ಸರಕಾರಿ ಕಚೇರಿಗಳ ಮುಂಭಾಗ ರಸ್ತೆಯಲ್ಲೇ ವಾಹನ ನಿಲುಗಡೆ


Team Udayavani, Jun 26, 2018, 3:45 AM IST

car-parking-25-6.jpg

ನಗರ: ನಗರದ ಹೃದಯ ಭಾಗದ ಕಿಲ್ಲೆ ಮೈದಾನದ ಸುತ್ತಲಿನ ರಸ್ತೆಗಳಲ್ಲಿ ವಾಹನಗಳನ್ನು ಪಾರ್ಕಿಂಗ್‌ ಮಾಡುವ ಪ್ರವೃತ್ತಿ ಮತ್ತೆ ಉಲ್ಬಣಿಸಿದೆ. ಸರಕಾರಿ ಕಚೇರಿಗಳಿರುವ ಈ ಪರಿಸರದಲ್ಲಿ ಜನರ ಓಡಾಟವೂ ಅಧಿಕವಾಗಿದ್ದು, ರಸ್ತೆಯ ಎರಡೂ ಬದಿಗಳಲ್ಲಿ ವಾಹನ ಗಳನ್ನು ನಿಲ್ಲಿಸುವುದರಿಂದ ನಿರಂತರ ಸಮಸ್ಯೆಯಾಗುತ್ತಿದೆ. ಈ ಪರಿಸರದಲ್ಲಿ ಮಿನಿ ವಿಧಾನಸೌಧ, ನಗರಸಭೆ ಕಚೇರಿ, ತಾ.ಪಂ. ಕಚೇರಿ, ಕೋರ್ಟು ಸಂಕೀರ್ಣ, ಪುರಭವನ, ಸರಕಾರಿ ಆಸ್ಪತ್ರೆ, ಉಪನೋಂದಣಿ ಕಚೇರಿ, ಲೋಕೋಪಯೋಗಿ ಇಲಾಖೆ ಕಚೇರಿ, ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಮೆಸ್ಕಾಂ ವಿದ್ಯುತ್‌ ಬಿಲ್‌ ಪಾವತಿ ಕೇಂದ್ರ ಸಹಿತ ಜನರಿಗೆ ಅತಿ ಅಗತ್ಯವಾದ ಕಚೇರಿಗಳಿವೆ. ಈ ಕಾರಣದಿಂದ ವಾರವಿಡೀ ಜನನಿಬಿಡ ಪರಿಸರವಿದು.

ಸೋಮವಾರ ಸಂತೆಗೆ ಬರುವವರು ವಾಹನಗಳನ್ನು ಇಲ್ಲಿ ನಿಲ್ಲಿಸುತ್ತಾರೆ ಎಂಬುದನ್ನು ಒಪ್ಪಬಹುದು. ಆದರೆ ಉಳಿದ ದಿನಗಳಲ್ಲೂ ಬೆಳಗ್ಗೆ ವಾಹನಗಳನ್ನು ಈ ಕಿರಿದಾದ ರಸ್ತೆಗಳ ಬದಿಯಲ್ಲಿ ಪಾರ್ಕ್‌ ಮಾಡಿ ಹೋದರೆ ಮರಳಿ ಬರುವುದು ಸಂಜೆಯೇ. ಈ ಕಾರಣದಿಂದ ಕೆಲವೊಮ್ಮೆ ಪಾದಚಾರಿಗಳಿಗೆ ನಡೆದುಕೊಂಡು ಹೋಗಲೂ ಸಾಧ್ಯವಾಗದಂತೆ ಪಾರ್ಕಿಂಗ್‌ ಮಾಡಿದ ವಾಹನಗಳು ರಸ್ತೆಯನ್ನೇ ಆಕ್ರಮಿಸುತ್ತವೆ.


