ಅವಕಾಶ ಬಳಸಿಕೊಂಡು ಸಾಧನೆ ಮಾಡಬೇಕು: ಶಾಂತಿ ಹೆಗ್ಡೆ


Team Udayavani, Mar 21, 2017, 3:24 PM IST

shanti-heggade.jpg

ನಗರ : ಮಹಿಳೆಯರಿಗೆ ಅವರದ್ದೇ ಆದ ಹಕ್ಕು, ಕರ್ತವ್ಯಗಳಿವೆ. ವ್ಯವಸ್ಥೆಯೊಳಗಿನ ಅವಕಾಶಗಳನ್ನು ಸದುಪ ಯೋಗಪಡೆದುಕೊಂಡು ಸಾಧನೆಗಳನ್ನು ಮಾಡಬೇಕು ಎಂದು ಪುತ್ತೂರು ಸಿಡಿಪಿಒ ಶಾಂತಿ ಹೆಗ್ಡೆ ಹೇಳಿದರು.
ಪುತ್ತೂರು ಲಯನ್ಸ್‌ ಸೇವಾ ಮಂದಿರ ದಲ್ಲಿ ಕ್ಯಾಂಪ್ಕೋ ಲಿ. ಪುತ್ತೂರು, ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ, ನವ್ಯಶ್ರೀ ಮಹಿಳಾ ಮಂಡಲ, ಲಯನ್ಸ್‌ ಮತ್ತು ಲಯನೆಸ್‌ ಕ್ಲಬ್‌, ವನಿತಾ ಸಮಾಜ ಹಾರಾಡಿ, ಮಹಿಳಾ ವಿವಿ ಸ., ಸಂಘ ಪುತ್ತೂರು, ಒಡಿಯೂರು ವಜ್ರಮಾತಾ ಮಹಿಳಾ ಸಂಘ ಪುತ್ತೂರು ಘಟಕದ ಸಹಯೋಗದಲ್ಲಿ ಆಯೋಜಿಸಲಾದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿದರು.

ಪುತ್ತೂರು ಮಹಿಳಾ ಠಾಣೆ ಆರಂಭಗೊಂಡಿದೆ. ಮಹಿಳೆಯರಿಗಾಗಿ ಕಾನೂನುಗಳಿವೆ. ಅನ್ಯಾಯವಾದಾಗ ನ್ಯಾಯ ಯುತ ರೀತಿಯಲ್ಲಿ ಪ್ರತಿಭಟಿಸುವ ಮನೋಭಾವವನ್ನು ಮಹಿಳೆಯರು ಬೆಳೆಸಿಕೊಳ್ಳಬೇಕು ಎಂದು ಹೇಳಿದ ಅವರು, ಪುತ್ತೂರಿನಲ್ಲಿ ಮಹಿಳಾ ಸಂಘಟನೆಗಳ ಮಧ್ಯೆ ಇರುವ ಒಗ್ಗಟ್ಟಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸ್ಥೈರ್ಯ ತುಂಬಬೇಕು
ಮಹಿಳಾ ಮಂಡಲಗಳ ಒಕ್ಕೂಟದ ಜಿಲ್ಲಾಧ್ಯಕ್ಷೆ ಸವಿತಾ ಜೆ. ಮಾತನಾಡಿ, ಇಂದು ಮಹಿಳೆ ಸಾಕಷ್ಟು ಸಬಲತೆಯನ್ನು ಸಾಧಿಸಿದರೂ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಎದುರಿಸುತ್ತಿದ್ದಾರೆ. ಅಂತಹ ಮಹಿಳೆಯರಿಗೆ ನೈತಿಕ ಸ್ಥೈರ್ಯ ತುಂಬುವ ಕೆಲಸ ಆಗಬೇಕು. ಉತ್ತಮ ಶಿಕ್ಷಣ ಪಡೆದುಕೊಳ್ಳುವ ಜತೆಗೆ ಅವಕಾಶ ಗಳನ್ನು ಮಹಿಳೆಯರು ಸದುಪಯೋಗ ಪಡಿಸಿಕೊಳ್ಳಬೇಕು.

