ಡೆಂಗ್ಯೂ ವಿರುದ್ಧ ಆಂದೋಲನಕ್ಕೆ ಜನರ ಸಹಕಾರ ಅಗತ್ಯ: ಡಾ| ಸೆಲ್ವಮಣಿ
Team Udayavani, Jul 29, 2019, 5:36 AM IST
ಮಹಾನಗರ: ಲಾರ್ವಾ ಮುಕ್ತ ಪ್ರದೇಶವನ್ನಾಗಿಸುವ ನಿಟ್ಟಿನಲ್ಲಿ ಸರಕಾರಿ ಅಧಿಕಾರಿಗಳು ಸೇರಿದಂತೆ ಸಾರ್ವ ಜನಿಕರು ಕೂಡ ಕೈಜೋಡಿಸಬೇಕು ಎಂದು ದ.ಕ. ಜಿಲ್ಲಾ ಪಂಚಾಯತ್ ಸಿಇಒ ಡಾ| ಆರ್. ಸೆಲ್ವಮಣಿ ಹೇಳಿದರು.
ಡೆಂಗ್ಯೂ ತಡೆಯಲು ಡೆಂಗ್ಯೂ ಡ್ರೈವ್ ಡೇ ಅಭಿಯಾನಕ್ಕೆ ದ.ಕ.ಜಿ.ಪಂ.ನಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಡೆಂಗ್ಯೂ ಸೊಳ್ಳೆ ಶುದ್ಧ ನೀರಿನಲ್ಲಿ ಉತ್ಪತ್ತಿಯಾಗುತ್ತದೆಯೇ ವಿನಃ ಕೊಳಚೆ ನೀರು, ಮೋರಿಯಿಂದ ಉತ್ಪತ್ತಿಯಾಗುವುದಿಲ್ಲ. ಕೇವಲ ಫಾಗಿಂಗ್ ಮೂಲಕ ಡೆಂಗ್ಯೂ ನಿರ್ಮೂಲನೆ ಸಾಧ್ಯ ವಿಲ್ಲ. ಇದರಿಂದ ಪರಿಸರ ಹಾಳಾಗುತ್ತದೆ. ಇದರ ಬದಲು ವಾರದಲ್ಲಿ ಒಂದು ಗಂಟೆಗಳ ಕಾಲ ತಮ್ಮ ಮನೆಗಳಲ್ಲಿ ಲಾರ್ವಾ ಹುಳು ಇದೆಯೇ ಎಂದು ಪರಿಶೀಲಿಸಿ, ಇದ್ದರೆ ನಾಶ ಮಾಡಬೇಕು ಎಂದರು.
ಜಿ.ಪಂ. ಸುತ್ತಮುತ್ತಲಿನ ಪರಿಸರದಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುವ ಲಾರ್ವಾಗಳ ಪತ್ತೆ ಹಚ್ಚಿ ಅವುಗಳನ್ನು ನಾಶಪಡಿಸಲಾಯಿತು. ಕಾರ್ಯಕ್ರಮದಲ್ಲಿ ಮನಪಾ ಉಪಾಯುಕ್ತೆ ಗಾಯತ್ರೀ ನಾಯಕ್, ಸಚಿನ್ ಸಹಿತ ಮೊದ ಲಾದವರು ಉಪಸ್ಥಿತರಿದ್ದರು.
ಮನೆ ಸ್ವಚ್ಛ ವಾಗಿರಲಿ
ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಮಕೃಷ್ಣ ರಾವ್ ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಮನೆ ಸ್ವಚ್ಛ ವಾಗಿಡಬೇಕು. ಟಯರ್, ಮನೆಯ ಟೆರೇಸ್, ನೀರು ನಿಲ್ಲುವ ಜಾಗಗಳ ಬಗ್ಗೆ ಎಚ್ಚರ ವಹಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು