ಪಾರೆಂಕಿ: ಕುಸಿದ ಮೋರಿ ತುರ್ತು ಕ್ರಮಕ್ಕೆ ಆಗ್ರಹ


Team Udayavani, Sep 5, 2017, 8:35 AM IST

parenki.jpg

ಮಡಂತ್ಯಾರು: ಪಾರೆಂಕಿ ಗ್ರಾಮದ ಶ್ರೀ ಮಹಿಷಮರ್ದಿನಿ ದೇವಸ್ಥಾನದ ದ್ವಾರದ ಬಳಿಯ ಮೋರಿ ಕುಸಿದಿರುವುದರಿಂದ ವಾಹನ ಸವಾರರಿಗೆ ಸಂಕಷ್ಟ ಎದುರಾಗಿದೆ.

ಮಡಂತ್ಯಾರು-ಕಕ್ಯಪದವು ಮುಖ್ಯ ರಸ್ತೆಯಲ್ಲೇ ಇದೂ ಬರುತ್ತದೆ. ಈಗಾಗಲೇ ಮುಖ್ಯರಸ್ತೆ ಹದಗೆಟ್ಟಿದ್ದು, ಡಾಮರು ಕಿತ್ತುಹೋಗಿ ವಾಹನ ಸಂಚಾರಕ್ಕೆ ಅಯೋಗ್ಯವಾಗಿದೆ. ಹಲವು ಹೊಂಡಗಳು ನಿರ್ಮಾಣವಾಗಿ ನೀರು ನಿಲ್ಲುತ್ತಿದೆ. ಇದೀಗ ಮೋರಿ ಕುಸಿದ ಪರಿಣಾಮ ಸಮಸ್ಯೆ ಇನ್ನಷ್ಟು ಬಿಗಡಾಯಿಸಿದೆ.

ಕಿರಿದಾದ ರಸ್ತೆ
ದೇವಸ್ಥಾನದ ದ್ವಾರದ ಬಳಿ ರಸ್ತೆ ಕಿರಿದಾಗಿದೆ. ವಾಹನಗಳು ತಮ್ಮ ಎದುರಿಗೆ ಬರುವವರಿಗೆ ಬದಿಯನ್ನು ಬಿಡಲು ಸಾಕಷ್ಟು ಜಾಗವಿಲ್ಲ. ರಸ್ತೆ ಬದಿ ಆಳವಾದ ಚರಂಡಿ ಇದ್ದು ತಡೆಬೇಲಿಯೂ ಇಲ್ಲ. ವಾಹನಕ್ಕೆ ಬದಿ ಬಿಡುವ ಸಂದರ್ಭದಲ್ಲಿ ಚರಂಡಿಗೆ ಬೀಳುವ ಸ್ಥಿತಿ ಇದೆ ಎನ್ನುತ್ತಾರೆ ಸ್ಥಳೀಯ ವಾಹನ ಚಾಲಕರು.

ಮಡಂತ್ಯಾರಿನಿಂದ ಪಾರೆಂಕಿ, ಪಾಂಡವರ ಕಲ್ಲು, ಕಜೆಕಾರು, ಕಕ್ಯಪದವು ರಸ್ತೆಯಲ್ಲಿ ನಿತ್ಯ ವಾಹನ ಸಂಚಾರ ಹೆಚ್ಚಿದ್ದು, ಆಟೋ ರಿಕ್ಷಾ ಮತ್ತು ಜೀಪುಗಳ ಓಡಾಟವೂ ಹೆಚ್ಚಿದೆ. ಬೆಳಗ್ಗೆ ಮತ್ತು ಸಂಜೆ ಶಾಲಾ ಮಕ್ಕಳಿಂದ ತುಂಬಿರುವ ಬಸ್‌ಗಳು ಈ ಮೋರಿಯ ಮೇಲೆ ಹಾದುಹೋಗಬೇಕಿದ್ದು ಅಪಾಯವನ್ನು ಆಹ್ವಾನಿಸುತ್ತಿವೆ.