ಮುಖ್ಯ ಅತಿಥಿಯಾಗಿದ್ದ ಬೊಳುವಾರು ಸಾಂಸ್ಕೃತಿಕ ಕಲಾಕೇಂದ್ರದ ಅಧ್ಯಕ್ಷ ಚಿದಾನಂದ ಕಾಮತ್‌ ಕಾಸರಗೋಡು ಮಾತನಾಡಿ, ವಿವಿಧ ಸಂಘಟನೆಗಳಲ್ಲಿ, ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಮಹಿಳೆಯರು ಬಲಯುತ ರಾಗಬೇಕು ಎಂದು ಹೇಳಿದರು.

ಸಮ್ಮಾನ
ಈ ಸಂದರ್ಭ ವಿವಿಧ ಕ್ಷೇತ್ರಗಳ ಮಹಿಳಾ ಸಾಧಕರಾದ ಡಾ| ನಳಿನಿ ರೈ, ಮಾಲಾ ತೋಳ್ಪಾಡಿ, ಎಎಸ್‌ಐ ಸೇಸಮ್ಮ, ಬಿಎಡ್‌ನ‌ಲ್ಲಿ 4ನೇ ರ್‍ಯಾಂಕ್‌ ಪಡೆದ ಮಹಾಲಕ್ಷ್ಮೀ ಹಾಗೂ 5ನೇ ರ್‍ಯಾಂಕ್‌ ಪಡೆದ ವಿನುತಾ ಅವರನ್ನು ಸಮ್ಮಾನಿಸಲಾಯಿತು.

ಸಮ್ಮಾನ ಸ್ವೀಕರಿಸಿ ಮಾತನಾಡಿದ ಡಾ| ನಳಿನಿ ರೈ, ವೈದ್ಯೆ ಅವರು, ಒಗ್ಗಟ್ಟಿನಲ್ಲಿ ಶಕ್ತಿ ಇದೆ ಎಂಬುದನ್ನು ಮಹಿಳೆಯರು ಸಾಬೀತುಪಡಿಸಬೇಕು. ಜಲ ಸಂರಕ್ಷಣೆ, ಅರಣ್ಯ ಸಂರಕ್ಷಣೆಯ ಕುರಿತಂತೆ ಮಹಿಳೆ ಯರ ಮೂಲಕ ಜಾಗೃತಿ ಕಾರ್ಯಕ್ರಮ ಗಳು ನಡೆಯಬೇಕು ಎಂದರು. 

ಪುತ್ತೂರು ಮಹಿಳಾ ಠಾಣೆ ಎಸ್‌ಎಸ್‌ಐ ಸೇಸಮ್ಮ  ಮಾತನಾಡಿ, ಮಹಿಳೆಯರಿಗೆ ಬಲ ಇಲ್ಲದಾಗ ದೌರ್ಜನ್ಯಗಳು ನಡೆಯುತ್ತವೆ. ಈ ಕಾರಣದಿಂದ ಸಂಘಟನೆಯ ಒಗ್ಗಟ್ಟಿನ ಮೂಲಕ ಮಹಿಳೆಯರು ಮುಂಚೂಣಿಗೆ ಬರಬೇಕು. ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದು ಹೇಳಿದರು.

ಸಂಘಟಕಿ ಗೌರಿ ಬನ್ನೂರು ಸ್ವಾಗತಿಸಿ, ನ್ಯಾಯವಾದಿ ಹರಿಣಾಕ್ಷಿ ಜೆ. ಶೆಟ್ಟಿ ಕಾರ್ಯ ಕ್ರಮ ನಿರ್ವಹಿಸಿದರು. ಲಯನೆಸ್‌ ಕ್ಲಬ್‌ ಅಧ್ಯಕ್ಷೆ ಅನ್ನಪೂರ್ಣಾ ಎಸ್‌.ಕೆ. ರಾವ್‌, ಮಹಿಳಾ ಸಂಘಗಳ ಪ್ರಮುಖರಾದ ನಯನಾ ರೈ, ವತ್ಸಲಾ ರಾಜಿ, ಪ್ರೇಮಲತಾ ರಾವ್‌, ಅನಿತಾ ಉಪಸ್ಥಿತರಿದ್ದರು. ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಅನಂತರ ಸಾಂಸ್ಕೃತಿಕ ವೈವಿಧ್ಯ ನಡೆಯಿತು.

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.