ಪಾರ್ಕಿಂಗ್‌, ನೋ-ಪಾರ್ಕಿಂಗ್‌ ವ್ಯವಸ್ಥೆಯೇ ಗೊಂದಲಮಯ!


Team Udayavani, Jan 16, 2021, 3:20 AM IST

ಪಾರ್ಕಿಂಗ್‌, ನೋ-ಪಾರ್ಕಿಂಗ್‌ ವ್ಯವಸ್ಥೆಯೇ ಗೊಂದಲಮಯ!

ಮಹಾನಗರ: ಮಂಗಳೂರು ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕರ ಅನುಕೂಲ ಕ್ಕಾಗಿ ಕೆಲವು ಕಡೆಗಳಲ್ಲಿ ದ್ವಿಚಕ್ರ, ಚತುಷ್ಟಕ್ರ ವಾಹನಗಳ ನಿಲುಗಡೆಗೆ ಸ್ಥಳಾವಕಾಶ ನೀಡಲಾಗಿದೆ. ಆದರೆ ಸಂಚಾರ ಪೊಲೀಸರು ಗುರುತಿಸಿರುವ ನೋ-ಪಾರ್ಕಿಂಗ್‌, ಪಾರ್ಕಿಂಗ್‌ ವಲಯಗಳ ಕುರಿತಂತೆ ರಿಯಾಲಿಟಿ ಚೆಕ್‌ ವಾಸ್ತವಾಂಶ ತಿಳಿಯುವ ಪ್ರಯತ್ನವನ್ನು ಸುದಿನ ಮಾಡಿದೆ.

ನಗರದ ಎಂ.ಜಿ. ರಸ್ತೆಯಿಂದ ಲಾಲ್‌ ಬಾಗ್‌ ವರೆಗಿನ ಮಾರ್ಗವು ಪ್ರಮುಖ ಜನನಿಬಿಡ ರಸ್ತೆಯಾಗಿದ್ದು, ಹೆಚ್ಚಿನ ಸಂಖ್ಯೆಯ ವಾಹನಗಳು ದಿನನಿತ್ಯ ಓಡಾಡು ತ್ತಿವೆ. ಈ ಭಾಗದಲ್ಲಿ ಪ್ರಮುಖ ಸಭಾಂಗಣ, ಪಾಲಿಕೆ ಕೇಂದ್ರ ಕಚೇರಿ, ಹೊಟೇಲ್‌ಗ‌ಳು ಸಹಿತ ಅನೇಕ ವಾಣಿಜ್ಯ ಮಳಿಗೆಗಳಿವೆ. ಆದರೆ ಅದಕ್ಕೆ ತಕ್ಕಂತೆ ಸಮರ್ಪಕ ಪಾರ್ಕಿಂಗ್‌ ವ್ಯವಸ್ಥೆಗಳು ರಸ್ತೆ ಯುದ್ದಕ್ಕೂ ಇಲ್ಲ. ಈ ರಸ್ತೆಯಲ್ಲಿ ಕೇವಲ ಒಂದು ಕಡೆ ಅಂದರೆ, ಪಬ್ಟಾಸ್‌ ಬಳಿ ಮಾತ್ರ ಪೇ ಆ್ಯಂಡ್‌ ಪಾರ್ಕಿಂಗ್‌ ವ್ಯವಸ್ಥೆ ಇದ್ದು, ಅದು ಜನಸಾಮಾನ್ಯರಿಗೆ ಅಷ್ಟೇನೂ ಉಪಯೋಗವಿಲ್ಲ. ನಗರದ ಬಲ್ಲಾಳ್‌ಬಾಗ್‌ ಮಳಿಗೆಗೆ ಆಗಮಿಸುವ ಮಂದಿ ಕರಾವಳಿ ಉತ್ಸವ ಮೈದಾನ ಬಳಿ ಪಾರ್ಕಿಂಗ್‌ ಮಾಡುವುದು ಕಷ್ಟ. ಒಂದುವೇಳೆ ಅಲ್ಲಿ ಪಾರ್ಕಿಂಗ್‌ ಮಾಡಿದರೂ ಒಂದೂವರೆ ಕಿ.ಮೀ. ನಡೆದುಕೊಂಡೇ ಬರಬೇಕು. ಇನ್ನು ಪಾಲಿಕೆ, ಕೆಎಸ್ಸಾರ್ಟಿಸಿ ಸಹಿತ ಇನ್ನುಳಿದೆಡೆ ಪಾರ್ಕಿಂಗ್‌ ವ್ಯವಸ್ಥೆ ಇದ್ದರೂ ಅದು ಆ ಕಚೇರಿಗೆ ಮಾತ್ರ ಸೀಮಿತ.

