ನಾಯಿ, ಮಂಗಗಳ ಪಾಲಾದ ಮಂಜುಗಡ್ಡೆ

ಆಡಳಿತ ವ್ಯವಸ್ಥೆ, ಅಂಗಡಿಯವರ ನಿರ್ಲಕ್ಷ್ಯ: ಸಾರ್ವಜನಿಕ ಆಕ್ರೋಶ

Team Udayavani, Feb 15, 2020, 7:29 AM IST

1402RJH7

ನಗರ: ಉಪ್ಪಿನಂಗಡಿ-ಪುತ್ತೂರು ಹೆದ್ದಾರಿ ಬದಿಯಲ್ಲಿ ತಾತ್ಕಾಲಿಕವಾಗಿ ನಿರ್ಮಾಣ ಮಾಡಿರುವ ಕಬ್ಬಿನ ಹಾಲಿನ ಅಂಗಡಿ ಬಳಿ ಜ್ಯೂಸ್‌ಗೆ ಬಳಕೆ ಮಾಡುವ ಐಸ್‌ ಕ್ಯೂಬ್‌ ಅನ್ನು ನಾಯಿ, ಮಂಗಗಳು ನೆಕ್ಕುತ್ತಿರುವ ವೀಡಿಯೋ ವೈರಲ್‌ ಆಗಿದ್ದು, ಸಂಬಂಧಿತ ಆಡಳಿತ ವ್ಯವಸ್ಥೆ, ಅಂಗಡಿಯವರ ನಿರ್ಲಕ್ಷ್ಯದ ಕುರಿತು ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿದೆ.

ಪ್ರಸ್ತುತ ವಿಶ್ವಾದ್ಯಂತ ವಿವಿಧ ರೀತಿಯ ಮಾರಣಾಂತಿಕ ಕಾಯಿಲೆಗಳು ಹರಡುತ್ತಿವೆ. ಇವುಗಳಿಗೆ ಮುಖ್ಯವಾಗಿ ಪ್ರಾಣಿಗಳು ಕಾರಣವಾಗುತ್ತಿವೆ. ಇದನ್ನು ಎದುರಿಸಲು ವಿವಿಧ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆದರೆ ಬೀದಿ ಬದಿ ನಡೆಯುವ ವ್ಯಾಪಾರಗಳಲ್ಲಿ ಸ್ವತ್ಛತೆ ಸೇರಿದಂತೆ ನಿರ್ಲಕ್ಷ್ಯ ವಹಿಸಲಾಗುತ್ತಿರುವುದನ್ನು ಕಂಡೂ ಆರೋಗ್ಯ ಇಲಾಖೆ, ಆಹಾರ ಇಲಾಖೆ, ರಸ್ತೆಗೆ ಸಂಬಂಧಪಟ್ಟ ಇಲಾಖೆಗಳು ಮೌನ ವಹಿಸುತ್ತಿವೆ.

ಉಪ್ಪಿನಂಗಡಿ ಸಮೀಪದ 34ನೇ ನೆಕ್ಕಿಲಾಡಿಯ ಜ್ಯೂಸ್‌ ಮಾರಾಟದ ಅಂಗಡಿಯೊಂದರಲ್ಲಿ ನಾಯಿ ಹಾಗೂ ಮಂಗಗಳು ಮಂಜುಗಡ್ಡೆಯನ್ನೂ ನೆಕ್ಕುತ್ತಿರುವ ಈ ವಿಡಿಯೋ ವೈರಲ್‌ ಆಗಿದೆ. ಇದು ತಳ್ಳುಗಾಡಿ ಶೈಲಿಯ ಕಬ್ಬಿನ ಹಾಲು ಮಾರಾಟದ ಅಂಗಡಿಯಾಗಿದ್ದು, ಇದಕ್ಕೆ ಸ್ಥಳೀಯಾಡಳಿತದ ಪರವಾನಿಗೆ ಇದೆಯೇ ಎನ್ನುವುದು ಖಚಿತಗೊಂಡಿಲ್ಲ.

