ಇಂಡೋ ಟಿಬೇಟ್‌ ಗಡಿ ರಕ್ಷಣ ಪೊಲೀಸರಿಂದ ಪಥ ಸಂಚಲನ


Team Udayavani, Apr 18, 2019, 4:13 AM IST

14

ಕಡಬ: ಇಂಡೋ ಟಿಬೇಟ್‌ ಗಡಿ ರಕ್ಷಣ ಪೊಲೀಸರಿಂದ ಪಥ ಸಂಚಲನ ನಡೆಯಿತು.

ಕಡಬ: ಲೋಕಸಭಾ ಚುನಾವಣೆಯನ್ನು ಭಯಮುಕ್ತವಾಗಿ ನಡೆಸುವ ಮತ್ತು ಸೂಕ್ಷ್ಮ ಮತಗಟ್ಟೆಗಳ ಮತದಾರರಲ್ಲಿ ಧೈರ್ಯ ತುಂಬುವ ಸಲುವಾಗಿ ಚುನಾವಣ ಆಯೋಗದ ನಿರ್ದೇಶನದಂತೆ ಇಂಡೋ ಟಿಬೇಟ್‌ ಗಡಿ ರಕ್ಷಣ ಪೊಲೀಸರು ಕಡಬ ಪೊಲೀಸರ ಜತೆ ಸೇರಿ ಕಡಬ ಪೇಟೆಯಲ್ಲಿ ಮಂಗಳವಾರ ಪಥಸಂಚಲನ ನಡೆಸಿದರು.

ಕಡಬ ಪೊಲೀಸ್‌ ಠಾಣೆ ಪಿಐ ಪ್ರಕಾಶ್‌ ದೇವಾಡಿಗ ಮಾತನಾಡಿ, ಭಯಮುಕ್ತರಾಗಿ ಮತ ಚಲಾಯಿಸಲು ಚುನಾವಣ ಆಯೋಗವು ಎಲ್ಲ ವ್ಯವಸ್ಥೆಗಳನ್ನು ಮಾಡಿದೆ. ಅರ್ಹತೆ ಇರುವ ಯಾವೊಬ್ಬ ಮತದಾರನೂ ಮತದಾನದ ಹಕ್ಕಿನಿಂದ ವಂಚಿತನಾಗಬಾರದು. ಶಾಂತಿಯುತ ಮತದಾನ ನಡೆದು ಚುನಾವಣ ಪ್ರಕ್ರಿಯೆ ಸುಲಲಿತವಾಗಿ ನಡೆಯಬೇಕು ಎನ್ನುವುದು ಆಯೋಗದ ಉದ್ದೇಶವಾಗಿದ್ದು, ಮತದಾರರಿಗೆ ರಕ್ಷಣೆ ಒದಗಿಸಲು ಪೊಲೀಸರು ಮತ್ತು ದೇಶದ ರಕ್ಷಣಾ ಪಡೆಗಳು ಸನ್ನದ್ಧವಾಗಿದೆ. ಚುನಾವಣ ಅಕ್ರಮ ನಡೆಸಲು ಮುಂದಾದರೆ ಕಾನೂನು ಕ್ರಮ ನಿಶ್ಚಿತ ಎಂದರು.

ಕಡಬ ಠಾಣೆ ವ್ಯಾಪ್ತಿಯ ಕೊಂಬಾರು, ಸಿರಿಬಾಗಿಲು ಹಾಗೂ ಬಿಳಿನೆಲೆಯ ಕೆಲವು ಭಾಗಗಳನ್ನು ನಕ್ಸಲ್‌ ಪೀಡಿದ ಪ್ರದೇಶಗಳೆಂದು ಗುರುತಿಸಿರುವ ಹಿನ್ನೆಲೆಯಲ್ಲಿ ಅಲ್ಲಿನ ಮತಗಟ್ಟೆಗಳಲ್ಲಿ ಹಾಗೂ ಇತರ ಸೂಕ್ಷ್ಮ ಮತಗಟ್ಟೆಗಳಲ್ಲಿ ಇಂಡೋ ಟಿಬೇಟ್‌ ಗಡಿ ರಕ್ಷಣ ಪೊಲೀಸರು ಮತದಾರರಿಗೆ ರಕ್ಷಣೆಯ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.

ಇಂಡೋ ಟಿಬೇಟ್‌ ಗಡಿ ರಕ್ಷಣ ಪೊಲೀಸ್‌ ಪಡೆಯ ಆಫೀಸರ್‌ ಕಮಾಂಡಿಂಗ್‌ ಗಂಗಾ ಸಿಂಗ್‌ ಹಾಗೂ ಪ್ರೊಬೆಶನರಿ ಎಸ್‌ಐ ಕುಮಾರ್‌ ಜಿ. ಕಾಂಬ್ಳೆ ಹಾಜರಿದ್ದರು.

ಪ್ಯಾರಾ ಮಿಲಿಟರಿ ಭದ್ರತೆ
ಉಪ್ಪಿನಂಗಡಿ: ಲೋಕಸಭಾ ಚುನಾವಣೆ ಸಂದರ್ಭ ಭದ್ರತೆಗಾಗಿ 206 ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 12 ಮಂದಿ ಸೆಂಟ್ರಲ್‌ ಪ್ಯಾರಾ ಮಿಲಿಟರಿ ಪೋರ್ಸ್‌ (ಸಿಪಿಎಂಎಫ್) ಯೋಧರು, ಪೊಲೀಸ್‌ ಇಲಾಖೆ ಸಿಬಂದಿ ಹಾಗೂ ಗೃಹರಕ್ಷಕ ದಳದ ಸಿಬಂದಿ ಸಹಿತ 369 ಮಂದಿಯನ್ನು ನಿಯೋಜಿಸಲಾಗಿದೆ.

ಶಾಂತಿಯುತ ಮತದಾನ ನಡೆಯಲು 206 ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಓರ್ವ ಡಿವೈಎಸ್ಪಿ, ಮೂವರು ಸಿಪಿಐ, 5 ಮಂದಿ ಪಿಎಸ್‌ಐ, 20 ಮಂದಿ ಎಎಸ್‌ಐ, 188 ಮಂದಿ ಪೊಲೀಸ್‌ ಸಿಬಂದಿ, ಗೃಹರಕ್ಷಕ ದಳದ 104 ಮಂದಿ, 36 ಮಂದಿ ಪೊಲೀಸ್‌ ತರಬೇತಿ ಸಿಬಂದಿಯನ್ನು ಹಾಗೂ 12 ಮಂದಿ ಸೆಂಟ್ರಲ್‌ ಪ್ಯಾರಾ ಮಿಲಿಟರಿ ಪೋರ್ಸ್‌ (ಸಿಪಿಎಂಎಫ್) ಯೋಧರನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್‌ ಇಲಾಖೆಯ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.