ಸಂತೆ ಸ್ಥಳಾಂತರದ ವಿಚಾರ

ಈ ಪರಿಸರದಲ್ಲಿ ಸೋಮವಾರ ವಾಹನ ದಟ್ಟಣೆ ಉಂಟಾಗಿ ಸಂಚಾರಕ್ಕೆ ತೊಂದರೆ ಯಾಗುತ್ತದೆ, ಸರಕಾರಿ ಕಚೇರಿಗಳಿಗೆ ಬರುವವರಿಗೆ ಸಮಸ್ಯೆಯಾಗುತ್ತದೆ ಎಂಬ ಕಾರಣಕ್ಕೆ ಈ ಹಿಂದೆ ಪುತ್ತೂರು ಕಿಲ್ಲೆ ಮೈದಾನದ ಸಂತೆಯನ್ನು ಉಪವಿಭಾಗಾ ಧಿಕಾರಿಯವರು ತಮ್ಮ ಅಧಿಕಾರ ಬಳಸಿ ಎಪಿಎಂಸಿಗೆ ಸ್ಥಳಾಂತರ ಮಾಡಿದ್ದರು. ಅನಂತರದಲ್ಲಿ ಅನೇಕ ವಾದ – ವಿವಾದಗಳು ನಡೆದು ಸಂತೆ ವ್ಯಾಪಾರ ಮರಳಿ ಕಿಲ್ಲೆ ಮೈದಾನಕ್ಕೆ ಸ್ಥಳಾಂತರಗೊಂಡಿತ್ತು. ಸಂತೆ ಸ್ಥಳಾಂತರಗೊಂಡ ಅವಧಿಯಲ್ಲಿ ಸೋಮವಾರದ ದಿನ ಈ ಪರಿಸರದಲ್ಲಿ ವಾಹನ ದಟ್ಟಣೆಯೂ ಕಡಿಮೆಯಾಗಿತ್ತು. 

ಪರಿಸರದಲ್ಲಿ ಉಂಟಾಗುವ ವಾಹನ ದಟ್ಟಣೆಯನ್ನು ನಿಭಾಯಿಸಲು ಕಷ್ಟವಾಗುತ್ತಿರುವ ಹಿನ್ನೆಲೆಯಲ್ಲಿ ಆಗಿನ ಸಂಚಾರ ಪೊಲೀಸ್‌ ಠಾಣೆಯ ಪಿಎಸ್‌ಐ ಸಹಾಯಕ ಕಮಿಷನರ್‌ಗೆ ವರದಿಯನ್ನೂ ನೀಡಿದ್ದರು. ಆದರೆ ಸಂತೆ ಮರಳಿ ಬರುವುದರೊಂದಿಗೆ ಸಮಸ್ಯೆಯೂ ತೀವ್ರಗೊಂಡಿದೆ. ಈ ರಸ್ತೆಯ ಮೂಲಕ ತೆಂಕಿಲ ವಿದ್ಯಾಸಂಸ್ಥೆ, ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿಗೆ ನೂರಾರು ವಿದ್ಯಾರ್ಥಿಗಳೂ ತೆರಳುತ್ತಾರೆ. ಈ ರಸ್ತೆಗಳು ಅವೈಜ್ಞಾನಿಕ ತಿರುವುಗಳಿಂದಲೂ ಕೂಡಿದ್ದು, ವಾಹನಗಳ ಭರಾಟೆಯ ಮಧ್ಯೆ ನಡೆದುಕೊಂಡು ಹೋಗುವುದೂ ಅಪಾಯಕಾರಿಯಾಗಿದೆ.

