹುದ್ದೆ ಖಾಲಿಯಿದೆ.  ಶ್ರೂಶಕಿಯರಿದ್ದಾರೆ. ಅವರನ್ನು ಇತರ ಅಸಾಂಕ್ರಾಮಿಕ ರೋಗ ನಿರ್ವಹಣೆಗೆ ನಿಯೋಜಿಸಲಾಗಿದೆ. ಗ್ರೂಪ್‌ ಡಿ ಒಂದು ಹುದ್ದೆ, ಫಾರ್ಮಸಿಸ್ಟ್‌ ಹುದ್ದೆ ಖಾಲಿ ಇದೆ. ಕೇಂದ್ರದಲ್ಲಿ ಎಲ್ಲ ಕಾಯಿಲೆಗಳಿಗೆ ಪರೀಕ್ಷೆ ಮಾಡಿ ಚಿಕಿತ್ಸೆ ಕೊಡಿಸಲಾಗುತ್ತದೆ. ರೋಗಿಯ ರಕ್ತ, ಮೂತ್ರ ಪರೀಕ್ಷೆಗೆ ಪ್ರಯೋಗಾಲಯದ ವ್ಯವಸ್ಥೆಯಿದೆ. ಎಕ್ಸ್‌ರೇ ವ್ಯವಸ್ಥೆ ಅತ್ಯವಶ್ಯಕವಾಗಿ ಒದಗಿಸಬೇಕಿದೆ.

ರಾತ್ರಿ ಹೊತ್ತು ಪರದಾಟ
ಪಂಜ ವ್ಯಾಪ್ತಿಯಲ್ಲಿ ರಾತ್ರಿ ಹೊತ್ತು ಅನಾರೋಗ್ಯ ಅಥವಾ ಅವಘಡ ಸಂಭವಿಸಿದರೆ ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರ ತೆರೆದಿರುವುದಿಲ್ಲ. ಸಂಜೆ 5ರ ಅನಂತರ ಯಾವುದೇ ಸೇವೆಗಳು ಇಲ್ಲಿ ಸಿಗುವುದಿಲ್ಲ. ಅನ್ಯ ಖಾಸಗಿ ವ್ಯವಸ್ಥೆಗಳೂ ಇಲ್ಲ. 6 ಬೆಡ್‌ನ‌ ವ್ಯವಸ್ಥೆಗಳು ಇಲ್ಲಿದ್ದರೂ, ಅದು ಸಾಕಾಗುವುದಿಲ್ಲ. ಹೆಚ್ಚಿನ ಬೆಡ್‌ ವ್ಯವಸ್ಥೆ ಒದಗಿಸಿ ಎಲ್ಲ ಸಮಯದಲ್ಲಿಯೂ ಸೇವೆ ಸಿಗುವಂತೆ ಮಾಡುವ ಅಗತ್ಯವಿದೆ. 

ಹಳೆ ಕಟ್ಟಡ ಅನಾಥ
ಆಸ್ಪತ್ರೆಗೆಂದು 1.95 ಸೆಂಟ್ಸ್‌ ಜಾಗ ಇದೆ. ಹೆರಿಗೆ ಕೋಣೆ ಸೌಲಭ್ಯ, ಔಷ ಧ ದಾಸ್ತಾನು ಕೊಠಡಿ, ಮಹಿಳಾ ವೈದ್ಯಾಧಿಕಾರಿ ಕೊಠಡಿ, ಸ್ಟಾಫ್ ನರ್ಸ್‌ ಕೊಠಡಿ, ಕಿರಿಯ ಆರೋಗ್ಯ ಕ್ವಾಟ್ರಸ್‌ಗಳು ಖಾಲಿ ಬಿದ್ದಿವೆ. ಅದಕ್ಕೆ ಸಂಬಂಧಿಸಿ ಅಗತ್ಯ ಸಿಬಂದಿ ಹಾಗೂ ಇತರ ಸವಲತ್ತುಗಳು ಇಲ್ಲ. ಹಳೆಯ ಆಸ್ಪತ್ರೆ ಕಟ್ಟಡ ಅನಾಥವಾಗಿ ಬಿದ್ದಿದೆ.

