ಅನರ್ಹ ಪಡಿತರ ಚೀಟಿಗೆ ದಂಡ; ಬೆಳ್ತಂಗಡಿ ತಾಲೂಕಿನಲ್ಲಿ ಗರಿಷ್ಠ ಸಂಗ್ರಹ

ಅತ್ಯಧಿಕ 10 ಲಕ್ಷ ರೂ. ದಂಡ; ನ. 4ರಿಂದ ದಂಡ ವಿಧಿಸದಂತೆ ಮೌಖಿಕ ಆದೇಶ

Team Udayavani, Nov 6, 2019, 4:03 AM IST

nn-63

ಬೆಳ್ತಂಗಡಿ: ಅನರ್ಹರು ಬಿಪಿಎಲ್‌ ಪಡಿತರ ಚೀಟಿಯ ಪ್ರಯೋಜನ ಪಡೆಯು ವುದನ್ನು ತಪ್ಪಿಸಲು ಜಾರಿಗೊಳಿಸಿದ್ದ ದಂಡ ವಸೂಲಾತಿಯಲ್ಲಿ ಬೆಳ್ತಂಗಡಿ ತಾಲೂಕು ಅವಿಭಜಿತ ದ.ಕ.ದಲ್ಲಿ ಮುಂಚೂಣಿಯಲ್ಲಿದೆ.

ಒಟ್ಟು 648 ಅಕ್ರಮ ಬಿಪಿಎಲ್‌ ಪಡಿತರ ಚೀಟಿ ಗಳು ಕಂಡುಬಂದಿದ್ದು, ದಂಡ 10 ಲಕ್ಷ ರೂ. ತಲುಪಿದೆ. ಈಗಾಗಲೇ 7 ಲಕ್ಷ ರೂ. ವಸೂಲಾಗಿದ್ದು, ಇನ್ನುಳಿದವರು ಬ್ಯಾಂಕ್‌ಗೆ
ದಂಡ ಕಟ್ಟಿ ಚಲನ್‌ ನೀಡುವುದು ಬಾಕಿಯಿದೆ. ಸರಕಾರಿ ಹುದ್ದೆಯಲ್ಲಿದ್ದು, ಬಿಪಿಎಲ್‌ ಸವಲತ್ತು ಪಡೆಯುತ್ತಿದ್ದ ವ್ಯಕ್ತಿಯೋರ್ವರಿಗೆ ಗರಿಷ್ಠ 14,700 ರೂ. ದಂಡ ವಿಧಿಸಲಾಗಿದೆ.

ದ.ಕ., ಉಡುಪಿಯಲ್ಲಿ ಅಕ್ಟೋಬರ್‌ ಅಂತ್ಯಕ್ಕೆ 2,945 ಅಕ್ರಮ ಬಿಪಿಎಲ್‌ ಚೀಟಿಗಳನ್ನು ಆಹಾರ ಇಲಾಖೆ ಪತ್ತೆಹಚ್ಚಿ, ರದ್ದುಗೊಳಿಸಿದೆ. ಕೆಲವರು ತಾವಾಗಿಯೇ ಎಪಿಎಲ್‌ಗೆ ಬದಲಾಯಿಸಿಕೊಂಡಿದ್ದಾರೆ.

ದಂಡ ಸ್ಥಗಿತ
ಈ ನಡುವೆ ರಾಜ್ಯ ಸರಕಾರ ಮಂಗಳ ವಾರದಿಂದಲೇ ದಂಡ ವಿಧಿಸದಂತೆ ಮೌಖೀಕ ಆದೇಶ ಹೊರಡಿಸಿದ್ದು, ಈಗಾಗಲೇ ಚಲನ್‌ ನೀಡಿದವರ ಹಣ ಪಡೆಯದಂತೆ ಬ್ಯಾಂಕ್‌ಗಳಿಗೆ ಸೂಚಿಸಲಾಗಿದೆ. ಲಿಖೀತವಾಗಿ ಇನ್ನಷ್ಟೇ ಬರಬೇಕಿದೆ. ಈಗಾಗಲೇ ದಂಡ ಪಾವತಿಸಿದವರಿಗೆ ಮರುಪಾವತಿ ಆಗಲಿ ದೆಯೇ ಎಂಬುದು ಸ್ಪಷ್ಟವಾಗಿಲ್ಲ.

