ಪೆಂಡಾಲ್ ಕುಸಿದು ಐವರಿಗೆ ಸಣ್ಣಪುಟ್ಟ ಗಾಯ
Team Udayavani, Feb 15, 2019, 3:48 AM IST
ಬೆಳ್ತಂಗಡಿ: ಧರ್ಮಸ್ಥಳ ಮಹಾಮಸ್ತಕಾಭಿಷೇಕದ ಪಂಚಮಹಾ ವೈಭವದ ಬೃಹತ್ ಪೆಂಡಾಲ್ನ ಒಂದು ಬದಿ ಗುರುವಾರ ಅಪರಾಹ್ನದ ವೇಳೆ ಕುಸಿದು, 5 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾರ್ಯಕ್ರಮಗಳು ಗೊಂದಲವಿಲ್ಲದೆ ಮುಂದುವರಿದಿದ್ದು, ಮುಂದೆಯೂ ನಿಗದಿಯಂತೆ ನಡೆಯುತ್ತವೆ. ಘಟನೆಯಿಂದ ಪ್ರಸಿದ್ಧಿ ಜೈನ್, ಚಂದ್ರಾವತಿ, ಪ್ರಣವ್, ವಿದ್ಯಾನಂದ ಜೈನ್ ಹಾಗೂ ಸಂಧ್ಯಾ ಅವರಿಗೆ ತರಚಿದ ಮತ್ತು ಗುದ್ದಿದ ಗಾಯವಾಗಿದ್ದು, ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಘಟನಾ ಸ್ಥಳಕ್ಕೆ ಪುತ್ತೂರು ಸಹಾಯಕ ಕಮಿಷನರ್ ಡಾ| ಎಚ್.ಕೆ. ಕೃಷ್ಣಮೂರ್ತಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಾವುದೇ ಆತಂಕ ಪಡಬೇಕಿಲ್ಲ. ಕಾರ್ಯಕ್ರಮದಲ್ಲಿ ಬದಲಾವಣೆ ಇಲ್ಲದೆ ನಿಗದಿಯಂತೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ. ಸ್ಥಳಕ್ಕೆ ನೋಡೆಲ್ ಅಧಿಕಾರಿ ಶಿವಪ್ರಸಾದ್ ಅಜಿಲ, ತಾಲೂಕು ಆರೋಗ್ಯಾಧಿಕಾರಿ ಡಾ| ಕಲಾಮಧು, ಧರ್ಮಸ್ಥಳ ಪಿಎಸ್ಐ ಅವಿನಾಶ್ ಭೇಟಿ ನೀಡಿದ್ದಾರೆ.
ಮಸ್ತಕಾಭಿಷೇಕ ಸಮಿತಿಯ ಸ್ಪಷ್ಟನೆ
ಕೆಲವು ಸುದ್ದಿ ವಾಹಿನಿಗಳಲ್ಲಿ ಧರ್ಮಸ್ಥಳದ ಘಟನೆಯನ್ನು ವೈಭವೀಕರಿಸಿ ತಪ್ಪು ಮಾಹಿತಿ ನೀಡಲಾಗಿದೆ. ಚಪ್ಪರ ಭಾಗಶಃ ಕುಸಿದು ಐವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು,ಎಲ್ಲರೂ ಚೇತರಿಸಿಕೊಂಡಿದ್ದಾರೆ. ಘಟನೆಯ ಬಳಿಕ ಎಲ್ಲ ಕಾರ್ಯಕ್ರಮಗಳು ನಡೆದಿದ್ದು, ಮುಂದೆಯೂ ನಿಗದಿಯಂತೆ ಸಾಗಲಿವೆ. ಯಾರೂ ಅನಧಿಕೃತ ಗಾಳಿ ಸುದ್ದಿಗೆ ಕಿವಿಗೊಡಬಾರದು ಎಂದು ಮಸ್ತಕಾಭಿಷೇಕ ಮಹೋತ್ಸವ ಸಮಿತಿ ಸ್ಪಷ್ಟಪಡಿಸಿದೆ.
ಪಂಚಮಹಾವೈಭವ ನಡೆಯುತ್ತಿದ್ದ ಸ್ಥಳದಲ್ಲಿ ನಡೆದ ಪೆಂಡಾಲ್ ಕುಸಿದು 5 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಉಳಿದಂತೆ ಯಾವುದೇ ಗೊಂದಲಗಳಿಲ್ಲ.
ಡಾ| ಬಿ.ಎಂ. ಲಕ್ಷ್ಮೀಪ್ರಸಾದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!