ಪಂಜಿಗುಡ್ಡೆ ಅಂಗನವಾಡಿ ಕೇಂದ್ರ ಶಿಥಿಲ


Team Udayavani, Jun 30, 2018, 2:45 AM IST

anganavadi-29-6.jpg

ವಿಶೇಷ ವರದಿ – ಕೆಯ್ಯೂರು: ಒಂದೆಡೆ ಸರಕಾರದ ಹೈಟೆಕ್‌ ಅಂಗನವಾಡಿ ಕನಸು ಬಿತ್ತಿದೆ. ಅದರೆ ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಪಂಜಿಗುಡ್ಡೆ ಅಂಗನವಾಡಿಯಲ್ಲಿ ಮಳೆ ಬಂದರೆ ಮಕ್ಕಳು ಮೇಜಿನ ಅಡಿಯಲ್ಲಿ ರಕ್ಷಣೆ ಪಡೆಯುತ್ತಾರೆ. ಛಾವಣಿಯ ತಗಡು ತೂತಾಗಿದೆ. ಬಿರುಕು ಬಿಟ್ಟ ಗೋಡೆಯ ಕಿಂಡಿ ಮುಚ್ಚಲು ಅಡಿಕೆ ಮರದ ಸಲಾಕೆ, ಕಂಬಳಿ ಮಾದರಿಯ ಬಟ್ಟೆ ಬಳಸಲಾಗಿದೆ. ಒಳಗೆ ಮರದ ಕಂಬಗಳು ಗೆದ್ದಲು ಹಿಡಿದಿವೆ. ಮಕ್ಕಳು ಕುಳಿತುಕೊಳ್ಳುವ ನೆಲ ಸಣ್ಣ ಮಳೆಗೂ ಸಂಪೂರ್ಣ ಒದ್ದೆಯಾಗುತ್ತದೆ. ಗುಡಿಸಲಿಗಿಂತಲೂ ಕಡೆಯಾದ ಅಂಗನವಾಡಿಯಲ್ಲಿ ಮಕ್ಕಳ ಸುರಕ್ಷತೆ ಹೆತ್ತವರಿಗೆ ಚಿಂತೆ ತಂದಿದೆ.

ಕನಿಷ್ಠ ಸೌಕರ್ಯವೂ ಇಲ್ಲ
ಕಟ್ಟಡದಲ್ಲಿ ಕನಿಷ್ಠ ಮೂಲಸೌಕರ್ಯವೂ ಇಲ್ಲ, ಕೆಂಪು ಕಲ್ಲಿನಿಂದ ಕಟ್ಟಿದ ಕಟ್ಟಡದ ಗೋಡೆ ಅಪೂರ್ಣವಾಗಿದೆ. ಈಗಿರುವ ಗೋಡೆ ಜೋರಾಗಿ ಬೀಸುವ ಗಾಳಿಗೆ ಬೀಳುವ ಸ್ಥಿತಿಯಲ್ಲಿದೆ. ಇದರ ಮಧ್ಯೆ ಇರುವ ಮರದ ಕಂಬಗಳು ಗೆದ್ದಲು ಹುಳುಗಳಿಗೆ ಆಹಾರವಾಗುತ್ತಿವೆ. ಅಂಗನವಾಡಿಯ ಪರಿಸರವೂ ಉತ್ತಮವಾಗಿಲ್ಲ. ಜಗಲಿಯ ಸುತ್ತಲೂ ಪೊದೆ ತುಂಬಿದ್ದು, ಮಳೆಗಾಲದಲ್ಲಿ ಅಲ್ಲಲ್ಲಿ ನೀರು ತುಂಬಿ ಸೊಳ್ಳೆಗಳ ಕಾಟವೂ ಪುಟಾಣಿಗಳಿಗೆ ಕಾಡುತ್ತಿದೆ. ಸೊಳ್ಳೆಗಳಿಂದ ದೇಹ ರಕ್ಷಿಸಿಕೊಳ್ಳಲು ಕೇಂದ್ರದ ಕಿಟಕಿಗಳಿಗೆ ಸುರಕ್ಷಾ ಪರದೆಯೂ ಒದಗಿಸಿಲ್ಲ.


2,000 ರೂ. ಅನುದಾನ!

