ಹೊಳೆ ದಾಟಲು ಕಾಲುಸಂಕವೇ ಆಸರೆ; ಬೇಕಿದೆ ಶಾಶ್ವತ ಸೇತುವೆ


Team Udayavani, Aug 23, 2018, 1:30 AM IST

kalu-sanka-22-8.jpg

ಬೆಳ್ತಂಗಡಿ: ಮಳೆಗಾಲದಲ್ಲಿ ಇಲ್ಲಿನ ಜನರ ಕಷ್ಟ ದೇವರಿಗೇ ಪ್ರೀತಿ. ದೈನಂದಿನ ಕೆಲಸ ಕಾರ್ಯಗಳಿಗೆ ಹಾಗೂ ಶಾಲಾ-ಕಾಲೇಜಿಗೆ ತೆರಳುವ ಮಕ್ಕಳಿಗೆ ಅಡಿಕೆ ಮರದ ಕಾಲು ಸಂಕವೇ ರಾಜಮಾರ್ಗ. ಸಣ್ಣ ಮಕ್ಕಳಂತೂ ಈ ಕಾಲು ಸಂಕವನ್ನು ದಾಟಲುಪಡುವ ಕಷ್ಟ ಹೇಳತೀರದು. ಅನಾರೋಗ್ಯ ಉಂಟಾದರೆ ಆಸ್ಪತ್ರೆಗೆ ತೆರಳಬೇಕಾದರೆ ಹರಸಾಹಸ ಪಡುವ ಸ್ಥಿತಿ ಇಲ್ಲಿನವರದ್ದು.

ಎಲ್ಲಿದೆ ಏಳೂವರೆ ಹೊಳೆ ?
ಮುಂಡಾಜೆ ಗ್ರಾಮದ ಸೋಮಂತಡ್ಕದಿಂದ ದಿಡುಪೆಗೆ ಹೋಗುವ ರಸ್ತೆಯಲ್ಲಿ ಸುಮಾರು 9 ಕಿ.ಮೀ. ಸಾಗಿದಾಗ ಮಿತ್ತಬಾಗಿಲು ಗ್ರಾ.ಪಂ. ವ್ಯಾಪ್ತಿಯ ಕುಕ್ಕಾವು ಪ್ರದೇಶವಿದೆ. ಇಲ್ಲಿಂದ ಕೂಡಬೆಟ್ಟು ಕ್ಷೇತ್ರಕ್ಕೆ ಹೋಗುವ ದಾರಿಯಲ್ಲಿ ಕಕ್ಕೆನೇಜಿ ಸಮೀಪ ಏಳೂವರೆ ಹೊಳೆ ಸಿಗುತ್ತದೆ. ಇಲ್ಲಿನ ನೂರಾರು ಮನೆಯವರು ಈ ಹೊಳೆ ದಾಟಿಕೊಂಡೇ ಮುಖ್ಯರಸ್ತೆಗೆ ಬರಬೇಕು. ಇಲ್ಲಿ ಸೇತುವೆ ನಿರ್ಮಾಣವಾದರೆ ಅದೆಷ್ಟೋ ವರ್ಷಗಳ ಬೇಡಿಕೆ ಈಡೇರಿದಂತಾಗುತ್ತದೆ. ಸಂಸದರು, ಶಾಸಕರು, ಅಧಿಕಾರಿಗಳಿಗೆ ಹಲವು ಬಾರಿ ಮನವಿ ನೀಡಿದರೂ ಇಲ್ಲಿ ಸೇತುವೆ ನಿರ್ಮಾಣಕ್ಕೆ ಅಡಿಗಲ್ಲು ಹಾಕುವ ಮನಸ್ಸು ಮಾತ್ರ ಇನ್ನೂ ಮಾಡಿಲ್ಲ.