ಅಂಗಡಿಯಲ್ಲಿನ ಮಂಜುಗಡ್ಡೆ ನೀಲಿ ಬಣ್ಣದ ಟಾರ್ಪಾಲ್‌ನಲ್ಲಿ ಮಡಚಿ ನೆಲದಲ್ಲಿಯೇ ಇಡಲಾಗಿದೆ. ಆ ಟಾರ್ಪಾಲ್‌ ಅನ್ನು ಬಿಡಿಸಿ ನಾಯಿ ಹಾಗೂ ಮಂಗಗಳು ಬಿಸಿಲಿನ ತಾಪದಿಂದ ಮುಕ್ತಿ ಪಡೆಯಲು ನೆಕ್ಕುತ್ತಿರುವುದು ವಿಡಿಯೋದಲ್ಲಿ ಕಂಡು ಬರುತ್ತಿದೆ. ಇದೇ ಮಂಜುಗಡ್ಡೆಯನ್ನು ಕಬ್ಬಿನ ಹಾಲು ತಯಾರಿಸಲು ಬಳಸಲಾಗುತ್ತಿದೆ ಎಂಬ ಗುರುತರ ಆರೋಪವನ್ನು ಸ್ಥಳೀಯ ನಿವಾಸಿಗಳು ಮಾಡುತ್ತಿದ್ದಾರೆ. ಮಂಜುಗಡ್ಡೆಯನ್ನು ಜಾಗರೂಕತೆಯಿಂದ ಸಂರಕ್ಷಿಸಬೇಕಾದ ಸ್ಟಾಲ್‌ನ ಮಾಲಕರ ಬೇಜವಾಬ್ದಾರಿ ಇಲ್ಲಿ ಪ್ರಮುಖವಾಗಿ ಕಾಣಿಸುತ್ತಿದೆ.

ಈ ಪರಿಸರದಲ್ಲಿ ಮಂಗಗಳ ಹಾವಳಿ ಅತಿಯಾಗಿದ್ದು, ಪರಿಸರದಲ್ಲಿರುವ ಜ್ಯೂಸ್‌, ತರಕಾರಿ ಹಾಗೂ ಹಣ್ಣುಹಂಪಲು ಮಾರಾಟದ ಅಂಗಡಿಗಳಿಗೆ ಮಂಗಗಳು ದಾಳಿ ಮಾಡುತ್ತಿರುವುದು ಮಾಮೂಲಾಗಿದೆ. ಈ ಮಧ್ಯೆಯೂ ಅಂಗಡಿಯವರ ನಿರ್ಲಕ್ಷ್ಯ ಸಾಂಕ್ರಾಮಿಕ ರೋಗಗಳನ್ನು ಹರಡುವ ಸಾಧ್ಯತೆಗಳನ್ನು ತೆರೆದಿಟ್ಟಿದೆ.

ಈ ನಿರ್ಲಕ್ಷ್ಯದ ಕುರಿತು ಸಾರ್ವಜನಿಕರ ಮೂಲಕ ಸ್ಥಳೀಯಾಡಳಿತ ಗ್ರಾ.ಪಂ. ಆಡಳಿತ, ಪೊಲೀಸ್‌ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಆದರೆ ಸಂಬಂಧಪಟ್ಟ ಉಳಿದ ಇಲಾಖೆಯೂ ಎಚ್ಚರಿಕೆಯನ್ನು ವಹಿಸಬೇಕಾಗಿದೆ ಎನ್ನುವುದು ಸಾರ್ವಜನಿಕ ಆಗ್ರಹ.

ಅಧಿಕಾರಿಗಳು ಗಮನಹರಿಸಲಿ
ವಿವಿಧ ಮಾರಣಾಂತಿಕ ರೋಗಗಳ ಕಾರಣಕ್ಕೆ ಜನರು ಭೀತರಾಗಿದ್ದಾರೆ. ಆದರೆ ಇದ್ಯಾವುದನ್ನೂ ತಲೆಗೆ ಹಾಕಿಕೊಳ್ಳದವರು ನಿರ್ಲಕ್ಷ್ಯ ಹಾಗೂ ನಿರ್ಭೀತಿಯ ವ್ಯಾಪಾರ ಮಾಡುತ್ತಿದ್ದಾರೆ. ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಇತ್ತ ಗಮನಹರಿಸಬೇಕಾಗಿದೆ.
– ದಿನಕರ ಬಂಗೇರ, ಸ್ಥಳೀಯ ನಿವಾಸಿ

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.