ನಗರಕ್ಕೆ ಹೊಂದಿಕೊಂಡಂತೆ ಚಿಲಿಂಬಿ, ಉರ್ವ ಸ್ಟೋರ್‌, ಕೊಟ್ಟಾರ, ಕೊಟ್ಟಾರ ಚೌಕಿ ಪ್ರದೇಶಗಳಲ್ಲಿಯೂ ವಾಣಿಜ್ಯ ಮಳಿಗೆಗಳು ಹೆಚ್ಚಿವೆ. ಇಲ್ಲಿಯೂ ಸಮರ್ಪಕ ಪಾರ್ಕಿಂಗ್‌ ವ್ಯವಸ್ಥೆ ಇಲ್ಲ. ಕೆಲವೊಂದು ಬಹುಮಹಡಿ ಕಟ್ಟಡಗಳ ನೆಲ ಮಹಡಿಯಲ್ಲಿ ಪಾರ್ಕಿಂಗ್‌ಗೆ ವ್ಯವಸ್ಥೆಯಿದೆ. ಸಣ್ಣ ಶಾಪ್‌ಗ್ಳಲ್ಲಿ ಖರೀದಿಗೆ ಹೋದರೆ ರಸ್ತೆ ಬದಿಯೇ ವಾಹನ ನಿಲ್ಲಿಸಬೇಕು.

ಸ್ಥಳೀಯ ನಿವಾಸಿ ಪ್ರದೀಪ್‌ ಹೇಳುವ ಪ್ರಕಾರ, “ಉರ್ವ ಸ್ಟೋರ್‌, ಮಣ್ಣಗುಡ್ಡೆ ಪ್ರದೇಶದಲ್ಲಿ ಪಾರ್ಕಿಂಗ್‌ ವ್ಯವಸ್ಥೆ ಸರಿ ಯಾಗಿಲ್ಲ. ಇಲ್ಲಿ ಯಾವ ಭಾಗದಲ್ಲಿ ವಾಹನ ನಿಲುಗಡೆ ಮಾಡಬೇಕೆಂಬ ಫಲಕವೂ ಇಲ್ಲ. ಕೆಎಸ್‌ಆರ್‌ಟಿಸಿ ಕಡೆಯಿಂದ ಬಿಜೈ ಮುಖ್ಯ ರಸ್ತೆಯಲ್ಲಿ ಸಕೀìಟ್‌ ರಸ್ತೆ ವರೆಗೆ ಅತ್ಯಂತ ವಾಹನ ದಟ್ಟಣೆ ಇದ್ದರೂ ಸೀಮಿತ ಪಾರ್ಕಿಂಗ್‌ ವ್ಯವಸ್ಥೆಯಿದೆ. ಆದರೆ ಪಾರ್ಕಿಂಗ್‌ ವಲಯ ಎನ್ನುವ ಸೂಚನ ಫಲಕ ಎಲ್ಲಿಯೂ ಇಲ್ಲ. ಇನ್ನೊಂದೆಡೆ, ಶಾಲೆ, ಇಎಸ್‌ಐ ಡಿಸ್ಪೆನ್ಸರಿ ಸಹಿತ ಹಲವು ಪ್ರಮುಖ ಕಾರ್ಯ ಚಟುವಟಿಕೆಗಳು ಕೇಂದ್ರೀಕೃತ ಬಿಜೈ ಚರ್ಚ್‌ ರಸ್ತೆಯಲ್ಲಿಯೂ ವ್ಯವಸ್ಥಿತ ಪಾರ್ಕಿಂಗ್‌ ಸೌಲಭ್ಯಗಳಿಲ್ಲ ಎನ್ನುವುದು ವಾಸ್ತವ.

