ಅಹಿತಕರ ಸನ್ನಿವೇಶವಿಲ್ಲದೆ ಸಂಜೆಯ ತನಕ ಶಾಂತಿಯುತ ಮತದಾನ


Team Udayavani, Sep 1, 2018, 11:22 AM IST

secptember-7.jpg

ಪುತ್ತೂರು : ನಗರ ಸ್ಥಳೀಯಾಡಳಿತ ನಗರಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪುತ್ತೂರು ನಗರಸಭಾ ವ್ಯಾಪ್ತಿಯ 31 ವಾರ್ಡ್‌ಗಳ 41 ಮತಗಟ್ಟೆಗಳಲ್ಲಿ ಶುಕ್ರವಾರ ಶಾಂತಿಯುತ ಮತದಾನ ನಡೆಯಿತು. ಬೆಳಗ್ಗೆ 7 ಗಂಟೆಯಿಂದ ಆರಂಭಗೊಂಡು ಸಂಜೆ 5 ಗಂಟೆಯ ತನಕ ನಡೆದ ಮತದಾನ ಪ್ರಕ್ರಿಯೆಯಲ್ಲಿ ಮತದಾರ ಪ್ರಭುಗಳು ತಮ್ಮ ಹಕ್ಕು ಚಲಾಯಿಸಿದರು.

ಬೆಳಗ್ಗೆ ಬಿರುಸಿನ ಮತದಾನವಾಗಿ ಅನಂತರ ವೇಗ ಕಡಿಮೆಯಾದರೂ ಸಂಜೆಯ ಹೊತ್ತಿಗೆ ಮತ್ತೆ ಬಿರುಸಿನ ಮತದಾನ ನಡೆಯಿತು. ಬೆಳಗ್ಗೆ 9 ಗಂಟೆಗೆ 14.98 ಶೇ., 11 ಗಂಟೆಗೆ 38 ಶೇ., ಮಧ್ಯಾಹ್ನ 1 ಗಂಟೆಗೆ 45.02 ಶೇ. ಮತದಾನವಾದರೆ, 5 ಗಂಟೆಗೆ 68.69 ಶೇ. ಮತಚಲಾವಣೆಯಾಗಿದೆ. ಒಟ್ಟು 39,745 ಮತದಾರ ರಲ್ಲಿ 27,299 ಮಂದಿ ಮತಚ ಲಾಯಿಸಿದ್ದಾರೆ. ಅಪರಾಹ್ನದ ಬಳಿಕ ಮತದಾನದ ಪ್ರಕ್ರಿಯೆ ಒಂದಷ್ಟು ಬಿರುಸು ಪಡೆದುಕೊಂಡಿತು.

ಮಚ್ಚಿಮಲೆ, ಹಾರಾಡಿ, ಸಂಪ್ಯ ಶಾಲಾ ಮತಗಟ್ಟೆಯಲ್ಲಿ ಬೆಳಗ್ಗಿನಿಂದಲೇ ಬಿರುಸಿನ ಮತ ದಾನ ಪ್ರಕ್ರಿಯೆ ನಡೆಯಿತು. ಸಂತ ಫಿಲೋಮಿನಾ ಮತದಾನ ಕೇಂದ್ರದಲ್ಲಿ ಮಧ್ಯಾಹ್ನದ ಸಮಯದಲ್ಲಿ ಮತದಾರರಿಲ್ಲದೆ ಬಿಕೋ ಎನ್ನುತ್ತಿತ್ತು. ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲೂ ಈ ಮತದಾನ ಕೇಂದ್ರದಲ್ಲಿ ಕನಿಷ್ಠ ಮತ ಚಲಾವಣೆಯಾಗಿತ್ತು. ಸಾಲ್ಮರ ಶಾಲೆಯ ಮತದಾನ ಕೇಂದ್ರದಲ್ಲೂ ನಿಧಾನ ಗತಿಯ ಮತದಾನ ನಡೆಯಿತು. ಪಟ್ನೂರು ವ್ಯಾಪ್ತಿಯ ವಿವೇಕಾನಂದ ಪಾಲಿಟೆಕ್ನಿಕ್‌ ಮತದಾನ ಕೇಂದ್ರದಲ್ಲಿ ಮಧ್ಯಾಹ್ನವೇ ಸುಮಾರು 70 ಶೇ. ಮತದಾನವಾಗುವ ಮೂಲಕ ಬಿರುಸಿನ ಮತಚಲಾವಣೆಯಲ್ಲಿ ಮತದಾರರು ಭಾಗಿಯಾದರು.