ಸಂಘಟನೆಗಳ ಕಾಳಜಿ
ಪಂಜ ಹೋಬಳಿ ವ್ಯಾಪ್ತಿ ವಿಸ್ತಾರವಾಗಿ ಹರಡಿರುವುದರಿಂದ ಕೇಂದ್ರಕ್ಕೆ ಸಂಬಂಧಿಸಿ ಅಗತ್ಯ ಆ್ಯಂಬುಲೆನ್ಸ್‌ ಆವಶ್ಯಕತೆಯಿದೆ. 108 ಆರೋಗ್ಯ ಕವಚ ವ್ಯವಸ್ಥೆ ಕೂಡ ಇಲ್ಲಿಲ್ಲ. ಹೀಗಾಗಿ ಸ್ಥಳೀಯ ಯುವ ತೇಜಸ್ಸು ಮತ್ತು ಪಂಚಶ್ರೀ ಸ್ಪೋರ್ಟ್ಸ್ ಕ್ಲಬ್‌ ಸಂಘಟನೆಗಳು ಸ್ಥಳೀಯ ಜನರ ಸಹಕಾರ ಪಡೆದು ಆ್ಯಂಬುಲೆನ್ಸ್‌ ಹೊಂದಲು ಕಾನ್ಮೋನ್ಮುಖವಾಗಿದೆ.

ಮನವಿ ನೀಡಿದರೂ ಫಲವಿಲ್ಲ
ಇಲ್ಲಿ ವಿದ್ಯುತ್‌ ಸಮಸ್ಯೆ ಇದೆ. ಜನರೇಟರ್‌ ವ್ಯವಸ್ಥೆಯ ಅಗತ್ಯವೂ ಆಸ್ಪತ್ರೆಗೆ ಇದೆ. ಇಲ್ಲಿಯ ಸಮುಚ್ಛಯ ಕೇಂದ್ರವನ್ನು ಮೇಲ್ದರ್ಜೆಗೇರಿಸಿ ಖಾಲಿ ಇರುವ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಿ ದಿನದ ಇಪ್ಪತ್ತ ನಾಲ್ಕು ಗಂಟೆ ಚಿಕಿತ್ಸಾ ಸೇವೆ ಸಿಗುವಂತಾಗಲು ಸಂಬಂಧಪಟ್ಟ ಆರೋಗ್ಯ ಸಚಿವರು ಸಹಿತ ಅಧಿಕಾರಿ ವರ್ಗಕ್ಕೆ ಇಲ್ಲಿಯ ವಿವಿಧ ಸಂಘ ಸಂಸ್ಥೆಗಳು ಮನವಿ ನೀಡಿ ಒತ್ತಾಯಿಸುವ ಪ್ರಯತ್ನ ನಡೆದಿದೆ. ಈವರೆಗೆ ಫಲ ದೊರಕಿಲ್ಲ.

ವ್ಯವಸ್ಥೆಗಳಿದ್ದಲ್ಲಿ ಉತ್ತಮ
ಆಸ್ಪತ್ರೆಗೆ ಬರುವ ರೋಗಿಗಳಿಗೆ ಸೂಕ್ತ ವೈದ್ಯಕೀಯ ಸೇವೆಯನ್ನು ನೀಡುತ್ತಿದ್ದೇವೆ. ಸ್ಟಾಫ್ ನರ್ಸ್‌ ಹುದ್ದೆ ಸೃಷ್ಟಿಸಿ ಇನ್ನಿತರ ಕೆಲ ವ್ಯವಸ್ಥೆಗಳು ಇದ್ದಲ್ಲಿ ಇನ್ನೂ ಉತ್ತಮವಾಗಿ ಸೇವೆ ನೀಡಲು ಅನುಕೂಲವಾಗುತ್ತದೆ.
– ಡಾ| ಮಂಜುನಾಥ,
ವೈದ್ಯರು, ಪಂಜ ಆಸ್ಪತ್ರೆ

ಮೇಲ್ದರ್ಜೆ ಅತ್ಯವಶ್ಯ
ಪಂಜವು ಸುತ್ತಮುತ್ತಲಿನ 15 ಗ್ರಾಮಗಳಿಗೆ ಕೇಂದ್ರಬಿಂದು. ಬಹಳಷ್ಟು ಬಾರಿ ರಾತ್ರಿ ಹೊತ್ತಿಗೆ ಆಸೌಖ್ಯಕ್ಕೆ ಅಥವಾ ಆವಘಡಕ್ಕೆ ತುತ್ತಾದ ಮಂದಿಗೆ ಪ್ರಥಮ ಚಿಕಿತ್ಸೆ ಕೂಡ ಲಭ್ಯವಾಗದಂತಹ ಸ್ಥಿತಿ ಇದೆ. ಬಹುಮುಖ್ಯವಾಗಿ ಪಂಜ ಸರಕಾರಿ ಆಸ್ಪತ್ರೆ ಮೇಲ್ದರ್ಜೆಗೇರಬೇಕು.
– ಆಶಿತ್‌ ಕಲ್ಲಾಜೆ, ಪಂಜ

ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.