ನಗರ ಪೊಲೀಸ್‌ ಇಲಾಖೆ ಇತ್ತೀಚೆಗೆ ಯಷ್ಟೇ ಪರಿಷ್ಕೃತ ನೋ-ಪಾರ್ಕಿಂಗ್‌- ಪಾರ್ಕಿಂಗ್‌ ವಲಯ ಗುರುತಿಸಿ ಆದೇಶ ಹೊರಡಿಸಿದ್ದು, ಅದರಂತೆ ಬಲ್ಮಠ ರಸ್ತೆಯಲ್ಲಿನ ಡಾ| ಅಂಬೇಡ್ಕರ್‌ ವೃತ್ತಕ್ಕೆ ಹೊಂದಿಕೊಂಡಿರುವ ಬಲ್ಮಠ ನ್ಯೂ ರಸ್ತೆ ಪ್ರವೇಶದ ಬಳಿ ದ್ವಿಚಕ್ರ ವಾಹನಗಳಿಗೆ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಲಾಗಿದೆ. ಈ ಪ್ರದೇಶದಲ್ಲಿ ಪ್ರಮುಖ ಆಸ್ಪತ್ರೆಗಳು, ಸುತ್ತಮುತ್ತಲೂ ಬಹಳಷ್ಟು ಕ್ಲಿನಿಕ್‌ಗಳಿವೆ. ಆದರೆ ಇಲ್ಲಿ ಗುರುತಿಸಲಾದ ಒಂದು ಕಡೆಯ ಪಾರ್ಕಿಂಗ್‌ ವಲಯ ಏನೇನೂ ಸಾಕಾಗದು.

ಕುದ್ಮಲ್‌ ರಂಗರಾವ್‌ ರಸ್ತೆಯಿಂದ ಕೋರ್ಟ್‌ ರಸ್ತೆಗೆ ಹೋಗುವ ರಸ್ತೆಯ ಎಡಬದಿಯಲ್ಲಿ ನೋ-ಪಾರ್ಕಿಂಗ್‌ ಇದ್ದ ಆದೇಶವನ್ನು ಪರಿಷ್ಕರಿಸಿ ರಸ್ತೆಯ ಎಡಬದಿಯಲ್ಲಿ 20 ಮೀಟರ್‌ ವರೆಗೆ, ಬಲಬದಿಯಲ್ಲಿ 200 ಮೀಟರ್‌ ವರೆಗೆ ನೋ-ಪಾರ್ಕಿಂಗ್‌ ಸ್ಥಳವೆಂದು ಗುರುತಿಸಲಾಗಿದೆ. ಈ ಪ್ರದೇಶದಲ್ಲಿ ಫಲಕ ಕೂಡ ಅಳವಡಿಸಲಾಗಿದೆ. ಆದರೆ ಪಾರ್ಕಿಂಗ್‌ ಜಾಗದಲ್ಲಿ ಯಾವುದೇ ಫಲಕಗಳಿಲ್ಲ. ಹೀಗಾಗಿ ಅಧಿಕೃತ ಪಾರ್ಕಿಂಗ್‌ ಜಾಗದ ಕುರಿತಂತೆ ಇಲ್ಲಿ ಜನರಿಗೆ ಗೊಂದಲ ವಿದೆ. ಕೆ.ಬಿ. ಕಟ್ಟೆ ಜಂಕ್ಷನ್‌ನಿಂದ ಗಣಪತಿ ಹೈಸ್ಕೂಲ್‌ ಕ್ರಾಸ್‌ವರೆಗಿನ ರಸ್ತೆಯಲ್ಲಿ ಪಾರ್ಕಿಂಗ್‌ ವ್ಯವಸ್ಥೆಯನ್ನು ಮಾರ್ಪಾಡು ಮಾಡಿದ್ದು, ಈ ಪೈಕಿ ಕೆ.ಬಿ. ಕಟ್ಟೆ ಜಂಕ್ಷನ್‌ನಿಂದ ಜನತಾ ಬಜಾರ್‌ನ ಕ್ರಾಸ್‌ ವರೆಗಿನ ರಸ್ತೆ ಎಡಬದಿಯಲ್ಲಿ ನೋ- ಪಾರ್ಕಿಂಗ್‌ ಎಂದು ಪರಿಷ್ಕರಿಸಲಾಗಿದೆ. ಆದರೆ ಹತ್ತಿರದಲ್ಲಿ ಪಾರ್ಕಿಂಗ್‌ಗೆ ಬೇರೆ ಜಾಗ ಇಲ್ಲದಿರುವುದರಿಂದ ಇಲ್ಲೇ ನಿಲ್ಲಿಸುತ್ತಾರೆ.