ಪರ್ಲಡ್ಕದಲ್ಲಿ ಗೊಂದಲ: ದೂರು
ನಗರಸಭೆಯ 19ನೇ ವಾರ್ಡ್‌ ಪುತ್ತೂರು ಕಸಬಾ -10ರಲ್ಲಿ ಬೆಳಗ್ಗೆ ಪ್ರಾಯೋಗಿಕ ಮತ ಚಲಾವಣೆಯ ಹಂತದಲ್ಲೇ ದೋಷ ಪೂರಿತ ಮತಚಲಾವಣೆಯಾಗಿ ಒಂದಷ್ಟು ಗೊಂದಲಕ್ಕೆ ಕಾರಣವಾಯಿತು. ಮತ ದಾನ ಆರಂಭಕ್ಕೆ ಮೊದಲು ಪರೀಕ್ಷಾ ಮತ ಚಲಾವಣೆಯ ಸಂದರ್ಭ ಪ್ರಥಮ ಹಂತದಲ್ಲಿ ಬಿಜೆಪಿ ಏಜೆಂಟ್‌ ಮೂಲಕ 16, ಕಾಂಗ್ರೆಸ್‌ ಏಜೆಂಟ್‌ ಮೂಲಕ 16 ಹಾಗೂ ಅಧಿಕಾರಿಯ ಮೂಲಕ ನೋಟಾ 18 ಸೇರಿ ಒಟ್ಟು 50 ಮತ ಚಲಾವಣೆ ನಡೆಸಲಾಯಿತು. ಚಲಾವಣೆಯಾದ ಮತಗಳನ್ನು ಪರಿಶೀಲಿಸಿದ ಸಂದರ್ಭ ರಿಸಲ್ಟ್ನಲ್ಲಿ ಕಾಂಗ್ರೆಸ್‌ಗೆ 12, ಬಿಜೆಪಿಗೆ 17, ನೋಟಾಕ್ಕೆ 21 ಮತಚಲಾವಣೆಯಾಗಿರುವುದನ್ನು ತೋರಿಸಿತ್ತು.

ರಸ್ತೆಗಳು ಬಿಕೋ…
ಚುನಾವಣೆಯ ಹಿನ್ನೆಲೆಯಲ್ಲಿ ನಗರಸಭಾ ಚುನಾ ವಣೆ ನಡೆಯುವ ವ್ಯಾಪ್ತಿಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಶಾಲೆ – ಕಾಲೇಜು, ಸರಕಾರಿ ಕಚೇರಿಗಳಿಗೆ ರಜೆ ನೀಡಲಾಗಿತ್ತು. ರಜೆ ಘೋಷಣೆಯಾಗಿದ್ದರೂ ಕೆಲವೊಂದು ಪ್ರಾಥಮಿಕ ಶಾಲೆಗಳು ಕಾರ್ಯ ನಿರ್ವಹಿಸಿದವು. ಚುನಾವಣೆಯ ಹಿನ್ನೆಲೆಯಲ್ಲಿ ನಗರದ ರಸ್ತೆಗಳಲ್ಲಿ ವಾಹನಗಳು, ಜನರ ಓಡಾಟ ಕಡಿಮೆಯಾಗಿತ್ತು.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.