ಪೇಜಾವರ ಶ್ರೀಗಳು ಕಲಿತ, ಅವರ ಹುಟ್ಟೂರು ರಾಮಕುಂಜದ ಹೆಮ್ಮೆಯ ಶಾಲೆ

100 ವರ್ಷಗಳಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಬೆಳಕು ನೀಡಿದ ವಿದ್ಯಾ ದೇಗುಲ

Team Udayavani, Nov 8, 2019, 5:32 AM IST

cc-42

19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು ಸುತ್ತಮುತ್ತಲಿನ ಊರುಗಳಿಗೆ ಅಕ್ಷರಶಃ ಜ್ಞಾನ ದೇಗುಲಗಳೇ ಆಗಿವೆ. ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ಇಂತಹ ಶತಮಾನದ ಹಿರಿಮೆಯ ಕನ್ನಡ ಮಾಧ್ಯಮ ಸರಕಾರಿ ಶಾಲೆಗಳನ್ನು ಗುರುತಿಸಿ ಪರಿಚಯಿಸುವ ಪ್ರಯತ್ನ ನಮ್ಮದು.

1919 ಶಾಲೆ ಆರಂಭ
ಪ್ರಸ್ತುತ 350 ಮಕ್ಕಳ ಕಲಿಕೆ

ಕಡಬ: ಯತಿ ಶ್ರೇಷ್ಠ ಉಡುಪಿಯ ಪೇಜಾವರ ಮಠಾಧೀಶರಾದ ಶ್ರೀ ವಿಶ್ವೇಶತೀರ್ಥ ಶ್ರೀಗಳ ಹುಟ್ಟೂರು ರಾಮಕುಂಜ. ಶ್ರೀಗಳು ತಮ್ಮ ಆರಂಭಿಕ ಶಿಕ್ಷಣವನ್ನು ಪಡೆದ, ಪ್ರಸ್ತುತ ಅವರದೇ ಅಧ್ಯಕ್ಷತೆಯಲ್ಲಿ ಮುನ್ನಡೆಯುತ್ತಿರುವ ರಾಮಕುಂಜದ ಶ್ರೀ ರಾಮಕುಂಜೇಶ್ವರ ಅನುದಾನಿತ ಸಂಸ್ಕೃತ ಹಿರಿಯ ಪ್ರಾಥಮಿಕ ಶಾಲೆ ಇದೀಗ ಶತಮಾನೋತ್ಸವವನ್ನು ಪೂರೈಸಿದ ಸಂಭ್ರಮದಲ್ಲಿದೆ. 100 ವರ್ಷಗಳ ಹಿಂದೆ ಸಂಸ್ಕೃತ ಶಿಕ್ಷಣಕ್ಕಾಗಿ ಬೆರಳೆಣಿಕೆಯ ವಿದ್ಯಾರ್ಥಿಗಳೊಂದಿಗೆ ಮುಷ್ಟಿ ಫಂಡ್‌ ಯೋಜನೆಯೊಂದಿಗೆ ಗುರುಕುಲ ಮಾದರಿಯಲ್ಲಿ ಶ್ರೀ ರಾಮಕುಂಜೇಶ್ವರ ದೇವಸ್ಥಾನದ ಗೋಪುರದಲ್ಲಿ ಆರಂಭವಾದ ಈ ವಿದ್ಯಾಲಯ ಸುಮಾರು 60 ವರ್ಷಗಳ ಕಾಲ ಅಲ್ಲಿಯೇ ಕಾರ್ಯ ನಿರ್ವಹಿಸಿತ್ತು. ರಾಮಕುಂಜದ ಈ ಶಾಲೆಯಲ್ಲಿ ವಿದ್ಯೆ ಕಲಿತ ಪೇಜಾವರ ಶ್ರೀಗಳು ವಿಶ್ವ ಪ್ರಸಿದ್ಧರಾಗಿದ್ದರೆ ಇನ್ನೂ ಹಲವರು ದೇಶ ವಿದೇಶಗಳಲ್ಲಿ ಉನ್ನತ ಉದ್ಯೋಗದಲ್ಲಿದ್ದಾರೆ. 27 ನಕ್ಷತ್ರಗಳಿಗೆ ಅನ್ವಯಿಸುವ ಔಷಧೀಯ ಗುಣಗಳ ವೃಕ್ಷಗಳನ್ನು ಹೊಂದಿರುವ ಈ ಶಾಲೆಯ ನಕ್ಷತ್ರವನ ಅತ್ಯಂತ ವಿಶಿಷ್ಟವಾಗಿದೆ.