ಪಾರ್ಕಿಂಗ್‌ ಬೋರ್ಡ್‌ ಏಕಿಲ್ಲ? :

ಸಂಚಾರ ಪೊಲೀಸರು ಕೆಲವು ಕಡೆ ಗಳಲ್ಲಿ ಮಾತ್ರ ನೋ-ಪಾರ್ಕಿಂಗ್‌ ಸೂಚನ ಫಲಕ ಹಾಕಿದ್ದಾರೆ. ನಗರದ ಹಲವು ಕಡೆ ಸಾರ್ವಜನಿಕರು ವಾಹನ ಪಾರ್ಕಿಂಗ್‌ ಮಾಡಲು ಸ್ಥಳಾವಕಾಶ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಅತ್ತ, ಪೊಲೀಸರು ಕೂಡ ನೋ -ಪಾರ್ಕಿಂಗ್‌ ಜಾಗ ಹೊರತುಪಡಿಸಿ ಉಳಿದ ಭಾಗಗಳಲ್ಲಿ ಪಾರ್ಕಿಂಗ್‌ ಮಾಡಬಹುದು ಎನ್ನುತ್ತಾರೆ. ಆದರೆ ಈ ಬಗ್ಗೆ ಜನರಿಗೆ ಮಾಹಿತಿ ನೀಡುವ ಯಾವುದೇ ಸೂಚನ ಫಲಕ ಹಾಕಿಲ್ಲ. ಈ ಕಾರಣಕ್ಕೆ ನಗರ ವ್ಯಾಪ್ತಿಯಲ್ಲಿ ಯಾವ ಜಾಗ ಪಾರ್ಕಿಂಗ್‌; ಯಾವುದು ನೋ-ಪಾರ್ಕಿಂಗ್‌ ಜಾಗ ಎಂದು ಜನಸಾಮಾನ್ಯರಿಗೆ ಗುರುತಿಸುವುದೇ ಕಷ್ಟವಾಗಿದೆ.

ಸರಕಾರಿ  ಕಚೇರಿ ಪರಿಸ್ಥಿತಿಯೂ ಭಿನ್ನವಿಲ್ಲ ! :

ನಗರದಲ್ಲಿರುವ ಪ್ರಮುಖ ಸರಕಾರಿ ಕಚೇರಿ ಹೊಂದಿರುವ ಸ್ಥಳಗಳಲ್ಲಿಯೂ ಪಾರ್ಕಿಂಗ್‌ ಸಮಸ್ಯೆ ಜಾಸ್ತಿಯಿದೆ. ಲಾಲ್‌ಬಾಗ್‌ ಬಳಿಯ ಪಾಲಿಕೆ ಕೆಳ ಅಂತಸ್ತಿನಲ್ಲಿ ವಾಹನಗಳ ಪಾರ್ಕಿಂಗ್‌ಗೆ ಅವಕಾಶ ಇದೆ. ಆದರೆ ಪಾಲಿಕೆಗೆ ಆಗಮಿಸುವವರ ಸಂಖ್ಯೆ ಹೆಚ್ಚಿರುವ ಕಾರಣ ಅಲ್ಲಿ ವಾಹನ ಪಾರ್ಕಿಂಗ್‌ ಸಮಸ್ಯೆ ನಿತ್ಯದ ಗೋಳು. ಇದೇ ಕಾರಣಕ್ಕೆ ಪಾಲಿಕೆ ಎದುರು ರಸ್ತೆಯಲ್ಲಿ ಬೈಕ್‌, ಕಾರುಗಳನ್ನು ನಿಲ್ಲಿಸಲಾಗುತ್ತಿದೆ.