ತಡೆಗೋಡೆ ಇಲ್ಲ
ಕಕ್ಯಪದವಿಗೆ ಮುಖ್ಯ ರಸ್ತೆಯಾಗಿದ್ದು ಸಾವಿರಾರು ಮಂದಿ ಓಡಾಡುತ್ತಿದ್ದಾರೆ. ಆದರೂ ಮೋರಿಯ ಎರಡೂ ಬದಿ ತಡೆಗೋಡೆ ನಿರ್ಮಿಸಿಲ್ಲ. ಜಿಲ್ಲಾ ಪಂ.ರಸ್ತೆಯಾಗಿದ್ದು ಮೇಲ್ದರ್ಜೆಗೇರಿಸಿ ಡಾಮರು ಹಾಕುವುದಾಗಿ ಶಾಸಕರು ಹೇಳಿದ್ದಾರೆ. ಆದರೆ ರಸ್ತೆ ಹದಗೆಟ್ಟು ಮಳೆಗಾಲದಲ್ಲಿ ಸಂಕಷ್ಟ ಅನುಭವಿಸಿದ್ದರು. ಈಗ ಮೋರಿ ಕುಸಿತಗೊಂಡಿದ್ದು, ಕೂಡಲೇ ಇದನ್ನು ಸರಿಪಡಿಸಿ ಅವಘಡವಾಗುವುದನ್ನು ತಪ್ಪಿಸಬೇಕು ಎಂಬುದು ಗ್ರಾಮಸ್ಥರ ಆಗ್ರಹ.

ಬೆರಳು ತೋರಿಸುತ್ತದೆ ಪಂಚಾಯತ್‌ಗಳು
ಜಿ.ಪಂ. ರಸ್ತೆಯ ಅಭಿವೃದ್ಧಿ ಬಗ್ಗೆ  ಜಿ.ಪಂ.ಸದಸ್ಯರಲ್ಲಿ ಕೇಳಿದರೆ, ನಮ್ಮಲ್ಲಿ ಅನುದಾನ ಇಲ್ಲ. ಸರಕಾರ 13ನೇ ಹಣಕಾಸು ಯೋಜನೆ ಪರಿವರ್ತನೆಯಾಗಿ 14ನೇ ಹಣಕಾಸು ಮೂಲಕ ಪಂಚಾಯತ್‌ಗೆ ನೀಡುತ್ತದೆ ಎನ್ನುತ್ತಾರೆ. ಪಂಚಾಯತ್‌ ಅಧಿಕಾರಿಗಳಲ್ಲಿ ಕೇಳಿದರೆ ಅದು ಜಿ.ಪಂ. ರಸ್ತೆ. ನಮ್ಮಲ್ಲಿ ಅನುದಾನ ಇಲ್ಲ ಎನ್ನುತ್ತಿರುವುದು ಗ್ರಾಮಸ್ಥರನ್ನು ಗೊಂದಲದಲ್ಲಿ ಮುಳುಗಿಸಿದೆ.

– ಪ್ರಮೋದ್‌ ಬಳ್ಳಮಂಜ

ಟಾಪ್ ನ್ಯೂಸ್

siddanna

Eknath Shinde ಭ್ರಮೆಯಲ್ಲಿದ್ದಾರೆ, ನಮ್ಮ ಶಾಸಕರು ಮಾರಾಟವಾಗಲು ಸಿದ್ದರಿಲ್ಲ: ಸಿದ್ದರಾಮಯ್ಯ

Kharge (2)

Modi ಗೆದ್ದರೆ ಭವಿಷ್ಯದಲ್ಲಿ ಚುನಾವಣೆಗಳೇ ಇರುವುದಿಲ್ಲ: ಖರ್ಗೆ ವಾಗ್ದಾಳಿ

ಟೀಂ ಇಂಡಿಯಾದಲ್ಲೂ ರೋಹಿತ್ ಕೆರಿಯರ್ ಮುಗಿಸಿದ್ರಾ ಹಾರ್ದಿಕ್ ಪಾಂಡ್ಯ? ಏನಿದು ವರದಿ

ಟೀಂ ಇಂಡಿಯಾದಲ್ಲೂ ರೋಹಿತ್ ಕೆರಿಯರ್ ಮುಗಿಸಿದ್ರಾ ಹಾರ್ದಿಕ್ ಪಾಂಡ್ಯ? ಏನಿದು ವರದಿ

cbsc

CBSE Results:10ನೇ ತರಗತಿಯಲ್ಲಿ 93%,12 ರಲ್ಲಿ ಶೇ 87.98 ವಿದ್ಯಾರ್ಥಿಗಳು ಉತ್ತೀರ್ಣ

police

Vijayapura: ಕಾಣೆಯಾಗಿದ್ದ ಮೂವರು ಮಕ್ಕಳು ಶವವಾಗಿ ಪತ್ತೆ

MLC Election; ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಪಕ್ಷೇತರ ಸ್ಪರ್ಧೆಗೆ ರಘುಪತಿ ಭಟ್ ನಿರ್ಧಾರ

MLC Election; ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಪಕ್ಷೇತರ ಸ್ಪರ್ಧೆಗೆ ರಘುಪತಿ ಭಟ್ ನಿರ್ಧಾರ

