ಪರೇಶ್‌ ಮೇಸ್ತ ಪ್ರಕರಣ ಖಂಡಿಸಿ ಪ್ರತಿಭಟನೆ


Team Udayavani, Dec 21, 2017, 9:35 AM IST

21-Dec-1.jpg

ಸ್ಟೇಟ್‌ಬ್ಯಾಂಕ್‌ : ಪರೇಶ್‌ ಮೇಸ್ತ ಸಾವು ಸಹಜ ಸಾವು ಅಲ್ಲ; ಆತನನ್ನು ಜೆಹಾದಿ ಮನೋಭಾವದ ಕೆಲವರು ಕ್ರೂರವಾಗಿ ಕೊಲೆ ಮಾಡಿದ್ದಾರೆ. ಅಪಘಾತ ಪ್ರಕರಣವೊಂದು ಕೊಲೆಯಲ್ಲಿ ಪರ್ಯಾವಸಾನಗೊಂಡಿದೆ ಎಂದು ಆರೋಪಿಸಿದ ವಿಶ್ವಹಿಂದೂ ಪರಿಷತ್‌ ಜಿಲ್ಲಾಧ್ಯಕ್ಷ ಜಗದೀಶ್‌ ಶೇಣವ, ಈ ಬಗ್ಗೆ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಹೊನ್ನಾವರದಲ್ಲಿ ಡಿ. 6ರಂದು ನಡೆದ ಪರೇಶ್‌ ಮೇಸ್ತ ನಿಗೂಢ ಸಾವು ಪ್ರಕರಣದ ಆರೋಪಿಗಳ ಶೀಘ್ರ ಬಂಧನಕ್ಕೆ ಆಗ್ರಹಿಸಿ ಹಿಂದೂ ಹಿತರಕ್ಷಣಾ ಸಮಿತಿ ಮಂಗಳೂರು ವತಿಯಿಂದ ಬುಧವಾರ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆದ ಪ್ರತಿಭಟನ ಸಭೆಯಲ್ಲಿ ಅವರು ಮಾತನಾಡಿದರು.

ಪ್ರಿಯಾಂಕಾ ಪತ್ತೆಗೆ ವಾರದ ಗಡುವು
ಮೂಡಬಿದಿರೆ ದರೆಗುಡ್ಡೆಯಲ್ಲಿ ಲವ್‌ ಜಿಹಾದ್‌ಗೆ ಬಲಿಯಾಗಿದ್ದಾಳೆ ಎನ್ನಲಾದ ಯುವತಿ ಪ್ರಿಯಾಂಕಾಳನ್ನು ಪೊಲೀಸರು ವಾರದೊಳಗೆ ಪತ್ತೆ ಹಚ್ಚಬೇಕು. ತಪ್ಪಿದಲ್ಲಿ ಮೂಡಬಿದಿರೆಯಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದರು. ಬಳಿಕ ಇಡೀ ಜಿಲ್ಲೆಗೆ ಪ್ರತಿಭಟನೆಯನ್ನು ವಿಸ್ತರಿಸಲಾಗುವುದು ಎಂದು ಜಗದೀಶ್‌ ಶೇಣವ ಹೇಳಿದರು.

ಮುಸ್ಲಿಂ ಸಮಾಜದಲ್ಲಿ ಇಂತಹ ಪ್ರಕರಣವೇನಾದರೂ ನಡೆದರೆ ಪೊಲೀಸರು 24 ಗಂಟೆಯೊಳಗೆ ಆರೋಪಿಗಳನ್ನು ಹುಡುಕಿ ತರುತ್ತಾರೆ. ಹಿಂದೂ ಸಮಾಜಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಾತ್ರ ಬೇಗನೆ ಪತ್ತೆಯಾಗುವುದಿಲ್ಲ ಏಕೆ ಎಂದು ಪ್ರಶ್ನಿಸಿದ ಅವರು, ಜಿಲ್ಲೆಯಲ್ಲಿ ಶಾಂತಿ, ಸಾಮರಸ್ಯ ನೆಲೆಸಬೇಕಿದ್ದರೆ ಐಸಿಸ್‌/ ಜೆಹಾದಿ ಮನೋಭಾವದ ವ್ಯಕ್ತಿಗಳನ್ನು ಮುಸ್ಲಿಮರೇ ಬಹಿಷ್ಕರಿಸಬೇಕು ಎಂದರು.