ಹಂಪನಕಟ್ಟೆ ಬಳಿ ಇರುವ ತಾಲೂಕು ಪಂಚಾಯತ್‌ ಕೆಳ ಅಂತಸ್ತಿನಲ್ಲಿ ಪಾರ್ಕಿಂಗ್‌ ಜಾಗದಲ್ಲಿ ಕ್ಯಾಂಟೀನ್‌ ಇದೆ. ಇರುವ ಸ್ವಲ್ಪ ಜಾಗ ಕೂಡ ಕೇವಲ ಅಧಿಕಾರಿಗಳ ವಾಹನ ಪಾರ್ಕಿಂಗ್‌ಗೆ ಸೀಮಿತಗೊಳಿಸಲಾಗಿದೆ. ಸದ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಮರ್ಪಕ ಪಾರ್ಕಿಂಗ್‌ ವ್ಯವಸ್ಥೆಯಿದೆ. ಆರ್‌ಟಿಒ ಕಚೇರಿಯಲ್ಲಿಯೂ ವಾಹನಗಳ ಪಾರ್ಕಿಂಗ್‌ಗೆ ಜಾಗ ಇಕ್ಕಟ್ಟಾಗಿದೆ.

 

ಸಮಸ್ಯೆ, ಸಲಹೆಗಳು ತಿಳಿಸಿ :

ನಗರದಲ್ಲಿ ಪಾರ್ಕಿಂಗ್‌ ಸಮಸ್ಯೆ, ಟೋಯಿಂಗ್‌ ಅವಾಂತರಗಳ ಕುರಿತಂತೆ ಉದಯವಾಣಿ ಸುದಿನ ಈಗಾಗಲೇ “ಪಾರ್ಕಿಂಗ್‌ ಪರದಾಟ’ ಅಭಿಯಾನದ ಮೂಲಕ ಆಡಳಿತ ವ್ಯವಸ್ಥೆಯ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದೆ. ಅಭಿಯಾನದ ಭಾಗವಾಗಿ ಸಾರ್ವಜನಿಕರು ಪಾರ್ಕಿಂಗ್‌ ಕೊರತೆಯಿಂದ ಅನುಭವಿಸುತ್ತಿರುವ ಸಮಸ್ಯೆ, ಪ್ರಸ್ತುತ ಜಾರಿಯಲ್ಲಿರುವ ಟೋಯಿಂಗ್‌ ವ್ಯವಸ್ಥೆ, ಅದು ಸೃಷ್ಟಿಸಿರುವ ಸಮಸ್ಯೆಗಳು, ಪರಿಹಾರದ ನಿಟ್ಟಿನಲ್ಲಿ ಅಭಿಪ್ರಾಯ, ಸಲಹೆಗಳಿದ್ದಲ್ಲಿ ಉದಯವಾಣಿ ಸುದಿನ ವಾಟ್ಸ್‌ಆ್ಯಪ್‌ಗೆ ಕಳುಹಿಸಿಕೊಡಬಹುದು. ಇದನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕೆ ಒಂದು ವೇದಿಕೆಯಾಗುವ ಕಾರ್ಯವನ್ನು ಉದಯವಾಣಿ ಸುದಿನ ಮಾಡಲಿದೆ.  ವಾಟ್ಸ್‌ ಆ್ಯಪ್‌  ನಂ. 9900567000

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.