ಸಿದ್ದರಾಮಯ್ಯ ಅವರ ದೇಶ ವಿಭಜನೆಯ ಹೇಳಿಕೆಗೆ ದೇಶಭಕ್ತರ ಪ್ರತಿಕ್ರಿಯೆ: ಡಾ.ಭರತ್ ಶೆಟ್ಟಿ
Team Udayavani, Aug 19, 2022, 5:44 PM IST
ಸುರತ್ಕಲ್: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರದ್ದು ಮುಸ್ಲಿಂ ಏರಿಯಾ ಎನ್ನುವ ಹೇಳಿಕೆ ದೇಶ ವಿಭಜನೆಯ ಹೇಳಿಕೆಯಾಗಿದೆ. ಇದಕ್ಕೆ ದೇಶಭಕ್ತರು ತಮ್ಮದೇ ರೀತಿಯಲ್ಲಿ ಪ್ರತಿಭಟನೆಯನ್ನು ತೋರಿಸಿದ್ದಾರೆ ಎಂದು ಶಾಸಕ ಡಾ. ಭರತ್ ಶೆಟ್ಟಿ ವೈ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊಟ್ಟೆ ಎಸೆತದಂತಹ ಘಟನೆಯನ್ನು ಯಾರೂ ಕೂಡ ಸಮರ್ಥಿಸಿಕೊಳ್ಳಲಾಗದು. ಅದರೆ ಭಾರತ ಸಮಗ್ರ ರಾಷ್ಟ್ರೀಯತೆಯ ಭಾವನೆಯನ್ನು ಹೊಂದಿರುವ ಹಾಗೂ ಹಿಂದೂ ಬಹು ಸಂಖ್ಯಾತರು ಇರುವ ದೇಶವಾಗಿದೆ. ಸ್ವಾತಂತ್ರ್ಯ ಕಾಲದಲ್ಲಿ ಮುಸ್ಲಿಂ ಏರಿಯಾ ಎಂದು ಬಿಂಬಿಸಿ ಪಾಕಿಸ್ತಾನ ದೇಶವನ್ನು ರಚಿಸಲು ಕಾಂಗ್ರೆಸ್ ಮುಖಂಡರು ಅನುಮತಿಯನ್ನು ನೀಡಿರುವುದನ್ನು ಸ್ಮರಿಸಬಹುದು. ಓಟ್ ಬ್ಯಾಂಕ್ ರಾಜಕೀಯಕ್ಕೆ ಸಿದ್ದರಾಮಯ್ಯ ಅವರು ಮತ್ತೆ ಅಲ್ಪಸಂಖ್ಯಾತರನ್ನು ಒಲೈಸುವ ಉದ್ದೇಶದಿಂದ ಮುಸ್ಲಿಂ ಏರಿಯಾ ಎಂದು ಬಿಂಬಿಸಿ ಮತ್ತೆ ವಿಭಜನೆಯ ಮಾದರಿಯ ಹೇಳಿಕೆ ಅಧಿಕಾರದ ದುರಾಸೆಯಿಂದ ಹೇಳಿರುವುದು ಖಂಡನೀಯವಾಗಿದ್ದು, ದೇಶದ ಜನರಿಂದ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿ, ಪ್ರತಿಭಟನೆಯ ರೂಪದಲ್ಲಿ ಹೊರಹೊಮ್ಮಿದೆ ಎಂದರು.
ಇದನ್ನೂ ಓದಿ:ಆರ್ ಎಸ್ ಎಸ್ ಪಕ್ಕಾ ದೇಶದ್ರೋಹಿ ಸಂಘಟನೆ : ಪ್ರಿಯಾಂಕ್ ಖರ್ಗೆ
ಸಿದ್ದರಾಮಯ್ಯ ಅವರು ಮತ್ತೆ ಬೆಂಕಿ ಹಚ್ಚುವ ಮಾತುಗಳನ್ನಾಡಿದ್ದು, ಈ ಕೆಲಸ ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ. ಬಿಜೆಪಿ ಸರಕಾರಕ್ಕೆ ಬೆಂಕಿಯನ್ನು ನಂದಿಸುವ ಶಕ್ತಿ ಸಾಮರ್ಥ್ಯವಿದೆ ಎಂದು ತಿರುಗೇಟು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