ಪೇಜಾವರ ಶ್ರೀಗಳು ಕಲಿತ ಶಾಲೆ
ಶಾಲೆಯು ಶ್ರೀ ರಾಮಕುಂಜೇಶ್ವರ ದೇವಸ್ಥಾನದ ಗೋಪುರದಲ್ಲಿದ್ದಾಗ (1938) ಪೇಜಾವರ ಶ್ರೀಗಳು ಇಲ್ಲಿ ವೆಂಕಟ್ರಾಮ ಎನ್ನುವ ತಮ್ಮ ಪೂರ್ವಾಶ್ರಮದ ಹೆಸರಿನಲ್ಲಿ ಆರಂಭಿಕ ಶಿಕ್ಷಣ ಪಡೆದಿದ್ದರು. ಇಂದು ಬೃಹದಾಕಾರವಾಗಿ ಬೆಳೆದಿರುವ ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆಯಲ್ಲಿ ಪ್ರಾಥಮಿಕ ಶಿಕ್ಷಣದಿಂದ ಪದವಿ ತನಕ ಕನ್ನಡ ಹಾಗೂ ಆಂಗ್ಲ ಮಾಧ್ಯಮದಲ್ಲಿ 2,500ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ವಿವಿಧೆಡೆಯಿಂದ ಬಂದು ಶಿಕ್ಷಣ ಪಡೆಯುತ್ತಿದ್ದಾರೆ. ಇಲ್ಲಿ ಸುದೀರ್ಘ‌ ಕಾಲ ಶಿಕ್ಷಕರಾಗಿ, ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಟಿ. ನಾರಾಯಣ ಭಟ್‌ ರಾಜ್ಯ, ರಾಷ್ಟ್ರಪ್ರಶಸ್ತಿ ಪುರಸ್ಕೃತರಾಗುವ ಮೂಲಕ ಶಾಲೆಯ ಹಿರಿಮೆಗೆ ಮತ್ತೂಂದು ಗರಿ ಮೂಡಿಸಿದವರು. ಕನ್ನಡ ಮಾಧ್ಯಮ ಶಾಲೆಗಳು ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚುವ ಭೀತಿಯನ್ನು ಎದುರಿಸುತ್ತಿರುವ ಇಂದಿನ ಕಾಲಘಟ್ಟದಲ್ಲಿ ಈ ಶಾಲೆಯಲ್ಲಿ ಇಂದಿಗೂ ಅತೀ ಹೆಚ್ಚು ವಿದ್ಯಾರ್ಥಿಗಳಿರುವುದು ಹೆಮ್ಮೆಯ ಸಂಗತಿ. ದ್ರಾವಿಡ ಬ್ರಾಹ್ಮಣ ವಿದ್ಯಾವರ್ಧಕ ಸಭಾದಿಂದ ಆರಂಭಗೊಂಡ ಈ ಶಾಲೆ ಕಾಲಕ್ಕೆ ತಕ್ಕಂತೆ ಹಂತ ಹಂತವಾಗಿ ಬೆಳೆದು ಬಂದು ಇಂದು ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾ ಎನ್ನುವ ನೋಂದಾಯಿತ ಸಂಸ್ಥೆಯ ಅಧೀನದಲ್ಲಿ ಶೈಕ್ಷಣಿಕ ಸೇವೆಯನ್ನು ಯಶಸ್ವಿಯಾಗಿ ನೀಡುತ್ತಾ ಮುನ್ನಡೆಯುತ್ತಿದೆ. ಆರಂಭಿಕ ತ್ರಾಸದ ದಿನಗಳಲ್ಲಿ ಸಂಸ್ಥೆಯ ಬೆಳವಣಿಗೆಗೆ ಶ್ರಮಿಸಿದ ಎರಟಾಡಿ, ಈರಕೀ ಮಠ, ಇಜ್ಜಾವು, ಅರ್ಬಿ, ಮೀಯಾಳ, ಕಲ್ಲೇರಿ ಮುಂತಾದ ಮನೆಗಳ ಹಿರಿಯರ ಸೇವೆ ಇಲ್ಲಿ ಉಲೇಖನೀಯ.

