ಬೆಳ್ಳಾರೆ: ಪಾರ್ಕಿಂಗ್‌ ಪೀಕಲಾಟ, ಚರಂಡಿ ಸಮಸ್ಯೆ


Team Udayavani, Aug 10, 2018, 2:05 AM IST

bellare-9-8.jpg

ಬೆಳ್ಳಾರೆ: ಸುಳ್ಯ ತಾಲೂಕಿನ ದೊಡ್ಡ ಪಟ್ಟಣಗಳ ಸಾಲಿನಲ್ಲಿ ಸುಳ್ಯದ ನಂತರದ ಸ್ಥಾನ ಬೆಳ್ಳಾರೆಗಿದೆ. ದೊಡ್ಡ ಪಟ್ಟಣಗಳಿಗೆ ಸ್ಪರ್ಧೆ ನೀಡುವಂತೆ ಬಹು ವೇಗವಾಗಿ ವಾಣಿಜ್ಯ ನಗರವಾಗಿ ರೂಪುಗೊಳ್ಳತೊಡಗಿದೆ. ಸುತ್ತಮುತ್ತಲಿನ ಊರುಗಳಾದ ಚೊಕ್ಕಾಡಿ-ಕುಕ್ಕುಜಡ್ಕ, ಪಂಜ, ಸುಬ್ರಹ್ಮಣ್ಯ, ಬಾಳಿಲ, ಐವರ್ನಾಡು, ಪಾಲ್ತಾಡು ಸಹಿತ ಅನೇಕ ಗ್ರಾಮಗಳ ಜನರು ಬೆಳ್ಳಾರೆಯನ್ನೇ ತಮ್ಮ ವ್ಯವಹಾರಕ್ಕೆ ಅವಲಂಬಿಸಿದ್ದಾರೆ. ಆದರೆ, ಈ ಪಟ್ಟಣದ ಪ್ರಮುಖ ಸಮಸ್ಯೆ – ಪಾರ್ಕಿಂಗ್‌ ವ್ಯವಸ್ಥೆ.

ದಿನ ಕಳೆದಂತೆ ಹೈಟೆಕ್‌ ಪಟ್ಟಣಗಳಿಗೆ ಸಮಾನವಾದ ವೇಗದಲ್ಲಿ ಬೆಳ್ಳಾರೆಯೂ ಬೆಳೆಯುತ್ತಿದೆ. ಪ್ರತಿಯೊಂದಕ್ಕೂ ಸುಳ್ಯದತ್ತ ಮುಖ ಮಾಡುತ್ತಿದ್ದ ಜನ ಹತ್ತಿರದಲ್ಲೇ ಪರ್ಯಾಯ ವ್ಯವಸ್ಥಗಳಿರುವುದರಿಂದ ಬೆಳ್ಳಾರೆ ಪೇಟೆಗೆ ಬರುತ್ತಿದ್ದಾರೆ. ಪ್ರಯಾಣಿಕರು, ಗ್ರಾಹಕರ ಸಂಖ್ಯೆ ಬೆಳೆದಂತೆ ವಾಹನ ದಟ್ಟಣೆಯೂ ಹೆಚ್ಚುತ್ತಿದೆ. ಪಟ್ಟಣದ ಯಾವ ಪ್ರದೇಶದಲ್ಲೂ ಸರಿಯಾದ ವಾಹನ ವ್ಯವಸ್ಥೆಯಿಲ್ಲದೆ ವಾಹನಗಳನ್ನು ರಸ್ತೆಯ ಮೇಲೆಯೇ ಅಡ್ಡಾದಿಡ್ಡಿಯಾಗಿ ನಿಲ್ಲಿಸಲಾಗುತ್ತಿದೆ. ಇದರಿಂದಾಗಿ ಬೆಳ್ಳಾರೆ ಪೇಟೆಯಲ್ಲಿ ಸುಗಮ ಸಂಚಾರಕ್ಕೆ ಬಹಳ ತೊಡಕಾಗುತ್ತಿದೆ. ಹಲವಾರು ಬಾರಿ ದೊಡ್ಡ ಪಟ್ಟಣಗಳಂತೆ ಇಲ್ಲಿಯೂ ಗಂಟೆಗಟ್ಟಲೆ ಟ್ರಾಫಿಕ್‌ ಜಾಮ್‌ ಕೂಡ ಆಗುತ್ತಿರುತ್ತದೆ. ವಾಹನ ಸವಾರರಿಗೆ ಅಪಘಾತಗಳು ತಪ್ಪಿದ್ದಲ್ಲ. ಇವುಗಳನ್ನೆಲ್ಲ ಸಂಬಾಳಿಸುತ್ತಾ ದಿನದ ಅಂತ್ಯಕ್ಕೆ ಪೊಲೀಸರು ಬಸವಳಿದು ಹೋಗುತ್ತಾರೆ.

