ಕರಕುಶಲಗಳ ಪ್ರದರ್ಶನ-ಮಾರಾಟ
Team Udayavani, Dec 30, 2017, 12:10 PM IST
ಬಂಟ್ಸ್ಹಾಸ್ಟೆಲ್: ಕುಶಲಕರ್ಮಿಗಳಿಗೆ ಉತ್ತೇಜನ ನೀಡು ವುದರೊಂದಿಗೆ ಕರಕುಶಲ ರಂಗವನ್ನು ಬೆಳೆಸುವ ಉದ್ದೇಶದಿಂದ ಕರಕುಶಲ ಪ್ರದರ್ಶನ ಮೇಳಗಳನ್ನು ನಡೆಸಲಾಗುತ್ತಿದೆ. ಕುಶಲ ಕರ್ಮಿಗಳು ತಾವು ತಯಾರಿಸಿದ ವಸ್ತುಗಳನ್ನು ನೇರ ಮಾರಾಟ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ| ರಾಜ್ವಿರ್ ಪ್ರತಾಪ್ ಶರ್ಮ ತಿಳಿಸಿದರು.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಜವುಳಿ ಸಚಿವಾಲಯದ ಪ್ರಾಯೋಜಕತ್ವದಲ್ಲಿ ನಿಗಮದ ವತಿಯಿಂದ ಮಂಗಳೂರಿನಲ್ಲಿ ಈ ಮೇಳ ಜ. 3ರವರೆಗೆ ನಡೆಯಲಿದೆ. ರಾಷ್ಟ್ರ ಮತ್ತು ರಾಜ್ಯದ ವಿವಿಧೆಡೆಗಳಿಂದ 50 ಮಂದಿ ಕುಶಲಕರ್ಮಿಗಳು ಭಾಗವಹಿಸಿದ್ದಾರೆ. ಇಂತಹ ಪ್ರದರ್ಶನ-ಮಾರಾಟ ವ್ಯವಸ್ಥೆ
ಯಿಂದಾಗಿ ಕರಕುಶಲ ಉತ್ಪನ್ನಗಳನ್ನು ಜನತೆಗೆ ಪರಿಚಯಿಸುವುದರೊಂದಿಗೆ ವ್ಯಾಪಾರಸ್ಥರಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶವೂ ಇದೆ ಎಂದರು.
ಪ್ರದರ್ಶನ-ಮಾರಾಟವು ಉದ್ಘಾಟನೆಗೊಂಡಿತು. ಕಾರ್ಪೋರೇಟರ್ ಎ. ಸಿ. ವಿನಯರಾಜ್, ನಿಗಮದ ಪ್ರಧಾನ
ವ್ಯವ ಸ್ಥಾಪಕ (ಮಾರುಕಟ್ಟೆ) ಮಹಮ್ಮದ್ ಸಲಾವುದ್ದೀನ್, ಕೆಎಸ್ಎಚ್ಡಿಸಿಎಲ್ ನಿರ್ದೇಶಕಿ ರಾಜೀವಿ ಆರ್. ರೈ, ಸಂಸ್ಥೆಯ ಅಧಿಕಾರಿ ಜಗದೀಶ್, ಮಂಜುನಾಥ್ ಮತ್ತಿತರರಿದ್ದರು. ಜ. 3 ರವರೆಗೆ ಬೆಳಗ್ಗೆ 10ರಿಂದ ರಾತ್ರಿ 8 ಗಂಟೆಯ ತನಕ ಪ್ರದರ್ಶನ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