ದ.ಕ.: 1,899 ಕಾರ್ಡ್‌
ದ.ಕ. ಜಿಲ್ಲೆಯಲ್ಲಿ ಬಿಪಿಎಲ್‌ ಕಾರ್ಡ್‌ ಹೊಂದಿದ್ದ 1,899 ಅನರ್ಹರನ್ನು ಆಗಸ್ಟ್‌ ನಿಂದ ಅಕ್ಟೋಬರ್‌ ಅವಧಿಯಲ್ಲಿ ಪತ್ತೆಹಚ್ಚಲಾಗಿದೆ. ಮಂಗಳೂರು ನಗರ – 87, ಮಂಗಳೂರು ತಾಲೂಕು – 261, ಬಂಟ್ವಾಳ – 547, ಪುತ್ತೂರು – 274, ಬೆಳ್ತಂಗಡಿ – 640, ಸುಳ್ಯ – 119 ಅನರ್ಹ ಕುಟುಂಬಗಳ ಬಿಪಿಎಲ್‌ ಕಾರ್ಡ್‌ಗಳು ರದ್ದಾಗಿವೆ.

ಉಡುಪಿ: 1,046 ಪಡಿತರ ಚೀಟಿ
ಉಡುಪಿಯಲ್ಲಿ ಪತ್ತೆಯಾದ 1,046 ಚೀಟಿಗಳ ಪೈಕಿ 693 ಮಂದಿ ಸ್ವಪ್ರೇರಣೆ ಯಿಂದ ಹಿಂದಿರುಗಿಸಿದರೆ, 350 ಕುಟುಂಬಗಳ ಚೀಟಿಯನ್ನು ಎಪಿಎಲ್‌ಗೆ ಪರಿವರ್ತಿಸಲಾಗಿದೆ. 3 ಕುಟುಂಬಗಳು ಅನರ್ಹವಾಗಿ ದ್ದರೂ ಬಿಪಿಎಲ್‌ ಚೀಟಿ ಹೊಂದಿರುವ ಬಗ್ಗೆ ಸಾರ್ವಜನಿಕರ ದೂರಿನ ಮೇರೆಗೆ ವಶಪಡಿಸಿಕೊಳ್ಳಲಾಗಿದೆ ಎಂದು ಉಡುಪಿ ಆಹಾರ – ನಾಗರಿಕ ಪೂರೈಕೆ ಇಲಾಖೆ ಉಪ ನಿರ್ದೇಶಕ ಕುಸುಮಾಧರ್‌ ತಿಳಿಸಿದ್ದಾರೆ.

ದಂಡಕ್ಕೆ ಮಾನದಂಡ
ಸರಕಾರದ ಮಾನದಂಡ ಮೀರಿ ಪಡಿತರ ಚೀಟಿ ಪಡೆದ ದಿನಾಂಕದಿಂದ ಬಿಪಿಎಲ್‌ ಕಾರ್ಡ್‌ ಸರೆಂಡರ್‌ ಮಾಡಿದ ದಿನದ ವರೆಗೆ ದಂಡ ಲೆಕ್ಕ ಹಾಕಲಾಗುತ್ತದೆ. ಒಬ್ಬ ವ್ಯಕ್ತಿಗೆ ಸರಕಾರ 7 ಕೆ.ಜಿ. ಅಕ್ಕಿ ನೀಡುತ್ತಿದೆ. ಕುಟುಂಬದಲ್ಲಿ ಎಷ್ಟು ಸದಸ್ಯರು ಇದ್ದಾರೆ ಎಂಬುದನ್ನು ಪರಿಗಣಿಸಿ ಕೆ.ಜಿ.ಗೆ 28 ರೂ.ಗಳಂತೆ ಆತ ಈವರೆಗೆ ಪಡೆದ ಅಕ್ಕಿಯ ಮೇಲೆ ದಂಡ ಮೊತ್ತ ಲೆಕ್ಕಹಾಕಲಾಗುತ್ತದೆ.

ಸರಕಾರದ ಮಾನದಂಡ ಮತ್ತು ನಿಯಮದ ಪ್ರಕಾರ ಸಂಬಂಧಪಟ್ಟ ಇಲಾಖೆ ಕಾರ್ಯನಿರ್ವಹಿಸುತ್ತಿದೆ. ಸದ್ಯ ದಂಡ ವಿಧಿಸುವುದನ್ನು ಕೈಬಿಡುವಂತೆ ಮಂಗಳವಾರ ಸರಕಾರದಿಂದ ಸೂಚನೆ ಬಂದಿದೆ. ಆದ್ದರಿಂದ ಸದ್ಯ ದಂಡ ವಿಧಿಸುತ್ತಿಲ್ಲ. ಅಧಿಕೃತ ಆದೇಶ ಪತ್ರ ಬಂದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು.
– ಗಣಪತಿ ಶಾಸ್ತ್ರಿ, ತಹಶೀಲ್ದಾರ್‌

 ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.