ಶೀಘ್ರದಲ್ಲೇ ಮದುವೆಯಾಗಲಿದ್ದೇನೆ… ಕೊನೆಗೂ ಮದುವೆ ವಿಚಾರದಲ್ಲಿ ಮೌನ ಮುರಿದ ರಾಹುಲ್

Rahul Gandhi: ಶೀಘ್ರದಲ್ಲೇ ಮದುವೆಯಾಗಲಿದ್ದೇನೆ… ಅಭಿಮಾನಿಯ ಪ್ರಶ್ನೆಗೆ ರಾಹುಲ್ ಉತ್ತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ವರ್ಷದ ಮೊದಲ ಮಳೆ; ಕುದ್ರೆಬೆಟ್ಟು ಹೆದ್ದಾರಿಯಲ್ಲಿ ಕಾರು ಪಲ್ಟಿ

Bantwal ವರ್ಷದ ಮೊದಲ ಮಳೆ; ಕುದ್ರೆಬೆಟ್ಟು ಹೆದ್ದಾರಿಯಲ್ಲಿ ಕಾರು ಪಲ್ಟಿ

accident

Sakaleshpura ಪಿಕಪ್‌ ಪಲ್ಟಿ: ಕಕ್ಯಪದವಿನ ಯುವಕ ಸಾವು

ಕರಾವಳಿಗೆ ಮುಂದುವರಿದ ಪ್ರವಾಸಿಗರ ಪ್ರವಾಹ; ದೇಗುಲ, ಬೀಚ್‌ಗಳಲ್ಲಿ ಜನಸಂದಣಿ

ಕರಾವಳಿಗೆ ಮುಂದುವರಿದ ಪ್ರವಾಸಿಗರ ಪ್ರವಾಹ; ದೇಗುಲ, ಬೀಚ್‌ಗಳಲ್ಲಿ ಜನಸಂದಣಿ

Puttur ಬುದ್ಧಿಮಾಂದ್ಯ ಯುವಕನಿಂದ ಅಡ್ಡಾದಿಡ್ಡಿ ಕಾರು ಚಾಲನೆ: ನಾಲ್ಕೈದು ವಾಹನಗಳಿಗೆ ಢಿಕ್ಕಿ

Puttur ಬುದ್ಧಿಮಾಂದ್ಯ ಯುವಕನಿಂದ ಅಡ್ಡಾದಿಡ್ಡಿ ಕಾರು ಚಾಲನೆ: ನಾಲ್ಕೈದು ವಾಹನಗಳಿಗೆ ಢಿಕ್ಕಿ

Bantwal ಬಿ.ಸಿ.ರೋಡು: ಅಕ್ರಮ ಮರಳು ಸಾಗಾಟ ವಶBantwal ಬಿ.ಸಿ.ರೋಡು: ಅಕ್ರಮ ಮರಳು ಸಾಗಾಟ ವಶ

Bantwal ಬಿ.ಸಿ.ರೋಡು: ಅಕ್ರಮ ಮರಳು ಸಾಗಾಟ ವಶ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Bidar: ಕಳ್ಳತನವಾಗಿದ್ದ 52 ಮೊಬೈಲ್ ಗಳನ್ನು ಪತ್ತೆ ಮಾಡಿದ ಜಿಲ್ಲಾ ಪೊಲೀಸ್

Bidar: ಕಳ್ಳತನವಾಗಿದ್ದ 52 ಮೊಬೈಲ್ ಗಳನ್ನು ಪತ್ತೆ ಮಾಡಿದ ಜಿಲ್ಲಾ ಪೊಲೀಸ್

siddanna

Eknath Shinde ಭ್ರಮೆಯಲ್ಲಿದ್ದಾರೆ, ನಮ್ಮ ಶಾಸಕರು ಮಾರಾಟವಾಗಲು ಸಿದ್ದರಿಲ್ಲ: ಸಿದ್ದರಾಮಯ್ಯ

Davangere: ಪಕ್ಷ ಗಳ ಗೆಲುವಿನ ಮತ ಲೆಕ್ಕಾಚಾರ ಚುನಾವಣಾ ಫಲಿತಾಂಶದ ಕಾತರ

Davangere: ಪಕ್ಷ ಗಳ ಗೆಲುವಿನ ಮತ ಲೆಕ್ಕಾಚಾರ ಚುನಾವಣಾ ಫಲಿತಾಂಶದ ಕಾತರ

back benchers kannada movie

Kannada Cinema; ಟೀಸರ್ ನಲ್ಲಿ ‘ಬ್ಯಾಕ್ ಬೆಂಚರ್ಸ್’ ನಗೆ ಹಬ್ಬ

Kharge (2)

Modi ಗೆದ್ದರೆ ಭವಿಷ್ಯದಲ್ಲಿ ಚುನಾವಣೆಗಳೇ ಇರುವುದಿಲ್ಲ: ಖರ್ಗೆ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.