ಜ. 1ರಿಂದ‌ ಸರಕಾರಿ ಕಚೇರಿಗಳೆಲ್ಲ “ಪೇಪರ್‌ಲೆಸ್‌’


Team Udayavani, Dec 1, 2019, 5:32 AM IST

2711MLR101

ಮಂಗಳೂರು: ಕರಾವಳಿಯ ಸರಕಾರಿ ಕಚೇರಿಗಳಲ್ಲಿ ಇನ್ನು ಮುಂದೆ ಸಾರ್ವಜನಿಕರು ಕಾಗದರಹಿತವಾಗಿ ಸೇವೆ ಪಡೆದುಕೊಳ್ಳಬಹುದು; ಯಾಕೆಂದರೆ 2020ರ ಜ. 1ರಿಂದ ದಕ್ಷಿಣ ಕನ್ನಡ, ಉಡುಪಿಯ ಜಿಲ್ಲಾ ಮಟ್ಟದ ಸರಕಾರಿ ಕಚೇರಿಗಳಲ್ಲಿ ಕಡತಗಳನ್ನು ಇ-ಕಚೇರಿ ತಂತ್ರಾಂಶದಲ್ಲಿಯೇ ತೆರೆದು ನಿರ್ವಹಿಸಲು ಸರಕಾರ ಸೂಚಿಸಿದೆ.

ಪರಿಸರ ಸಂರಕ್ಷಣೆ, ಪಾರದರ್ಶಕತೆ ಹಾಗೂ ಆಧುನಿಕ ತಂತ್ರಜ್ಞಾನದ ಅಳವಡಿಕೆ ಹಿನ್ನೆಲೆಯಲ್ಲಿ ಸರಕಾರಿ ಇಲಾಖೆಗಳನ್ನು ಕಾಗದ ರಹಿತ ಇಲಾಖೆಯನ್ನಾಗಿಸಲು ರಾಜ್ಯ ಸರಕಾರ ವರ್ಷದ ಹಿಂದೆಯೇ ನಿರ್ದೇಶಿಸಿತ್ತು. ಕೆಲವು ಇಲಾಖೆಗಳಲ್ಲಿ ಮಾತ್ರ ಭಾಗಶಃ ಅನುಷ್ಠಾನವಾಗಿದ್ದರೆ, ಕೆಲವು ಕಡೆ ನಿಧಾನವಾಗಿತ್ತು. ಇದೀಗ ಕೊನೆಯದಾಗಿ ಸೂಚನೆ ನೀಡಿರುವ ಸರಕಾರ ಜ. 1ರಿಂದ ಜಿಲ್ಲಾ ಮಟ್ಟದ ಸರಕಾರಿ ಕಚೇರಿಯನ್ನು ಕಾಗದರಹಿತ ಮಾಡಲೇಬೇಕು ಎಂದಿದೆ.

ದ.ಕ. ಜಿಲ್ಲಾಧಿಕಾರಿ ಕಚೇರಿ, ಜಿ.ಪಂ. ಕಚೇರಿ ಬಹುತೇಕ ಪೇಪರ್‌ಲೆಸ್‌ ಆಗಿವೆ. ಡಿಜಿಟಲ್‌ ಸಹಿ ಪ್ರಕ್ರಿಯೆ ಅನುಷ್ಠಾನ ಹಂತದಲ್ಲಿದೆ. ಉಡುಪಿಯಲ್ಲಿಯೂ ಇದೇ ರೀತಿ ಜಿಲ್ಲಾಧಿಕಾರಿ ಕಚೇರಿ ಹಾಗೂ ಜಿ.ಪಂ. ಕಚೇರಿ ಬಹುತೇಕ ಪೇಪರ್‌ಲೆಸ್‌ ಆಗಿದ್ದು, ಪೂರ್ಣ ಅನುಷ್ಠಾನ ಬಾಕಿಯಿದೆ. ಉಳಿದಂತೆ ಜಿಲ್ಲಾ ಮಟ್ಟದ ಆಹಾರ ಇಲಾಖೆ, ಮುಜರಾಯಿ ಇಲಾಖೆ, ಚುನಾವಣಾ ಇಲಾಖೆ ಪೇಪರ್‌ಲೆಸ್‌ ಆಗಿವೆ. ಬೆಳ್ತಂಗಡಿ ತಾ.ಪಂ. ಪೇಪರ್‌ಲೆಸ್‌ ಆಗಿದ್ದು, ಉಳಿದ ಎರಡೂ ಜಿಲ್ಲೆಗಳ ತಾ.ಪಂ.ಕಚೇರಿಗಳು ಆ ಹಾದಿಯಲ್ಲಿವೆ.

