ಪೆರಾಜೆ : ಮದ್ಯದಂಗಡಿಗೆ ವಿರೋಧ; ಗ್ರಾಮಸ್ಥರ ಹೋರಾಟ 


Team Udayavani, Jul 11, 2017, 2:45 AM IST

1007bteph7.jpg

ಬಂಟ್ವಾಳ : ಪೆರಾಜೆ ಗ್ರಾಮದ ಶ್ರೀ ರಾಮಚಂದ್ರಪುರ ಮಠದ ಸಮೀಪ ವೈನ್‌ ಶಾಪ್‌ ತೆರೆಯುವ ಹುನ್ನಾರ ನಡೆಯುತ್ತಿರುವ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಈಗಾಗಲೇ ಸ್ಥಳೀಯ ಸಂಘಟನೆಗಳು ಒಟ್ಟು ಸೇರಿ ಯಾವುದೇ ಕಾರಣಕ್ಕೆ ಈ ಸ್ಥಳದಲ್ಲಿ ಯಾವುದೇ ರೀತಿಯ ಅಮಲು ಪದಾರ್ಥ ವ್ಯಾಪಾರಕ್ಕೆ ಅನುವು ಮಾಡಿಕೊಡಬಾರದು ಎಂದು ಸಂಬಂಧಪಟ್ಟವರಿಗೆ ಮನವಿಯನ್ನು ಮಾಡಿವೆ.

ಜು. 9ರಂದು ಪೆರಾಜೆ ಶ್ರೀರಾಮಚಂದ್ರಾಪುರ ಮಠದಲ್ಲಿ ಪೆರಾಜೆ ಗ್ರಾಮದ ಸರ್ವ ಜನರು ಸೇರಿಕೊಂಡು ಪ್ರತ್ಯೇಕವಾದ ವೈನ್‌ ಶಾಪ್‌ ವಿರೋಧಿ ಸಮಿತಿ  ರಚಿಸಿದ್ದಾರೆ.

ಹೋರಾಟ ಸಮಿತಿಯ ಅಧ್ಯಕ್ಷ ರಾಜಾರಾಂ ಕಡೂರು, ಗೌರವಾಧ್ಯಕ್ಷ ಶ್ರೀಕಾಂತ ಆಳ್ವ, ಕಾರ್ಯದರ್ಶಿಯಾಗಿ ಲಿಂಗಪ್ಪ ಮೈಂದಗುರಿ, ಅಣ್ಣಿ ಪೂಜಾರಿ , ಹೋರಾಟ ಸಮಿತಿಯ ಮಹಿಳಾ ಸಂಘದ ಅಧ್ಯಕ್ಷೆಯಾಗಿ ಭಾರತಿಜಯಾನಂದ ಪೆರಾಜೆ ಮತ್ತು ಪ್ರಮುಖರಾದ ಬಿ.ಟಿ.ನಾರಾಯಣ ಭಟ್‌,  ಚಂದ್ರಹಾಸ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಈ ಸಮಿತಿಯ ಮೂಲಕ ಸ್ಥಳಿಯ ಸಂಘಟನೆಗಳು ಸೇರಿಕೊಂಡು ಮುಂದಿನ ದಿನಗಳಲ್ಲಿ ಹೋರಾಟದ ಹಾದಿಯನ್ನು ಹಿಡಿಯುವ ಸಂಕಲ್ಪವನ್ನು ಮಾಡಲಾಗಿದೆ.

ಯಾವುದೇ ಕಾರಣಕ್ಕೆ ಸಭ್ಯ ಪರಿಸರದಲ್ಲಿ ವೈನ್‌ ಶಾಪ್‌ ತಲೆ ಎತ್ತಬಾರದು. ಈ ರಸ್ತೆಯ ಮೂಲಕ ಅನೇಕ ವಿದ್ಯಾರ್ಥಿಗಳು ವಿದ್ಯಾರ್ಜನೆ ತೆರಳುತ್ತಾರೆ. ಜೊತೆಗೆ ಶ್ರೀರಾಮ ಚಂದ್ರಾಪುರ ಮಠದಲ್ಲಿ ವಿದ್ಯಾರ್ಜನೆಗಾಗಿ ಅನೇಕ ವಿದ್ಯಾರ್ಥಿಗಳು ಹೋಗುತ್ತಾರೆ.

ಈ ಜಾಗಕ್ಕೆ ತಾಗಿಕೊಂಡು ಚಾಮುಂಡೇಶ್ವರೀ ಭಜನಾ ಮಂದಿರದ ನಿರ್ಮಾಣವಾಗುತ್ತಿದೆ. ಪೆರಾಜೆ ಗ್ರಾಮದ ಕಾರಣಿಕ ಶ್ರೀಗುಡ್ಡಚಾಮುಂಡೇಶ್ವರೀ ದೆ„ವದ ಗುಡಿಯೂ ಇದೆ .ಹಾಗಾಗಿ ಗ್ರಾಮಕ್ಕೆ ಪೀಡೆಯಾಗಿ ಗೋಚರಿಸುವ ಈ ವೈನ್‌ ಶಾಪ್‌ನ್ನು  ಯಾವುದೇ ಕಾರಣಕ್ಕೂ ಇಲ್ಲಿ ನೆಲೆಯೂರಲು ಬಿಡಬಾರದು ಎಂದು ನಿರ್ಣಯ ತೆಗೆದುಕೊಳ್ಳಲಾಯಿತು.ಅಲ್ಲದೆ ಪೆರಾಜೆ ಗ್ರಾಮ ಪಂಚಾಯತ್‌ನಲ್ಲಿ ಜು.12ರಂದು ಗ್ರಾಮ ಸಭೆ ನಡೆಯಲಿದ್ದು ಗ್ರಾಮ ಸಭೆಯಲ್ಲಿ ಎಲ್ಲಾ ಗ್ರಾಮಸ್ಥರು ಸೇರಿಕೊಂಡು ವಿರೋಧ ವ್ಯಕ್ತಪಡಿಸುವ ಬಗ್ಗೆ ಚರ್ಚೆ ನಡೆಸಲಾಯಿತು.ಸಭೆಯಲ್ಲಿ 250ಕ್ಕೂ ಹೆಚ್ಚು ಪುರುಷರು ಮತ್ತು ಅಷ್ಟೇ ಸಂಖ್ಯೆಯ ಮಹಿಳೆಯರು ಸೇರಿದ್ದರು.
 

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಮನೆಯೊಳಗೆ ಬೆಂಕಿ ಅವಘಡ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.