ಗೋ ಕಳವು ಆರೋಪಿಗಳ ಪರೇಡ್
ಖಡಕ್ ಎಚ್ಚರಿಕೆ ನೀಡಿದ ಕಮಿಷನರ್
Team Udayavani, Dec 10, 2019, 12:16 AM IST
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದನ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ 75ಕ್ಕೂ ಅಧಿಕ ಆರೋಪಿಗಳನ್ನು ಸೋಮವಾರ ಪೊಲೀಸ್ ಆಯುಕ್ತ ಡಾ| ಹರ್ಷಾ ಪಿ.ಎಸ್. ಅವರು ಜಿಲ್ಲಾ ಪೊಲೀಸ್ ಮೈದಾನಿನಲ್ಲಿ ಪರೇಡ್ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪೊಲೀಸ್ ಆಯುಕ್ತರು “ದನ ಕಳವು ಕೃತ್ಯ ಅಥವಾ ಇನ್ಯಾವುದೇ ಸಮಾಜ ಬಾಹಿರ ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲು ಎಲ್ಲ ಪೊಲೀಸ್ ಠಾಣೆಗಳ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಕ್ರಮ ದನ ಸಾಗಾಟ, ದನ ಕಳವು ಕೃತ್ಯದಲ್ಲಿ ಯಾರೇ ಭಾಗಿಯಾದರೂ ಇಲಾಖೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿದೆ. ನಮ್ಮ ಸಿಬಂದಿ ಯಾವುದೇ ಮುಲಾಜಿಲ್ಲದೆ ಸಂಬಂಧಪಟ್ಟ ಆರೋಪಿ ಗಳನ್ನು ಗಲ್ಲಿಗಲ್ಲಿಯಿಂದ ಬಂಧಿಸಲಿದ್ದಾರೆ’ ಎಂದು ಎಚ್ಚರಿಕೆ ನೀಡಿದರು.
ಇಲಾಖೆಯಿಂದ ರೌಡಿಶೀಟರ್ಗಳಿಗೆ ಮಾರ್ಗದರ್ಶನ ಮಾಡಿ ಸರಿದಾರಿಗೆ ತರಲು ಪ್ರಯತ್ನ ಮಾಡ ಲಾಗುತ್ತಿದ್ದು, ಈ ದಿಶೆಯಲ್ಲಿ ಹಲವು ಅವಕಾಶಗಳನ್ನು ನೀಡಲಾಗುತ್ತಿದೆ. ಇದರ ಮಧ್ಯೆಯೂ ಕೆಲವರು ತಮ್ಮ ಹಳೆಯ ಚಾಳಿಯನ್ನೇ ಮುಂದು ವರಿಸಿದರೆ ಕಾನೂನು ಪ್ರಕಾರ ಇಲಾಖೆ ಕಠಿನ ಕ್ರಮಕೈಗೊಳ್ಳಲಿದೆ ಎಂದರು.
ಡಿಸಿಪಿಗಳಾದ ಅರುಣಾಂಶುಗಿರಿ ಮತ್ತು ಲಕ್ಷ್ಮೀ ಗಣೇಶ್, ಎಸಿಪಿಗಳಾದ ಶ್ರೀನಿವಾಸ್ ಗೌಡ, ಕೋದಂಡರಾಮ, ಜಗದೀಶ್, ವಿನಯ್ ಗಾಂವ್ಕರ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್