ಯಕ್ಷಗಾನ ಕಲಾವಿದರ ಸಂಕಷ್ಟಗಳಿಗೆ ಸ್ಪಂದಿಸುವುದು ಶ್ಲಾಘನೀಯ: ಈಶ್ವರ ಭಟ್


Team Udayavani, Dec 19, 2018, 12:09 PM IST

19-december-6.gif

ಮೂಡುಬಿದಿರೆ: ಕಲೆಯನ್ನು ಧರ್ಮ ಪ್ರಸಾರ ಸಾಧನವಾಗಿ ಮುನ್ನಡೆಸುತ್ತ ಬರುತ್ತಿರುವವರು ಯಕ್ಷಗಾನ ಕಲಾವಿದರು. ಅವರ ಸಂಕಷ್ಟಗಳಿಗೆ ಸ್ಪಂದಿಸುವ, ಸಾಧಕರನ್ನು ಗೌರವಿಸುವ ಸಹೃದಯತೆಯಿಂದ ಕೆಲಸ ಮಾಡುತ್ತಿರುವ ಪಟ್ಲ ಫೌಂಡೇಶನ್‌ ನಿಜಕ್ಕೂ ಕಲೆಯ ಉಳಿವು ಮತ್ತು ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡುತ್ತಿದೆ ಎಂದು ಅಲಂಗಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ, ಆಡಳಿತ ಮೊಕ್ತೇಸರ ವೇ|ಮೂ| ಈಶ್ವರ ಭಟ್‌ ಹೇಳಿದರು.

ಫೌಂಡೇಶನ್‌ನ ಸ್ಥಾಪಕಾಧ್ಯಕ್ಷ, ಭಾಗವತ ಪಟ್ಲ ಸತೀಶ್‌ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಮೂಡುಬಿದಿರೆ ಅಲಂಗಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸೋಮವಾರ ಜರಗಿದ ಯಕ್ಷಧ್ರುವ ಪಟ್ಲ ಫೌಂಡೇಶನ್‌ ನ ಮೂಡುಬಿದಿರೆ ಘಟಕದ ತೃತೀಯ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಮ್ಮಾನ
ಕಾರ್ಯಕ್ರಮದಲ್ಲಿ 94ರ ಹರೆಯದ ಭಾಗವತ ಕಲ್ಲಮುಂಡ್ಕೂರಿನ ಅನಂತರಾಮ ರಾವ್‌ ಅವರನ್ನು ಸಮ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ಮಾರೂರು ಖಂಡಿಗ ರಾಮದಾಸ ಆಸ್ರಣ್ಣ, ಮಾಜಿ ಸಚಿವರಾದ ಕೆ. ಅಮರನಾಥ ಶೆಟ್ಟಿ, ಕೆ. ಅಭಯಚಂದ್ರ, ಬಿಜೆಪಿ ದ.ಕ. ಜಿಲ್ಲಾ ಉಪಾಧ್ಯಕ್ಷ ಕೆ.ಪಿ. ಜಗದೀಶ ಅಧಿಕಾರಿ, ಪಟ್ಲ ಫೌಂಡೇಶನ್‌ನ ಗುಜರಾತ್‌ ಘಟಕದ ಅಧ್ಯಕ್ಷ ಅಪ್ಪಣ್ಣ ಶೆಟ್ಟಿ ಭಾಗವಹಿಸಿದ್ದರು.

3.5 ಕೋಟಿ ರೂ. ವಿನಿಯೋಗ
ಪಟ್ಲ ಫೌಂಡೇಶನ್‌ನ ಕೇಂದ್ರ ಸಮಿತಿ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಮಾತನಾಡಿ, ಸ್ಥಾಪನೆಯಾಗಿ ಮೂರು ವರ್ಷ ಕಳೆಯುವಷ್ಟರಲ್ಲೇ 33 ಕಡೆಗಳಲ್ಲಿ ಫೌಂಡೇಶನ್‌ ಘಟಕಗಳು ಸ್ಥಾಪನೆಯಾಗಿವೆ. ಮುಂದಿನ ಜೂನ್‌ನಲ್ಲಿ ಅಮೆರಿಕದಲ್ಲಿ ಘಟಕ ಸ್ಥಾಪನೆಯಾಗಲಿದೆ ಎಂದು ಹೇಳಿದರು.

ಈಗಾಗಲೇ ಮೂವರು ಅಶಕ್ತ ಕಲಾವಿದರಿಗೆ ಮನೆ ನಿರ್ಮಿಸಿಕೊಟ್ಟಿದ್ದು, 100 ಮನೆಗಳನ್ನು ನಿರ್ಮಿಸಲು ಸೂಕ್ತ ನಿವೇಶನಕ್ಕಾಗಿ ಶೋಧ ನಡೆದಿದೆ. ಕಲಾವಿದರ ಅಪಘಾತ ವಿಮಾ ಯೋಜನೆಯಡಿ ಆಸ್ಪತ್ರೆಗೆ ದಾಖಲಾದಲ್ಲಿ ಗರಿಷ್ಠ 3 ಲಕ್ಷ ರೂ., ಸಾವಿನ ಪ್ರಕರಣದಲ್ಲಿ 8 ಲಕ್ಷ ರೂ. ಲಭಿಸುವಂತಾಗಿದೆ ಎಂದು ವಿವರಿಸಿದರು.