ಅಸಮರ್ಪಕ ಚರಂಡಿ ವ್ಯವಸ್ಥೆ
ಬೆಳ್ಳಾರೆ ಪಂಚಾಯತ್‌ ನ ನಿರ್ಲಕ್ಷ್ಯವೂ ಇಲ್ಲಿಯ ಕೆಳಪೇಟೆಯಲ್ಲಿ ಅವ್ಯವಸ್ಥೆಯಿಂದ ಕೂಡಿದ ಚರಂಡಿಯಿಂದ ಗೋಚರಕ್ಕೆ ಬರುತ್ತದೆ. ಇಲ್ಲಿ ಮಲಿನವಾದ ಚರಂಡಿಯ ನೀರು ರಭಸದ ಮಳೆ ಬಂದರೆ ರಸ್ತೆಯ ಮೇಲೆಯೇ ಹರಿಯುತ್ತದೆ. ಇದರಿಂದಾಗಿ ಸಾಂಕ್ರಾಮಿಕ ಕಾಯಿಲೆಗಳ ಭೀತಿ ಬೆಳ್ಳಾರೆಯ ಜನತೆಯನ್ನು ಬಾಧಿಸುತ್ತಿದೆ. ಚರಂಡಿಯಿಂದ ಮುಖ್ಯರಸ್ತೆ ಸಾಕಷ್ಟು ಎತ್ತರದಲ್ಲಿದೆ. ಚರಂಡಿಗಳ ಬದಿಯಲ್ಲಿ ಕಲ್ಲುಗಳ ತಡೆಗೋಡೆ ಇಲ್ಲದೆ ಅದರೊಳಗೆ ಮಕ್ಕಳು, ದ್ವಿಚಕ್ರ ವಾಹನಗಳು ಜಾರಿ ಬೀಳುವ ಅಪಾಯವಿದೆ.

ಸುಳ್ಯದಂತೆ ಬೆಳ್ಳಾರೆಯಲ್ಲಿಯೂ ಪಾರ್ಕಿಂಗ್‌ ವ್ಯವಸ್ಥೆ ಸುಧಾರಣೆಗೆ ಕ್ರಮ ಕೈಗೊಳ್ಳಬೇಕಿದೆ. ರಸ್ತೆಯ ಇಕ್ಕೆಲಗಳಲ್ಲಿ ದಿನಕ್ಕೆ ಒಂದು ಬದಿಯಂತೆ ಮೇಲಿನ ಪೇಟೆಯಿಂದ ಕೆಳಗಿನ ಪೇಟೆಯ ವರೆಗೆ ವಾಹನಗಳನ್ನು ನಿಲ್ಲಿಸುವ ನಿಯಮ ರೂಪಿಸಬೇಕಿದೆ. ಪೊಲೀಸ್‌ ಇಲಾಖೆಯ ಸಹಕಾರದೊಂದಿಗೆ ಬೆಳ್ಳಾರೆ ಗ್ರಾ.ಪಂ. ಇದನ್ನು ಜಾರಿಗೆ ತರಬೇಕು. ಈ ಮೂಲಕ ಟ್ರಾಫಿಕ್‌ ಜಾಮ್‌ ನಿಯಂತ್ರಿಸಬೇಕು. ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಪಾರ್ಕಿಂಗ್‌ಗೆ ಜಾಗ
ನಾವು ಹಲವು ಬಾರಿ ಸಭೆ ಕರೆದಿದ್ದು, ಸಮಸ್ಯೆ ನಿವಾರಣೆಗೆ ಹಲವು ಯೋಜನೆಗಳನ್ನು ರೂಪಿಸಿದ್ದೇವೆ. ವಾಹನ ಪಾರ್ಕಿಂಗ್‌ ಗೆ ಸ್ಥಳ ಗೊತ್ತು ಮಾಡಿದ್ದು, ದೊಡ್ಡ ವಾಹನಗಳನ್ನು ಅಲ್ಲಿಯೇ ನಿಲ್ಲಿಸುವಂತೆ ಮಾಡಲು ಯೋಜನೆ ರೂಪಿಸುತ್ತಿದ್ದೇವೆ. ದ್ವಿಚಕ್ರ-ನಾಲ್ಕು ಚಕ್ರದ ವಾಹಗಳನ್ನು ದಿನಕ್ಕೊಂದು ಬದಿಯಂತೆ ನಿಲ್ಲಿಸುವಂತೆ ಮಾಡಲಾಗುತ್ತದೆ. ಚರಂಡಿ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲು ಸೂಚಿಸಲಾಗುತ್ತದೆ. 
– ಶಕುಂತಳಾ ನಾಗರಾಜ್‌, ಬೆಳ್ಳಾರೆ ಗ್ರಾ.ಪಂ. ಅಧ್ಯಕ್ಷರು

ದಂಡ, ಎಚ್ಚರಿಕೆ
ಇರುವುದರಲ್ಲಿಯೇ ಹೊಂದಿಕೊಂಡು ನಮ್ಮ ಶಕ್ತಿ ಮೀರಿ ಸಂಚಾರ ಹಾಗೂ ವಾಹನ ದಟ್ಟಣೆಯನ್ನು ನಿಯಂತ್ರಿಸುತ್ತಿದ್ದೇವೆ. ಅಡ್ಡಾದಿಡ್ಡಿಯಾಗಿ ಪಾರ್ಕಿಂಗ್‌ ಮಾಡುವವರಿಗೆ ದಂಡ ವಿಧಿಸಿ, ಎಚ್ಚರಿಕೆ ನೀಡುವ ಮೂಲಕ ಇದೀಗ ತಕ್ಕಮಟ್ಟಿಗೆ ಹದ್ದುಬಸ್ತಿನಲ್ಲಿ ಇಡಲಾಗಿದೆ. ಇದಕ್ಕಾಗಿ ಹಲವಾರು ಯೋಜನೆಗಳು ರೂಪುಗೊಂಡಿದ್ದು ಜಾರಿಗೆ ಬಂದರೆ ಟ್ರಾಫಿಕ್‌ ಹತೋಟಿಗೆ ತರಬಹುದು. 
– ಪೊಲೀಸ್‌ ಅಧಿಕಾರಿ, ಬೆಳ್ಳಾರೆ

— ಬಾಲಚಂದ್ರ ಕೋಟೆ

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

2-kadaba

Kadaba ತಾಲೂಕು ಪಂಚಾಯತ್ ಕಚೇರಿಗೆ ಬೆಳ್ಳಂಬೆಳ್ಳಗೆ ಲೋಕಾಯುಕ್ತ ದಾಳಿ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.