ಪರ್ಪುಂಜ: ಸೇತುವೆಗಳಿಗೆ ತಡೆಗೋಡೆಯಿಲ್ಲ..!


Team Udayavani, Jul 15, 2018, 9:57 AM IST

15-july-2.jpg

ಸಂಪ್ಯ : ಸಂಟ್ಯಾರ್‌ ಹಾಗೂ ಪರ್ಪುಂಜ ಬಳಿಯ ಸೇತುವೆ ತಡೆಗೋಡೆ ಕುಸಿದಿದ್ದು, ಇದು ಅಪಾಯ ಆಹ್ವಾನಿಸುತ್ತಿದೆ.
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲೇ ಈ ಅಪಾಯಕಾರಿ ಸೇತುವೆಗಳು ಇವೆ. 1 ಕಿ.ಮೀ. ಅಂತರದಲ್ಲೇ ಈ ಎರಡು ಸೇತುವೆಗಳಿವೆ.

2015ರಲ್ಲಿ ಶಿರಾಡಿ ಘಾಟ್‌ ಸಂಚಾರ ಸ್ಥಗಿತಗೊಂಡಾಗ ವಾಹನ ಸಂಚಾರಕ್ಕೆ ಬದಲಿಯಾಗಿ ಪುತ್ತೂರು- ಮಡಿಕೇರಿ ಹೆದ್ದಾರಿಯನ್ನು ಬಳಸಿಕೊಳ್ಳಲಾಗಿತ್ತು. ಆ ಸಂದರ್ಭ ಘನ ವಾಹನಗಳು ಇದೇ ರಸ್ತೆಯಿಂದ ಸಂಚರಿಸುತ್ತಿದ್ದವು. ಪರ್ಪುಂಜ ಹಾಗೂ ಸಂಟ್ಯಾರ್‌ ಸೇತುವೆ, ತೀರಾ ಹದಗೆಟ್ಟಿದ್ದು, ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವ ಅಗತ್ಯ ಇದೆ ಎಂದು ಪರಿಶೀಲನ ಸಭೆಯಲ್ಲಿ ಜಿಲ್ಲಾಧಿಕಾರಿಗಳ ಗಮನ ಸೆಳೆಯಲಾಗಿತ್ತು. ಹೀಗಿದ್ದರೂ, ಸಮಸ್ಯೆ ಹಾಗೆಯೇ ಇದೆ. ಮಡಿಕೇರಿ, ಕಾಸರಗೋಡು, ಮೈಸೂರು, ಬೆಂಗಳೂರನ್ನು ಸಂಪರ್ಕಿಸುವ ಪ್ರಮುಖ ಹೆದ್ದಾರಿ ಇದಾಗಿರುವುದರಿಂದ ದಿನನಿತ್ಯ ಸಾವಿರಾರು ವಾಹನಗಳು ಈ ರಸ್ತೆಯಾಗಿ ಸಂಚರಿಸುತ್ತವೆ. ಇದರ ನಡುವೆ ದ್ವಿಚಕ್ರ ವಾಹನಗಳು ಅಪಾಯಕ್ಕೆ ಈಡಾಗುವ ಸಂಭವ ಹೆಚ್ಚಿದೆ.

ರಿಬ್ಬನ್‌ ಅಳವಡಿಸಲು ಆಗ್ರಹ
ಪರ್ಪುಂಜ ಸೇತುವೆ ಇಳಿಜಾರಿನಲ್ಲಿದ್ದು, ತಿರುವಿನಲ್ಲಿದೆ. ಹಲವು ಅಪಘಾತ ಸಂಭವಿಸಿದ ಕಾರಣ, ಅಧಿಕಾರಿಗಳ ಗಮನ ಸೆಳೆಯಲಾಯಿತು. ಪರಿಣಾಮ ಇಳಿಜಾರಿನಲ್ಲಿ ಹಂಪ್ಸ್‌ ಹಾಕಿದರು. ಇದರಿಂದ ವಾಹನಗಳ ವೇಗಕ್ಕೆ ಕಡಿವಾಣ ಹಾಕಿ, ಅಪಘಾತ ಸ್ವಲ್ಪ ಕಡಿಮೆಯಾಯಿತು. ಸಂಟ್ಯಾರ್‌ ಹಾಗೂ ಪರ್ಪುಂಜ ಸೇತುವೆ ಅಪಾಯಕಾರಿಯಾಗಿದ್ದು, ತತ್‌ಕ್ಷಣ ಕಾಮಗಾರಿ ನಡೆಸುವ ಅಗತ್ಯವಿದೆ. ಮಳೆಗಾಲದಲ್ಲಿ ಕೆಲಸ ಕಷ್ಟ ಎನ್ನುವುದಾದರೆ, ಅಪಾಯ ಸೂಚಿಸುವ ರಿಬ್ಬನ್‌ ಹಾಕುವ ಕೆಲಸವನ್ನಾದರೂ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ತೀರಾ ತಿರುವಿನಲ್ಲಿದೆ
ಸಂಟ್ಯಾರ್‌ ಸೇತುವೆ ತಿರುವಿನಲ್ಲಿದ್ದು, ವಾಹನ ಸವಾರರಿಗೆ ತತ್‌ಕ್ಷಣ ಗಮನಕ್ಕೆ ಬರು ವುದಿಲ್ಲ. ಒಮ್ಮೆಗೆ ತಿರುವು ತೆಗೆದುಕೊಂಡಾಗ ಎದುರಿನಿಂದ ಇನ್ನೊಂದು ವಾಹನ ಬಂದರೆ ಚಾಲಕನ ನಿಯಂತ್ರಣ ತಪ್ಪಬಹುದು. ತತ್‌ಕ್ಷಣ ವಾಹನವನ್ನು ರಸ್ತೆ ಬದಿಗೆ ಸರಿಸಿದರೆ, ತಡೆಗೋಡೆ ಮುರಿದ ಸೇತುವೆಯಿಂದ ಕೆಳಗೆ ಬೀಳುವ ಅಪಾಯ ಇದೆ. ಘನ ವಾಹನಗಳು ಸೇತುವೆ ತಡೆಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ, ಹಾನಿ ಸಂಭವಿಸಿರುವ ಉದಾಹರಣೆಗಳೂ ಇದೆ. 

ಗಮನ ಹರಿಸಿ
ಸಂಟ್ಯಾರ್‌ ಹಾಗೂ ಪರ್ಪುಂಜ ಸೇತುವೆ ತೀರಾ ತಿರುವಿನಲ್ಲಿ ಇದೆ. ಹೆಚ್ಚಿನ ಘನ ವಾಹನಗಳು ಸಂಚರಿಸುವಾಗ ಇತರ ವಾಹನಗಳಿಗೆ ಸಂಚರಿಸಲು ಕಷ್ಟವಾಗುತ್ತಿವೆ. ಅಲ್ಲದೇ, ಈ ಮೊದಲು ಹಲವು ಅಪಘಾತ ನಡೆದು, ಪ್ರಾಣ ಹಾನಿ ಆದ ಘಟನೆಯೂ ನಡೆದಿದೆ. ಇದರ ಬಗ್ಗೆ ತಕ್ಷಣ ಸಂಬಂಧಪಟ್ಟವರು ಗಮನ ಹರಿಸಬೇಕು.
– ಅನಿಲ್‌ ರೈ, ಪೆರಿಗೇರಿ
ರಿಕ್ಷಾ ಚಾಲಕ

ವಿಶೇಷ ವರದಿ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.