ಶ್ರದ್ದಾಂಜಲಿ
ಇತ್ತೀಚೆಗೆ ನಿಧನ ಹೊಂದಿರುವ ಧರ್ಮಸ್ಥಳ ಮೇಳದ ಮದ್ದಳೆವಾದಕ ಅಡೂರು ಗಣೇಶ ರಾವ್‌ ಅವರಿಗೆ ಮೌನ ಪ್ರಾರ್ಥನೆಯೊಂದಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು. ಮೂಡುಬಿದಿರೆ ಘಟಕದ ಕಾರ್ಯಾಧ್ಯಕ್ಷ ಮುರಳೀಧರ ಶೆಟ್ಟಿ ಎಡಪದವು ಸ್ವಾಗತಿಸಿದರು. ಪ್ರಧಾನ ಸಂಚಾಲಕ ಪ್ರೇಮನಾಥ ಮಾರ್ಲ ಅತಿಥಿಗಳನ್ನು ಗೌರವಿಸಿದರು. ಪ್ರಧಾನ ಸಂಚಾಲಕ ಎಂ. , ದೇವಾನಂದ ಭಟ್‌ ಪ್ರಸ್ತಾವನೆಗೈದರು.

ಪ್ರಮುಖರಾದ ಸುಬ್ರಹ್ಮಣ್ಯಭಟ್‌, ಪ್ರಸಾದ್‌ ಭಟ್‌, ಸುಭಾಶ್ಚಂದ್ರ ಚೌಟ, ಶಾಂತರಾಮ ಕುಡ್ವಾ, ನೀಲೇಶ್‌ ಶೆಟ್ಟಿ, ಜೋಕಿಂ ಕೊರೆಯ, ಸಿ. ಎಚ್‌. ಅಬ್ದುಲ್‌ ಗಪೂರ್‌ ಮೊದಲಾದವರಿದ್ದರು. ಉಪಾಧ್ಯಕ್ಷ ದಿವಾಕರ ಶೆಟ್ಟಿ ತೋಡಾರು ನಿರೂಪಿಸಿದರು. ಕಾರ್ಯದರ್ಶಿ ಮೇನಕಾ ಸದಾಶಿವ ರಾವ್‌ ವಂದಿಸಿದರು. ಮೊದಲಿಗೆ ಪ್ರಸಿದ್ದ ಕಲಾವಿದರಿಂದ ‘ಯಕ್ಷ- ಗಾನ ಸಂಭ್ರಮ’, ಸಭಾ ಕಾರ್ಯಕ್ರಮದ ಬಳಿಕ ಹನುಮಗಿರಿ ಮೇಳದವರಿಂದ ‘ಮಾಯಾ ವಿಹಾರಿ’ ಯಕ್ಷಗಾನ ಬಯಲಾಟ ಜರಗಿತು.

ಘಟಕ ಸ್ಥಾಪನೆಗೆ ಹಲವು ಮನವಿ
‘ಸಂಪತ್ತಿರುವುದು ದಾನಕ್ಕೆ, ಬಡತನವಿರುವುದು ಧ್ಯಾನಕ್ಕೆ’ ಯೋಜನೆಗೆ ಕಲಾಭಿಮಾನಿಗಳು ಖಂಡಿತ ಸ್ಪಂದಿಸುತ್ತಾರೆ ಎಂಬುದಕ್ಕೆ ಫೌಂಡೇಶನ್‌ ಸಾಕ್ಷಿಯಾಗಿದೆ. ಈಗಾಗಲೇ 33 ಘಟಕಗಳಿದ್ದು ನಾಸಿಕ್‌, ಶಿವಮೊಗ್ಗ, ಕೊಪ್ಪ, ತೀರ್ಥಹಳ್ಳಿ, ಪಾಣಾಜೆ, ನಿಡ್ಡೋಡಿ, ಉಡುಪಿ, ಕುಂದಾಪುರ ಸಹಿತ ಸುಮಾರು 15 ಕಡೆಗಳಲ್ಲಿ ಘಟಕ ಸ್ಥಾಪನೆಗೆ ಅಭಿಮಾನಿಗಳು ಮನವಿ ಸಲ್ಲಿಸಿದ್ದರೂ ಬಿಡುವು ಹೊಂದಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ.
– ಪಟ್ಲ ಸತೀಶ್‌ ಶೆಟ್ಟಿ

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.