ಅಧಿಕಾರಿ, ಸಿಬಂದಿಗೆ ತರಬೇತಿ
ಬಾಕಿಯಾಗಿರುವ ಎಲ್ಲ ಸರಕಾರಿ ಇಲಾಖೆಗಳಲ್ಲಿ ಇ-ಕಚೇರಿ ವ್ಯವಸ್ಥೆ ಅನುಷ್ಠಾನಿಸಲು ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯ ಇ-ಕಚೇರಿ ಅನುಷ್ಠಾನ ಸಮಿತಿ ನಿರ್ದೇಶನ ನೀಡಿದೆ. ಆದರೆ, ಇಲಾಖೆಯಲ್ಲಿ ಸಿಬಂದಿ ಕೊರತೆ, ಕಾರ್ಯದ ಒತ್ತಡದ ನೆಪದಲ್ಲಿ ಅನುಷ್ಠಾನ ಆಗಿಲ್ಲ. ಈ ಮಧ್ಯೆ ಈಗಾಗಲೇ ಅನುಷ್ಠಾನವಾದ ಜಿಲ್ಲಾಧಿಕಾರಿ ಕಚೇರಿ/ಜಿ.ಪಂ. ಕಚೇರಿಯಲ್ಲಿ ಕಾಗದ ರಹಿತವಾಗಿ ಇಲಾಖಾ ವ್ಯವಹಾರ ನಡೆಯುತ್ತಿದ್ದರೂ ಉನ್ನತಾಧಿಕಾರಿಗಳಿಗೆ ಹಾಗೂ ಇಲಾಖೆಯ ಸಚಿವರಿಗೆ, ಇತರ ಅಧಿಕಾರಿಗಳಿಗೆ ಕಾಗದ ರೂಪದಲ್ಲಿಯೇ ಕಡತ ನೀಡುವ ಪರಿಸ್ಥಿತಿ ಇರುವುದರಿಂದ ಅನುಷ್ಠಾನ ಪೂರ್ಣ ಮಟ್ಟದಲ್ಲಿ ಆಗಲೇ ಇಲ್ಲ. ಇದೀಗ ಪ್ರತೀ ಜಿಲ್ಲೆಯ ತರಬೇತಿ ಕೇಂದ್ರಗಳ ಪ್ರಾಂಶುಪಾಲರ ಸಹಕಾರದೊಂದಿಗೆ ವಾರಕ್ಕೆ ಕನಿಷ್ಠ 1 ದಿನದ ಅವಧಿಯಲ್ಲಿ ಎಲ್ಲ ಅಧಿಕಾರಿ-ಸಿಬಂದಿಗೆ ತರಬೇತಿ ನೀಡಲಾಗುತ್ತಿದೆ.

ಮೊಬೈಲ್‌ನಲ್ಲೇ ಅಪ್‌ಡೇಟ್‌!
ಎಲ್ಲ ಇಲಾಖೆಗಳಲ್ಲಿ ಪೂರ್ಣ ಮಟ್ಟದಲ್ಲಿ ಕಾಗದ ರಹಿತ ವ್ಯವಸ್ಥೆ ಜಾರಿಗೆ ಬಂದರೆ ಸಾರ್ವಜನಿಕರು ಅರ್ಜಿ ಹಿಡಿದು ಕಚೇರಿಗಳಿಗೆ ಅಲೆದಾಡಬೇಕಿಲ್ಲ. ಕೊಟ್ಟಿರುವ ಅರ್ಜಿ ಯಾವ ಹಂತದಲ್ಲಿದೆ ಎಂದು ಮೊಬೈಲ್‌/ಆನ್‌ಲೈನ್‌ ಮೂಲಕವೇ ಪರಿಶೀಲಿಸಬಹುದು. ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ 1695 ಹಾಗೂ ಜಿ.ಪಂ.ನಲ್ಲಿ 759 ಅರ್ಜಿಗಳು ಇ-ಕಚೇರಿ ಮೂಲಕ ಸ್ವೀಕೃತಿಯಾಗಿವೆ. ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ 1,895 ಅರ್ಜಿ ಹಾಗೂ ಜಿ.ಪಂ.ನಲ್ಲಿ 412 ಅರ್ಜಿಗಳು ಸ್ವೀಕೃತಗೊಂಡಿವೆ. ಇದು ಇತ್ತೀಚಿನ 15 ದಿನಗಳ ಲೆಕ್ಕಾಚಾರ.

ಜಿಲ್ಲಾಧಿಕಾರಿ ಕಚೇರಿ, ಜಿ.ಪಂ. ಹಾಗೂ ಇತರ ಇಲಾಖೆಗಳಲ್ಲಿ ಈಗಾಗಲೇ ಪೇಪರ್‌ಲೆಸ್‌ ಅನುಷ್ಠಾನ ಜಾರಿಯಲ್ಲಿದೆ. ಜನವರಿ 1ರಿಂದ ಎಲ್ಲ ಜಿಲ್ಲಾ ಮಟ್ಟದ ಸರಕಾರಿ ಕಚೇರಿಯಲ್ಲಿ ಪೂರ್ಣಮಟ್ಟದಲ್ಲಿ ಅನುಷ್ಠಾನಿಸುವಂತೆ ಸೂಚಿಸಲಾಗಿದೆ. ಈ ಸಂಬಂಧ ಅಧಿಕಾರಿ- ಸಿಬಂದಿ ತರಬೇತಿ ಕೂಡ ಪಡೆಯುತ್ತಿದ್ದಾರೆ.
– ಸಿಂಧೂ ಬಿ. ರೂಪೇಶ್‌,
ಜಿ. ಜಗದೀಶ್‌
ದ.ಕ., ಉಡುಪಿ ಜಿಲ್ಲಾಧಿಕಾರಿಗಳು

-ದಿನೇಶ್‌ ಇರಾ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.