ಸಮಾಜಕ್ಕೆ ಶಾಂತಿ-ಸಾಮರಸ್ಯದ ಸಂದೇಶ: ಜೈನ್‌


Team Udayavani, Apr 18, 2019, 6:00 AM IST

6

ಬಂಟ್ವಾಳ: ವಿಶ್ವಕ್ಕೆ ಶಾಂತಿ- ಸಹಬಾಳ್ವೆ- ಅಹಿಂಸಾ ತತ್ತ್ವವನ್ನು ಸಾರಿದ ಜೈನ ಧರ್ಮವು ಭಗವಾನ್‌ ಶ್ರೀ ಮಹಾವೀರರ ಪುಣ್ಯ ಜನ್ಮದಿನ ಆಚರಣೆ ಮೂಲಕ ಸಮಾಜಕ್ಕೆ ಶಾಂತಿಯ ಸಾಮರಸ್ಯದ ಸಂದೇಶವನ್ನು ಪುನರಪಿ ಸ್ಮರಿಸುವ ಕೆಲಸ ಮಾಡುತ್ತಿದೆ ಎಂದು ಭಾರತೀಯ ಜೈನ್‌ ಮಿಲನ್‌ ವಲಯ-8ರ ಉಪಾಧ್ಯಕ್ಷ ಸುದರ್ಶನ್‌ ಜೈನ್‌ ಹೇಳಿದರು.

ಎ. 17ರಂದು ಬಿ.ಸಿ. ರೋಡ್‌ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಜಿಲ್ಲಾ ಆಡಳಿತ, ತಾ| ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ, ಕಂದಾಯ ಇಲಾಖೆ ಬಂಟ್ವಾಳ ಮತ್ತು ಭಾರತೀಯ ಜೈನ್‌ ಮಿಲನ್‌ ಬಂಟ್ವಾಳ ಶಾಖೆ ಸಂಯುಕ್ತ ಆಶ್ರಯದಲ್ಲಿ ಆಚರಿಸಿದ ಮಹಾವೀರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಭಾರತೀಯ ಜೈನ್‌ ಮಿಲನ್‌ ಘಟಕದ ಅಧ್ಯಕ್ಷ ಬ್ರಿಜೇಶ್‌ ಜೈನ್‌ ಮಾತನಾಡಿ, ಮಹಾವೀರರು ಮಾನವ ಜನಾಂಗಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಶಾಂತಿ-ಸಹಬಾಳ್ವೆ, ಪ್ರೀತಿ-ವಿಶ್ವಾಸದ ನಮ್ಮ ನಡೆಯು ಇಂದಿನ ಕಾಲಘಟ್ಟದಲ್ಲಿ ಅತ್ಯಂತ ಮಹತ್ವದ್ದು ಎಂದರು.

ದ.ಕ. ಜಿ.ಪಂ. ಉಪಕಾರ್ಯದರ್ಶಿ ಮತ್ತು ಬಂಟ್ವಾಳ ತಾ| ಸಹಾಯಕ ಚುನಾ ವಣಾಧಿಕಾರಿ ಎಸ್‌.ಸಿ. ಮಹೇಶ್‌, ಉಪ ತಹಶೀಲ್ದಾರ್‌ ರಾಜೇಶ್‌, ರಾಷ್ಟ್ರೀಯ ಹಬ್ಬ ಗಳ ಆಚರಣ ಸಮಿತಿ ವಿಷಯ ನಿರ್ವಾಹಕ ಎನ್‌. ವಿಶುಕುಮಾರ್‌, ಭಾರತೀಯ ಜೈನ್‌ ಮಿಲನ್‌-8ರ ಕಾರ್ಯದರ್ಶಿ ಸುಭಾಶ್ಚಂದ್ರ ಜೈನ್‌, ಜೈನ ಸಮಾಜದ ಹಿರಿಯರಾದ ಪಿ. ಜಿನರಾಜ ಆರಿಗ, ಕಾರ್ಯದರ್ಶಿ ಗೀತಾ ಜಿನಚಂದ್ರ, ಕೋಶಾಧಿಕಾರಿ ಚಂದ್ರಕಾಂತ್‌ ಜೈನ್‌ ಪೆರಿಯಾರ್‌, ಬಂಟ್ವಾಳ ನಿಯೋಜಿತ ಅಧ್ಯಕ್ಷ ಡಾ| ಸುದೀಪ್‌, ಕಾರ್ಯದರ್ಶಿ ಜಯಕೀರ್ತಿ, ಕೋಶಾಧಿಕಾರಿ ಅಜಿತ್‌ ಕುಮಾರ್‌ ಜೈನ್‌, ಉಪಾಧ್ಯಕ್ಷ ರಾಜಪ್ರಸಾದ್‌ ಆರಿಗ, ಜೈನ್‌ ಮಿಲನ್‌ ಸದಸ್ಯರಾದ ಸ್ವಪ್ನಾ ಚಂದ್ರಪ್ರಭ, ಭರತ್‌ರಾಜ್‌ ಜೈನ್‌, ಮಹಾವೀರ್‌ ಜೈನ್‌, ಧನಂಜಯ ಹೆಗಡೆ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅನಂತರ ಜೈನ್‌ ಮಿಲನ್‌ ಎಲ್ಲ ಪದಾಧಿಕಾರಿಗಳು ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆಗೆ ತೆರಳಿ ಹಣ್ಣು ಹಂಪಲು ವಿತರಿಸಿದರು. ತಾಲೂಕಿನ ಜಿನ ಚೈತ್ಯಾಲಯಗಳಲ್ಲಿ ಇಡೀ ದಿನ ಮಹಾವೀರ ಜಯಂತಿ ಪ್ರಯುಕ್ತ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಮಿಲನ್‌ ಪದಾಧಿಕಾರಿಗಳು ಬಸದಿಗಳಿಗೆ ತೆರಳಿ ಮಹಾವೀರರ ಸಂದೇಶವನ್ನು ಜೈನ ಶ್ರಾವಕರಿಗೆ ಪ್ರಸ್ತುತಪಡಿಸುವ ಕಾರ್ಯಕ್ರಮ ನಡೆಯಿತು.

ಅಹಿಂಸಾ ತತ್ತ್ವ
ತಾಲೂಕು ತಹಶೀಲ್ದಾರ್‌ ಸಣ್ಣರಂಗಯ್ಯ ಕಾರ್ಯಕ್ರಮ ಉದ್ಘಾಟಿಸಿ, ಮಹಾವೀರರ ಸಂದೇಶ ಆಧುನಿಕ ಜಗತ್ತಿಗೆ ಹಿಂದಿಗಿಂತ ಹೆಚ್ಚು ಪ್ರಸ್ತುತವಾಗಿದೆ. ಅಹಿಂಸಾ ತತ್ತ್ವವನ್ನು ನಾವೆಲ್ಲ ಪಾಲಿಸುವುದು ಇಂದಿನ ಔಚಿತ್ಯವೂ ಆಗಿದೆ ಎಂದರು.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.