ಮನಪಾ ಶೀಘ್ರ “ಪೇಪರ್‌ಲೆಸ್‌’


Team Udayavani, Aug 30, 2018, 10:00 AM IST

manapa.jpg

ಮಂಗಳೂರು: ಗಣಕೀಕರಣ, ಸ್ವಯಂ ಚಾಲಿತ, ಏಕಗವಾಕ್ಷಿ ಸೌಲಭ್ಯಗಳ ಮೂಲಕ ಮಂಗಳೂರು ಮಹಾನಗರ ಪಾಲಿಕೆಯಲ್ಲಿ “ಪೇಪರ್‌ ಲೆಸ್‌ ಆಡಳಿತ’ವನ್ನು ಶೀಘ್ರದಲ್ಲಿ ಅನುಷ್ಠಾನಿಸಲಾಗುವುದು ಎಂದು ನಗರಾಭಿವೃದ್ಧಿ, ವಸತಿ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ತಿಳಿಸಿದರು.

ಪಾಲಿಕೆ ವ್ಯಾಪ್ತಿಯಲ್ಲಿ 472 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ, ಉದ್ಘಾಟನೆ ಹಾಗೂ ಪುರಭವನಕ್ಕೆ “ಕುದ್ಮಲ್  ರಂಗರಾವ್‌ ಪುರಭವನ’ ಎಂಬ ನಾಮ ಕರಣ ಕಾರ್ಯಗಳನ್ನು ಪುರಭವನದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಅವರು ನೆರವೇರಿಸಿ ಮಾತನಾಡಿದರು.

ವಿವಿಧ ಅನುದಾನಗಳ ಸಮರ್ಪಕ ಬಳಕೆಯೊಂದಿಗೆ ಸೂಚಿತ ಅವಧಿಯೊಳಗೆ ಕಾಮಗಾರಿಗಳನ್ನು ಪೂರ್ಣ  ಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿ ಜನ ಪರ ಸ್ಪಂದನೆ ರೂಢಿಸಿ ಕೊಳ್ಳ ಬೇಕೆಂದರು.  ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ಕೇಂದ್ರ, ರಾಜ್ಯ ಸರಕಾರಗಳಿಂದ 5 ವರ್ಷಕ್ಕೆ 1,000 ಕೋಟಿ ರೂ. ದೊರೆಯಲಿದೆ. ಯೋಜನೆ ಅನುಷ್ಠಾನಕ್ಕೆ ತನ್ನ ಅಧ್ಯಕ್ಷತೆಯ ಸಲಹಾ ಸಮಿತಿ ರಚನೆ ಯಾಗಿದೆ. ಮಂಗಳೂರು ದೇಶಕ್ಕೇ ಮಾದರಿ ಯಾಗಬೇಕೆಂದರು. ಪುರ ಭವನಕ್ಕೆ ಕುದ್ಮಲ್  ರಂಗರಾವ್‌ ನಾಮಕರಣ ಸೂಕ್ತವೆಂದರು.

ಪಂಪ್‌ವೆಲ್‌ ಶೀಘ್ರ ಪೂರ್ಣ: ನಳಿನ್‌
ವಿಶೇಷ ಅತಿಥಿಯಾಗಿದ್ದ ಸಂಸದ ನಳಿನ್‌ ಕುಮಾರ್‌ ಕಟೀಲು ಮಾತನಾಡಿ, ಪಂಪ್‌ವೆಲ್‌ ಜಂಕ್ಷನ್‌ ಕಾಮಗಾರಿಯ ಬಗ್ಗೆ ತಾನು ಕೇಂದ್ರ ಸಚಿವರ ಗಮನ ಸೆಳೆದಿದ್ದು ಮುಂದಿನ ಜನವರಿಯೊಳಗೆ ಕೆಲಸ ಪೂರ್ಣವಾಗಲಿದೆ ಎಂದರು. ರೈಲ್ವೇ ಇಲಾಖೆಯು ಮಹಾಕಾಳಿಪಡು ಮುಂತಾದ ಯೋಜನೆಗಳಿಗೆ ಸ್ಪಂದಿಸಿದೆ. ರಾಜ್ಯ ಸರಕಾರ, ಪಾಲಿಕೆಯ ಸಹಕಾರದಿಂದ ಅಗತ್ಯ ಕಾರ್ಯಗಳು ಕ್ಷಿಪ್ರವಾಗಿ ನಡೆಯಲು ಸಾಧ್ಯವೆಂದರು.

ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್‌ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರಿನ ಸಮಗ್ರ ಅಭಿವೃದ್ಧಿಗೆ ಇಂದಿನ ಯೋಜನೆಗಳು ನಿರ್ಣಾಯಕವೆಂದರು. ಮೇಯರ್‌ ಭಾಸ್ಕರ್‌ ಕೆ. ಕೃತಜ್ಞತೆ ವ್ಯಕ್ತಪಡಿಸಿದರು. ಉಪ ಮೇಯರ್‌ ಕೆ. ಮಹಮ್ಮದ್‌, ಪಾಲಿಕೆಯ ಸ್ಥಾಯೀ ಸಮಿತಿಗಳ ಅಧ್ಯಕ್ಷರಾದ ಟಿ. ಪ್ರವೀಣ್‌ಚಂದ್ರ ಆಳ್ವ, ನವೀನ್‌ ಆರ್‌. ಡಿ’ಸೋಜಾ, ಲತಾ ಸಾಲ್ಯಾನ್‌, ವಿಪಕ್ಷ ನಾಯಕ ಪ್ರೇಮಾನಂದ ಶೆಟ್ಟಿ, ಸ್ಥಳೀಯ ಕಾರ್ಪೊರೇಟರ್‌ ಕೆ. ದಿವಾಕರ ಮುಖ್ಯ ಅತಿಥಿಗಳಾಗಿದ್ದರು. ಉಪ ಆಯುಕ್ತ ರಂಗನಾಥ ನಾಯಕ್‌, ಇಇ ಕೆ. ಎಸ್‌. ಲಿಂಗೇಗೌಡ, ಎಇಇ ಎಸ್‌. ರವಿಶಂಕರ್‌ ಉಪಸ್ಥಿತರಿದ್ದರು. ಮುಖ್ಯ ಸಚೇತಕ ಎಂ. ಶಶಿಧರ ಹೆಗ್ಡೆ ಸ್ವಾಗತಿಸಿದರು. ಆಯುಕ್ತ ಮೊಹಮ್ಮದ್‌ ನಜೀರ್‌ ವಂದಿಸಿದರು. 

ಜತೆ ಜತೆಯಲಿ…
ಕುದ್ಮಲ್ ರಂಗರಾವ್‌ ಪುರಭವನದಲ್ಲಿ ಜರಗಿದ ಸಮಾರಂಭ ಕಾಂಗ್ರೆಸ್‌- ಬಿಜೆಪಿಯ ಜನಪ್ರತಿನಿಧಿಗಳು ಅಭಿವೃದ್ಧಿ ಯೋಜನೆಗಳಿಗೆ ಪರಸ್ಪರರ ಸ್ಪಂದನೆಯ ಶ್ಲಾಘನೆಯೊಂದಿಗೆ ಆದರ್ಶ ಮಂಗಳೂರು ನಗರ ನಿರ್ಮಾಣಕ್ಕೆ “ಜತೆ ಜತೆಯಲಿ’ ಸಾಗುವ ಭರವಸೆ ನೀಡಿತು! ಯೋಜನೆಗಳ ಕ್ರೆಡಿಟ್‌ ಪಡೆಯಲು ಒಮ್ಮೊಮ್ಮೆ ಮುಂದಾದರೂ ಅಭಿವೃದ್ಧಿಯಲ್ಲಿ ರಾಜಕೀಯವಿಲ್ಲ ಎಂದು ಖಾದರ್‌, ನಳಿನ್‌, ಭಾಸ್ಕರ್‌, ಕಾಮತ್‌ ಸ್ಪಷ್ಟಪಡಿಸಿದರು. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.