ಎಮರ್ಜೆನ್ಸಿ ರಸ್ತೆ
ಈ ಪರಿಸರದಲ್ಲಿ ಸರಕಾರಿ ಆಸ್ಪತ್ರೆಗೆ ಹೋಗುವ ರಸ್ತೆ ಎಮರ್ಜೆನ್ಸಿ ರಸ್ತೆ. ದಿನಂಪ್ರತಿ ತುರ್ತು ಚಿಕಿತ್ಸೆ ಅಗತ್ಯವಿರುವ ರೋಗಿಗಳನ್ನು ಆ್ಯಂಬುಲೆನ್ಸ್‌ ಮೂಲಕ ತರುವುದರಿಂದ ಈ ರಸ್ತೆ ವಾಹನ ದಟ್ಟಣೆಯಿಂದ ಕೂಡಿರಬಾರದು ಎನ್ನುವ ಕಾರಣಕ್ಕೆ ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಿ ಸಂಚಾರ ಪೊಲೀಸ್‌ ಇಲಾಖೆ ಸೂಚನೆ ಹೊರಡಿಸಿದೆ. ಆದರೆ ವಾಹನಗಳನ್ನು ಬೇಕಾಬಿಟ್ಟಿ ನಿಲ್ಲಿಸಿ ತೆರಳುವವರಿಗೆ ಮಾತ್ರ ಈ ವಿವೇಚನೆಯೇ ಇಲ್ಲ.

ಎಚ್ಚರಿಕೆ, ದಂಡ
ಈ ಪರಿಸರದಲ್ಲಿ ವಾಹನಗಳನ್ನು ಪಾರ್ಕಿಂಗ್‌ ಮಾಡುವವರಿಗೆ ಎಚ್ಚರಿಕೆ ನೀಡಿದರೂ ಎಚ್ಚೆತ್ತುಕೊಳ್ಳುತ್ತಿಲ್ಲ. ಸೋಮವಾರವಂತೂ ಹೆಚ್ಚಿನ ಸಿಬಂದಿಯನ್ನು ನೇಮಿಸಿ ವಾಹನಗಳನ್ನು ಪಾರ್ಕಿಂಗ್‌ ಮಾಡುವವರಿಗೆ ದಂಡ ವಿಧಿಸಲಾಗುತ್ತಿದೆ. ಸರಕಾರಿ ಆಸ್ಪತ್ರೆ ರಸ್ತೆಯನ್ನು ಎಮರ್ಜೆನ್ಸಿ ರಸ್ತೆ ಎಂದು ಪರಿಗಣಿಸಿ ನಿಲುಗಡೆ ನಿಷೇಧಿಸಲಾಗಿದೆ. 
– ನಾರಾಯಣ ರೈ, PSI, ಸಂಚಾರ ಪೊಲೀಸ್‌ ಠಾಣೆ, ಪುತ್ತೂರು

ಸಂಚರಿಸಲು ಭಯ
ಈ ರಸ್ತೆಗಳಲ್ಲಿ ಸಂಚರಿಸುವುದೆಂದರೆ ಭಯವಾಗುತ್ತದೆ. ವಾಹನಗಳ ಓಡಾಟವೂ ಹೆಚ್ಚಾಗಿರುತ್ತದೆ. ಪುತ್ತೂರಿನಿಂದ ಮಂಗಳೂರು, ಉಪ್ಪಿನಂಗಡಿಗೆ ತೆರಳುವ ಬಸ್ಸುಗಳೂ ಇದೇ ದಾರಿ ಬಳಸುತ್ತಿವೆ. ಮುಖ್ಯವಾಗಿ ರಸ್ತೆಯ ಬದಿಗಳಲ್ಲಿ ವಿಪರೀತ ಸಂಖ್ಯೆಯಲ್ಲಿ ವಾಹನಗಳನ್ನು ಪಾರ್ಕ್‌ ಮಾಡುವುದರಿಂದ ಸಮಸ್ಯೆ ದೊಡ್ಡದಾಗಿದೆ. 
– ಹೇಮಲತಾ ಪರ್ಪುಂಜ, ಸರಕಾರಿ ಆಸ್ಪತ್ರೆಗೆ ಬಂದ ಮಹಿಳೆ

— ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

17

Sirsi: ಶಿರಸಿ ಮಾರಿಕಾಂಬೆ ವೈಭವದ ಜಾತ್ರೆ

16-wtr

Water: ನೀರು ಭುವನದ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.