ಸೇವೆ ಸಲ್ಲಿಸಿದ ಶಿಕ್ಷಕರು
ಮುಖ್ಯಪ್ರಾಣ ತಂತ್ರಿ, ಅಲೆವೂರು ಸೀತಾರಾಮ ಆಚಾರ್‌, ಶ್ಯಾಮ ಪಾಂಗಣ್ಣಾಯ, ಶ್ರೀನಿವಾಸ ಶಾಸ್ತ್ರೀ, ಶಂಕರ ತೋಳ್ಪಾಡಿತ್ತಾಯ, ಕೇದಗೆ ನಾರಾಯಣ ಆಚಾರ್‌, ಅನಂತಕೃಷ್ಣ ಭಟ್ಟ 1950ರ ಮೊದಲು ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರೆ, ಬಳಿಕ ಕೆ. ಕೃಷ್ಣ ಉಪಾಧ್ಯಾಯ ಕೋಡಿಲ, ಎಂ. ಕೃಷ್ಣಾಚಾರ್‌ ಮರಕ್ಕೂರು, ಪಿ. ಮಹಾಬಲ ಭಟ್‌, ಕೆ. ರಾಮಕೃಷ್ಣ ಎಡಪಡಿತ್ತಾಯ, ಎಂ. ರಾಮಚಂದ್ರ ಆಚಾರ್‌ ಮರಕ್ಕೂರು, ಕೆ. ರಾಮ ಉಪಾಧ್ಯಾಯ ಕೋಡಿಲ, ಕೆ. ರಘುಪತಿ ಭಟ್‌ ಬೆದ್ರಮಾರ್‌, ಕೆ. ನರಸಿಂಹ ಆಚಾರ್‌, ಕೆ. ನಾರಾಯಣ ಆಚಾರ್‌, ಬಿ. ರಾಮರಾವ್‌, ಮೋಹನ ಶಬರಾಯ, ಗೋಪಾಲಕೃಷ್ಣ ಆಚಾರ್‌ ಕಾರ್ಕಳ, ವಿಷ್ಣುಮೂರ್ತಿ ಹೆಬ್ಟಾರ್‌, ನಾರಾಯಣ ಕಾರಂತ, ರಾಮಕೃಷ್ಣ ಕಾರಂತ, ಎಸ್‌. ಪದ್ಮನಾಭ ಕಲ್ಲೂರಾಯ, ಗೋಪಾಲಕೃಷ್ಣ ಶಗ್ರಿತ್ತಾಯ, ಇ. ರಮೇಶ ಉಪಾಧ್ಯಾಯ, ಎಂ. ನಾರಾಯಣ ಆಚಾರ್‌, ಸುಬ್ರಾಯ ಕಲ್ಲೂರಾಯ, ವೆಂಕಟ್ರಮಣ ಉಪಾಧ್ಯಾಯ, ಎಂ.ಜಿ. ವಸಂತಿ ಬಾೖ, ಕೆ. ನಾರಾಯಣ ಮುಚ್ಚಿಂತಾಯ, ಟಿ. ನಾರಾಯಣ ಭಟ್‌, ಸುಶೀಲಾ, ನಿರ್ಮಲಾ ದೇವಿ ಎಂ., ಸಂಧ್ಯಾ ಎಂ., ಇಂದಿರಾ, ರೇಖಾ ಎಸ್‌. ಹಾಗೂ ವೀರಪ್ಪ ಎಸ್‌.ವಿ. ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ.


ಉತ್ತಮ ಶಿಕ್ಷಣದಿಂದ ಮಾತ್ರ ಸಂಸ್ಕಾರವಂತ ವ್ಯಕ್ತಿಗಳನ್ನು ರೂಪಿಸಲು ಸಾಧ್ಯ. ಪಟ್ಟಣ ಪ್ರದೇಶಕ್ಕೆ ಸರಿಸಾಟಿಯಾದ ಗುಣಮಟ್ಟದ ಶಿಕ್ಷಣದೊಂದಿಗೆ ಗ್ರಾಮೀಣ ಭಾಗದಲ್ಲಿ ಮೌಲ್ಯಾಧಾರಿತ ಮತ್ತು ಸಂಸ್ಕಾರಯುತ ಶಿಕ್ಷಣ ನೀಡುವ ಉದ್ದೇಶದಿಂದ ಆರಂಭಗೊಂಡ ಈ ಶಿಕ್ಷಣ ಸಂಸ್ಥೆಯು ಇಂದು ಎಲ್ಲರ ಸಹಕಾರದೊಂದಿಗೆ ಬೃಹದಾಕಾರವಾಗಿ ಬೆಳೆದು ಶತಮಾನೋತ್ಸವವನ್ನು ಸಂಭ್ರಮದಿಂದ ಆಚರಿಸಿಕೊಂಡಿರುವುದು ಸಂತಸದ ಸಂಗತಿ.

-ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ, ಸಂಸ್ಥೆಯ ಅಧ್ಯಕ್ಷರು

ಹಳ್ಳಿಯ ಬಡ ಮಕ್ಕಳು ಕೂಡ ಕಡಿಮೆ ಖರ್ಚಿನಲ್ಲಿ ಗುಣಮಟ್ಟದ ಶಿಕ್ಷಣ ಪಡೆಯಬೇಕೆಂಬ ಪ್ರೇಜಾವರ ಶ್ರೀಗಳ ಆಶಯದಂತೆ ಕನ್ನಡ ಮಾಧ್ಯಮದಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವ ನಮ್ಮ ಶಾಲೆಯು ಶತಮಾನೋತ್ಸವ ಸಂಭ್ರಮವನ್ನು ಅದ್ದೂರಿಯಾಗಿ ಆಚರಿಸಿದೆ. ಪ್ರೇಜಾವರ ಶ್ರೀಗಳಂತಹ ವಿಶ್ವಮಾನ್ಯರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಈ ಸಂಸ್ಥೆಯಲ್ಲಿ ಸೇವೆ ಸಲ್ಲಿಸಲು ಅವಕಾಶ ಲಭಿಸಿರುವುದು ನಮ್ಮ ಪೂರ್ವ ಜನ್ಮದ ಪುಣ್ಯವೇ ಸರಿ.
-ಸುಶೀಲಾ, ಮುಖ್ಯಶಿಕ್ಷಕಿ

-ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.