ಸರಕಾರ ರಾಜಧರ್ಮ ಪಾಲಿಸಲಿ: ಡಾ| ವಾಮನ ಶೆಣೈ
ಸರಕಾರ ರಾಜ ಧರ್ಮ ಪಾಲಿಸಿ ಸಮಾಜದ ಎಲ್ಲ ವರ್ಗಗಳ ಜನರನ್ನು ಸಮಾನವಾಗಿ ಕಾಣಬೇಕು. ಪರೇಶ್‌ ಮೇಸ್ತ ಸಾವು ಪ್ರಕರಣದಲ್ಲಿ ನ್ಯಾಯ ಸಿಗಬೇಕು ಎಂದು ಆರೆಸ್ಸೆಸ್‌ ಪ್ರಾಂತ ಸಹ ಸಂಘ ಚಾಲಕ ಡಾ| ವಾಮನ ಶೆಣೈ ಆಗ್ರಹಿಸಿದರು. ಎಲ್ಲರೂ ಕಾನೂನನ್ನು ಪಾಲಿಸಬೇಕು ಎಂದು ಹೇಳುವ ಸರಕಾರವೂ ಕಾನೂನಿನ ಪ್ರಕಾರ ನಡೆದುಕೊಳ್ಳುವುದು ಅಗತ್ಯ. ಒಂದು ಧರ್ಮದವರನ್ನು ಓಲೈಸುತ್ತಾ ಇನ್ನೊಂದು ಧರ್ಮದವರನ್ನು ತುಳಿಯುವ ಕೆಲಸ ಮಾಡಬಾರದು ಎಂದರು.

ಷಂಡ ಸರಕಾರ: ಕಸ್ತೂರಿ ಪಂಜ
 ರಾಜ್ಯದಲ್ಲಿ ‘ಷಂಡ’ ಸರಕಾರ ಅಧಿಕಾರದಲ್ಲಿದ್ದು, ಗೃಹ ಸಚಿವರು ದುರ್ಬಲರಾಗಿದ್ದಾರೆ. ಹಿಂದೂಗಳ ಮೇಲೆ ನಡೆಯುವ ದೌರ್ಜನ್ಯವನ್ನು ತಡೆಯಲು ಕ್ರಮ ಕೈಗೊಳ್ಳುತ್ತಿಲ್ಲ. ಪೊಲೀಸರ ಕೈ ಕಟ್ಟಿ ಹಾಕಿದ್ದು, ಸರಕಾರದ ಆಣತಿಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಜಿಲ್ಲಾ ಪಂಚಾಯತ್‌ ಉಪಾಧ್ಯಕ್ಷೆ ಕಸ್ತೂರಿ ಪಂಜ, ಹಿಂದೂ ದಮನ ನೀತಿ ಮುಂದುವರಿದರೆ ಹಿಂದೂ ಮಹಿಳೆಯರೇ ಪ್ರತಿಭಟನೆಗೆ ಸಜ್ಜಾಗಲಿದ್ದಾರೆ ಎಂದರು.

‘ಕಣ್ಣಿಗೆ ಮಣ್ಣೆರಚುವ ಯತ್ನ’
ಸರಕಾರ ಪರೇಶ್‌ ಮೇಸ್ತ ಸಾವು ಪ್ರಕರಣವನ್ನು ಸಿಬಿಐಗೆ ವಹಿಸುವ ಮೂಲಕ ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡಿದೆ. ಸಿಬಿಐಗೆ ವಹಿಸಿ ವಾರ ಕಳೆದರೂ ತನಿಖಾ ಪ್ರಕ್ರಿಯೆ ಆರಂಭವಾಗಿಲ್ಲ. ಆದ್ದರಿಂದ ತನಿಖೆಯನ್ನು ಎನ್‌ .ಐ.ಎ. ಗೆ ವಹಿಸಬೇಕೆಂದು ವಿಧಾನ ಪರಿಷತ್‌ ನ ಮಾಜಿ ಅಧ್ಯಕ್ಷ ಕೆ. ಮೋನಪ್ಪ ಭಂಡಾರಿ ಆಗ್ರಹಿಸಿದರು.