ಪಂಜಿಗುಡ್ಡೆ ಅಂಗನವಾಡಿಗೆ ಅನುದಾನದ ರೂಪದಲ್ಲಿ ಪಂಚಾಯತ್‌ ವತಿಯಿಂದ 2,000 ರೂ. ಮಾತ್ರ ಸಿಕ್ಕಿದೆ. ಹೊರತಾಗಿ ಕಟ್ಟದ ದುರಸ್ತಿಗೆ ಅಥವಾ ಹೊಸ ಕಟ್ಟಡಕ್ಕೆ ನಯಾಪೈಸೆ ಅನುದಾನ ಬಿಡುಗಡೆಯಾಗಿಲ್ಲ. ಪ್ರಸ್ತುತ ಕಟ್ಟದ ಛಾವಣಿ ದುರಸ್ತಿಗೊಳಿಸಲು ಅನುದಾನಕ್ಕೆ ಮನವಿ ಮಾಡಲಾಗಿತ್ತು. ಆದರೆ ನಿರೀಕ್ಷಿಸಿದ್ದ ಅನುದಾನ ಲಭ್ಯವಾಗಲೇ ಇಲ್ಲ. ಮಳೆಗಾಲದಲ್ಲಿ ನೀರಿನಿಂದ ರಕ್ಷಿಸಿಕೊಳ್ಳಲು ಒಂದು ಟಾರ್ಪಲ್‌ ಒದಗಿಸುವಂತೆ ಬೇಡಿಕೆ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. 

ವಿದ್ಯುತ್‌ ಇಲ್ಲ
ಸರಕಾರದಿಂದ ಅಂಗನವಾಡಿ ಮಕ್ಕಳಿಗೆ ಸಿಗುವ ಎಲ್ಲ ಪೌಷ್ಟಿಕ ಆಹಾರಗಳನ್ನು ನೀಡಲಾಗುತ್ತದೆ. ಆದರೆ ಪೌಷ್ಟಿಕ ಆಹಾರ ತಯಾರಿಸುವ ಕೊಠಡಿ ಗುಡಿಸಲಿನಂತಿದ್ದು ದುಃಸ್ಥಿತಿಯಲ್ಲಿದೆ. ಮಳೆಗಾಲದಲ್ಲಿ ಕೊಠಡಿಗೆ ತೇವಾಂಶ ಬರುತ್ತಿದ್ದು, ಇದರಿಂದ ಆಹಾರ ಧಾನ್ಯಗಳು ಹಾಳಾಗುತ್ತಿದೆ. ಮಕ್ಕಳಿಗೂ ತೇವಾಂಶದಿಂದ ಕೂಡಿದ ನೆಲದಲ್ಲಿ ಕುಳಿತುಕೊಳ್ಳಲು ಕಷ್ಠವಾಗುತ್ತಿದೆ. ವಿದ್ಯುತ್‌ ಸೌಲಭ್ಯದಿಂದ ವಂಚಿತವಾಗಿರುವ ಕಟ್ಟಡಕ್ಕೆ ದಾನಿಯೋಬ್ಬರು ನೀಡಿದ ಸೋಲಾರ್‌ ದೀಪವೇ ಆಶ್ರಯವಾಗಿದೆ. ಉಳಿದಂತೆ ಕತ್ತಲೆ ಯಲ್ಲೇ ವಿದ್ಯಾರ್ಥಿಗಳಿಗೆ ಬೆಳಕಿನ ಪಾಠ.

3 ಸೆಂಟ್ಸ್‌ ಜಾಗ
ಒಂದೂವರೆ ವರ್ಷದ ಹಿಂದೆ ಅಂಗನವಾಡಿಗೆ 3 ಸೆಂಟ್ಸ್‌ ಜಾಗದ ಪಹಣಿ ಪತ್ರ ಸಿಕ್ಕಿದೆ. ಆದರೆ ಅಂಗನವಾಡಿ ಕೇಂದ್ರ ಸಮಸ್ಯೆಯ ಬಗ್ಗೆ ಪ್ರತಿಗ್ರಾಮ ಸಭೆಗಳಲ್ಲಿ ಈ ಭಾಗದ ಜನರು ಮನವಿ ಸಲ್ಲಿಸುತ್ತಿದ್ದು, ಫ‌ಲಿತಾಂಶ ಮಾತ್ರ ಶೂನ್ಯ. ಕೋಟಿ-ಕೋಟಿ ಅನುದಾನ ಮಂಜೂರುಗೊಳಿಸಿದ ಲೆಕ್ಕ ಕೊಡುತ್ತಿರುವ ಜನಪ್ರತಿನಿಧಿಗಳಿಗೆ ಪಂಜಿಗುಡ್ಡೆ ಅಂಗನವಾಡಿ ಕಟ್ಟಡಕ್ಕೆ ಅನುದಾನ ನೀಡಲು ಸಾಧ್ಯವಾಗಿಲ್ಲ ಎನ್ನುತ್ತಾರೆ ಶಿಕ್ಷಣಾಭಿಮಾನಿಗಳು. 

