ಮುಂಗಾರು ಪೂರ್ವದಲ್ಲೇ ಮೈದುಂಬಿದ ಪಯಸ್ವಿನಿ


Team Udayavani, May 31, 2018, 3:10 AM IST

payaswini-30-5.jpg

ಸುಳ್ಯ: ಭಾಗಮಂಡಲ ಭಾಗದಲ್ಲಿ ಭರ್ಜರಿ ಮಳೆ ಸುರಿದ ಹಿನ್ನೆಲೆಯಲ್ಲಿ ಸುಳ್ಯ ನಗರದ ಸನಿಹದಲ್ಲಿ ಹಾದು ಹೋಗಿರುವ ಪಯಸ್ವಿನಿ ಮುಂಗಾರು ಪೂರ್ವದಲ್ಲಿಯೇ ತುಂಬಿ ಹರಿದು ಕೃಷಿಕರ ಮೊಗದಲ್ಲಿ ಸಂತಸ ಮೂಡಿದೆ. ಮಡಿಕೇರಿ ತಾಲೂಕಿನ ಭಾಗಮಂಡಲದ ಪಶ್ಚಿಮ ದಿಕ್ಕಿನಲ್ಲಿ ಉಗಮಗೊಂಡು ಜೋಡುಪಾಲದ ಮೂಲಕ ಅರಂತೋಡು, ಸುಳ್ಯ ನಗರ, ಪೈಚಾರು, ಜಾಲೂÕರು, ಪಂಜಿಕಲ್ಲು, ದೇವರಗುಂಡ ಮುರೂರು ಮೂಲಕ ಸಾಗಿ ಕೇರಳ ಸೇರುತ್ತದೆ. ಬೇಸಗೆ ಕಾಲದಲ್ಲಿ ಈ ನದಿ ತಟದೊದ್ದಗಿನ ಕೃಷಿಕರಿಗೆ ಪಯಸ್ವಿನಿಯೇ ಜೀವಧಾರೆ. ಸುಳ್ಯದ ನಗರಕ್ಕೆ ಕುಡಿಯುವ ನೀರಿಗೂ ಇದೆ ಮೂಲವಾಗಿದೆ.

ಜೀವಕಳೆ
ಎರಡು ವರ್ಷದ ಹಿಂದೆ ಎಪ್ರಿಲ್‌, ಮೇ ತಿಂಗಳಿನಲ್ಲಿ ಪಯಸ್ವಿನಿ ಸಂಪೂರ್ಣ ಬತ್ತಿ ಬರಡಾಗಿತ್ತು. ಆಗ ಕುಡಿಯುವ ನೀರಿಗೂ ಬರ ಬರುವ ಸಂದರ್ಭ ಎದುರಾಗಿತ್ತು. ಜೂನ್‌ ಮೊದಲ ವಾರದಲ್ಲಿ ಮಳೆಯಾದ ಕಾರಣ, ಆತಂಕ ದೂರವಾಗಿತ್ತು. ಆ ವರ್ಷ ಜುಲೈ ಅನಂತರವೇ ಮಳೆ ಹೆಚ್ಚಳಗೊಂಡು ನದಿಯಲ್ಲಿ ನೀರಿನ ಹರಿವು ಕಂಡಿತ್ತು. ಕಳೆದ ವರ್ಷವೂ ಬಿಸಿಲಿನ ತಾಪ ಮೇ ಅಂತ್ಯದ ತನಕ ಇದ್ದು, ಮಳೆ ಬಂದಿದ್ದರೂ, ನೀರಿನ ಮಟ್ಟ ಹೆಚ್ಚಳಗೊಂಡಿರಲಿಲ್ಲ.

ಮುಂಗಾರು ಪೂರ್ವ ಮಳೆ
ಈ ಬಾರಿ ಮಾರ್ಚ್‌, ಎಪ್ರಿಲ್‌, ಮೇ ತಿಂಗಳಿನಲ್ಲಿ ಮಳೆಯಾಗಿದೆ. ಪಯಸ್ವಿನಿ ಉಗಮದ ಸ್ಥಳದಲ್ಲಿ ಮುಂಗಾರು ಪೂರ್ವ ಮಳೆ ನಿರೀಕ್ಷೆಗೂ ಮೀರಿ ಸುರಿದ ಕಾರಣ, ಮೇ ಮೊದಲ ವಾರದಲ್ಲಿಯೇ ನದಿ ಹರಿವು ಹೆಚ್ಚಾಗಿತ್ತು. ಮೇ 9ರಂದು ಸುರಿದ ಮಳೆಯಿಂದ ನಗರದ ಕುಡಿಯುವ ನೀರಿನ ಪೂರೈಕೆಗಾಗಿ ನಾಗಪಟ್ಟಣದ ಬಳಿ ನಿರ್ಮಿಸಲಾದ ಮರಳಿನ ಕಟ್ಟದಿಂದ ಹೊರ ಹರಿವು ಕಂಡಿತ್ತು. ಮಾರ್ಚ್‌ನಲ್ಲಿ 49 ಮಿ.ಮೀ., ಎಪ್ರಿಲ್‌ನಲ್ಲಿ 125 ಮಿ.ಮೀ., ಮೇ ತಿಂಗಳಲ್ಲಿ 516 ಮಿ.ಮೀ. ಮಳೆ ಸುರಿದಿದೆ. ಇವೆಲ್ಲವೂ ನದಿಯ ನೀರಿನ ಮಟ್ಟ ಹೆಚ್ಚಳಕ್ಕೆ ಪೂರಕವಾಗಿವೆ.

ನೀರಿನ ಸೆಲೆ
ಕೆಲ ದಿನಗಳಿಂದ ಮಳೆಯಾದ ಪರಿಣಾಮ ಕೆಲವೆಡೆ ಬಾವಿ, ಕೆರೆಯಲ್ಲಿ ನೀರಿನ ಸೆಲೆ ಕಂಡಿದೆ. ಸಣ್ಣ ಪುಟ್ಟ ತೋಡು, ಹೊಳೆಗಳಲ್ಲಿಯು ಕೆಂಬಣ್ಣದ ನೀರು ಹರಿದಿದೆ. ಮಳೆ ನಿರಂತರವಾಗಿ ಸುರಿದರೆ, ನೀರಿನ ಮೂಲಗಳು ಭರ್ತಿ ಆಗುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.