 ಶೀಘ್ರ ಪತ್ತೆ ಹಚ್ಚಿ: ಸತ್ಯಜಿತ್‌
ಪರೇಶ್‌ ಸಾವಿಗೆ ಕಾರಣರಾದವರನ್ನು ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸಬೇಕು ಎಂದು ಬಿಜೆಪಿ ಹಿಂದುಳಿದ ವರ್ಗಗಳ ಸಮಿತಿ ಕಾರ್ಯದರ್ಶಿ ಸತ್ಯಜಿತ್‌ ಸುರತ್ಕಲ್‌ ಆಗ್ರಹಿಸಿದರು. ಈ ಪ್ರಕರಣದಲ್ಲಿ ವೈದ್ಯಕೀಯ ವ್ಯವಸ್ಥೆಯನ್ನು ದುರುಪಯೋಗಿಸಿ ತನಿಖೆಯ ಹಾದಿ ತಪ್ಪಿಸಲು ಯತ್ನಿಸಲಾಗಿದೆ ಎಂದು ಆರೋಪಿಸಿದರು.

ಬಜರಂಗ ಜಿಲ್ಲಾ ಸಂಚಾಲಕ ಭುಜಂಗ ಕುಲಾಲ, ಆರೆಸ್ಸೆಸ್‌ ಮಂಗಳೂರು ಮಹಾನಗರ ಸಹ ಸಂಘ ಚಾಲಕ ಸುನೀಲ್‌ ಆಚಾರ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

2-thirthahalli

Thirthahalli: ಬಸ್-ಲಾರಿ ಡಿಕ್ಕಿ; ಕೆಲವರಿಗೆ ಸಣ್ಣಪುಟ್ಟ ಗಾಯ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿಯಲ್ಲಿ ಇಲ್ಲ ವಾಡಿಕೆ ಮಳೆ!

Rain ಕರಾವಳಿಯಲ್ಲಿ ಇಲ್ಲ ವಾಡಿಕೆ ಮಳೆ!

Mangaluru ಬ್ರೇಕ್‌ ಸಮಸ್ಯೆ; ಬಸ್‌ ಚಾಲಕನ ಸಮಯಪ್ರಜ್ಞೆ; ತಪ್ಪಿದ ದುರಂತ

Mangaluru ಬ್ರೇಕ್‌ ಸಮಸ್ಯೆ; ಬಸ್‌ ಚಾಲಕನ ಸಮಯಪ್ರಜ್ಞೆ; ತಪ್ಪಿದ ದುರಂತ

Mangaluru ದ್ವಿಚಕ್ರ ವಾಹನ ಕಳವು; ದೂರು ದಾಖಲು

Mangaluru ದ್ವಿಚಕ್ರ ವಾಹನ ಕಳವು; ದೂರು ದಾಖಲು

Nalin Kumar Kateel ವಿರುದ್ಧ ಸುಳ್ಳು ಸಂದೇಶ: ಕ್ರಮಕ್ಕೆ ಬಿಜೆಪಿ ಒತ್ತಾಯ

Nalin Kumar Kateel ವಿರುದ್ಧ ಸುಳ್ಳು ಸಂದೇಶ: ಕ್ರಮಕ್ಕೆ ಬಿಜೆಪಿ ಒತ್ತಾಯ

Mangaluru ಗಾಂಜಾ ಸೇವನೆ: ಯುವಕನ ಬಂಧನ

Mangaluru ಗಾಂಜಾ ಸೇವನೆ: ಯುವಕನ ಬಂಧನ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

2-thirthahalli

Thirthahalli: ಬಸ್-ಲಾರಿ ಡಿಕ್ಕಿ; ಕೆಲವರಿಗೆ ಸಣ್ಣಪುಟ್ಟ ಗಾಯ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.