ಅಡಿಕೆ ಮರದ ಕಾಲು ಸಂಕ
ಇಲ್ಲಿನವರು ಸೇತುವೆ ಇಲ್ಲ ಎಂದು ಕೈಕಟ್ಟಿ ಕುಳಿತುಕೊಂಡಿಲ್ಲ. ಹೊಳೆ ದಾಟಲು ಸ್ವಪ್ರಯತ್ನ ಮಾಡುತ್ತಲೇ ಬಂದಿದ್ದಾರೆ. ಪ್ರತಿ ವರ್ಷವೂ ಅಡಿಕೆ ಮರದ ಕಾಲು ಸಂಕ ನಿರ್ಮಿಸಿ ಹೊಳೆ ದಾಟುತ್ತಿದ್ದಾರೆ. ಈ ವರ್ಷವೂ ಸುಮಾರು 30ಕ್ಕೂ ಅಧಿಕ ಮಂದಿ ಗ್ರಾಮಸ್ಥರು ಶ್ರಮ ದಾನದ ಮೂಲಕ ಒಂದೇ ದಿನದಲ್ಲಿ ಅಡಿಕೆ ಮರದ ಕಾಲುಸಂಕವನ್ನು ನಿರ್ಮಿಸಿಕೊಂಡಿದ್ದಾರೆ. ಈ ಮಳೆಗಾಲಕ್ಕೆ ಅದೇ ಆಸರೆ. ಮುಂದಿನ ವರ್ಷಕ್ಕೆ ಮತ್ತೆ ಬೇರೆಯೇ ಕಾಲುಸಂಕ ಹಾಕಬೇಕು ಎನ್ನುತ್ತಾರೆ ಸ್ಥಳೀಯರು.


ಮನವಿಗೆ ಬೆಲೆ ಇಲ್ಲ

ಸೇತುವೆ ಬೇಡಿಕೆಗೆ ಸಂಬಂಧಿಸಿದಂತೆ ಎಲ್ಲ ಹಂತದ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಲಾಗಿದೆ. ಹಿಂದೊಮ್ಮೆ 40 ಲಕ್ಷ ರೂ. ಅಂದಾಜು ಪಟ್ಟಿಯನ್ನೂ ಸರಕಾರಕ್ಕೆ ಸಲ್ಲಿಸಲಾಗಿತ್ತು. ಈ ಹೊಳೆಗೆ ತುರ್ತಾಗಿ ಸೇತುವೆ ಅಗತ್ಯವಿದೆ. ಈಗಲೂ ಜನಪ್ರತಿನಿಧಿಗಳ, ಸರಕಾರದ ಗಮನ ಸೆಳೆಯಲಾಗುತ್ತಿದೆ ಎನ್ನುತ್ತಾರೆ ಮಿತ್ತಬಾಗಿಲು ಗ್ರಾ.ಪಂ. ಮಾಜಿ ಅಧ್ಯಕ್ಷ ವಾಸುದೇವ ರಾವ್‌ ಕಕ್ಕೆನೇಜಿ.

ಆದೇಶವಾಗಿತ್ತು
ಕೆ.ಎಸ್‌. ಈಶ್ವರಪ್ಪ ಉಪಮುಖ್ಯಮಂತ್ರಿಯಾಗಿದ್ದ ಸಂದರ್ಭ 2012-13ರ ಸಾಲಿನಲ್ಲಿ ಆರ್‌.ಐ.ಡಿ.ಎಫ್‌. ನಬಾರ್ಡ್‌ ಯೋಜನೆಯಡಿ ಮಿತ್ತಬಾಗಿಲು ಗ್ರಾ.ಪಂ. ವ್ಯಾಪ್ತಿಯ ಕುಕ್ಕಾವು – ಕಕ್ಕೆನೇಜಿ – ಕೂಡಬೆಟ್ಟು ರಸ್ತೆಯ ಕಕ್ಕೆನೇಜಿಯಲ್ಲಿ ಏಳೂವರೆ ಹೊಳೆಗೆ 30 ಲಕ್ಷ ರೂ. ವೆಚ್ಚದಲ್ಲಿ ಸೇತುವೆ ಕಾಮಗಾರಿಗೆ ಆದೇಶವಾಗಿತ್ತು. ಆದರೆ ಕಾರಣಾಂತರಗಳಿಂದ ಅದೂ ವಾಪಸ್ಸಾಗಿತ್ತು ಎನ್ನುವ ಮಾಹಿತಿಯೂ ಇದೆ.

— ಗುರು ಮುಂಡಾಜೆ

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

2-kadaba

Kadaba ತಾಲೂಕು ಪಂಚಾಯತ್ ಕಚೇರಿಗೆ ಬೆಳ್ಳಂಬೆಳ್ಳಗೆ ಲೋಕಾಯುಕ್ತ ದಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.