ಹುದ್ದೆಗಳು ಭರ್ತಿಯಾಗಿವೆ
ಇಲ್ಲಿನ ಅಂಗನವಾಡಿ ಕಾರ್ಯಕರ್ತೆ, ಸಹಾ ಯಕಿ ಹುದ್ದೆಗಳು ಭರ್ತಿಯಾಗಿವೆ. ಇರುವ ವ್ಯವಸ್ಥೆಯಲ್ಲಿ ಮಕ್ಕಳನ್ನು ಚಟುವಟಿಕೆಯಿಂದ ತೊಡಗಿಸಿಕೊಳ್ಳಲು ಪಯತ್ನ ಮಾಡಿದರೂ ಇಲ್ಲಿನ ಮೂಲಸೌಕರ್ಯ ಅಡ್ಡಿಯಾಗಿದೆ.

ಪಂಜಿಗುಡ್ಡೆ ಅಂಗನವಾಡಿ
2009ರಲ್ಲಿ ಪಂಜಿಗುಡ್ಡೆ, ಪಲ್ಲತ್ತಡ್ಕ, ವ್ಯಾಪ್ತಿಯ ಮಕ್ಕಳ ಅನುಕೂಲಕ್ಕೆ ಪಂಜಿಗುಡ್ಡೆಯಲ್ಲಿ ಅಂಗನವಾಡಿ ಸ್ಥಾಪಿಸಲಾಗಿತ್ತು. ಮೂರು ವರ್ಷಗಳ ಹಿಂದೆ ತಾತ್ಕಾಲಿಕವಾಗಿ ನಿರ್ಮಿಸಿದ ಕೊಠಡಿಯೊಳಗೆ ಕುಳಿತುಕೊಳ್ಳುತ್ತಾರೆ. ಆರಂಭದಲ್ಲಿ 16 ಇದ್ದ ಮಕ್ಕಳ ಸಂಖ್ಯೆ ಈಗ 10ಕ್ಕೆ ಇಳಿದಿದೆ. ನಿತ್ಯ ಬರುವ ಮಕ್ಕಳ ಸಂಖ್ಯೆ 7. ಈ ಅಂಗನವಾಡಿಗೆ ಮಕ್ಕಳನ್ನು ಕಳುಹಿಸಲು ಹೆತ್ತವರೂ ಆತಂಕ ವ್ಯಕ್ತಪಡಿಸುತ್ತಾರೆ.

ಮಾಹಿತಿ ಇಲ್ಲ
ಸ್ವಂತ ಕಟ್ಟಡ ಕಟ್ಟಲು ಜಾಗದ ಸಮಸ್ಯೆ ಇತ್ತು. ಈ ಕಾರಣದಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ನೂತನ ಕಟ್ಟಡಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ಆದರೆ ಇದುವರೆಗೆ ಯಾವುದೇ ಮಹಿತಿ ಬಂದಿಲ್ಲ. 
– ಬಾಬು ಬಿ., ಅಧ್ಯಕ್ಷರು, ಕೆಯ್ಯೂರು ಗ್ರಾ.ಪಂ.

ಪಹಣಿ ಪತ್ರ ತಡವಾಯಿತು
ಮಕ್ಕಳ ಮತ್ತು ಮಹಿಳಾ ಕಲ್ಯಾಣ ಇಲಾಖಾ ಅಧಿಕಾರಿ ಜತೆ ಮತನಾಡಿದಾಗ, ಸ್ಟೇಟ್‌ ಫ‌ಂಡ್‌ ನಿಯೋಗಕ್ಕೆ ಕಳುಹಿಸಲಾಗಿದೆ. ಅದಕಾರಣ ಹಣ ಕೂಡಲೇ ಕೆಲಸ ಮಾಡಿಸುತ್ತೇವೆ. ಪಹಣಿ ಪತ್ರ ಸಿಗಲು ತಡವಾದ ಕಾರಣ ಕುಂಠಿತವಾಯಿತು. 
– ಅನಿತಾ ಹೇಮನಾಥ ಶೆಟ್ಟಿ, ಜಿ. ಪಂ. ಸದಸ್ಯರು, ಮಕ್ಕಳ ಮತ್ತು ಆ. ಸ್ಥಾಯೀ ಸಮತಿ ಅಧ್ಯಕ್ಷರು

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.